ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.
ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್ಐಆರ್
ದಾವಣಗೆರೆ ಜಿಲ್ಲೆಯ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಜಯಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾತಿನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಐವರು ಶಿಕ್ಷಕರು ಸೇರಿದಂತೆ 10 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪತಿ ಸಾವಿಗೆ ಕಿರುಕುಳವೇ ಕಾರಣವೆಂದು ಆರೋಪಿಸಿ ಜಯಪ್ಪ ಅವರ ಪತ್ನಿ ಅಂಜಿನಮ್ಮ ದೂರು ನೀಡಿದ್ದರು.
- Basavaraj Doddamani
- Updated on: Jun 18, 2026
- 6:09 pm
ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು: ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ!
26 ವರ್ಷದ ಯುವ ಬಾಡಿಬಿಲ್ಡರ್ ಮನೆ ಮುಂದೆ ಕುಸಿದು ಬಿದ್ದು ಹೃದಯಾಘಾತದಿಂದ ಕೊನೆಯುಸಿರೆಳೆದಿರುವಂತಹ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಬಾಡಿಬಿಲ್ಡರ್ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಮಗನನ್ನು ಕಳೆದುಕೊಂಡು ತಾಯಿ ಕಂಗಾಲಾಗಿದ್ದಾರೆ.
- Basavaraj Doddamani
- Updated on: Jun 17, 2026
- 4:11 pm
ವಿವಾದಾತ್ಮಕ ಹೇಳಿಕೆ: ಪ್ರೊ ಭಗವಾನ್ ವಿರುದ್ಧ ಕೇಸ್ ಬುಕ್, ಕ್ಷಮೆ ಕೇಳಬೇಕು ಎಂದ ಉಗ್ರಪ್ಪ
ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಪ್ರೊ. ಕೆ.ಎಸ್. ಭಗವಾನ್ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ಒಂದು ನೀಡಿದ್ದರು. ಇದು ಸಾಕಷ್ಟು ಚರ್ಚೆಗೆ ಕೂಡ ಗ್ರಾಸವಾಗಿತ್ತು. ಈ ಬೆನ್ನಲ್ಲೇ ಇದೀಗ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Basavaraj Doddamani
- Updated on: Jun 14, 2026
- 4:49 pm
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ರಮೇಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?
ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಖುಷಿ ಪಟ್ಟಿದ್ದಾರೆ.
- Basavaraj Doddamani
- Updated on: Jun 14, 2026
- 5:39 pm
‘ಶ್ರೀರಾಮ ದಶರಥನ ಮಗ ಅಲ್ಲ’: ವಿವಾದಾತ್ಮಕ ಹೇಳಿಕೆ ಕೊಟ್ಟ ಪ್ರೊ. ಭಗವಾನ್
ಶ್ರೀರಾಮನ ಕುರಿತು ಹಿರಿಯ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ರೀರಾಮ ದಶರಥನ ಮಗನಲ್ಲ ಎಂದು ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಶೂದ್ರರೆಲ್ಲರೂ ಬ್ರಾಹ್ಮಣರ ಗುಲಾಮರು ಎಂದು ಮನಸ್ಮೃತಿ ಹೇಳುತ್ತೆ. ಪಂಚಾಂಗವನ್ನು ಕೇಳೋದು ಮೊದಲು ಬಿಟ್ಟು ಬಿಡಿ, ಮೊದಲು ನಿಮ್ಮ ಮೇಲೆ ನೀವು ನಂಬಿಕೆ ಬೆಳಸಿಕೊಳ್ಳುವುದನ್ನು ಅಭ್ಯಸಮಾಡಿ ಎಂದವರು ಕರೆ ನೀಡಿದ್ದಾರೆ.
- Basavaraj Doddamani
- Updated on: Jun 9, 2026
- 4:12 pm
ಜಗಳೂರಿನಲ್ಲಿ ಭುಗಿಲೆದ್ದ ಕುಡಿಯುವ ನೀರಿನ ಆಕ್ರೋಶ!: ಇಒ, ಪಿಡಿಒ ಅಧಿಕಾರಿಗಳನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು
ದಾವಣಗೆರೆ ಜಗಳೂರು ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ. ಒಂದು ತಿಂಗಳಿನಿಂದ ನೀರಿಲ್ಲದೆ ಪರದಾಡುತ್ತಿರುವ ಗ್ರಾಮಸ್ಥರು, ಇದಕ್ಕೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ್ದ ಜಗಳೂರು ತಾ.ಪಂ. ಇಒ ಮತ್ತು ಪಿಡಿಒ ಅವರನ್ನು ಕೂಡಿ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಬಿಲ್ ಕಲೆಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ನೀರಿನ ಅನುದಾನ ದುರ್ಬಳಕೆ ಆರೋಪವೂ ಕೇಳಿಬಂದಿದೆ.
- Basavaraj Doddamani
- Updated on: Jun 8, 2026
- 5:59 pm
ದಾವಣಗೆರೆಯ ಅನಾಥ ಮಕ್ಕಳಿಗೆ ವಿದೇಶಕ್ಕೆ ಹೋಗುವ ಭಾಗ್ಯ: ಇಟಲಿ ದಂಪತಿ ಮಡಿಲು ಸೇರಿದ 1 ವರ್ಷದ ಕಂದಮ್ಮ; ಕಣ್ಣೀರಿಟ್ಟ ವಿದೇಶಿ ದಂಪತಿ
ದಾವಣಗೆರೆಯ ಅನಾಥ ಮಕ್ಕಳಿಗೆ ಅಂತರಾಷ್ಟ್ರೀಯ ದತ್ತು ಪ್ರಕ್ರಿಯೆ ಮೂಲಕ ಹೊಸ ಬದುಕು ಲಭಿಸಿದೆ. ಇಟಲಿಯ ದಂಪತಿಗಳು ಒಂದು ವರ್ಷದ ಅನಾಥ ಮಗುವನ್ನು ದತ್ತು ಪಡೆದಿದ್ದು, ಮುಂದಿನ ದಿನಗಳಲ್ಲಿ ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ವಿವಿಧ ದೇಶಗಳಿಗೆ ಇನ್ನೂ ಮೂವರು ಮಕ್ಕಳು ತೆರಳಲಿದ್ದಾರೆ. CARA ಸಂಸ್ಥೆಯ ನಿಯಮಗಳಡಿ ನಡೆದ ಈ ಪ್ರಕ್ರಿಯೆಯು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಂಪನ್ನವಾಗಿದ್ದು, ಹಲವು ಪೋಷಕರ ಕನಸು ನನಸಾಗಿದೆ.
- Basavaraj Doddamani
- Updated on: Jun 8, 2026
- 4:57 pm
ಮತ್ತೊಂದು ಸ್ವರೂಪ ಪಡೆದ ಜಮೀರ್ ಅಹ್ಮದ್ ಖಾನ್ರದ್ದು ಎನ್ನಲಾದ ಆಡಿಯೋ ಪ್ರಕರಣ
ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಮಾತನಾಡಿದ್ದು ಎನ್ನಲಾದ ಆಡಿಯೋ ಕಾಂಗ್ರೆಸ್ನಲ್ಲಿ ಕಂಪನ ಸೃಷ್ಟಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷ ವಿರೋಧಿಯಾಗಿ ಜಮೀರ್ ನಡೆದುಕೊಂಡಿದ್ದಾರೆ ಎಂಬ ಆರೋಪಕ್ಕೆ ಬಲ ಬಂದಿದೆ. ಹೀಗಾಗಿ ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಡಿಯೋ ಸಂಬಂಧ ಕೊನೆಗೂ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆಡಿಯೋ ಮೂಲ ಪತ್ತೆಗೆ ಮುಂದಾಗಿದೆ.
- Basavaraj Doddamani
- Updated on: Jun 7, 2026
- 6:59 pm
ಹರಿಹರ ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನ ನಾಪತ್ತೆ: ಟ್ರಸ್ಟಿಗಳ ಮೇಲೆ ಸೋಮಣ್ಣ ಬೇವಿನಮರ ಗಂಭೀರ ಆರೋಪ
ದಾವಣಗೆರೆಯ ಹರಿಹರ ಪಂಚಮಸಾಲಿ ಮಠದ ಆಡಳಿತ ಮಂಡಳಿ ವಿರುದ್ಧ ರಾಜ್ಯ ಗಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಗಂಭೀರ ಆರೋಪ ಮಾಡಿದ್ದಾರೆ. ಮಠಕ್ಕೆ ಸೇರಿದ ಸುಮಾರು 1.5 ಕೆಜಿ ಚಿನ್ನಾಭರಣಗಳ ಲೆಕ್ಕ ನಾಪತ್ತೆಯಾಗಿದ್ದು, ಟ್ರಸ್ಟಿಗಳು ಸತ್ಯ ಮುಚ್ಚಿಟ್ಟಿದ್ದಾರೆ ಎಂದಿದ್ದಾರೆ. 2008ರಲ್ಲಿ ಭಕ್ತರು ದಾನ ನೀಡಿದ ಚಿನ್ನದ ಆಭರಣಗಳನ್ನು ಟ್ರಸ್ಟಿಗಳು ಮರೆಮಾಚಿದ್ದು, ಕೇವಲ ನಗದು ಲೆಕ್ಕ ನೀಡಿದ್ದಾರೆ. ಮಠದ ಎಲ್ಲಾ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಆಗ್ರಹಿಸಿದ್ದಾರೆ.
- Basavaraj Doddamani
- Updated on: Jun 6, 2026
- 6:50 pm
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್ ಕಣ್ಣೀರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನೆನೆದು ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಸಿದ್ದರಾಮಯ್ಯ ಎಲ್ಲಾ ವರ್ಗಗಳನ್ನು ಸಮಾನವಾಗಿ ಕಂಡ, ಬಡವರ ಬಗ್ಗೆ ಕಾಳಜಿ ಹೊಂದಿದ್ದ ನಾಯಕ ಎಂದು ಅವರು ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಉಳಿದು, ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ನೀಡುವ ಮೂಲಕ 2028ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.
- Basavaraj Doddamani
- Updated on: May 29, 2026
- 12:53 pm
ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್
ದಾವಣಗೆರೆಯಲ್ಲಿ ‘ನಾವಾಬಿಟ್’ ಎಂಬ ನಕಲಿ ಆ್ಯಪ್ ಮೂಲಕ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ 13,000 ಅಮಾಯಕ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ತಮಿಳುನಾಡು ಮೂಲದ ಪ್ರಮುಖ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. 10,000 ರೂ. ಹೂಡಿಕೆಗೆ ನಿತ್ಯ 400 ರೂ. ಲಾಭದ ಆಮಿಷ ಒಡ್ಡಿ, ಸ್ಥಳೀಯ ಶಾಲಾ ಮುಖ್ಯೋಪಾಧ್ಯಾಪಕಿಯನ್ನು ಬಳಸಿಕೊಂಡು ಬಡ ಜನರನ್ನು ಲೂಟಿ ಮಾಡಿರುವ ಜಾಲ ಬಯಲಾಗಿದೆ.
- Basavaraj Doddamani
- Updated on: May 27, 2026
- 12:10 pm
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರ್ಟ್ಗೆ ಹರಿಹರ ಪೊಲೀಸರ ಅರ್ಜಿ!
ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಹರಿಹರದ ವಚನಾನಂದ ಸ್ವಾಮೀಜಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ತನಿಖಾಧಿಕಾರಿ ಸುರೇಶ್ ಸಗರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮಕ್ಕಳ ಮೇಲಿನ ದೌರ್ಜನ್ಯದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಲಾಗಿದ್ದು, ಮೇ 29 ರಂದು ದಾವಣಗೆರೆ ವಿಶೇಷ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನು ರದ್ದಾದರೆ ಸ್ವಾಮೀಜಿ ಬಂಧನ ಸಾಧ್ಯತೆ ಇದೆ.
- Basavaraj Doddamani
- Updated on: May 22, 2026
- 12:24 pm