ಮುಸ್ಲಿಂರಿಂದ ಹಲಾಲ್ ಮಾಡಿಸಿದರೆ ದೇವಿಯ ಶಾಪ: ಏನಿದು ದುರ್ಗಮ್ಮನ ಜಾತ್ರೆಯಲ್ಲಿ ಶುರುವಾದ ವಿವಾದ?
ದಾವಣಗೆರೆ ದುರ್ಗಮ್ಮ ಜಾತ್ರೆ ಫೆಬ್ರವರಿ 24 ಮತ್ತು 25ರಂದು ನಡೆಯಲಿದ್ದು, ಸಡಗರ ಮನೆಮಾಡಿದೆ. ಶ್ರೀರಾಮ ಸೇನೆ ಈ ಬಾರಿ ಹಲಾಲ್ ಮುಕ್ತ ಜಾತ್ರೆಗೆ ಕರೆ ನೀಡಿದೆ. ದೇವಿಗೆ ಬಲಿ ನೀಡುವ ಕುರಿಗಳನ್ನು ಮುಸ್ಲಿಮರಿಂದ ಹಲಾಲ್ ಮಾಡಿಸುವುದನ್ನು ವಿರೋಧಿಸಿದ್ದು, ದೇವಿ ಶಾಪ ತಟ್ಟುತ್ತದೆ ಎಂದು ಎಚ್ಚರಿಕೆ ನೀಡಿದೆ.
- Basavaraj Doddamani
- Updated on: Feb 11, 2026
- 10:19 pm
ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ
ದಾವಣಗೆರೆಯ ಬಿಐಇಟಿ ಸಿವಿಲ್ ಟಾಪರ್ ಆಂಚಲ್ ಕುಮಾರಿ, 26ನೇ ವಯಸ್ಸಿನಲ್ಲಿ ಐಷಾರಾಮಿ ಜೀವನ ತ್ಯಜಿಸಿ ಜೈನ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಲಕ್ಷಾಂತರ ಸಂಬಳದ ಉದ್ಯೋಗ ಅವಕಾಶಗಳನ್ನು ಬಿಟ್ಟು, ಆಧ್ಯಾತ್ಮಿಕ ಹಾದಿ ಹಿಡಿದ ಅವರ ನಿರ್ಧಾರ ಸಮಾಜದಲ್ಲಿ ಚರ್ಚೆಯ ವಿಷಯವಾಗಿದೆ. ಗುಜರಾತ್ನ ಸೂರತ್ನಲ್ಲಿ ದೀಕ್ಷೆ ಪಡೆದ ಆಂಚಲ್, ಆಧುನಿಕ ಜಗತ್ತಿನಲ್ಲಿ ಹೆಚ್ಚುತ್ತಿರುವ ಆಧ್ಯಾತ್ಮದ ಸೆಳೆತಕ್ಕೆ ಸಾಕ್ಷಿಯಾಗಿದ್ದಾರೆ. ಪೋಷಕರ ಬೆಂಬಲವೂ ಇದೆ.
- Basavaraj Doddamani
- Updated on: Feb 7, 2026
- 10:31 pm
ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, 40-50 ಶಾಸಕರು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ನ ಎಲ್ಲ 139 ಶಾಕರ ಬೆಂಬಲ ಇದ್ದು, 40-50 ಜನ ಯುವ ಶಾಸಕರು ಅವರಿಗಾಗಿ ಏನು ಬೇಕಾದರೂ ಮಾಡಲು ಸಿದ್ಧ. ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಒಂದು ವೇಳೆ ಆಗಿಲ್ಲ ಎಂದಾದರೆ ಹೈಕಮಾಂಡ್ ಮಧ್ಯ ಪ್ರವೇಶಿಸಿ ಸ್ಪಷ್ಟಪಡಿಸಲಿ ಎಂದು ಶಾಸಕ ಬಸವರಾಜ ಶಿವಗಂಗಾ ಹೇಳಿದ್ದಾರೆ. ಅಲ್ಲದೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಈ ಬೆಳವಣಿಗೆಗಳ ಮೇಲೆ ಗಮನ ಹರಿಸುತ್ತಾರೆ ಎಂಬ ವಿಶ್ವಾಸವಿದೆ. ಪಕ್ಷದ ಒಳಗಿನ ಗೊಂದಲಗಳಿಗೆ ಶೀಘ್ರದಲ್ಲೇ ಸ್ಪಷ್ಟನೆ ಸಿಗಬೇಕು ಎಂದು ಆಗ್ರಹಿಸಿದ್ದಾರೆ.
- Basavaraj Doddamani
- Updated on: Feb 7, 2026
- 11:59 am
ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಪಾಪಿ: ಒಂದೂವರೆ ಎಕರೆ ಜಮೀನಿಗಾಗಿ ಹರಿದ ನೆತ್ತರು
ಆತ ತಂದೆ ಇದ್ದಾಗ ಒಮ್ಮೆಯೂ ಬಂದು ನೋಡಲ್ಲ. ಒಂದು ತುತ್ತು ಅನ್ನ ಹಾಕಲಿಲ್ಲ. ತಂದೆ ಸತ್ತ ವೇಳೆ ಕನಿಷ್ಠ ಅಂತ್ಯಸಂಸ್ಕಾರಕ್ಕೂ ಬರಲಿಲ್ಲ. ಹೀಗಿದ್ದರೂ ಈ ದುಷ್ಟನಿಗೆ ಅಪ್ಪನ ಆಸ್ತಿಯ ಮೇಲೆ ಕಣ್ಣು. ಸಹೋದರನ ಮಗನ ಪಾಲಿಗೆ ಆಸ್ತಿ ಹೋಯ್ತೆಂದು ಈತ ಮಾಡಿದ್ದು ಮಾಡಬಾರದ ಕೆಲಸ. ಅಷ್ಟಕ್ಕೂ ಆಗಿದ್ದೇನು? ಘಟನೆ ನಡೆದಿದ್ದೆಲ್ಲಿ ಎಂಬ ಮಾಹಿತಿ ಇಲ್ಲಿದೆ.
- Basavaraj Doddamani
- Updated on: Feb 3, 2026
- 6:43 pm
ಗಿಡಮೂಲಿಕೆ ಮಾರಾಟಕ್ಕೆ ಆಫ್ರಿಕಾಗೆ ತೆರಳಿದ್ದ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ 8 ಮಂದಿ ಸಂಕಷ್ಟದಲ್ಲಿ: ಬಂಧನ ಭೀತಿ
ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮೂಲದ 8 ಮಂದಿ ಹಕ್ಕಿಪಿಕ್ಕಿ ಬುಡಕಟ್ಟು ಜನ ಸೆಂಟ್ರಲ್ ಆಫ್ರಿಕಾದಲ್ಲಿ ವೀಸಾ ಅವಧಿ ಮುಕ್ತಾಯದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯ ಪೊಲೀಸರು 1.5 ಲಕ್ಷ ದಂಡಕ್ಕೆ ಒತ್ತಾಯಿಸಿದ್ದು, ಬಂಧನ ಭೀತಿ ಎದುರಾಗಿದೆ. ಭಾರತ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ತಮ್ಮನ್ನು ರಕ್ಷಿಸಬೇಕೆಂದು ಅವರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
- Basavaraj Doddamani
- Updated on: Feb 2, 2026
- 7:29 am
ಬಂಧನಕ್ಕೆ ಬಂದ ಪೊಲೀಸರ ಮೇಲೆಯೇ ‘ಕೈ’ ಮುಖಂಡನ ಪುತ್ರನಿಂದ ನಡೀತಾ ಹಲ್ಲೆ?
ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರೋರ್ವರ ಪುತ್ರ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧಿಸಲು ಬಂದಾಗ ಪೊಲೀಸರ ಮೇಲೆ ದಾಳಿ ನಡೆದಿದೆ ಎನ್ನಲಾಗಿದ್ದು, ಈ ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆ ಆವರಣದಲ್ಲಿನ ಗಲಾಟೆ ವಿಚಾರವಾಗಿ ಬಿಗುವಿನ ವಾತಾರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
- Basavaraj Doddamani
- Updated on: Jan 31, 2026
- 10:35 pm
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆ ಬೆಲೆ ಏರಿಕೆ ನಡುವೆಯೂ ದಾವಣಗೆರೆ ರೈತರಿಗೆ ಕಳ್ಳತನದ ಕಾಟ ಹೆಚ್ಚಾಗಿದೆ. ಕೊಳೆ ರೋಗದ ಚಿಂತೆಯ ಜೊತೆಗೆ ಕಳ್ಳರ ಕಾಟ ರೈತರನ್ನು ಹೈರಾಣಾಗಿಸಿದೆ. ಇದನ್ನು ತಡೆಯಲು ರೈತರು ಹೊಸ ಮಾಸ್ಟರ್ಪ್ಲಾನ್ ಅಳವಡಿಸಿಕೊಂಡಿದ್ದಾರೆ. ಅಡಿಕೆ ತೋಟಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ಅಪರಿಚಿತರ ಓಡಾಟವನ್ನು ಪತ್ತೆಹಚ್ಚಿ ಮೊಬೈಲ್ಗೆ ಸಂದೇಶ ಪಡೆಯುತ್ತಿದ್ದಾರೆ. ಈ ತಂತ್ರಜ್ಞಾನದಿಂದ ಅಡಿಕೆ ಕಳ್ಳತನಕ್ಕೆ ಪರಿಣಾಮಕಾರಿ ಕಡಿವಾಣ ಹಾಕಲು ಸಾಧ್ಯವಾಗಿದೆ.
- Basavaraj Doddamani
- Updated on: Jan 29, 2026
- 12:31 pm
ಪತಿ, ಸಹೋದರ ಮಾವ ಆತ್ಮಹತ್ಯೆ: ಮದ್ವೆಯಾಗಿ 45 ದಿನಕ್ಕೆ ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ದಾವಣಗೆರೆಯಲ್ಲಿ ಪತ್ನಿ ಸರಸ್ವತಿ ಪ್ರಿಯಕರನೊಂದಿಗೆ ಪರಾರಿಯಾದ ಕಾರಣಕ್ಕೆ ಪತಿ ಹರೀಶ್ ಹಾಗೂ ಸಹೋದರ ಮಾವ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡ ದುರಂತ ನಡೆದಿದೆ. ಈ ಸಂಬಂಧ ಪ್ರೇಮಿ ಶಿವಕುಮಾರ್ ಮತ್ತು ಸರಸ್ವತಿ ವಿರುದ್ಧ ಎಫ್ಐಆರ್ ದಾಖಲಿಸಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ ಅನ್ಯಾಯವಾಗಿರುವ ಕಾರಣ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ.
- Basavaraj Doddamani
- Updated on: Jan 28, 2026
- 10:21 pm
ಮದುವೆಯಾದ 45 ದಿನಕ್ಕೆ ಲವರ್ ಜೊತೆ ಯುವತಿ ಎಸ್ಕೇಪ್: ಪತಿ, ಸೋದರ ಮಾವ ಸೂಸೈಡ್
ದಾವಣಗೆರೆ ಗುಮ್ಮನೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ. ಇತ್ತ, ಸೊಸೆ ಬೇರೊಬ್ಬನ ಜೊತೆ ಓಡಿಹೋದ ಅವಮಾನ ತಾಳಲಾರದೆ ಮುಂದೆ ನಿಂತು ಮದುವೆ ಮಾಡಿಸಿದ್ದ ಆಕೆಯ ಸಹೋದರ ಮಾವ ರುದ್ರೇಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
- Basavaraj Doddamani
- Updated on: Jan 27, 2026
- 12:19 pm
ಕರೋನಾ ರೀತಿಯ ಮಾರಣಾಂತಿಕ ರೋಗ: ಇಂದಿರಾ ಪ್ರಿಯದರ್ಶಿನಿ ಮೃಗಾಲಯ ಬಂದ್
ಕೆಲ ದಿನಗಳ ಹಿಂದೆ ಬೆಳಗಾವಿ ಮೃಗಾಲಯದೊಂದರಲ್ಲಿ ರಾಶಿ ರಾಶಿ ಜಿಂಕೆಗಳು ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ದಾವಣಗೆರೆಯ ಆನಗೋಡು ಮೃಗಾಲಯದಲ್ಲಿ ಏಕಾಏಕಿ ಚುಕ್ಕೆ ಜಿಂಕೆಗಳು ಸಾಯುತ್ತಿದ್ದಾವೆ. ವಿಚಿತ್ರ ಸಾಂಕ್ರಾಮಿಕ ರೋಗ ಹರಡಿದ್ದು ವೈದ್ಯರ ತಂಡ ಬಿಡು ಬಿಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯವನ್ನು ಬಂದ್ ಮಾಡಲಾಗಿದೆ. ಹಾಗಾದ್ರೆ, ಜಿಂಕೆ ಯಾವ ರೋಗದಿಂದ ಸಾವನ್ನಪ್ಪುತ್ತಿವೆ? ಎನ್ನುವ ವಿವರ ಇಲ್ಲಿದೆ.
- Basavaraj Doddamani
- Updated on: Jan 19, 2026
- 7:59 pm
ದಾವಣಗೆರೆ ಕಿರು ಮೃಗಾಲಯದಲ್ಲಿ 4 ಚುಕ್ಕೆ ಜಿಂಕೆಗಳು ಸಾವು: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ 4 ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ಸದ್ಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಉಳಿದ ಪ್ರಾಣಿಗಳ ಸುರಕ್ಷತೆಗಾಗಿ ಜೈವಿಕ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ಮಾಹಿತಿ ನೀಡಿದ್ದಾರೆ.
- Basavaraj Doddamani
- Updated on: Jan 18, 2026
- 9:43 pm
Davanagere: ಚೋರ್ ಮಗ ಚಂಡಾಳ್ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು!
ದಾವಣಗೆರೆ ಹರಿಹರ ತಾಲೂಕಿನ ದೊಗ್ಗಳ್ಳಿ ಆಂಜನೇಯ ದೇವಾಲಯದಲ್ಲಿ ನಡೆದ ಚಿನ್ನ-ಬೆಳ್ಳಿ ಆಭರಣ ಕಳ್ಳತನ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ತಂದೆ-ಮಗ ಸೇರಿ ದೇವಸ್ಥಾನಗಳನ್ನು ಗುರಿಯಾಗಿಸಿ ಕಳ್ಳತನ ನಡೆಸುತ್ತಿದ್ದರು. ಇವರಿಗೆ ಒಬ್ಬ ಸಹಾಯಕನೂ ಇದ್ದ ಎಂಬುದು ಗೊತ್ತಾಗಿದೆ. ಹಬ್ಬ, ಜಾತ್ರೆಗಳ ನಂತರ ದೇಗುಲಗಳಲ್ಲಿ ಕದಿಯುವುದು ಅವರ ಕಾಯಕವಾಗಿತ್ತು ಎಂಬ ವಿಷಯ ತನಿಖೆ ವೇಳೆ ಬಯಲಾಗಿದೆ.
- Basavaraj Doddamani
- Updated on: Jan 18, 2026
- 8:53 am