ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.
ಸ್ವಪಕ್ಷೀಯರೇ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ರು: ಬೇಸರ ಹೊರಹಾಕಿದ ವಿಜಯೇಂದ್ರ
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪಕ್ಷದಲ್ಲಿ ಬಾರೀ ಕೋಲಾಹಲ ಸೃಷ್ಟಿಸಿದೆ. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನ ಹಣೆಯಲೆಂದೇ ಅಡ್ಡಮತದಾನ ಷಡ್ಯಂತ್ರ ನಡೆದಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪೂರಕವೆಂಬಂತೆ ಸ್ವತಃ ವಿಜಯೇಂದ್ರ ಅವರೇ ಬಹಿರಂಗವಾಗಿ ಹೇಳಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.
- Basavaraj Doddamani
- Updated on: Jul 7, 2026
- 9:51 pm
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ.
- Basavaraj Doddamani
- Updated on: Jul 5, 2026
- 4:20 pm
ದಾವಣಗೆರೆಯಲ್ಲಿ ಹಳ್ಳ ಹಿಡಿದ ‘ಎಸ್ಐಆರ್’ ಪ್ರಕ್ರಿಯೆ: ಮನೆ ಮನೆಗೆ ಹೋಗದೆ ದೇವಸ್ಥಾನ, ಅಂಗನವಾಡಿಯಲ್ಲೇ ಕುಳಿತ ಬಿಎಲ್ಓ
ದಾವಣಗೆರೆ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಯು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಬಿಎಲ್ಓಗಳು ನಿಯಮ ಉಲ್ಲಂಘಿಸಿ ಮನೆ ಮನೆಗೆ ತೆರಳದೆ, ಅಂಗನವಾಡಿ ಹಾಗೂ ದೇವಸ್ಥಾನಗಳಲ್ಲಿ ಸಾರ್ವಜನಿಕರನ್ನು ಕಾಯಿಸುತ್ತಿದ್ದಾರೆ. ದಕ್ಷಿಣ ವಿಧಾನಸಭಾ ಕ್ಷೇತ್ರದ ಜಾಲಿನಗರದಲ್ಲಿ ಈ ಅವ್ಯವಹಾರ ಬೆಳಕಿಗೆ ಬಂದಿದ್ದು, ಬಿಎಲ್ಓಗಳ ನಿರ್ಲಕ್ಷ್ಯದ ವಿಡಿಯೋಗಳು ವೈರಲ್ ಆಗಿವೆ. ಇದರಿಂದ ವಯೋವೃದ್ಧರು ಮತ್ತು ಮಹಿಳೆಯರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Basavaraj Doddamani
- Updated on: Jul 4, 2026
- 4:56 pm
ಯಡಿಯೂರಪ್ಪ, ವಿಜಯೇಂದ್ರರ ಕಡೆಗಣಿಸಿದರೆ ಪಕ್ಷಕ್ಕೆ ಭಾರಿ ನಷ್ಟ: ಬಿಜೆಪಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಕಡೆಗಣಿಸಿದರೆ ಪಕ್ಷಕ್ಕೆ ಭಾರಿ ನಷ್ಟ ಕಾದಿದೆ ಎಂದು ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆ. ದಾವಣಗೆರೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು ಬಿಜೆಪಿಯೊಳಗಿನ ಯಡಿಯೂರಪ್ಪ, ವಿಜಯೇಂದ್ರ ವಿರೋಧಿ ಬಣಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
- Basavaraj Doddamani
- Updated on: Jul 2, 2026
- 12:20 pm
ದಾವಣಗೆರೆ ಜಿಲ್ಲಾಸ್ಪತ್ರೆ ಅಗ್ನಿ ದುರಂತದ ಕಾರಣ ಬಯಲು: ತನಿಖೆಯಲ್ಲಿ ಗೊತ್ತಾಯ್ತು ಅಸಲಿ ಸತ್ಯ
ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಜೂನ್ 30 ರಂದು ಸಂಭವಿಸಿದ ಅಗ್ನಿ ದುರಂತಕ್ಕೆ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿ ಮತ್ತು ಹಾಳಾಗಿದ್ದ ಯಂತ್ರೋಪಕರಣಗಳ ಬಳಕೆಯೇ ನೇರ ಕಾರಣ ಎಂದು ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ನೇತೃತ್ವದ ತನಿಖಾ ತಂಡದ ಪ್ರಾಥಮಿಕ ವರದಿಯಿಂದ ಬಹಿರಂಗವಾಗಿದೆ.
- Basavaraj Doddamani
- Updated on: Jul 2, 2026
- 11:43 am
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ: ಕ್ಯಾಮರಾಗಳಿಗೆ ಬೆರಳು ತೋರಿಸಿ ಧಿಮಾಕು
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧಿತ ಶಂಕಿತ ಉಗ್ರ ಸುಹೇಲ್, ವೈದ್ಯಕೀಯ ಪರೀಕ್ಷೆಗೆ ಕರೆತಂದಾಗ ಕ್ಯಾಮರಾಗಳಿಗೆ ಬೆರಳು ತೋರಿಸಿ ಉದ್ದಟತನ ಪ್ರದರ್ಶಿಸಿದ್ದಾನೆ. ಜೂನ್ 23 ರಂದು ಬನ್ನಿಕೋಡ ಗ್ರಾಮದಲ್ಲಿ ಈತನನ್ನು ಬಂಧಿಸಲಾಗಿತ್ತು. ಎನ್ಐಎ ಅಧಿಕಾರಿಗಳ ವಿಚಾರಣೆ ನಂತರವೂ ಆತನ ಅಹಂಕಾರಿ ವರ್ತನೆ ಕಡಿಮೆಯಾಗಿಲ್ಲ. ಭಯೋತ್ಪಾದನಾ ಚಟುವಟಿಕೆಗಳ ಶಂಕೆಯ ಮೇಲೆ ಬಂಧಿತನಾಗಿ, ಪೊಲೀಸ್ ವಶದಲ್ಲಿರುವಾಗಲೇ ಇಂತಹ ವರ್ತನೆ ತೋರಿರುವುದು ಗಂಭೀರ ಪ್ರಶ್ನೆಗಳಿಗೂ ಎಡೆಮಾಡಿಕೊಟ್ಟಿದೆ.
- Basavaraj Doddamani
- Updated on: Jul 1, 2026
- 2:03 pm
ಆಕ್ಸಿಜನ್ ಸಿಲಿಂಡರ್ ಸ್ಫೋಟ: ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
Davanagere News: ದಾವಣಗೆರೆ ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ. ಘಟನೆಯಿಂದ ದಟ್ಟ ಹೊಗೆ ಆವರಿಸಿ ರೋಗಿಗಳಲ್ಲಿ ಆತಂಕ ಮೂಡಿಸಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲವಾದರೂ, ಆಪರೇಷನ್ ಥಿಯೇಟರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
- Basavaraj Doddamani
- Updated on: Jun 30, 2026
- 12:25 pm
ದಾವಣಗೆರೆ: ಎಣ್ಣೆ ಕಿಕ್ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ
Davanagere News: ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ಗುರುವಾರ ರಾತ್ರಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಯುವತಿಯೊಬ್ಬಳು ಪೊಲೀಸರ ಮೇಲೆ ದರ್ಪ ತೋರಿದ್ದಾಳೆ. ಕಂಠಪೂರ್ತಿ ಕುಡಿದು ಒನ್ವೇನಲ್ಲಿ ಥಾರ್ ಜೀಪ್ ಚಾಲನೆ ಮಾಡುತ್ತಿದ್ದ ಯುವತಿ, ಮಹಿಳಾ PSIಗೆ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಘಟನೆಯ ವಿಡಿಯೋ ಸದ್ಯ ವೈರಲ್ ಆಗಿದೆ.
- Basavaraj Doddamani
- Updated on: Jun 26, 2026
- 10:24 am
ಶಂಕಿತ ಉಗ್ರ ಸುಹೇಲ್ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಹೆಚ್. ಟಿ. ಶೇಖರ್
Davanagere News: ದಾವಣಗೆರೆಯ ಹರಿಹರದಲ್ಲಿ ಬಂಧಿತನಾದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್, ಪಾಕಿಸ್ತಾನಿ ಮೂಲದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಸ್ಫೋಟಕ ಮಾಹಿತಿಯನ್ನು ದಾವಣಗೆರೆ ಎಸ್ಪಿ ಡಾ. ಹೆಚ್.ಟಿ. ಶೇಖರ್ ಬಹಿರಂಗಪಡಿಸಿದ್ದಾರೆ. 15 ದಿನಗಳ ಹಿಂದೆ ಖಾಸಗಿ ಕಾರ್ಖಾನೆಗೆ ಕೆಲಸಕ್ಕೆ ಬಂದಿದ್ದ ಈತ,ಕಾರ್ಖಾನೆ ಬಳಿಯ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಎಂಬುದನ್ನೂ ಅವರು ತಿಳಿಸಿದ್ದಾರೆ.
- Basavaraj Doddamani
- Updated on: Jun 24, 2026
- 2:36 pm
ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್: ದಾವಣಗೆರೆಯಲ್ಲಿ ಪೊಲೀಸರ ಕೈಗೆ ಸಿಕ್ಕ ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್, ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಈತನ ಮೊಬೈಲ್ನಲ್ಲಿ ಪಾಕಿಸ್ತಾನದ ಕೋಡ್ ಹೊಂದಿರುವ ಗ್ರೂಪ್ಗಳು ಹಾಗೂ ಮಾರಕಾಸ್ತ್ರಗಳನ್ನು ಹಿಡಿದಿರುವ ಚಿತ್ರಗಳು ಪತ್ತೆಯಾಗಿದ್ದು, ಭಾರಿ ಆತಂಕ ಮೂಡಿಸಿದೆ.
- Basavaraj Doddamani
- Updated on: Jun 24, 2026
- 12:16 pm
ಸಚಿವ ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್: ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ದಾಳಿ
ರಾಜ್ಯದಲ್ಲಿ ಇಡಿ ದಾಳಿಗಳು ತೀವ್ರಗೊಂಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಭಾವ ಹಾಗೂ ಅಬಕಾರಿ ಅಧಿಕಾರಿ ವೈ. ಮಂಜುನಾಥ್ ಮನೆಗಳ ಮೇಲೆ ದಾಳಿ ನಡೆದಿದೆ. ಬೇನಾಮಿ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬೆಂಗಳೂರು, ಬೆಳಗಾವಿ ಸೇರಿ ಆರು ಸ್ಥಳಗಳಲ್ಲಿ ನಡೆದ ಈ ದಾಳಿಯಲ್ಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.. ಇದು ಭ್ರಷ್ಟಾಚಾರ ವಿರುದ್ಧದ ಸಮರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
- Basavaraj Doddamani
- Updated on: Jun 24, 2026
- 11:54 am
ಪಾಕ್ ಸಂಘಟನೆಗಳ ಜೊತೆ ನಂಟು, ದಾವಣಗೆರೆಯಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್!
Davanagere News: ದಾವಣಗೆರೆ ಮೂಲದ ಜಮೀರ್ ಖಾನ್ ಹಾ ಅಲ್ಲಾಭಕ್ಷಿ ಎನ್ನುವರನ್ನು ತುಮಕೂರು ಟೌನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಇದೀಗ ದಾವಣಗೆರೆಯಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನವಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಹಾಗೂ ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಬಂಧಿಸಿದೆ. ಹಾಗಾದ್ರೆ, ಬಂಧಿತ ಯಾರು? ಎಲ್ಲಿಯವನು? ಏನು ಮಾಡುತ್ತಿದ್ದ ಎನ್ನುವ ಡಿಟೇಲ್ಸ್ ಇಲ್ಲಿದೆ.
- Basavaraj Doddamani
- Updated on: Jun 23, 2026
- 5:55 pm