ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಪಡೆದುಕೊಂಡ ಲೆಕ್ಕ ಕೊಡಿ ಅಭಿಯಾನ
ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಸಿದೆ. ಹೀಗಾಗಿ ಮಠದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೀಠದ ಆಡಳಿತ ಮತ್ತು ನಡೆಯ ಬಗ್ಗೆ ಲೆಕ್ಕಪತ್ರ ನೀಡುವಂತೆ ಭಕ್ತರು ಆಗ್ರಹಿಸಿದ್ದಾರೆ.
- Basavaraj Doddamani
- Updated on: Apr 13, 2026
- 1:03 pm
ಚನ್ನಗಿರಿ: ಬಿಯರ್ ಬಾಕ್ಸ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ಬಿಯರ್ ಲೋಡ್ ಹೊತ್ತ ಲಾರಿ ಪಲ್ಟಿಯಾಗಿದೆ. ಹಾಸನದಿಂದ ಚಿಕ್ಕೋಡಿಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದಿದ್ದು, ಸಾವಿರಾರು ಬಿಯರ್ ಟಿನ್ಗಳು ಹಾನಿಗೊಳಗಾಗಿವೆ. ಕತ್ತಲೆಯ ವೇಳೆ ಕೆಲವರು ಬಿಯರ್ ಬಾಟಲಿಗಳನ್ನು ಕದ್ದು ಸಾಗಿಸಿರುವ ಶಂಕೆ ವ್ಯಕ್ತವಾಗಿದೆ.
- Basavaraj Doddamani
- Updated on: Apr 13, 2026
- 10:56 am
ಕಾಂಗ್ರೆಸ್ನಲ್ಲಿ ದಾವಣಗೆರೆ ಉಪಕದನ ಕಿಚ್ಚು: ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಆಪ್ತರಿಂದಲೂ ಸಾಮೂಹಿಕ ರಾಜೀನಾಮೆ!
ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಮುನಿಸು ಕಾಂಗ್ರೆಸ್ನಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆಯೇ ಅವರ 10ಕ್ಕೂ ಹೆಚ್ಚು ಆಪ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜನೆ ಮಾಡುವ ಮೂಲಕ ಕಠಿಣ ಕ್ರಮ ಕೈಗೊಂಡಿದ್ದಾರೆ.
- Basavaraj Doddamani
- Updated on: Apr 13, 2026
- 6:31 am
ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್: ಸ್ವ ಇಚ್ಛೆಯಿಂದ ಹುದ್ದೆ ತೊರೆದಿದ್ದೇನೆ ಎಂದ ಪರಿಷತ್ ಸದಸ್ಯ
ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಪಕ್ಷದ ಒತ್ತಡದಿಂದಲ್ಲ, ಬದಲಾಗಿ ಸ್ವ ಇಚ್ಛೆಯಿಂದ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಮತ್ತು ಮುಖಂಡರ ಟೀಕೆಗಳಿಂದ ಬೇಸರಗೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಇವರ ರಾಜೀನಾಮೆ ಬೆನ್ನಲ್ಲೇ ಹಲವು ಆಪ್ತರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
- Basavaraj Doddamani
- Updated on: Apr 12, 2026
- 1:47 pm
ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್; ಅಯೂಬ್ ಪೈಲ್ವಾನ್
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲ ನಾಯಕರು ಫಂಡಿಂಗ್ ಮಾಡಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪಗಳು ಕೇಳಿಬಂದಿವೆ. ಎಐಸಿಸಿ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಹೇಳಿದ್ದಾರೆ. ತಮ್ಮ ಸಹೋದರ ಸಾದಿಕ್ ಪೈಲ್ವಾನ್ ಸಹ ಪಕ್ಷದ ಕೆಲಸದಲ್ಲಿ ಸಹಕರಿಸದಿರುವುದು ಚರ್ಚೆಗೆ ಕಾರಣವಾಗಿದೆ.
- Basavaraj Doddamani
- Updated on: Apr 11, 2026
- 10:44 pm
ದಾವಣಗೆರೆ: ಉಪಚುನಾವಣಾ ಪ್ರಚಾರಕ್ಕೆ ಕರೆದಿಲ್ಲ; ಜಬ್ಬಾರ್ಗೆ ಸಚಿವ ಮಲ್ಲಿಕಾರ್ಜುನ್ ಖಡಕ್ ಕೌಂಟರ್
ದಾವಣಗೆರೆ ಉಪಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕೆ ಕರೆದಿಲ್ಲ ಎಂಬ ಅಬ್ದುಲ್ ಜಬ್ಬಾರ್ ಹೇಳಿಕೆಗೆ ಮಲ್ಲಿಕಾರ್ಜುನ್ ಖಡಕ್ ಉತ್ತರ ನೀಡಿದ್ದಾರೆ. ಮೂರು ಬಾರಿ ಎಂಎಲ್ಸಿ ಆಗಲು ಸಹಕರಿಸಿದ ಋಣವನ್ನು ಸ್ಮರಿಸಿದ ಮಲ್ಲಿಕಾರ್ಜುನ್, ಕಾಂಗ್ರೆಸ್ ಪಕ್ಷದ ಅನ್ನ ತಿಂದ ಮೇಲೆ ಅದಕ್ಕಾಗಿ ಕೆಲಸ ಮಾಡಬೇಕು ಎಂದರು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿದರು.
- Basavaraj Doddamani
- Updated on: Apr 11, 2026
- 9:49 pm
ದಾವಣಗೆರೆ ರಾಜಕೀಯದಲ್ಲಿ ‘ಕೋಟಿ’ ಸಮರ: 50 ಲಕ್ಷ, 1 ಕೋಟಿ ಹಣ ಹಂಚಿಕೆಯ ಆರೋಪದ ಬಗ್ಗೆ ಚಮನ್ ಸಾಬ್ ಸ್ಫೋಟಕ ಮಾತು!
ದಾವಣಗೆರೆ ಉಪಚುನಾವಣೆ ಸಂದರ್ಭದಲ್ಲಿ ಮಾಜಿ ಮೇಯರ್ ಚಮನ್ ಸಾಬ್, ಕೆಲವರ ಅಕ್ರಿಯತೆ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಮಾತನಾಡಿದ್ದಾರೆ. ಮೂರು ಬಾರಿ ಎಂಎಲ್ಸಿ ಆಗಿದ್ದವರು ಚುನಾವಣೆಯಲ್ಲಿ ಭಾಗಿಯಾಗದಿರುವುದು ಷಡ್ಯಂತ್ರದ ಭಾಗ ಎಂದಿದ್ದಾರೆ. ಟಿಕೆಟ್ಗಾಗಿ ಗೊಂದಲ ಸೃಷ್ಟಿ ಮತ್ತು ಹಣಕಾಸಿನ ಆರೋಪಗಳು ಕೇವಲ ಗಾಳಿ ಸುದ್ದಿ ಎಂದು ತಳ್ಳಿಹಾಕಿದ್ದಾರೆ. ಪಕ್ಷವು ಸೂಕ್ತ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
- Basavaraj Doddamani
- Updated on: Apr 11, 2026
- 9:26 pm
ದಾವಣಗೆರೆ ಉಪಚುನಾವಣೆ: ಎಷ್ಟು ಮತದಾನ? ಬಿಜೆಪಿ-ಕಾಂಗ್ರೆಸ್ ನಾಯಕರ ಗೆಲುವಿನ ಲೆಕ್ಕಾಚಾರ ಏನು?
ಅಬ್ಬರ ಪ್ರಚಾರ. ಆಡಳಿತ ಮತ್ತು ಪ್ರತಿಪಕ್ಷಗಳ ಜಿದ್ದಾ-ಜಿದ್ದಿ. ಇನ್ನೊಂದು ಬಡವ ಶ್ರೀಮಂತರ ನಡುವಿನ ಸಂಘರ್ಷದ ಚರ್ಚೆ, ಜೊತೆಗೆ ಟಿಕೆಟ್ ಸಿಗದೇ ಸಿಟ್ಟಾದ ಮುಸ್ಲಿಂ ಸಮಾಜ. ಹೀಗೆ ಹತ್ತು ಹಲವಾರು ಕಾರಣಕ್ಕೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾಣೆ ರಾಜ್ಯದ ಗಮನ ಸೆಳೆದಿತ್ತು. ಈಗ ಮತದಾನ ಮುಗಿದು ಅಭ್ಯರ್ಥಿಗಳ ಭವಿಷ್ಟ ಮತಯಂತ್ರ ಬಂಧಿಯಾಗಿದೆ. ಆದ್ರೆ ಸೋಲು ಗೆಲುವಿನ ಲೆಕ್ಕಾಚಾರ ಮಾತ್ರ ಜೋರಾಗಿದೆ.
- Basavaraj Doddamani
- Updated on: Apr 10, 2026
- 10:49 pm
ಯಾರು ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯ ಮೈಕ್ನಿಂದ ಸಂದೇಶ
ಕಾಂಗ್ರೆಸ್ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು (ಏಪ್ರಿಲ್ 09) ಮತದಾನ ನಡೆದಿದ್ದು, ಮತದಾರರು ಸಹ ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಓಟ್ ಮಾಡುತ್ತಿದ್ದಾರೆ. ಸಂಜೆ 5ರವರೆಗೆ ದಾವಣಗೆರೆ ದಕ್ಷಿಣದಲ್ಲಿ ಶೇಕಡಾ 63.04% ಮತದಾನವಾಗಿದೆ. ಇನ್ನು ಇದರ ಮಧ್ಯೆ ಮಸೀದಿಯಿಂದ ಮಹತ್ವದ ಸಂದೇಶವೊಂದು ಮೊಳಗಿದೆ.ಯಾರು ಮತದಾನ ಮಾಡಿಲ್ಲವೋ ಅವರು ಹೋಗಿ ಮತದಾನ ಮಾಡಿ ಎಂದು ಮಸೀದಿಯ ಮೈಕ್ನಲ್ಲಿ ಸಂದೇಶ ನೀಡಲಾಗಿದೆ.
- Basavaraj Doddamani
- Updated on: Apr 9, 2026
- 6:01 pm
ಬಾಗಲಕೋಟೆ ಉಪಚುನಾವಣೆ: ಮತದಾನ ಮಾಡಲು ಗೋವಾದಿಂದ ಎರಡು ಬಸ್ಗಳಲ್ಲಿ ಬಂದ 80 ಮತದಾರರು!
ಬಾಗಲಕೋಟೆ ಉಪಚುನಾವಣೆಗಾಗಿ ಗೋವಾದಿಂದ ಮಾದಾಪುರ ಗ್ರಾಮಕ್ಕೆ 80ಕ್ಕೂ ಹೆಚ್ಚು ಮತದಾರರು ಎರಡು ಖಾಸಗಿ ಬಸ್ಗಳಲ್ಲಿ ಆಗಮಿಸಿ ಮತದಾನ ಮಾಡಿದ್ದಾರೆ. ದೂರದ ಊರಿನಲ್ಲಿದ್ದರೂ ಮತದಾನದ ಹಕ್ಕು ಚಲಾಯಿಸಲು ಬಂದ ಇವರ ಉತ್ಸಾಹ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸದ್ಯ, ಗೋವಾದಿಂದ ಬರುತ್ತಿರುವ ಮತ್ತು ಬಂದು ಮತ ಚಲಾಯಿಸಲು ಸರದಿಯಲ್ಲಿ ನಿಂತಿರುವ ವಿಡಿಯೋ ಇಲ್ಲಿದೆ.
- Basavaraj Doddamani
- Updated on: Apr 9, 2026
- 1:00 pm
ದಾವಣಗೆರೆ ದಕ್ಷಿಣ ಕ್ಷೇತ್ರದ ಆಳ ಅಗಲ: ಕಣದಲ್ಲಿ 25 ಅಭ್ಯರ್ಥಿಗಳು; ಮಹಿಳಾ ಮತದಾರರೇ ಹೆಚ್ಚು
ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಭರ್ಜರಿ ಸಿದ್ಧತೆಗಳು ನಡೆದಿವೆ. ನಾಳೆ ಮತದಾನ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಸೇರಿ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮಹಿಳಾ ಮತದಾರರೇ ಹೆಚ್ಚು. ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಚುನಾವಣಾ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಿ, ನ್ಯಾಯಸಮ್ಮತ ಮತದಾನಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದೆ.
- Basavaraj Doddamani
- Updated on: Apr 8, 2026
- 4:00 pm
ದಾವಣಗೆರೆ: ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಗೆ ಬಂದ ಚುನಾವಣಾ ಸಿಬ್ಬಂದಿಗೆ ಸ್ಥಳದಲ್ಲೇ ಹೆಲ್ತ್ ಚೆಕಪ್
ದಾವಣಗೆರೆ ದಕ್ಷಿಣ ಉಪಚುನಾವಣೆ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ಮತಗಟ್ಟೆ ಸಿಬ್ಬಂದಿಯ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲಾಗಿದೆ. 1430 ಸಿಬ್ಬಂದಿಗೆ ಸ್ಥಳದಲ್ಲೇ ವೈದ್ಯಕೀಯ ತಪಾಸಣೆ ಹಾಗೂ ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ. ಮತದಾನ ಹೆಚ್ಚಿಸಲು ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಅಸ್ವಸ್ಥರಿಗೆ ಉಚಿತ ವಾಹನ ಸೌಲಭ್ಯವನ್ನು ಜಿಲ್ಲಾಡಳಿತ ಕಲ್ಪಿಸಿದೆ.
- Basavaraj Doddamani
- Updated on: Apr 8, 2026
- 1:43 pm