ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ರಾಜ್ಯಾದ್ಯಂತ ಯಾತ್ರೆ ಮಾಡುವೆ: ಮಾಜಿ ಸಚಿವ ಶ್ರೀರಾಮುಲು
ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಕರ್ನಾಟಕದಲ್ಲಿ ಬಿಜೆಪಿಯನ್ನು ಬಲಪಡಿಸಲು ಮತ್ತು ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ರಾಜ್ಯಾದ್ಯಂತ ಯಾತ್ರೆ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿಯ ಗೆಲುವಿನ ನಂತರ, ಕರ್ನಾಟಕದಲ್ಲಿಯೂ ಪಕ್ಷಕ್ಕೆ ಬಹುಮತ ಬರುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿ ನಾಯಕರು, ಹಿಂದೂ ಮುಖಂಡರು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸುವುದಾಗಿ ಹೇಳಿದ್ದಾರೆ.
- Basavaraj Doddamani
- Updated on: Feb 8, 2025
- 7:59 pm
ಆಶ್ರಮ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ: ಬಜೆಟ್ ಮಂಡನೆ ವೇಳೆ ಬಿಜೆಪಿ-ಕಾಂಗ್ರೆಸ್ ಗಲಾಟೆ
ದಾವಣಗೆರೆ ಮಹಾನಗರ ಪಾಲಿಕೆಯ ಬಜೆಟ್ ಸಭೆಯಲ್ಲಿ ಸೈಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಗಳ ನಡೆದಿದೆ. ಬಿಜೆಪಿ ಕಾರ್ಯಕರ್ತರು 400 ಸೈಟ್ಗಳಿಗೆ ತಲಾ ಎರಡು ಲಕ್ಷ ರೂಪಾಯಿ ಲಂಚ ಪಡೆದಿರುವ ಆಡಿಯೋ ಕಾಂಗ್ರೆಸ್ ಸದಸ್ಯರು ಬಿಡುಗಡೆ ಮಾಡಿದ್ದಾರೆ. ಈ ವಿಚಾರದ ತನಿಖೆಗೆ ಮೇಯರ್ ಆದೇಶಿಸಿದ್ದು, ಬಡವರಿಗೆ ಸೈಟ್ ಹಂಚಿಕೆಯಲ್ಲಿನ ಅಕ್ರಮದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
- Basavaraj Doddamani
- Updated on: Feb 6, 2025
- 6:59 pm
ಭರಮಸಾಗರದಲ್ಲಿ 9 ದಿನಗಳ ತರಳಬಾಳು ಹಣ್ಣಿಮೆಗೆ ಚಾಲನೆ: ಈ ವರ್ಷದ ವಿಶೇಷವೇನು ಗೊತ್ತೇ?
9 ದಿನಗಳ ಕಾಲ ನಡೆಯುವ ಸಿರಿಗೆರೆ ಮಠದ ತರಳಬಾಳು ಹುಣ್ಣಿಮೆಗೆ ಚಾಲನೆ ಸಿಕ್ಕಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿ ಈ ವರ್ಷದ ತರಳಬಾಳು ಹುಣ್ಣಿಮೆ ನಡೆಯುತ್ತಿರುವುದು ವಿಶೇಷ. ಕಾರಣ ಹತ್ತಾರು ವರ್ಷಗಳ ಹೋರಾಟದ ನಂತರ ಚಿತ್ರದುರ್ಗದ ಹತ್ತಾರು ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ಬಂದಿದೆ. ಇದಕ್ಕೆ ಸಿರಿಗೆರೆ ಸ್ವಾಮೀಜಿಯೇ ಕಾರಣೀಕರ್ತರು. ಈ ವರ್ಷದ ತರಳುಬಾಳು ಹುಣ್ಣಿಮೆ ವಿಶೇಷದ ಬಗ್ಗೆ ಇಲ್ಲಿದೆ ವಿವರ.
- Basavaraj Doddamani
- Updated on: Feb 5, 2025
- 12:23 pm
ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಆರೋಪ: ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ
ದಾವಣಗೆರೆ ವಿಶ್ವವಿದ್ಯಾಲಯದ ಪ್ರೊ ಗಾಯತ್ರಿ ದೇವರಾಜ್ 37 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಕೆಎಲ್ಇಎಫ್ ವಿಶ್ವವಿದ್ಯಾಲಯಕ್ಕೆ ನ್ಯಾಕ್ ಗ್ರೇಡ್ ನೀಡಲು ಲಂಚ ಪಡೆಯುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಭ್ರಷ್ಟಾಚಾರ ಮತ್ತು ಲಂಚ ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
- Basavaraj Doddamani
- Updated on: Feb 2, 2025
- 8:28 pm
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದ ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ದಾವಣಗೆರೆಯ ಮಣಿಕಂಠ ಲಕ್ಷ್ಮಣ್ ಪುರುಷರ 200 ಮೀಟರ್ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು 2 ನಿಮಿಷ 21 ಸೆಕೆಂಡುಗಳಲ್ಲಿ ಗುರಿ ತಲುಪಿದರು. ದಾವಣಗೆರೆಯ ಈಜುಕೊಳದಲ್ಲಿ ವರ್ಷಗಳ ತರಬೇತಿಯ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಕರ್ನಾಟಕಕ್ಕೆ ಒಟ್ಟು 12 ಪದಕಗಳು ಈ ಸ್ಪರ್ಧೆಯಲ್ಲಿ ಬಂದಿವೆ.
- Basavaraj Doddamani
- Updated on: Jan 31, 2025
- 11:52 am
ಉಲ್ಟಾ ಹೊಡೆದ ಪತಿ: ಫೈನಾನ್ಸ್ ಕಿರುಕುಳದಿಂದ ಶಿಕ್ಷಕಿ ಆತ್ಮಹತ್ಯೆ ಕೇಸಿಗೆ ಬಿಗ್ ಟ್ವಿಸ್ಟ್
ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಿನ್ನೆ (ಜನವರಿ 29) ತನ್ನ ಪತ್ನಿ ಸಾವಿಗೆ ಫೈನಾನ್ಸ್ ಟಾರ್ಚರ್ ಕಾರಣ ಎಂದು ಪತಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ. ಆದ್ರೆ, ಇದೀಗ ಮೃತಪಟ್ಟಿರುವ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ ಪತಿ ಉಲ್ಟಾ ಹೊಡೆದಿದ್ದಾರೆ. ಶವ ಸಿಕ್ಕ ಬಳಿಕ ತನ್ನ ಪತ್ನಿ ಆತ್ಮಹತ್ಯೆ ಮಾಡಿ ಕೊಂಡಿಲ್ಲ ಎಂದಿದ್ದಾನೆ, ಹೀಗಾಗಿ ಈ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ.
- Basavaraj Doddamani
- Updated on: Jan 30, 2025
- 7:28 pm
ಹಿಮೋಫಿಲಿಯಾ ಪೀಡಿತರ ಆಶಾಕಿರಣ ದಾವಣಗೆರೆ ವೈದ್ಯ ಡಾ. ಸುರೇಶ್ ಹನಗವಾಡಿಗೆ ರಾಷ್ಟ್ರಪತಿ ಔತಣಕೂಟಕ್ಕೆ ಆಹ್ವಾನ
ಅವರೊಬ್ಬ ಸ್ವತಃ ವಿಚಿತ್ರ ಕಾಯಿಲೆಯಿಂದ ಬಳಲಿದವರು. ಸ್ನೇಹಿತರು ಮೈದಾನದಲ್ಲಿ ಆಟವಾಡುತ್ತಿದ್ದರೆ ಕಿಟಿಕಿಯಲ್ಲಿ ನಿಂತು ನೋಡಿ ಕಣ್ಣೀರು ಹಾಕುವುದನ್ನು ಬಿಟ್ಟರೆ ಮತ್ತೇನು ಮಾಡದ ಸ್ಥಿತಿ. ಇಂತಹ ಯುವಕ ನಂತರ ದಿಟ್ಟತನದಿಂದ ಓದಿ ವೈದ್ಯನಾದರು. ಅವರೀಗ ದಾವಣಗೆರೆಯಲ್ಲಿ ನಾಲ್ಕು ದಶಕಗಳಿಂದ ಹಿಮೋಫಿಲಿಯಾ ಪೀಡಿತ ಮಕ್ಕಳ ಭವಿಷ್ಯವನ್ನು ರೂಪಿಸುತ್ತಿದ್ದಾರೆ. ಇದೀಗ ರಾಷ್ಟ್ರಪತಿಗಳೇ ಅವರನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.
- Basavaraj Doddamani
- Updated on: Jan 24, 2025
- 9:54 am
ಸಿದ್ಧಗಂಗಾ ಶ್ರೀ ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ: ಜಯಮೃತ್ಯುಂಜಯ ಸ್ವಾಮೀಜಿ
ಸಿದ್ಧಗಂಗಾ ಶ್ರೀಗಳನ್ನು ರಾಷ್ಟ್ರೀಯ ಸಂತ ಎಂದು ಘೋಷಿಸಬೇಕೆಂದು ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಜೊತೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲಿಂಗಾಯತರ ಮೇಲಿನ ದೌರ್ಜನ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಅನ್ಯಾಯದ ವಿರುದ್ಧ 224 ಕ್ಷೇತ್ರಗಳಲ್ಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ ಆರಂಭಿಸುವುದಾಗಿ ಸ್ವಾಮೀಜಿ ಘೋಷಿಸಿದ್ದಾರೆ.
- Basavaraj Doddamani
- Updated on: Jan 21, 2025
- 4:28 pm
ಶ್ವಾಸಕೋಶ ಸಂಶೋಧನೆ ಮಾಡಲು ಹೋಗಿ ಮಗುವಿನ ಬ್ರೈನ್ ಡ್ಯಾಮೇಜ್: ದಯಾಮರಣ ಕೋರಿದ ತಂದೆ
ಚಿತ್ರದುರ್ಗದ ಓರ್ವ ವ್ಯಕ್ತಿಯ ಪತ್ನಿ ಏಳು ತಿಂಗಳ ಗರ್ಭಿಣಿಯಾಗಿದ್ದಾಗ ದಾವಣಗೆರೆ ಆಸ್ಪತ್ರೆಯಲ್ಲಿ ಶ್ವಾಸಕೋಶ ಸಂಶೋಧನೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಇದರಿಂದ ಮಗುವಿಗೆ ಮೆದುಳಿನ ಹಾನಿಯಾಗಿದೆ. ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ಮಗುವಿಗೆ ತೀವ್ರ ಸಮಸ್ಯೆ ಎದುರಾಗಿದೆ ಎಂದು ಓರ್ವ ವ್ಯಕ್ತಿ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋ ಕೂಡ ವೈರಲ್ ಆಗಿದೆ.
- Basavaraj Doddamani
- Updated on: Jan 13, 2025
- 6:26 pm
ರೈಲು ಹತ್ತಲು ಹೋಗಿ ಪ್ಲಾಟ್ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ, ಹೋಮ್ ಗಾರ್ಡ್ಗೆ ಶ್ಲಾಘನೆ
ದಾವಣಗೆರೆಯ ರೈಲು ನಿಲ್ದಾಣದಲ್ಲಿ ಓರ್ವ ಪ್ರಯಾಣಿಕ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಫ್ಲಾಟ್ಫಾರಂನಿಂದ ಕೆಳಗೆ ಬೀಳುತ್ತಿದ್ದನು. ಕೂಡಲೇ ಹೋಮ್ ಗಾರ್ಡ್ ಶಶಿಧರ್ ಪ್ರಯಾಣಿಕನನ್ನು ರಕ್ಷಿಸಿದ್ದಾರೆ. ಈ ಧೈರ್ಯಶಾಲಿ ಕಾರ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೋಮ್ ಗಾರ್ಡ್ ಶಶಿಧರ್ ಕಾರ್ಯಕಕ್ಕೆ ಸಾರ್ವಜನಿಕರು ಶ್ಲಾಘಿನೆ ವ್ಯಕ್ತಪಡಿಸಿದ್ದಾರೆ.
- Basavaraj Doddamani
- Updated on: Jan 9, 2025
- 1:03 pm
ಕನಿಷ್ಠ ವೇತನ ಜಾರಿ ಆಗಲೆಂದು ಹರಕೆ ಹೊತ್ತು ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ ಮುಸ್ಲಿಂ ಯುವಕ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳ್ಳಿಗನೂರು ಗ್ರಾಮದ ಮುಸ್ಲಿಂ ಯುವಕ ಶಫೀವುಲ್ಲಾ ಅವರು ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತು ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಜಾರಿಗೆ ಇದು ಹರಕೆಯಾಗಿತ್ತು. ಅದೇ ಜಿಲ್ಲೆಯ ಮತ್ತೊಂದು ಮುಸ್ಲಿಂ ಕುಟುಂಬ ಅಯ್ಯಪ್ಪ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.
- Basavaraj Doddamani
- Updated on: Jan 8, 2025
- 11:11 pm
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್ಆರ್ಟಿಸಿ ಬಂದ್ ಎಂದ ಕ್ರಿಯಾ ಸಮಿತಿ ಅಧ್ಯಕ್ಷ
ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನೌಕರರು ತಮ್ಮ ಮೂಲ ವೇತನದಲ್ಲಿ ಶೇಕಡಾ 25ರಷ್ಟು ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಕಾರಣ, ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಲಾಗಿದೆ. ಸರ್ಕಾರ ಸಾರಿಗೆ ಇಲಾಖೆಗೆ ಬಾಕಿ ಇರುವ 5010 ಕೋಟಿ ರೂ ಮತ್ತು ಶಕ್ತಿ ಯೋಜನೆಯ 2000 ಕೋಟಿ ರೂ ಬಿಡುಗಡೆ ಮಾಡಬೇಕೆಂದು ಆಗ್ರಹಿಸಲಾಗಿದೆ.
- Basavaraj Doddamani
- Updated on: Dec 27, 2024
- 8:35 pm