AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವರಾಜ ಮುದನೂರ್

ಬಸವರಾಜ ಮುದನೂರ್

ಜಿಲ್ಲಾ ವರದಿಗಾರ - TV9 Kannada

basavaraj.mudnur@tv9.com

ಆದ್ಯ ವಚನಕಾರ ದೇವರ ದಾಸಿಮಯ್ಯನ ‘ಮುದನೂರು’ ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ ‘ಗುರು’ & ‘ಗಾಡ್ ಫಾದರ್’ ನನ್ನಪ್ಪ.

ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ.

‘ಹೆಣ್ಣಾಗಿದ್ದೇ ತಪ್ಪಾ?’ ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, ‘ವಿಷಾಮೃತ’ ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, ‘ಕೆರೆ ಉಳಿಸಿ’ ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, ‘ಆಪರೇಷನ್ ಚಿನ್ನ’ ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಸೂರ್ಯಕಾಂತಿ ಬೆಳೆ ನಷ್ಟದಿಂದ ರೈತರು ಕಂಗಾಲು

ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಸೂರ್ಯಕಾಂತಿ ಬೆಳೆ ನಷ್ಟದಿಂದ ರೈತರು ಕಂಗಾಲು

ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದ್ದು, ಸೂರ್ಯಕಾಂತಿ ಬೆಳೆ ಸಂಪೂರ್ಣವಾಗಿ ವಿಫಲವಾಗಿದೆ. 4 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದ ಸೂರ್ಯಕಾಂತಿ ನೆಲಕಚ್ಚಿದೆ. ರಾಜಕಾರಣಿಗಳ ಭೇಟಿ, ಪರಿಶೀಲನೆಗಳ ನಂತರವೂ ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲ ಅಥವಾ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿಲ್ಲ. ಇದರಿಂದ ಬೇಸತ್ತ ರೈತರು ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.

ಹಿರಿಯೂರಿನ ಐಮಂಗಲ ಬಳಿ ಬಸ್​​ ಅಪಘಾತ: ಇಬ್ಬರು ಸಾವು; 26 ಮಂದಿಗೆ ಗಾಯ

ಹಿರಿಯೂರಿನ ಐಮಂಗಲ ಬಳಿ ಬಸ್​​ ಅಪಘಾತ: ಇಬ್ಬರು ಸಾವು; 26 ಮಂದಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಕ್ಲೀನರ್ ಮೃತಪಟ್ಟಿದ್ದು, 26 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್​​ನಲ್ಲಿ ಗೋವಾಕ್ಕೆ ತೆರಳುತ್ತಿದ್ದವರು ಬೆಂಗಳೂರಿನ ಯುನಿವರ್ಸಲ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಶಾಸಕ ಎನ್​.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಶಾಸಕ ಎನ್​.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್​.ವೈ. ಗೋಪಾಲಕೃಷ್ಣ ಅವರು ತಮ್ಮ ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಅಥವಾ ಪಕ್ಕದ ಚಳ್ಳಕೆರೆ ಕ್ಷೇತ್ರಕ್ಕೆ ಸೇರಿಸುವ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮೊಳಕಾಲ್ಮೂರು ಕ್ಷೇತ್ರವು ಅಭಿವೃದ್ಧಿಗೆ ಅವಕಾಶವಿಲ್ಲದಂತಾಗಿದೆ ಎಂಬ ನೋವು ಮತ್ತು ಹತಾಶೆಯಿಂದ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!

ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!

ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಪ್ರಮುಖ ಆರೋಪದ ಮೇಲೆ ಸ್ವಾಮೀಜಿಗೆ ಸ್ಥಳೀಯರು ಸರಿಯಾಗಿ ಥಳಿಸಿದ್ದಾರೆ. ಬಳ್ಳಾರಿ ಮೂಲದ ಮಹಿಳೆಯ ಸಂಬಂಧಿಕರು ಈ ಹಲ್ಲೆಯನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ. ಸ್ವಾಮೀಜಿ ವಾಮಾಚಾರ ಮತ್ತು ಅನಾರೋಗ್ಯ ನಿವಾರಣೆ ಮಾಡುವ ನೆಪದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ದೂರುಗಳೂ ಈ ಹಿಂದೆಯೇ ಇದ್ದವು. ಈ ಆರೋಪಗಳು ಸಾಬೀತಾಗುವ ಮೊದಲೇ, ಮಹಿಳೆಯ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಘಟನೆ ನಡೆದು, ಅದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?

ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?

ಚಿತ್ರದುರ್ಗದ ಮಂಕಿ ಮ್ಯಾನ್ ಜ್ಯೋತಿರಾಜ್ ಅವರ ವಿವಾಹ ನಿವೇದಿತಾ ಅವರೊಂದಿಗೆ ಆಗಸ್ಟ್ 22 ಮತ್ತು 23ರಂದು ನೆರವೇರಲಿದೆ. ಇದು ಪ್ರೀತಿ ಮತ್ತು ಅರೇಂಜ್ ಮದುವೆಯ ಮಿಶ್ರಣವಾಗಿದ್ದು, ವಧು ಚಿಕ್ಕಂದಿನಿಂದಲೇ ಜ್ಯೋತಿರಾಜ್ ಅವರೊಂದಿಗೆ ಪರಿಚಿತರಾಗಿದ್ದಾರೆ. ಸಾಮಾಜಿಕ ಕಾರ್ಯಗಳಲ್ಲೂ ನಿರತರಾಗಿರುವ ಜ್ಯೋತಿರಾಜ್‌ಗೆ ವಧು ಸಂಪೂರ್ಣ ಬೆಂಬಲ ನೀಡಲಿದ್ದಾರೆ.

‘ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ’: ಸಚಿವ ಜಮೀರ್​​ ಹೀಗಂದಿದ್ಯಾರಿಗೆ?

‘ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ’: ಸಚಿವ ಜಮೀರ್​​ ಹೀಗಂದಿದ್ಯಾರಿಗೆ?

ಸಚಿವ ಸ್ಥಾನ ಕೈತಪ್ಪಿದವರ ಅಸಮಾಧಾನ ಸಹಜ, ಸಿಎಂ ಡಿ.ಕೆ. ಶಿವಕುಮಾರ್ ಸಮಾಧಾನಪಡಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಚಿತ್ರದುರ್ಗದಲ್ಲಿ ಹೇಳಿದ್ದಾರೆ. ಯಾವುದೇ ಖಾತೆಯನ್ನು ನಿರ್ವಹಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಸಚಿವ ಬಿ. ನಾಗೇಂದ್ರ ಅವರಿಗೆ ಎಸ್​ಐಟಿ ಕ್ಲೀನ್ ಚಿಟ್ ನೀಡಿದ್ದು, ಅವರನ್ನು ಮುಳುಗಿಸಲು ಪಿತೂರಿ ನಡೆಯುತ್ತಿದೆ ಎಂದರು. ಹೈಕಮಾಂಡ್ ಸರ್ವೆ ಆಧಾರದ ಮೇಲೆ ಸಚಿವ ಸ್ಥಾನ ನೀಡುತ್ತದೆ, ಹಣದ ವದಂತಿ ಊಹಾಪೋಹ ಎಂದಿದ್ದಾರೆ.

ಬರದ ನಡುವೆಯೂ ಊಟಿಯ ಅನುಭವ ನೀಡುತ್ತಿದೆ ಚಿತ್ರದುರ್ಗದ ಜೋಗಿಮಟ್ಟಿ! ಪ್ರಕೃತಿ ಸೌಂದರ್ಯ ಸವಿಯಲು ಹರಿದು ಬರುತ್ತಿರುವ ಪ್ರವಾಸಿಗರು

ಬರದ ನಡುವೆಯೂ ಊಟಿಯ ಅನುಭವ ನೀಡುತ್ತಿದೆ ಚಿತ್ರದುರ್ಗದ ಜೋಗಿಮಟ್ಟಿ! ಪ್ರಕೃತಿ ಸೌಂದರ್ಯ ಸವಿಯಲು ಹರಿದು ಬರುತ್ತಿರುವ ಪ್ರವಾಸಿಗರು

ಚಿತ್ರದುರ್ಗ, ಜುಲೈ 20: ಒಂದು ಕಡೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೂ ಜನ ಪರದಾಡುತ್ತಿದ್ದಾರೆ. ಆದರೆ ಇದೇ ಜಿಲ್ಲೆಯ ಜೋಗಿಮಟ್ಟಿ ವನ್ಯಧಾಮ ಮಾತ್ರ ಸಂಪೂರ್ಣ ಭಿನ್ನ ಚಿತ್ರಣವನ್ನು ಕಟ್ಟಿಕೊಟ್ಟಿದೆ. ಮಂಜಿನ ಹೊದಿಕೆ, ತಂಪಾದ ಗಾಳಿ ಮತ್ತು ಹಸಿರು ಪರಿಸರದಿಂದ ಜೋಗಿಮಟ್ಟಿ ಇದೀಗ ಬಯಲುಸೀಮೆಯ ‘ಊಟಿ’ಯಾಗಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

ಕರ್ನಾಟಕದಲ್ಲಿ ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್!

ಕರ್ನಾಟಕದಲ್ಲಿ ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್!

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ತಿಂಗಳುಗಳೇ ಕಳೆದಿದ್​ದು, ಡಿಕೆ ಶಿವಕುಮಾರ್  ಅವರು ನೂತನ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಸಹ ಕೆಲ ಸರ್ಕಾರಿ ಬೋರ್​ಡ್​​​​ಗಳಲ್ಲಿ ಇನ್ನೂ ಸಿದ್ದರಾಮಯ್ಯನವರೇ ಸಿಎಂ ಎಂದೇ ಇದೆ. ಸರ್ಕಾರಿ ಮಾಹಿತಿ ನಾಮಫಲಕಗಳಲ್ಲಿ ಸಿಎಂ ಹೆಸರು ಮತ್ತು ಭಾವಚಿತ್ರ ಬದಲಾಗಿಸಿಲ್ಲ. ಹೌದು....ಚಿತ್ರದುರ್ಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಾಹಿತಿ ಬೋರ್ಡ್​​​ನಲ್ಲಿ ಸಿದ್ದರಾಮಯ್ಯನವರು ಇನ್ನೂ ಸಿಎಂ ಆಗಿಯೇ ಉಳಿದಿದ್ದರೆ, ಡಿಕೆ ಶಿವಕುಮಾರ್ ಡಿಸಿಎಂ ಎನ್ನುವ ನಾಮಫಲಕ ರಾರಾಜಿಸುತ್ತಿದೆ.

ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ವಿಧಿವಶ

ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ವಿಧಿವಶ

ಗಾಂಧಿ ಪರಿವಾರದ ಆಪ್ತ ಹಾಗೂ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಂದು ಚಿತ್ರದುರ್ಗದ ಮುಕ್ತಿಧಾಮದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಜಯದೇವ ಕ್ರೀಡಾಂಗಣ ಸೇರಿದಂತೆ ವಿವಿಧೆಡೆ ವ್ಯವಸ್ಥೆ ಮಾಡಲಾಗಿದೆ. ಮೃತರ ಅಂತಿಮ ದರ್ಶನ ಪಡೆಯಲು ಸಿಎಂ ಹಾಗೂ ಡಿಸಿಎಂ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ

ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ

ಉದ್ಯೋಗ, ವಿಶೇಷ‌ ಪ್ಯಾಕೇಜ್ ನೆಪದಲ್ಲಿ ಜನರಿಂದ ಹಣ ಸಂಗ್ರಹಿಸಿ ಆಂಧ್ರ ಮೂಲದ ಕಂಪನಿಯೊಂದು ಸುಮಾರು 60 ರಿಂದ 70 ಕೋಟಿ ರೂ. ವಂಚಿಸಿರುವಂತಹ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಇದೇ ರೀತಿಯ ವಂಚನೆ ಪ್ರಕರಣಗಳು ಇತ್ತೀಗೆಚೆ ರಾಜ್ಯದಲ್ಲಿ ಹೆಚ್ಚುತ್ತಿವೆ. ಹಾವೇರಿ, ರಾಯಚೂರು, ತುಮಕೂರಿನಲ್ಲೂ ವಂಚನೆ ನಡೆದಿತ್ತು.

ಮಳೆಗಾಲ ಆರಂಭವಾದರೂ ಜೋಗಿಮಟ್ಟಿ ವೀಕ್ಷಣೆಗೆ ಇನ್ನೂ ನಿರ್ಬಂಧ: ಪ್ರವಾಸಿಗರಿಂದ ಅರಣ್ಯ ಇಲಾಖೆಗೆ ಹಿಡಿಶಾಪ

ಮಳೆಗಾಲ ಆರಂಭವಾದರೂ ಜೋಗಿಮಟ್ಟಿ ವೀಕ್ಷಣೆಗೆ ಇನ್ನೂ ನಿರ್ಬಂಧ: ಪ್ರವಾಸಿಗರಿಂದ ಅರಣ್ಯ ಇಲಾಖೆಗೆ ಹಿಡಿಶಾಪ

ಬೇಸಿಗೆಯಲ್ಲಿ ಬೆಂಕಿ ಅವಘಡ ತಪ್ಪಿಸಲು ಚಿತ್ರದುರ್ಗದ ಜೋಗಿಮಟ್ಟಿ ವನ್ಯಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿತ್ತು. ಮಳೆಗಾಲ ಆರಂಭವಾಗಿದ್ದರೂ ಅರಣ್ಯ ಇಲಾಖೆ ಮಾತ್ರ ನಿರ್ಬಂಧ ತೆರವುಗೊಳಿಸಿಲ್ಲ. ಹಸಿರಾಗಿ ಕಂಗೊಳಿಸುತ್ತಿರುವ ಜೋಗಿಮಟ್ಟಿಯನ್ನು ನೋಡಲು ಬಂದ ಪರಿಸರ ಪ್ರೇಮಿಗಳು ನಿರಾಸೆಯಿಂದ ವಾಪಸಾಗುತ್ತಿದ್ದಾರೆ. ಇಲಾಖೆಯ ಈ ಕ್ರಮದಿಂದ ಆದಾಯಕ್ಕೂ ಹೊಡೆತ ಬಿದ್ದಿದೆ. ಕೂಡಲೇ ನಿರ್ಬಂಧ ತೆರವು ಮಾಡುವಂತೆ ಆಗ್ರಹ ಕೇಳಿಬಂದಿದೆ.

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ

ಚಿತ್ರದುರ್ಗ ಜಿಲ್ಲಾ ಖಾದಿ ಸಹಕಾರ ಸಂಘದ ಕೋಟ್ಯಂತರ ರೂ ಮೌಲ್ಯದ ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಭೂಗಳ್ಳರು ಕಬಳಿಸಿದ್ದಾರೆ. 4 ಕೋಟಿ ರೂ ಮೌಲ್ಯದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕಬಳಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ.

ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ