ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳ ನಡುವೆ 20 ಮೀಟರ್ ಉದ್ದದ ತೂಗು ಕಾಲುವೆ ಒಡೆದಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಬೇಸಿಗೆ ಬೆಳೆಗಳಿಗೆ ನೀರು ಪೂರೈಸುವ ಈ ಕಾಲುವೆಯ ಒಡೆದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣದ ದುರಸ್ತಿಗೆ ರೈತರು ಆಗ್ರಹಿಸುತ್ತಿದ್ದಾರೆ. ನೀರಿನ ಅಭಾವದಿಂದ ಬೇಸಿಗೆ ಬೆಳೆಗಳು ಹಾನಿಗೀಡಾಗುವ ಆತಂಕವಿದೆ.
- Basavaraj Doddamani
- Updated on: Mar 18, 2025
- 10:25 am
ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಜಲಸಮಾಧಿ: ಗ್ರಾಮದಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ಹಾಗೂ ದಿಗ್ಗೇನಹಳ್ಳಿ ಗ್ರಾಮಗಳ ಬಳಿ ಬಟ್ಟೆ ತೊಳೆಯಲು ಹೋಗಿದ್ದ ಮೂವರ ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ ಮೃತದೇಹಗಳನ್ನು ಹೊರತೆಗೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದೆ. ಸ್ಥಳಕ್ಕೆ ತಹಶೀಲ್ದಾರ್ ಸೇರಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.
- Basavaraj Doddamani
- Updated on: Mar 17, 2025
- 6:36 pm
ದಾವಣಗೆರೆಯಲ್ಲಿ ಸಿನಿಮೀಯ ರೀತಿಯಲ್ಲಿ ಚೇಸಿಂಗ್, ಫೈರಿಂಗ್: ದರೋಡೆಕೋರರ ಬಂಧನ
ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಬ್ಯಾಂಕ್ ದರೋಡೆಗೆ ಪ್ಲಾನ್ ಮಾಡಿ, ಉತ್ತರ ಪ್ರದೇಶದಿಂದ ಆಗಮಿಸುತ್ತಿದ್ದ ದರೋಡೆಕೋರರ ಗ್ಯಾಂಗ್ ಪ್ಲಾನ್ ಅನ್ನು ಪೊಲೀಸರು ತಪ್ಪಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ದರೋಡೆಕೋರನ ಕಾಲನ್ನು ಪೋಲೀಸ್ ಬುಲೆಟ್ ಸೀಳಿದ್ದು, ಪೊಲೀಸ್ ಫೈರಿಂಗ್ನ ಥ್ರಿಲ್ಲಿಂಗ್ ಸ್ಟೋರಿ ಇಲ್ಲಿದೆ.
- Basavaraj Doddamani
- Updated on: Mar 16, 2025
- 1:24 pm
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ಕೋಳಿ ಫಾರ್ಮ್ನಲ್ಲಿನ 3000 ಕೋಳಿಗಳು ಇದ್ದಕ್ಕಿದ್ದಂತೆ ಸತ್ತಿವೆ. ತಜ್ಞ ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಕ್ಕಿ ಜ್ವರದ ಲಕ್ಷಣಗಳು ಕಂಡುಬಂದಿಲ್ಲ. ವಿಷಪೂರಿತ ಆಹಾರ ಸೇವನೆಯಿಂದ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಮೂರು ತಿಂಗಳ ಹಿಂದೆ ಈ ಫಾರ್ಮ್ ಆರಂಭಿಸಿದ್ದ ಯುವಕ ಈ ಘಟನೆಯಿಂದ ಆಘಾತಕ್ಕೀಡಾಗಿದ್ದಾನೆ.
- Basavaraj Doddamani
- Updated on: Mar 14, 2025
- 8:45 am
ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ: ಪರಮೇಶ್ವರ್
ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ "ಪೊಲೀಸ್" ಎಂದು ಬರೆಯುವುದು ಕಾನೂನುಬಾಹಿರ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.ಇಂತಹ ಕ್ರಮ ಕಾನೂನು ಉಲ್ಲಂಘನೆಯಾಗುತ್ತದೆ ಮತ್ತು 2022ರ ಸರ್ಕಾರದ ಸುತ್ತೋಲೆಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ವಿಷಯ ಶ್ರವಣಬೆಳಗೊಳ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರವಾಗಿ ನೀಡಲಾಗಿದೆ.
- Basavaraj Doddamani
- Updated on: Mar 11, 2025
- 11:26 am
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ಪರೀಕ್ಷೆ ಬಳಿಕ ವಿದ್ಯಾರ್ಥಿನಿ-ತಾಯಿ ಕಣ್ಣೀರು
ಕರ್ನಾಕದಾದ್ಯಂತ ದ್ವಿತೀಯ ಪಿಯುಸಿ ಆರಂಭವಾಗಿದ್ದು, ಸೈನ್ಸ್ ವಿಭಾಗದ ವಿದ್ಯಾರ್ಥಿಗಳು ಇಂದು(ಮಾರ್ಚ್ 03) ಮ್ಯಾಥ್ಸ್ ಪರೀಕ್ಷೆ ಬರೆದಿದ್ದಾರೆ. ಆದ್ರೆ, ಇಲ್ಲೋರ್ವ ಪರೀಕ್ಷಾ ಮೇಲ್ವಿಚಾರಕ ವಿದ್ಯಾರ್ಥಿಗೆ ಹೆಚ್ಚುವರಿ ಉತ್ತರ ಪತ್ರಿಕೆ ನೀಡಲ್ಲವೆಂಬ ಆರೋಪ ಕೇಳಿಬಂದಿದೆ. ದಾವಣಗೆರೆ ಜಿಲ್ಲೆ ಜಗಳೂರಿನ ಮಾಲತಿ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪರೀಕ್ಷಾ ಮೇಲ್ವಿಚಾರಕನ ನಡೆಗೆ ವಿದ್ಯಾರ್ಥಿನಿ ಹಾಗೂ ಆಕೆಯ ತಾಯಿ ಕಣ್ಣೀರಿಟ್ಟಿದ್ದಾರೆ.
- Basavaraj Doddamani
- Updated on: Mar 3, 2025
- 7:32 pm
ದಾವಣಗೆರೆ ಮಠದಲ್ಲಿದೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಕಳುಹಿಸಿದ ರೋಬೋಟಿಕ್ ಆನೆ: ಹೇಗಿದೆ ನೋಡಿ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ 17 ಲಕ್ಷ ರೂಪಾಯಿ ಮೌಲ್ಯದ ರೋಬೋಟಿಕ್ ಆನೆಯನ್ನು ದಾನ ಮಾಡಲಾಗಿದೆ. ಮುಂಬೈನ ಕುಪಾ ಆ್ಯಂಡ್ ಪೀಠಾ ಇಂಡಿಯಾ ಸಂಸ್ಥೆಯಿಂದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಆನೆ ಕಳುಹಿಸಿದ್ದಾರೆ. ಈ ರೋಬೋಟಿಕ್ ಆನೆಗೆ "ಉಮಾಮಹೇಶ್ವರ" ಎಂದು ನಾಮಕರಣ ಮಾಡಲಾಗಿದೆ. ಇದು ನಿಜವಾದ ಆನೆಯಂತೆ ಕಾಣುವುದು ಮತ್ತು ಕಾರ್ಯನಿರ್ವಹಿಸುವುದು ವಿಶೇಷವಾಗಿದೆ. ಕಾಡು ಪ್ರಾಣಿಗಳ ಬಳಕೆಯನ್ನು ತಪ್ಪಿಸಲು ಇದು ಒಂದು ಪರ್ಯಾಯವಾಗಿದೆ.
- Basavaraj Doddamani
- Updated on: Feb 24, 2025
- 8:05 am
ದಾವಣೆಗೆರೆ: ಅಪ್ರಾಪ್ತ ಮಗಳಿಗೆ ಆಕ್ಟಿವ್ ಹೊಂಡಾ ಕೊಟ್ಟು 25 ಸಾವಿರ ರೂ. ದಂಡ ಕಟ್ಟಿದ ತಾಯಿ
ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ಕೊಡಬೇಡಿ ಎಂದು ಸಂಚಾರ ಪೊಲೀಸರು ಪದೇ ಪದೇ ಮನವಿ ಮಾಡುತ್ತಿರುತ್ತಾರೆ. ಆದಾಗ್ಯೂ, ಅಲ್ಲಲ್ಲಿ ಇಂಥ ಪ್ರಕರಣಗಳು ವರದಿಯಾಗುತ್ತಿರುತ್ತವೆ. ಇದೀಗ ದಾವಣಗೆರೆಯಲ್ಲಿ ಅಂಥದ್ದೇ ಪ್ರಕರಣ ವರದಿಯಾಗಿದ್ದು, ಮಗಳಿಗೆ ಸ್ಕೂಟಿ ಚಲಾಯಿಸಲು ಕೊಟ್ಟ ತಾಯಿಗೆ ಸಂಚಾರ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ.
- Basavaraj Doddamani
- Updated on: Feb 19, 2025
- 9:14 am
ಕೂಲಿ ಕೆಲಸಕ್ಕೆ ಬರುವ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿದ ಶಿರಗನಹಳ್ಳಿ ರೈತ!
ಇತ್ತೀಚಿನ ದಿನಗಳಲ್ಲಿ ಜಮೀನಿನಲ್ಲಿ ಕೃಷಿ ಕೂಲಿ ಕೆಲಸ ಮಾಡುವುದಕ್ಕೆ ಕಾರ್ಮಿಕರೇ ಸಿಗುತ್ತಿಲ್ಲ ಎಂದು ಜಮೀನುದಾರರು, ರೈತರು ಗೋಳು ತೋಡಿಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಕೆಲಸ ಮಾಡಿಸಿಕೊಂಡು ಮಾಲೀಕರು ಕೂಲಿ ನೀಡದೇ ಸತಾಯಿಸುವ ಉದಾಹರಣೆಗಳು ನಮ್ಮ ಮುಂದೆ ಇವೆ. ಇದರ ಮಧ್ಯೆ ಇಲ್ಲೋರ್ವ ಕೃಷಿಕ, ತನ್ನ ಜಮೀನಿಗೆ ಕೃಷಿ ಕೆಲಸ ಮಾಡುವುದಕ್ಕೆ ಬರುತ್ತಿದ್ದ ಮಹಿಳಾ ಕಾರ್ಮಿಕರನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾನೆ. ಈ ಮೂಲಕ ಸ್ಥಳೀಯ ಜನರಿಂದ ಭಾರೀ ಮೆಚ್ಚುಗೆ ಪಡೆದಿದ್ದಾನೆ.
- Basavaraj Doddamani
- Updated on: Feb 18, 2025
- 6:01 pm
ಪೂಜೆ ಮಾಡಿ ಕಷ್ಟವನ್ನು ಪರಿಹರಿಸುತ್ತೇವೆಂದು ಚಿನ್ನಾಭರಣ ದೋಚಿದ್ದವರು ಅರೆಸ್ಟ್
ದಾವಣಗೆರೆಯ ಹರಿಹರ ತಾಲ್ಲೂಕಿನಲ್ಲಿ ಪೂಜೆಯ ನೆಪದಲ್ಲಿ ದಂಪತಿಯ ಚಿನ್ನದ ಆಭರಣಗಳನ್ನು ಕಳವು ಮಾಡಲಾಗೊದೆ. ಹರಿಹರ ಗ್ರಾಮಾಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ, 8.65 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಹಿಂದೆಯೂ ಇಂತಹ ವಂಚನೆಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
- Basavaraj Doddamani
- Updated on: Feb 17, 2025
- 10:57 am
ರಾಮಮಂದಿರದ ಮೂರ್ತಿ ಮಾದರಿಯಲ್ಲೇ ಹನುಮಾನ್ ವಿಗ್ರಹ ಕೆತ್ತನೆ: ಅರುಣ್ ಯೋಗಿರಾಜ್ ಕೈಯಲ್ಲಿ ಅರಳಿದ ಶಿಲೆ
ದಾವಣಗೆರೆಯ ಹಳೇ ಕುಂದುವಾಡದಲ್ಲಿ 5.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹನುಮಾನ್ ಮತ್ತು ಬಸವೇಶ್ವರ ದೇವಸ್ಥಾನಗಳು ಉದ್ಘಾಟನೆಗೆ ಸಜ್ಜಾಗಿವೆ. ಅಯೋಧ್ಯೆಯ ರಾಮಮಂದಿರದ ವಿಗ್ರಹದ ಮಾದರಿಯಲ್ಲಿರುವ ಹನುಮನ ವಿಗ್ರಹ ಮುಖ್ಯ ಆಕರ್ಷಣೆಯಾಗಿದೆ. ಇನ್ನು ಗ್ರಾಮದಲ್ಲಿ 41 ದಿನಗಳ ಕಾಲ ಮದ್ಯ ಮತ್ತು ಮಾಂಸ ನಿಷೇಧಿಸಲಾಗಿದೆ.
- Basavaraj Doddamani
- Updated on: Feb 15, 2025
- 5:20 pm
ಘನತೆಯಿಂದ ಸಾಯುವ ಹಕ್ಕು: ಮೊದಲು ದಯಾಮರಣ ಪಡೆಯಲು ಮುಂದಾದ ನಿವೃತ್ತ ಶಿಕ್ಷಕಿ
ಸುಪ್ರೀಂ ಕೋರ್ಟ್ನ ಐತಿಹಾಸಿಕ ತೀರ್ಪಿನಿಂದಾಗಿ, ಮಾರಣಾಂತಿಕ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ದೊರೆತಿದೆ. ಕರ್ನಾಟಕ ಸರ್ಕಾರ ಈ ತೀರ್ಪನ್ನು ಜಾರಿಗೆ ತಂದಿದೆ. ಈ ತೀರ್ಪಿನ ಪ್ರಮುಖ ಅಂಶಗಳು ವೈದ್ಯರ ಅನುಮತಿ, ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ಅನುಮೋದನೆ ಮತ್ತು ನ್ಯಾಯಾಲಯದ ಅನುಮತಿ ಸೇರಿವೆ. 84 ವರ್ಷದ ಹೋರಾಟಗಾರ್ತಿ ಹೆಚ್.ಬಿ. ಕರಿಬಸಮ್ಮ ಕಾನೂನಿನಡಿ ಮೊದಲಿಗೆ ದಯಾಮರಣ ಪಡೆಯಬೇಕು ಎಂದಿದ್ದಾರೆ.
- Basavaraj Doddamani
- Updated on: Feb 12, 2025
- 8:13 pm