ಆದ್ಯ ವಚನಕಾರ ದೇವರ ದಾಸಿಮಯ್ಯನ ‘ಮುದನೂರು’ ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ ‘ಗುರು’ & ‘ಗಾಡ್ ಫಾದರ್’ ನನ್ನಪ್ಪ.
ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ.
‘ಹೆಣ್ಣಾಗಿದ್ದೇ ತಪ್ಪಾ?’ ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, ‘ವಿಷಾಮೃತ’ ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, ‘ಕೆರೆ ಉಳಿಸಿ’ ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, ‘ಆಪರೇಷನ್ ಚಿನ್ನ’ ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
ಬರದ ನಡುವೆಯೂ ಊಟಿಯ ಅನುಭವ ನೀಡುತ್ತಿದೆ ಚಿತ್ರದುರ್ಗದ ಜೋಗಿಮಟ್ಟಿ! ಪ್ರಕೃತಿ ಸೌಂದರ್ಯ ಸವಿಯಲು ಹರಿದು ಬರುತ್ತಿರುವ ಪ್ರವಾಸಿಗರು
ಚಿತ್ರದುರ್ಗ, ಜುಲೈ 20: ಒಂದು ಕಡೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೂ ಜನ ಪರದಾಡುತ್ತಿದ್ದಾರೆ. ಆದರೆ ಇದೇ ಜಿಲ್ಲೆಯ ಜೋಗಿಮಟ್ಟಿ ವನ್ಯಧಾಮ ಮಾತ್ರ ಸಂಪೂರ್ಣ ಭಿನ್ನ ಚಿತ್ರಣವನ್ನು ಕಟ್ಟಿಕೊಟ್ಟಿದೆ. ಮಂಜಿನ ಹೊದಿಕೆ, ತಂಪಾದ ಗಾಳಿ ಮತ್ತು ಹಸಿರು ಪರಿಸರದಿಂದ ಜೋಗಿಮಟ್ಟಿ ಇದೀಗ ಬಯಲುಸೀಮೆಯ ‘ಊಟಿ’ಯಾಗಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.
- Basavaraj Mudnur
- Updated on: Jul 20, 2026
- 9:53 am
ಕರ್ನಾಟಕದಲ್ಲಿ ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್!
ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ತಿಂಗಳುಗಳೇ ಕಳೆದಿದ್ದು, ಡಿಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಸಹ ಕೆಲ ಸರ್ಕಾರಿ ಬೋರ್ಡ್ಗಳಲ್ಲಿ ಇನ್ನೂ ಸಿದ್ದರಾಮಯ್ಯನವರೇ ಸಿಎಂ ಎಂದೇ ಇದೆ. ಸರ್ಕಾರಿ ಮಾಹಿತಿ ನಾಮಫಲಕಗಳಲ್ಲಿ ಸಿಎಂ ಹೆಸರು ಮತ್ತು ಭಾವಚಿತ್ರ ಬದಲಾಗಿಸಿಲ್ಲ. ಹೌದು....ಚಿತ್ರದುರ್ಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಾಹಿತಿ ಬೋರ್ಡ್ನಲ್ಲಿ ಸಿದ್ದರಾಮಯ್ಯನವರು ಇನ್ನೂ ಸಿಎಂ ಆಗಿಯೇ ಉಳಿದಿದ್ದರೆ, ಡಿಕೆ ಶಿವಕುಮಾರ್ ಡಿಸಿಎಂ ಎನ್ನುವ ನಾಮಫಲಕ ರಾರಾಜಿಸುತ್ತಿದೆ.
- Basavaraj Mudnur
- Updated on: Jul 16, 2026
- 3:07 pm
ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ವಿಧಿವಶ
ಗಾಂಧಿ ಪರಿವಾರದ ಆಪ್ತ ಹಾಗೂ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಂದು ಚಿತ್ರದುರ್ಗದ ಮುಕ್ತಿಧಾಮದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಜಯದೇವ ಕ್ರೀಡಾಂಗಣ ಸೇರಿದಂತೆ ವಿವಿಧೆಡೆ ವ್ಯವಸ್ಥೆ ಮಾಡಲಾಗಿದೆ. ಮೃತರ ಅಂತಿಮ ದರ್ಶನ ಪಡೆಯಲು ಸಿಎಂ ಹಾಗೂ ಡಿಸಿಎಂ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಾರೆ.
- Basavaraj Mudnur
- Updated on: Jul 13, 2026
- 8:34 am
ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ
ಉದ್ಯೋಗ, ವಿಶೇಷ ಪ್ಯಾಕೇಜ್ ನೆಪದಲ್ಲಿ ಜನರಿಂದ ಹಣ ಸಂಗ್ರಹಿಸಿ ಆಂಧ್ರ ಮೂಲದ ಕಂಪನಿಯೊಂದು ಸುಮಾರು 60 ರಿಂದ 70 ಕೋಟಿ ರೂ. ವಂಚಿಸಿರುವಂತಹ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಇದೇ ರೀತಿಯ ವಂಚನೆ ಪ್ರಕರಣಗಳು ಇತ್ತೀಗೆಚೆ ರಾಜ್ಯದಲ್ಲಿ ಹೆಚ್ಚುತ್ತಿವೆ. ಹಾವೇರಿ, ರಾಯಚೂರು, ತುಮಕೂರಿನಲ್ಲೂ ವಂಚನೆ ನಡೆದಿತ್ತು.
- Basavaraj Mudnur
- Updated on: Jun 18, 2026
- 3:21 pm
ಮಳೆಗಾಲ ಆರಂಭವಾದರೂ ಜೋಗಿಮಟ್ಟಿ ವೀಕ್ಷಣೆಗೆ ಇನ್ನೂ ನಿರ್ಬಂಧ: ಪ್ರವಾಸಿಗರಿಂದ ಅರಣ್ಯ ಇಲಾಖೆಗೆ ಹಿಡಿಶಾಪ
ಬೇಸಿಗೆಯಲ್ಲಿ ಬೆಂಕಿ ಅವಘಡ ತಪ್ಪಿಸಲು ಚಿತ್ರದುರ್ಗದ ಜೋಗಿಮಟ್ಟಿ ವನ್ಯಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿತ್ತು. ಮಳೆಗಾಲ ಆರಂಭವಾಗಿದ್ದರೂ ಅರಣ್ಯ ಇಲಾಖೆ ಮಾತ್ರ ನಿರ್ಬಂಧ ತೆರವುಗೊಳಿಸಿಲ್ಲ. ಹಸಿರಾಗಿ ಕಂಗೊಳಿಸುತ್ತಿರುವ ಜೋಗಿಮಟ್ಟಿಯನ್ನು ನೋಡಲು ಬಂದ ಪರಿಸರ ಪ್ರೇಮಿಗಳು ನಿರಾಸೆಯಿಂದ ವಾಪಸಾಗುತ್ತಿದ್ದಾರೆ. ಇಲಾಖೆಯ ಈ ಕ್ರಮದಿಂದ ಆದಾಯಕ್ಕೂ ಹೊಡೆತ ಬಿದ್ದಿದೆ. ಕೂಡಲೇ ನಿರ್ಬಂಧ ತೆರವು ಮಾಡುವಂತೆ ಆಗ್ರಹ ಕೇಳಿಬಂದಿದೆ.
- Basavaraj Mudnur
- Updated on: Jun 6, 2026
- 3:06 pm
ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ
ಚಿತ್ರದುರ್ಗ ಜಿಲ್ಲಾ ಖಾದಿ ಸಹಕಾರ ಸಂಘದ ಕೋಟ್ಯಂತರ ರೂ ಮೌಲ್ಯದ ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಭೂಗಳ್ಳರು ಕಬಳಿಸಿದ್ದಾರೆ. 4 ಕೋಟಿ ರೂ ಮೌಲ್ಯದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕಬಳಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ.
- Basavaraj Mudnur
- Updated on: Jun 4, 2026
- 6:37 pm
DKS Oath Ceremony: ಡಿಕೆ ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಚಿತ್ರದುರ್ಗ ತಾಲೂಕಿನ ಮಾಡನಾಯಕನಹಳ್ಳಿಯಲ್ಲಿ ನೊಣವಿನಕೆರೆ ಶ್ರೀಗಳು, ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದ ಕುರಿತು ಮಾತನಾಡಿದ್ದಾರೆ. ಗುರು ನುಡಿದ ಮುಹೂರ್ತವು ರಾಜಯೋಗವಾಗಿದ್ದು, ಪರಿಪೂರ್ಣವಾಗಿದೆ ಎಂದು ಶ್ರೀಗಳು ಬಣ್ಣಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಶ್ರೀಮಠದ ಆಶೀರ್ವಾದ ಪಡೆದಿದ್ದಾರೆ ಮತ್ತು ಜಯಶೀಲರಾಗಿದ್ದಾರೆ ಎಂದು ಹೇಳಿದ್ದಾರೆ. ಸದಾ ಧರ್ಮದ ಧ್ವಜವನ್ನು ಹಿಡಿದು, ಆತಂಕವಿಲ್ಲದೆ ಜನರ ಸೇವೆ ಮಾಡಬೇಕು ಎಂಬುದು ತಮ್ಮ ಹಾರೈಕೆ ಎಂದು ಶ್ರೀಗಳು ತಿಳಿಸಿದ್ದಾರೆ. ಗುರುಗಳ ಆಶೀರ್ವಾದದಿಂದ ಸೇವೆ ಸಲ್ಲಿಸುವ ಶಕ್ತಿ ಸಾಮರ್ಥ್ಯ ಡಿ.ಕೆ. ಶಿವಕುಮಾರ್ ಅವರಿಗೆ ದೊರೆತಿದೆ ಎಂದು ಅವರು ನುಡಿದಿದ್ದಾರೆ.
- Basavaraj Mudnur
- Updated on: Jun 3, 2026
- 12:18 pm
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವು
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬೈರಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊದಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೊಳಕಾಲ್ಮೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Basavaraj Mudnur
- Updated on: May 27, 2026
- 4:23 pm
Chitradurga: ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ, ಗೊತ್ತಿದ್ರೂ ಈಜಾಟ
ಚಿತ್ರದುರ್ಗದ ಏಳು ಸುತ್ತಿನ ಕೋಟೆಯ ಸಮೀಪದ ಹೊಂಡ ಯುವಕರ ನೆಚ್ಚಿನ ಈಜುವ ತಾಣವಾಗಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಹೊಂಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು ಆತಂಕ ಸೃಷ್ಟಿಸಿದೆ. ಮೊಸಳೆ ಅಪಾಯದ ಬಗ್ಗೆ ಎಚ್ಚರಿಕೆ ಫಲಕಗಳಿದ್ದರೂ ಯುವಕರು ಜೀವದ ಹಂಗು ತೊರೆದು ಈಜಾಡುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಮೊಸಳೆ ಸ್ಥಳಾಂತರಕ್ಕೆ ಆಗ್ರಹಿಸಿದ್ದಾರೆ.
- Basavaraj Mudnur
- Updated on: May 23, 2026
- 9:25 am
ಸುಧಾಕರ್ ನುಡಿ ನಮನ ಕಾರ್ಯಕ್ರಮದಲ್ಲಿ ಭಾವುಕರಾದ ಶಾಸಕ ರಘುಮೂರ್ತಿ!
ಚಳ್ಳಕೆರೆಯಲ್ಲಿ ನಡೆದ ದಿವಂಗತ ಶಾಸಕ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಹಾಲಿ ಶಾಸಕ ಟಿ. ರಘುಮೂರ್ತಿ ಭಾವುಕರಾಗಿ ಮಾತನಾಡಿದ್ದಾರೆ. ಡಿ. ಸುಧಾಕರ್ ಅವರೊಂದಿಗಿನ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರಿಬ್ಬರ ನಡುವೆ ಸಹೋದರ ಸಂಬಂಧವಿತ್ತು ಎಂದು ರಘುಮೂರ್ತಿ ಸ್ಮರಿಸಿಕೊಂಡರು. 2008ರಲ್ಲಿ ತಾವು ಶಾಸಕರಾಗಲು ಬಂದ ದಿನಗಳಿಂದ ಸುಧಾಕರ್ ಅವರೊಂದಿಗಿನ ಸಂಪರ್ಕವನ್ನು ನೆನಪಿಸಿಕೊಂಡರು.
- Basavaraj Mudnur
- Updated on: May 17, 2026
- 12:56 pm
ಆತ್ಮೀಯ ಸ್ನೇಹಿತ, ಸಚಿವ ಡಿ.ಸುಧಾಕರ್ ಅಗಲಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಣ್ಣೀರು
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಡಿ. ಸುಧಾಕರ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಆತ್ಮೀಯ ಸ್ನೇಹಿತನ ಅಗಲಿಕೆಗೆ ಕಂಬನಿ ಮಿಡಿದ ಅವರು, ಸುಧಾಕರ್ ಅವರ ಪುತ್ರ ಸುಹಾಸ್ಗೆ ಸಾಂತ್ವಾನ ಹೇಳಿದ್ದಾರೆ.
- Basavaraj Mudnur
- Updated on: May 10, 2026
- 6:19 pm
ಸಚಿವ ಸುಧಾಕರ್ ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ 65ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ನಂತರ, ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್ನಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.
- Basavaraj Mudnur
- Updated on: May 10, 2026
- 8:48 am