ಅಬ್ಬಬ್ಬಾ…ಒಂದೇ ಬೈಕ್ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಬೈಕ್ ನಲ್ಲಿ ಒಬ್ಬರು, ಇಬ್ಬರು, ಲಾಸ್ಟ್ ಅಂದ್ರೆ ಮೂವರು ಹೋಗಬಹುದು. ಅದು ತ್ರಿಬಲ್ ರೈಡಿಂಗ್ ಮಾಡುವಮತಿಲ್ಲ. ಸಂಚಾರಿ ನಿಯಮ ಉಲ್ಲಂಘನೆಯಾಗುತ್ತೆ. ಆದರೂ ಸಹ ಸಂಚಾರಿ ನಿಯಮವನ್ನು ಗಾಳಿಗೆ ತೂರಿ ಒಂದೇ ಬೈಕ್ ನಲ್ಲಿ ಐದು ಜನ ಸವಾರಿ ಮಾಡಿದ್ದಾರೆ. ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ಈ ದೃಶ್ಯ ಕಂಡುಬಂದಿದ್ದು, ವಿಡಿಯೋ ವೈರಲ್ ಆಗಿದೆ.
- Basavaraj Doddamani
- Updated on: Jun 24, 2025
- 9:23 pm
ನಷ್ಟದಲ್ಲಿದ್ದ ದಾವಣಗೆರೆ ರೈತರ ಕೈ ಹಿಡಿದ ಡ್ರ್ಯಾಗನ್ ಫ್ರೂಟ್: ಅನ್ನದಾತ ಸುಖೀಭವ
ಮೆಕ್ಕೆಜೋಳ ಬೆಳೆದು ಬೇಸತ್ತಿದ್ದ ಸಾವಿರಾರು ರೈತರಿಗೆ ಯುವ ರೈತ ಆಶಾಕಿರಣ ಆಗಿದ್ದಾರೆ. ಕಡಿಮೆ ಖರ್ಚಿನಲ್ಲೇ ಕೃಷಿಯಲ್ಲಿ ಹೆಚ್ಚಿನ ಲಾಭ ಪಡೆಯುವು ಹೇಗೆ ಎಂಬುವುದನ್ನು ಯುವ ರೈತ ತೋರಿಸಿಕೊಟ್ಟಿದ್ದಾರೆ. ಯುವ ರೈತನ ಕಾರ್ಯಕ್ಕೆ ಇತರ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಯುವ ರೈತ ಒಂದು ವರ್ಷಕ್ಕೆ ಪ್ರತಿ ಎಕರೆಯಲ್ಲಿ 2-6 ಲಕ್ಷ ರೂಪಾಯಿ ಲಾಭ ಗಳಿಸಿದ್ದಾರೆ. ಇಲ್ಲಿದೆ ವರದಿ.
- Basavaraj Doddamani
- Updated on: Jun 23, 2025
- 10:32 pm
ಇದೇ ವಿಧಿಯಾಟ: ತಂಗಿ ಶವಸಂಸ್ಕಾರಕ್ಕೆ ಬಂದವರು ಅಕ್ಕನ ಅಂತ್ಯಸಂಸ್ಕಾರ ಮಾಡಬೇಕಾಯ್ತು!
ಸಾವು ಯಾವಾಗ? ಯಾವ ರೀತಿ ಬರುತ್ತೆ ಅಂತ ಯೋಚನೆ ಸಹ ಮಾಡುವುದಕ್ಕೂ ಆಗುತ್ತಿಲ್ಲ. ಮನೆಯಿಂದ ಆಚೆ ಹೋದವರು ವಾಪಸ್ ಬರ್ತಾರೆ ಎನ್ನುವದೇ ಗ್ಯಾರಂಟಿ ಇಲ್ಲ. ಇನ್ನು ರಾತ್ರಿ ಮಲಗಿದ್ದವರು ಬೆಳಗ್ಗೆ ಎದ್ದೇಳುತ್ತಾರೆ ಎನ್ನುವುದು ಗೊತ್ತಿಲ್ಲ. ಅದರಂತೆ ತಂಗಿ ಅಂತ್ಯಸಂಸ್ಕಾರಕ್ಕೆಂದು ಹೊರಟ್ಟಿದ್ದ ಅಕ್ಕನೂ ಸಹ ಮಸಣ ಸೇರುವಂತಾಗಿದೆ. ತಂಗಿ ಶವ ಸಂಸ್ಕಾರದ ಬಳಿಕ ಸಂಬಂಧಿಕರು ಅಕ್ಕನ ಅಂತ್ಯಸಂಸ್ಕಾರವನ್ನ ನೆರವೇರಿಸಿದ್ದಾರೆ.
- Basavaraj Doddamani
- Updated on: Jun 20, 2025
- 4:50 pm
ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಬಂದ ಇಬ್ಬರು ವಿದ್ಯಾರ್ಥಿನಿಯರು: ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ
ದಾವಣಗೆರೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಎಸ್ಎಸ್ಎಲ್ಸಿ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ಕರ್ನಾಟಕಕ್ಕೆ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ. ಇಬ್ಬರೂ 624 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮರುಮೌಲ್ಯಮಾಪನದ ನಂತರ ಅವರಿಗೆ ತಲಾ ಎರಡು ಅಂಕಗಳು ಹೆಚ್ಚಾಗಿವೆ.
- Basavaraj Doddamani
- Updated on: May 26, 2025
- 2:25 pm
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
10ನೇ ತರಗತಿಯಲ್ಲಿ ಉತ್ತೀರ್ಣರಾದ ಆರು ವಿದ್ಯಾರ್ಥಿಗಳಿಗೆ ಮೊನ್ನೇ ಅಷ್ಟೇ ಸಚಿವ ಜಮೀರ್ ಅಹ್ಮದ್ ಖಾನ್ 3.5 ಲಕ್ಷ ಹಣ ಹಾಗೂ 6 ಸ್ಕೂಟಿಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ತಮ್ಮ ಅಪ್ಪಟ ಅಭಿಮಾನಿಯೊಬ್ಬರ ಕುಟುಂಬಕ್ಕೆ 5 ಲಕ್ಷ ರೂಪಾಯಿ ದನ ಸಹಾಯ ಮಾಡಿದ್ದಾರೆ. ಹಾವೇರಿಯ ಹಾನಗಲ್ ತಾಲೂಕಿನ ನಾಗರಹಳ್ಳಿ ಗ್ರಾಮದ ಮಹಮ್ಮದ್ ಜಾಫರ್ ಎನ್ನುವರು ಅಪ್ಪಟ ಜಮೀರ್ ಅಹ್ಮದ್ ಅವರ ಅಭಿಮಾನಿ ಆಗಿದ್ದರು.
- Basavaraj Doddamani
- Updated on: May 25, 2025
- 6:05 pm
ದಾವಣಗೆರೆ: ಕೆಲಸ ಮಾಡುತ್ತಿದ್ದ ಬ್ಯಾಂಕ್ನಿಂದಲೇ ಚಿನ್ನಾಭರಣ ಕದ್ದು ಬೇರೆ ಬ್ಯಾಂಕ್ಗಳಲ್ಲಿ ಅಡವಿಟ್ಟ ಗೋಲ್ಡ್ ಲೋನ್ ಆಫೀಸರ್!
ಬ್ಯಾಂಕ್ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ನಿಂದಲೇ 3 ಕೆಜಿಯಷ್ಟು ಚಿನ್ನಾಭರಣ ಕಳವು ಮಾಡಿ ಪೊಲೀಸರ ಅತಿಥಿಯಾದ ವಿದ್ಯಮಾನ ದಾವಣಗೆರೆ ನಗರದ ನಿಟ್ಟುವಳ್ಳಿಯಲ್ಲಿರುವ ಸಿಎಸ್ಬಿ ಬ್ಯಾಂಕ್ನಲ್ಲಿ ನಡೆದಿದೆ. ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಹಣ ಹೊಂದಿಸುವುದಕ್ಕಾಗಿ ಆತ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
- Basavaraj Doddamani
- Updated on: May 15, 2025
- 10:28 am
ದಾವಣಗೆರೆ ರೌಡಿಶೀಟರ್ ಸಂತೋಷ್ ಹತ್ಯೆ ಪ್ರಕರಣ: ಆರೋಪಿಗಳು ಪೊಲೀಸರ ಮುಂದೆ ಶರಣು
ದಾವಣಗೆರೆಯಲ್ಲಿ ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಪ್ರಕರಣದಲ್ಲಿ 10 ಆರೋಪಿಗಳು ಹೊಳಲ್ಕೆರೆ ಪೊಲೀಸರ ಎದುರು ಶರಣಾಗಿದ್ದಾರೆ. ವಿದ್ಯಾನಗರ ಠಾಣೆಯಲ್ಲಿ 12 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹತ್ಯೆಯಾದ ಸಂತೋಷ್ ಕುಮಾರ್ ಅವರ ಆಪ್ತರೇ ಹೆಚ್ಚಿನ ಆರೋಪಿಗಳು. ಬುಳ್ಳ ನಾಗ ಹತ್ಯೆಯಲ್ಲೂ ಇವರೇ ಭಾಗಿ ಎನ್ನಲಾಗಿದೆ. ಸಂತೋಷ್ ಕುಮಾರ್ ತನ್ನ ಸಹಚರರಿಗೆ ನೀಡಿದ್ದ ವಾಗ್ದಾನ ಉಳಿಸಿಕೊಳ್ಳದ ಕಾರಣ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ.
- Basavaraj Doddamani
- Updated on: May 6, 2025
- 9:02 pm
ಮಂಗಳೂರು, ಮೈಸೂರು ಬಳಿಕ ದಾವಣಗೆರೆಯಲ್ಲೊಬ್ಬ ಕುಖ್ಯಾತ ರೌಡಿಶೀಟರನ ಕೊಲೆ: ಆರೋಪಿಗಳಿಗೆ ಬಲೆ ಬೀಸಿದ ಪೊಲೀಸ್
ದಾವಣಗೆರೆಯಲ್ಲಿ ಕುಖ್ಯಾತ ರೌಡಿಶೀಟರ್ ಸಂತೋಷ್ ಅಲಿಯಾಸ್ ಕಣುಮಾನನ್ನು 8 ಯುವಕರು ಹತ್ಯೆ ಮಾಡಿದ್ದಾರೆ. ಕೊಲೆ ಮಾಡುವ ವಿಡಿಯೋ ಕೂಡ ವೈರಲ್ ಆಗಿದೆ. ಸದ್ಯ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಕಣುಮಾ ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಘಟನೆಯಿಂದ ದಾವಣಗೆರೆ ಜನರು ಬೆಚ್ಚಿಬಿದ್ದಿದ್ದಾರೆ.
- Basavaraj Doddamani
- Updated on: May 6, 2025
- 3:05 pm
ದಾವಣಗೆರೆ: ಕ್ಯಾನ್ಸರ್ ಗೆದ್ದ ಬಾಲಕಿ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲೂ ಟಾಪರ್
ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.62.34ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಮಧ್ಯೆ ದಾವಣಗೆರೆಯ ಶಾಂತಾ ಎಂಬ ಬಾಲಕಿ ಚಿಕ್ಕ ವಯಸ್ಸಿನಲ್ಲಿಯೇ ಕ್ಯಾನ್ಸರ್ನಿಂದ ಬಳಲಿ, ಒಂದು ವರ್ಷ ಶಾಲೆಗೆ ಹೋಗಲು ಸಾಧ್ಯವಾಗದಿದ್ದರೂ, ಶೇ. 93.44 ಅಂಕಗಳೊಂದಿಗೆ SSLC ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದಾಳೆ. ಆ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ.
- Basavaraj Doddamani
- Updated on: May 4, 2025
- 2:42 pm
ಮೊದಲ ಸ್ವಾಭಿಮಾನ ಸಾವು ಬಯಸಿದ ದಾವಣಗೆರೆಯ ಅಜ್ಜಿ, ಕಾರಣ ಕೇಳಿದ್ರೆ ಕರಳು ಚುರುಕ್ ಎನ್ನುತ್ತೆ
ದಾವಣಗೆರೆಯ ಕೆ.ಬಿ. ಕರಿಬಸಮ್ಮ 85 ವರ್ಷದ ವೃದ್ಧೆ. ಈ ಅಜ್ಜಿ ನಿವೃತ್ತ ಶಿಕ್ಷಕಿಯಾಗಿದ್ದು, ಘನತೆಯಿಂದ ಮರಣ ಹೊಂದುವ ಹಕ್ಕು ಸಿಗಬೇಕೆಂದು ಬರೋಬ್ಬರಿ 24 ವರ್ಷಗಳಿಂದ ನಿರಂತರ ಹೋರಾಟ ಮಾಡಿದ್ದಾರೆ. ಇದರ ಪರಿಣಾಮ ಇಚ್ಛಾ ಮರಣ ಕಾನೂನು ಜಾರಿಗೆ ಬಂದಿದೆ. ಇದರ ಬೆನ್ನಲ್ಲೇ ಇದೀಗ ಅಜ್ಜಿ ಮೊದಲ ಸ್ವಾಭಿಮಾನದ ಸಾವು ತಮ್ಮದಾಗಬೇಕೆಂದು ಇಚ್ಛಿಸಿದ್ದಾರೆ. ಹೌದು....ಗೌರವಯುತವಾಗಿ ಸಾಯಲು ಅವಕಾಶ ನೀಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಅಷ್ಟಕ್ಕೂ ಈ ಅಜ್ಜಿ ಸಾಯುವ ತೀರ್ಮಾನ ಕೈಗೊಂಡಿದ್ಯಾಕೆ ಎನ್ನುವುದನ್ನು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ.
- Basavaraj Doddamani
- Updated on: May 1, 2025
- 8:58 pm
ಮೊಬೈಲ್ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದ ಯುವತಿಗೆ ರೈಲು ಡಿಕ್ಕಿ: ಸಾವು
ಹರಿಹರ ರೈಲು ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ಮೊಬೈಲ್ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದ 23 ವರ್ಷದ ಎಂಬಿಎ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದಿದೆ. ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ಮೂಲದ ಶ್ರಾವಣಿ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದರು ಮತ್ತು ಶುಭ ಕಾರ್ಯಕ್ಕಾಗಿ ಹರಿಹರಕ್ಕೆ ಬಂದಿದ್ದರು. ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದಾರೆ.
- Basavaraj Doddamani
- Updated on: Apr 30, 2025
- 2:54 pm
ದಾವಣಗೆರೆಯ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದಾಪುರ ಕೆರೆಯಲ್ಲಿ 7ನೇ ಶತಮಾನದ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆಯಾಗಿದೆ. 5 ಅಡಿ ಉದ್ದದ ಈ ಶಾಸನವು ಹಳೆಗನ್ನಡದಲ್ಲಿ 17 ಸಾಲುಗಳನ್ನು ಹೊಂದಿದೆ. ಇದು ಬಳ್ಳಾವಿ ನಾಡಿನ ಆಡಳಿತ ಮತ್ತು ತೆರಿಗೆ ವಿನಾಯಿತಿಗಳ ಕುರಿತು ಮಾಹಿತಿ ಒಳಗೊಂಡಿದೆ.
- Basavaraj Doddamani
- Updated on: Apr 30, 2025
- 12:05 pm