ಆದ್ಯ ವಚನಕಾರ ದೇವರ ದಾಸಿಮಯ್ಯನ ‘ಮುದನೂರು’ ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ ‘ಗುರು’ & ‘ಗಾಡ್ ಫಾದರ್’ ನನ್ನಪ್ಪ.
ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ.
‘ಹೆಣ್ಣಾಗಿದ್ದೇ ತಪ್ಪಾ?’ ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, ‘ವಿಷಾಮೃತ’ ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, ‘ಕೆರೆ ಉಳಿಸಿ’ ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, ‘ಆಪರೇಷನ್ ಚಿನ್ನ’ ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
ವರದಕ್ಷಿಣೆ ಆಸೆಗೆ 8 ವರ್ಷದಿಂದ ಪ್ರೀತಿಸಿದ ಯುವತಿಗೆ ಕೈಕೊಡಲು ಮುಂದಾದ ಶಿಕ್ಷಕ: ಮುಂದೇನಾಯ್ತು?
ವರದಕ್ಷಿಣೆ ಆಸೆಗೆ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಶಿಕ್ಷಕ ಮೋಸ ಮಾಡಲು ಮುಂದಾಗಿದ್ದ. ಇದನ್ನ ತಿಳಿದ ಯುವತಿ ದೂರು ನೀಡಿದ್ದರು. ವಿಚಾರಣೆ ಬಳಿಕ ಮದುವೆ ಆಗಲು ಒಪ್ಪಿದ ಹಿನ್ನಲೆ ಪೊಲೀಸರ ಸಮ್ಮುಖದಲ್ಲೇ ಮದುವೆ ಮಾಡಿಸಲಾಗಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಘಟನೆ ನಡೆದಿದೆ.
- Basavaraj Mudnur
- Updated on: Feb 27, 2026
- 6:07 pm
ಅನ್ಯಕೋಮಿನ ಯುವಕನಿಂದ ಚಾಕು ಇರಿತ: ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ
ಕೋಟೆನಾಡು ಚಿತ್ರದುರ್ಗ ರಣಾಂಗಣವಾಗಿದೆ. ಸ್ಕ್ರೀನ್ ಗಾರ್ಡ್ ಸಲುವಾಗಿ ಮೊಬೈಲ್ ಅಂಗಡಿ ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡುವೆ ನಡೆದ ವಾಗ್ವಾದ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಈ ವೇಳೆ ಅನ್ಯಕೋಮಿನ ಯುವಕ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಹಿಂದೂ ಸಂಘಟನೆಗಳು ಸಿಡಿದೆದ್ದಿದ್ದು, ಜಸ್ಟ್ ಮೊಬೈಲ್ ಸ್ಕ್ರೀನ್ ಗಾರ್ಡ್ ವಿಚಾರಕ್ಕೆ ನಡೆದ ಗಲಾಟೆ ಇದೀಗ ಕೋಮು ಸಂಘರ್ಷಕ್ಕೆ ತಿರುಗಿದೆ.
- Basavaraj Mudnur
- Updated on: Feb 25, 2026
- 5:06 pm
ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ
ಚಿತ್ರದುರ್ಗ, ದೇವನಹಳ್ಳಿ ಮತ್ತು ಮಂಡ್ಯದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು ಮೂವರು ದಾರುಣವಾಗಿ ಮೃತಪಟ್ಟಿದ್ದು, ಮಾಜಿ ಶಾಸಕ ಸುರೇಶ್ ಗೌಡ ಸೇರಿದಂತೆ 5 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲೂಕಿನಲ್ಲಿ ಹಿಟ್ ಆ್ಯಂಡ್ ರನ್ಗೆ ಇಬ್ಬರು ಬಲಿಯಾಗಿದ್ದರೆ, ದೇವನಹಳ್ಳಿಯಲ್ಲಿ ಬೈಕ್ಗಳ ಮುಖಾಮುಖಿ ಡಿಕ್ಕಿಯಲ್ಲಿ ಒಬ್ಬರು ಅಸುನೀಗಿದ್ದಾರೆ.
- Basavaraj Mudnur
- Updated on: Feb 22, 2026
- 9:07 am
ಸಹಪಾಠಿ ಜತೆ ಗಲಾಟೆ: ಮನನೊಂದು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ
ಚಿತ್ರದುರ್ಗ ಜಿಲ್ಲೆ ಭರಮಸಾಗರದ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಣ್ಣು ಹಂಚುವ ವಿಚಾರಕ್ಕೆ ಸಹಪಾಠಿ ಜತೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಸಹಪಾಠಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದರಿಂದ ಮನನೊಂದು ಶಾಲೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
- Basavaraj Mudnur
- Updated on: Feb 16, 2026
- 2:46 pm
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ವಿಳಂಬ: ಸಿಡಿದೆದ್ದ ರೈತರಿಂದ ನಾಳೆ ಬಂದ್ಗೆ ಕರೆ
ಭದ್ರಾ ಮೇಲ್ದಂಡೆ ಯೋಜನೆ ಎರಡು ದಶಕಗಳಿಂದ ಆಮೆಗತಿಯಲ್ಲಿ ಸಾಗಿದೆ. ಯೋಜನೆ ಅಪೂರ್ಣಗೊಂಡಿದ್ದು, ಕೇಂದ್ರ-ರಾಜ್ಯ ಸರ್ಕಾರದ ನಡುವಿನ ಆಪಾದನೆಗಳಿಂದ ಅನುದಾನ ಕೂಡ ಬಿಡುಗಡೆಯಾಗಿಲ್ಲ. ಹೀಗಾಗಿ ಸಿಡಿದೆದ್ದ ರೈತರು ಫೆ 10ಕ್ಕೆ ಹಿರಿಯೂರು, ಹೊಳಲ್ಕೆರೆ ಬಂದ್ಗೆ ಕರೆ ನೀಡಿದ್ದಾರೆ. ಜೊತೆಗೆ ನ್ಯಾಯಯುತ ನೀರು ಹಂಚಿಕೆಗೆ ಆಗ್ರಹಿಸಿದ್ದಾರೆ.
- Basavaraj Mudnur
- Updated on: Feb 9, 2026
- 9:35 pm
6 ವರ್ಷದಿಂದ ಒಂದೇ ರೂಮಿನಲ್ಲಿದ್ದು ಈಗ ನಾನು ಬೇಡ ಅಂತಿದ್ದಾಳೆ: ನ್ಯಾಯಕ್ಕಾಗಿ ಪಟ್ಟು ಹಿಡಿದ ಪ್ರಿಯಕರ
2009ರಿಂದ ಪ್ರೀತಿಸಿ, ಆರು ವರ್ಷ ಲಿವ್-ಇನ್ ಸಂಬಂಧದಲ್ಲಿದ್ದ ಸಿವಿಲ್ ಇಂಜಿನಿಯರ್ ರವಿಗೆ ಪ್ರೇಯಸಿಯಿಂದ ಮೋಸ. ಕೋರ್ಟ್ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಯುವತಿ ಬೇರೊಬ್ಬರನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದಾಳೆ. ನ್ಯಾಯಕ್ಕಾಗಿ ಹೋರಾಡುತ್ತಿರುವ ರವಿ, ಮಹಿಳಾ ಸಂಘಟನೆಗಳು ಪುರುಷರ ಅನ್ಯಾಯಕ್ಕೂ ಧ್ವನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.
- Basavaraj Mudnur
- Updated on: Feb 7, 2026
- 6:11 pm
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್
ಬೆಂಗಳೂರಿನ ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್ಸಿಎಲ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಹ ರಾಜ್ಯ ಸರ್ಕಾರದ ವಿರುದ್ಧವೇ ಆರೋಪಿಸಿದ್ದಾರೆ.
- Basavaraj Mudnur
- Updated on: Feb 6, 2026
- 6:59 pm
ಶಿಕಾರಿಪುರದಲ್ಲಿ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ರಾಜ್ಯವನ್ನೇ ಬಿಚ್ಚಿಬೀಳಿಸಿದ ಕಾರ್ಪೆಂಟರ್
ಬೆಂಗಳೂರು ಹಾಗೂ ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಹೌದು. ನಾಡ ಬಂದೂಕು ತಯಾರಿಕಾ ಜಾಲ ಪತ್ತೆಯಾಗಿದೆ. ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದವ ಬರೋಬ್ಬರಿ 7 ನಾಡ ಬಂದೂಕು ತಯಾರಿಸಿಟ್ಟಿರುವುದು ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರು ಕಾರ್ಪೆಂಟರ್ ಅನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
- Basavaraj Mudnur
- Updated on: Feb 6, 2026
- 6:36 pm
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿ ಸುಚಿತ್ರಾಳ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಕೊಲೆ ಕೇಸ್ನಲ್ಲಿ (Murder Case) ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಈತನ ಲವರ್ ಸುಚಿತ್ರಾ ಜೈಲು ಪಾಲಾಗಿದ್ದಾರೆ. ಈ ಜೋಡಿಹಕ್ಕಿ ಜೈಲು ಸೇರ್ತಿದ್ದಂತೆ ಇವರ ಒಂದೊಂದೇ ಕಾಮಪುರಾಣ ಹೊರಗೆ ಬರುತ್ತಿವೆ. ಕಮಲಾಕರ ಹಾಗೂ ಸುಚಿತ್ರಾ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಅವಳಿಗಾಗಿ ನಾಯಿ ಥರಾ ಓಡಿದವನು ನಾನು ಎಂದು ಕಮಲಾಕರ್ ಹೇಳಿದ್ರೆ, ಅವನೇ ನನಗೆ ಸರ್ವಸ್ವ ಎಂದು ಸುಚಿತ್ರಾ ಹೇಳಿದ್ದಾಳೆ. ಮತ್ತೊಂದೆಡೆ ದಾಳಿಯಿಂದ ಗಾಯಗೊಂಡಿರುವ ಸುಚಿತ್ರಾಳ ಪತಿ ಮಹೇಶ್, ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೇ ವೇಳೆ ಹೆಂಡ್ತಿ ಸುಚಿತ್ರಾಳ ಮತ್ತಷ್ಟು ನವರಂಗಿ ಆಟವನ್ನು ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.
- Basavaraj Mudnur
- Updated on: Feb 5, 2026
- 8:39 pm
ಜ್ಯೋತಿಷ್ಯ ಹೇಳ್ತಿದ್ದವನ ಭವಿಷ್ಯವೇ ತಲೆಕೆಳಗಾಯ್ತು: ಕಮಲಾಕರ್ ಭಟ್-ಸುಚಿತ್ರಾಳ ಮತ್ತಷ್ಟು ಶೋಕಿ ಪುರಾಣ ಬಯಲು
ಸಿದ್ದಾಪುರದಲ್ಲಿ ವಸಂತ ನಾಯ್ಕ್ ಕೊಲೆ ಪ್ರಕರಣದಲ್ಲಿ ಪ್ರಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಈಗ ಜೈಲು ಸೇರಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಜೊತೆ ಇದ್ದ ಮಹಿಳೆ ಸುಚಿತ್ರಾಳೇ ಈ ಕೊಲೆ ಪ್ರಕರಣದ ಸೂತ್ರದಾರಿ. ಸದ್ಯ ಸುಚಿತ್ರಾ ಹಾಗೂ ಕಮಲಾಕರ್ ಭಟ್ಟ ಲವ್ವಿಡವ್ವಿಯ ಮತ್ತಷ್ಟು ಸ್ಫೋಟಕ ಮಾಹಿತಿಯನ್ನು ಸ್ವತಃ ಮಹಿಳೆಯ ಮಗಳೇ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ಹಾಗೇ ಸುಚಿತ್ರಾಳ ಕಲರ್ ಫುಲ್ ಬದುಕು ಹೇಗಿತ್ತು ಎನ್ನುವುದು ಈ ಕೆಳಗಿನಂತಿದೆ ನೋಡಿ.
- Basavaraj Mudnur
- Updated on: Feb 5, 2026
- 7:53 pm
ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ; ಕೋರ್ಟ್ ನಿರ್ಬಂಧ ಮೀರಿ ಮಠದ ನಿವೇಶನ ಮಾರಾಟ
ಚಿತ್ರದುರ್ಗದ ಹೊಸದುರ್ಗದಲ್ಲಿ ಮುರುಘಾ ಮಠಕ್ಕೆ ಸೇರಿದ ನಾಲ್ಕು ನಿವೇಶನಗಳ ಅಕ್ರಮ ಮಾರಾಟದ ಆರೋಪದಡಿ ಮುರುಘಾಶ್ರೀ ವಿರುದ್ಧ ದಾವೆ ಹೂಡಲಾಗಿದೆ. ಕೋರ್ಟ್ ನಿರ್ಬಂಧ ಉಲ್ಲಂಘಿಸಿ ಆಸ್ತಿ ಮಾರಾಟ ಮಾಡಿರುವ ಬಗ್ಗೆ ಮಠದ ಆಡಳಿತ ಸಮಿತಿ ನ್ಯಾಯಾಲಯಕ್ಕೆ ದೂರು ನೀಡಿದೆ. ಮುರುಘಾಶ್ರೀಗೆ ಇದು ಮತ್ತೊಂದು ಕಾನೂನು ಸಂಕಷ್ಟ ತಂದಿದೆ. ಪ್ರಕರಣದ ವಿಚಾರಣೆ ಮುಂದುವರಿದಿದೆ.
- Basavaraj Mudnur
- Updated on: Jan 31, 2026
- 11:27 am
ಗಂಡನ ಅನುಮಾನದ ಭೂತಕ್ಕೆ ಬಲಿಯಾದ ಹೆಂಡ್ತಿ: ಪೊಲೀಸ್ ಮುಂದೆ ಪತ್ನಿಯ ಲವ್ವಿಡವ್ವಿ ಬಿಚ್ಚಿಟ್ಟ ಪತಿ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಎಮ್ಮಿಗನೂರಿ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ದಾರುಣ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿಯ ಹತ್ಯೆ ಮಾಡಲಾಗಿದೆ. ಸದ್ಯ ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಿಕ್ಕಜಾಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Basavaraj Mudnur
- Updated on: Jan 27, 2026
- 4:26 pm