ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.
ಸ್ಮಶಾನದ ಜಾಗದ ಮೇಲೂ ಕಣ್ಣು: ಹೆತ್ತವರ ಸಮಾಧಿಯನ್ನೂ ಬಿಡದೆ ಧ್ವಂಸಗೊಳಿಸಿ ವಿಕೃತಿ
Davanagere News: ದಾವಣಗೆರೆ ತಾಲೂಕಿನ ಆವರಗೆರೆಯಲ್ಲಿ ಆಸ್ತಿ ಆಸೆಗೆ ಬಿದ್ದ ಕಿಡಿಗೇಡಿಗಳು ಕೋರ್ಟ್ ಆದೇಶ ಉಲ್ಲಂಘಿಸಿ, ಮಡಿವಾಳ ಸಮಾಜದ 75 ವರ್ಷ ಹಳೆಯ ಸ್ಮಶಾನದಲ್ಲಿದ್ದ 50ಕ್ಕೂ ಹೆಚ್ಚು ಪೂರ್ವಜರ ಸಮಾಧಿಗಳನ್ನು ಟ್ರ್ಯಾಕ್ಟರ್ ಮುಖಾಂತರ ಧ್ವಂಸಗೊಳಿಸಿದ್ದಾರೆ. ಸ್ಮಶಾನ ದಾವಣಗೆರೆ ನಗರಕ್ಕೆ ಹೊಂದಿಕೊಂಡಿರುವ ಕಾರಣ ಜಾಗಕ್ಕೆ ಬೆಲೆ ಬಂದಿರೋದೆ ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣ ಎನ್ನಲಾಗ್ತಿದೆ.
- Basavaraj Doddamani
- Updated on: Jul 27, 2026
- 12:56 pm
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು ಅಂದಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ
ಸಿ.ಟಿ. ರವಿ ತಮ್ಮ "ಮುಲ್ಲಾ" ಹೇಳಿಕೆಯನ್ನು ಸಮರ್ಥಿಸಿಕೊಂಡು, ಯಾವುದೇ ಭಯವಿಲ್ಲದೆ ಅದನ್ನು ಪುನರುಚ್ಚರಿಸುವುದಾಗಿ ಹೇಳಿದರು. ದೆಹಲಿಯ ನೀಟ್ ಪ್ರತಿಭಟನೆ ವೇಳೆ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ಹಚ್ಚಿದ ಮುಲ್ಲಾನನ್ನು ಉದ್ದೇಶಿಸಿ ಮಾತನಾಡಿರುವುದಾಗಿ ಸ್ಪಷ್ಟಪಡಿಸಿದರು. ಇದರ ಜೊತೆಗೆ, ನೀಟ್ ಪರೀಕ್ಷಾ ಸೋರಿಕೆ ತನಿಖೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರ ಶೀಘ್ರ ಕ್ರಮವನ್ನು ಶ್ಲಾಘಿಸಿದ ಸಿ.ಟಿ. ರವಿ, ಕೆಪಿಎಸ್ಸಿ ಭ್ರಷ್ಟಾಚಾರದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್ಐಟಿ ತನಿಖೆಗೆ ಆಗ್ರಹಿಸಿದರು.
- Basavaraj Doddamani
- Updated on: Jul 26, 2026
- 10:48 pm
SP Warning Rowdysheeters: ರೌಡಿಶೀಟರ್ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್ಪಿ ಡಾ. H T ಶೇಖರ್
ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಅವರ ನೇತೃತ್ವದಲ್ಲಿ, ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ 145 ರೌಡಿಶೀಟರ್ಗಳಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ.
- Basavaraj Doddamani
- Updated on: Jul 22, 2026
- 11:40 am
87 ಕೇಸ್ ಭೇದಿಸಿದ ದಾವಣಗೆರೆ ಪೊಲೀಸರು: ಚಿನ್ನ, ಬೆಳ್ಳಿ ಸೇರಿ 3.91 ಕೋಟಿ ರೂ. ಸ್ವತ್ತು ವಾರಸುದಾರರಿಗೆ ಹಸ್ತಾಂತರ
ದಾವಣಗೆರೆ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 87 ಪ್ರಕರಣಗಳನ್ನು ಭೇದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿನ್ನಾಭರಣ ಸೇರಿದಂತೆ ಬರೋಬ್ಬರಿ 3.91 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ದಾವಣಗೆರೆ ಪೊಲೀಸರ ಕಾರ್ಯಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆಗಳು ವ್ಯಕ್ತವಾಗಿವೆ.
- Basavaraj Doddamani
- Updated on: Jul 21, 2026
- 9:53 pm
ನ್ಯಾಯಕ್ಕಾಗಿ ಹೆತ್ತ ತಾಯಿಯ ಕೊಳೆತ ಶವವನ್ನೇ ಬೈಕ್ನಲ್ಲಿ ತಂದ ಮಕ್ಕಳು! ಎಫ್ಐಆರ್ ದಾಖಲು
ದಾವಣಗೆರೆ ಜಿಲ್ಲೆಯ ಅದಾಪುರದಲ್ಲಿ ತಾಯಿಯ ಸಾವು ಕೊಲೆ ಎಂದು ಶಂಕಿಸಿ, ಇಬ್ಬರು ಪುತ್ರರು ರಾತ್ರೋರಾತ್ರಿ ಸಮಾಧಿ ಅಗೆದು ಕೊಳೆತ ಶವವನ್ನು ಬೈಕ್ನಲ್ಲಿ ಆಸ್ಪತ್ರೆಗೆ ತಂದ ಆಘಾತಕಾರಿ ಘಟನೆ ನಡೆದಿದೆ. ಮರು ಮರಣೋತ್ತರ ಪರೀಕ್ಷೆಗಾಗಿ ಮಕ್ಕಳು ನಡೆಸಿದ ಈ ಭೀಕರ ಹೋರಾಟ ಈಗ ಅವರ ಪಾಲಿಗೆ ಮುಳುವಾಗಿದ್ದು, ಕಾನೂನು ಉಲ್ಲಂಘನೆಯ ಹಿನ್ನೆಲೆಯಲ್ಲಿ ಅವರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
- Basavaraj Doddamani
- Updated on: Jul 20, 2026
- 10:58 am
ಪೋಕ್ಸೋ ಕೇಸ್: ದಾವಣಗೆರೆ ಜಿಲ್ಲಾ ವಿಶೇಷ ಕೋರ್ಟ್ನಿಂದ ವಚನಾನಂದ ಶ್ರೀಗೆ ಜಾಮೀನು ಮಂಜೂರು
Vachanananda Swamiji: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ದಾವಣಗೆರೆ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ಸೂಚನೆ ಬೆನ್ನಲ್ಲೇ ಶ್ರೀಗಳು ರೆಗ್ಯುಲರ್ ಬೇಲ್ ಪಡೆದುಕೊಂಡಿದ್ದಾರೆ. ಈಗಾಗಲೇ ವಚನಾನಂದ ಶ್ರೀ ವಿರುದ್ಧ 7 ಮಕ್ಕಳ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದ್ದು, ಮಕ್ಕಳನ್ನು ಸ್ನಾನದ ಕೋಣೆ ಹಾಗೂ ಮಲಗುವ ರೂಂಗೆ ಕರೆದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಸ್ವಾಮೀಜಿ ಮೇಲಿದೆ.
- Basavaraj Doddamani
- Updated on: Jul 13, 2026
- 3:57 pm
ಸ್ವಪಕ್ಷೀಯರೇ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ರು: ಬೇಸರ ಹೊರಹಾಕಿದ ವಿಜಯೇಂದ್ರ
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪಕ್ಷದಲ್ಲಿ ಬಾರೀ ಕೋಲಾಹಲ ಸೃಷ್ಟಿಸಿದೆ. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನ ಹಣೆಯಲೆಂದೇ ಅಡ್ಡಮತದಾನ ಷಡ್ಯಂತ್ರ ನಡೆದಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪೂರಕವೆಂಬಂತೆ ಸ್ವತಃ ವಿಜಯೇಂದ್ರ ಅವರೇ ಬಹಿರಂಗವಾಗಿ ಹೇಳಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.
- Basavaraj Doddamani
- Updated on: Jul 7, 2026
- 9:51 pm
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ.
- Basavaraj Doddamani
- Updated on: Jul 5, 2026
- 4:20 pm
ದಾವಣಗೆರೆಯಲ್ಲಿ ಹಳ್ಳ ಹಿಡಿದ ‘ಎಸ್ಐಆರ್’ ಪ್ರಕ್ರಿಯೆ: ಮನೆ ಮನೆಗೆ ಹೋಗದೆ ದೇವಸ್ಥಾನ, ಅಂಗನವಾಡಿಯಲ್ಲೇ ಕುಳಿತ ಬಿಎಲ್ಓ
ದಾವಣಗೆರೆ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಯು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಬಿಎಲ್ಓಗಳು ನಿಯಮ ಉಲ್ಲಂಘಿಸಿ ಮನೆ ಮನೆಗೆ ತೆರಳದೆ, ಅಂಗನವಾಡಿ ಹಾಗೂ ದೇವಸ್ಥಾನಗಳಲ್ಲಿ ಸಾರ್ವಜನಿಕರನ್ನು ಕಾಯಿಸುತ್ತಿದ್ದಾರೆ. ದಕ್ಷಿಣ ವಿಧಾನಸಭಾ ಕ್ಷೇತ್ರದ ಜಾಲಿನಗರದಲ್ಲಿ ಈ ಅವ್ಯವಹಾರ ಬೆಳಕಿಗೆ ಬಂದಿದ್ದು, ಬಿಎಲ್ಓಗಳ ನಿರ್ಲಕ್ಷ್ಯದ ವಿಡಿಯೋಗಳು ವೈರಲ್ ಆಗಿವೆ. ಇದರಿಂದ ವಯೋವೃದ್ಧರು ಮತ್ತು ಮಹಿಳೆಯರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Basavaraj Doddamani
- Updated on: Jul 4, 2026
- 4:56 pm
ಯಡಿಯೂರಪ್ಪ, ವಿಜಯೇಂದ್ರರ ಕಡೆಗಣಿಸಿದರೆ ಪಕ್ಷಕ್ಕೆ ಭಾರಿ ನಷ್ಟ: ಬಿಜೆಪಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಕಡೆಗಣಿಸಿದರೆ ಪಕ್ಷಕ್ಕೆ ಭಾರಿ ನಷ್ಟ ಕಾದಿದೆ ಎಂದು ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆ. ದಾವಣಗೆರೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು ಬಿಜೆಪಿಯೊಳಗಿನ ಯಡಿಯೂರಪ್ಪ, ವಿಜಯೇಂದ್ರ ವಿರೋಧಿ ಬಣಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
- Basavaraj Doddamani
- Updated on: Jul 2, 2026
- 12:20 pm
ದಾವಣಗೆರೆ ಜಿಲ್ಲಾಸ್ಪತ್ರೆ ಅಗ್ನಿ ದುರಂತದ ಕಾರಣ ಬಯಲು: ತನಿಖೆಯಲ್ಲಿ ಗೊತ್ತಾಯ್ತು ಅಸಲಿ ಸತ್ಯ
ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಜೂನ್ 30 ರಂದು ಸಂಭವಿಸಿದ ಅಗ್ನಿ ದುರಂತಕ್ಕೆ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿ ಮತ್ತು ಹಾಳಾಗಿದ್ದ ಯಂತ್ರೋಪಕರಣಗಳ ಬಳಕೆಯೇ ನೇರ ಕಾರಣ ಎಂದು ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ನೇತೃತ್ವದ ತನಿಖಾ ತಂಡದ ಪ್ರಾಥಮಿಕ ವರದಿಯಿಂದ ಬಹಿರಂಗವಾಗಿದೆ.
- Basavaraj Doddamani
- Updated on: Jul 2, 2026
- 11:43 am
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ: ಕ್ಯಾಮರಾಗಳಿಗೆ ಬೆರಳು ತೋರಿಸಿ ಧಿಮಾಕು
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧಿತ ಶಂಕಿತ ಉಗ್ರ ಸುಹೇಲ್, ವೈದ್ಯಕೀಯ ಪರೀಕ್ಷೆಗೆ ಕರೆತಂದಾಗ ಕ್ಯಾಮರಾಗಳಿಗೆ ಬೆರಳು ತೋರಿಸಿ ಉದ್ದಟತನ ಪ್ರದರ್ಶಿಸಿದ್ದಾನೆ. ಜೂನ್ 23 ರಂದು ಬನ್ನಿಕೋಡ ಗ್ರಾಮದಲ್ಲಿ ಈತನನ್ನು ಬಂಧಿಸಲಾಗಿತ್ತು. ಎನ್ಐಎ ಅಧಿಕಾರಿಗಳ ವಿಚಾರಣೆ ನಂತರವೂ ಆತನ ಅಹಂಕಾರಿ ವರ್ತನೆ ಕಡಿಮೆಯಾಗಿಲ್ಲ. ಭಯೋತ್ಪಾದನಾ ಚಟುವಟಿಕೆಗಳ ಶಂಕೆಯ ಮೇಲೆ ಬಂಧಿತನಾಗಿ, ಪೊಲೀಸ್ ವಶದಲ್ಲಿರುವಾಗಲೇ ಇಂತಹ ವರ್ತನೆ ತೋರಿರುವುದು ಗಂಭೀರ ಪ್ರಶ್ನೆಗಳಿಗೂ ಎಡೆಮಾಡಿಕೊಟ್ಟಿದೆ.
- Basavaraj Doddamani
- Updated on: Jul 1, 2026
- 2:03 pm