ಆದ್ಯ ವಚನಕಾರ ದೇವರ ದಾಸಿಮಯ್ಯನ ‘ಮುದನೂರು’ ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ ‘ಗುರು’ & ‘ಗಾಡ್ ಫಾದರ್’ ನನ್ನಪ್ಪ.
ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ.
‘ಹೆಣ್ಣಾಗಿದ್ದೇ ತಪ್ಪಾ?’ ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, ‘ವಿಷಾಮೃತ’ ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, ‘ಕೆರೆ ಉಳಿಸಿ’ ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, ‘ಆಪರೇಷನ್ ಚಿನ್ನ’ ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
ಸುಧಾಕರ್ ನುಡಿ ನಮನ ಕಾರ್ಯಕ್ರಮದಲ್ಲಿ ಭಾವುಕರಾದ ಶಾಸಕ ರಘುಮೂರ್ತಿ!
ಚಳ್ಳಕೆರೆಯಲ್ಲಿ ನಡೆದ ದಿವಂಗತ ಶಾಸಕ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಹಾಲಿ ಶಾಸಕ ಟಿ. ರಘುಮೂರ್ತಿ ಭಾವುಕರಾಗಿ ಮಾತನಾಡಿದ್ದಾರೆ. ಡಿ. ಸುಧಾಕರ್ ಅವರೊಂದಿಗಿನ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರಿಬ್ಬರ ನಡುವೆ ಸಹೋದರ ಸಂಬಂಧವಿತ್ತು ಎಂದು ರಘುಮೂರ್ತಿ ಸ್ಮರಿಸಿಕೊಂಡರು. 2008ರಲ್ಲಿ ತಾವು ಶಾಸಕರಾಗಲು ಬಂದ ದಿನಗಳಿಂದ ಸುಧಾಕರ್ ಅವರೊಂದಿಗಿನ ಸಂಪರ್ಕವನ್ನು ನೆನಪಿಸಿಕೊಂಡರು.
- Basavaraj Mudnur
- Updated on: May 17, 2026
- 12:56 pm
ಆತ್ಮೀಯ ಸ್ನೇಹಿತ, ಸಚಿವ ಡಿ.ಸುಧಾಕರ್ ಅಗಲಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಣ್ಣೀರು
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಡಿ. ಸುಧಾಕರ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಆತ್ಮೀಯ ಸ್ನೇಹಿತನ ಅಗಲಿಕೆಗೆ ಕಂಬನಿ ಮಿಡಿದ ಅವರು, ಸುಧಾಕರ್ ಅವರ ಪುತ್ರ ಸುಹಾಸ್ಗೆ ಸಾಂತ್ವಾನ ಹೇಳಿದ್ದಾರೆ.
- Basavaraj Mudnur
- Updated on: May 10, 2026
- 6:19 pm
ಸಚಿವ ಸುಧಾಕರ್ ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ 65ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ನಂತರ, ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್ನಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.
- Basavaraj Mudnur
- Updated on: May 10, 2026
- 8:48 am
D Sudhakar Passes Away: ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ
ಡಿ ಸುಧಾಕರ್ ನಿಧನ: ಸಚಿವ ಡಿ. ಸುಧಾಕರ್ ರಾಜಕೀಯ ಜೀವನ ಸುದೀರ್ಘವಾದದ್ದು. ಚಳ್ಳಕೆರೆಯಿಂದ ಆರಂಭವಾದ ಇವರ ಪಯಣ ಹಿರಿಯೂರು ಕ್ಷೇತ್ರದಲ್ಲಿ ಭದ್ರವಾಗಿ ನೆಲೆಯೂರಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸರ್ಕಾರಗಳ ಸಂಪುಟಗಳಲ್ಲಿ ಸಚಿವರಾಗಿ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು. ಅಂತರಾಷ್ಟ್ರೀಯ ಮಟ್ಟದ ಉದ್ಯಮಿಯಾಗಿದ್ದರೂ ರೈತಪರ ಕೆಲಸಗಳಿಂದ ಇವರು ಜನಪ್ರಿಯರಾಗಿದ್ದರು.
- Basavaraj Mudnur
- Updated on: May 10, 2026
- 7:19 am
D. Sudhakar Passes Away: ಸಚಿವ ಡಿ. ಸುಧಾಕರ್ ನಿಧನ, ಅನಾರೋಗ್ಯದಿಂದ ಬಳಲುತ್ತಿದ್ದ ನಾಯಕ ಇನ್ನಿಲ್ಲ
ಸಚಿವ ಡಿ. ಸುಧಾಕರ್ ನಿಧನ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
- Basavaraj Mudnur
- Updated on: May 10, 2026
- 8:29 am
ಬಿಎಸ್ವೈ ಅಭಿಮಾನೋತ್ಸವ: ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಪ್ರಲ್ಹಾದ್ ಜೋಶಿ
ಚಿತ್ರದುರ್ಗದಲ್ಲಿ ಇಂದು ನಡೆದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, 21 ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಮೊದಲು ಕರ್ನಾಟಕದಲ್ಲೂ ಬಿಜೆಪಿ ಆಡಳಿತ ಇತ್ತು. ಮುಂದೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ಹೇಳಿದ್ದಾರೆ.
- Basavaraj Mudnur
- Updated on: May 9, 2026
- 9:18 pm
ಅಭಿಮಾನೋತ್ಸವದಲ್ಲಿ ಯಡಿಯೂರಪ್ಪ ಭಾವುಕ ಭಾಷಣ: ಸಾರ್ವಜನಿಕ ಸೇವೆಯ ಪಯಣ ಮೆಲುಕು ಹಾಕಿದ ಮಾಜಿ ಸಿಎಂ
ಚಿತ್ರದುರ್ಗದಲ್ಲಿ ನಡೆದ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ 50 ವರ್ಷಗಳ ಸಾರ್ವಜನಿಕ ಸೇವೆಯ ಪಯಣವನ್ನು ನೆನಪಿಸಿಕೊಂಡು ಕರುನಾಡಿನ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ರೈತರು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ತಮ್ಮ ಕೊಡುಗೆಗಳನ್ನು ಸ್ಮರಿಸಿದ ಅವರು, ಈ ದಿನವು ಒಬ್ಬ ವ್ಯಕ್ತಿಯ ಆಚರಣೆಯಲ್ಲ. ಬದಲಿಗೆ ಐದು ದಶಕಗಳ ಸಹಬಾಳ್ವೆಯ ಆಚರಣೆ ಎಂದು ಬಣ್ಣಿಸಿದರು.
- Basavaraj Mudnur
- Updated on: May 9, 2026
- 7:47 pm
ಚಿತ್ರದುರ್ಗದಲ್ಲಿ ಅದ್ಧೂರಿ ಬಿಎಸ್ವೈ ಅಭಿಮಾನೋತ್ಸವ: ಯಡಿಯೂರಪ್ಪರ 50 ವರ್ಷಗಳ ರಾಜಕೀಯ ಪಯಣ ಕೊಂಡಾಡಿದ ಅಮಿತ್ ಶಾ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ 50 ವರ್ಷಗಳ ರಾಜಕೀಯ ಜೀವನ ಪೂರ್ಣ ಹಿನ್ನೆಲೆ ಚಿತ್ರದುರ್ಗದಲ್ಲಿ ಇಂದು ಬಿಎಸ್ ಯಡಿಯೂರಪ್ಪ ಅಭಿಮಾನೋತ್ಸವ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಯಡಿಯೂರಪ್ಪರನ್ನು ಹಾಡಿ ಹೊಗಳಿದರು. ಇನ್ನು ರಾಜ್ಯ ರಾಜಕೀಯ ನಾಯಕರು ಕೂಡ ಭಾಗವಹಿಸಿದ್ದರು.
- Basavaraj Mudnur
- Updated on: May 9, 2026
- 7:32 pm
ಬಿಎಸ್ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಮಾಜಿ ಸಿಎಂ ಬಿಎಸ್. ಯಡಿಯೂರಪ್ಪ ಅವರು ಐದು ದಶಕಗಳ ಕಾಲ ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸವಲತ್ತುಗಳು ತಲುಪಬೇಕು ಎಂಬ ಉದ್ದೇಶದಿಂದ ಶ್ರಮಿಸಿದ್ದಾರೆ. ಅವರ ಜನಸೇವೆ ಅನೇಕರಿಗೆ ಪ್ರೇರಣೆಯಾಗಿದೆ. ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
- Basavaraj Mudnur
- Updated on: May 9, 2026
- 4:38 pm
ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಹಿನ್ನೆಲೆ ಮಾದಾರ ಚೆನ್ನಯ್ಯ ಮಠದ ಬಳಿ ಭವ್ಯ ವೇದಿಕೆ ನಿರ್ಮಾಣವಾಗಿದ್ದು, ಸಾವಿರಾರು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಪಂಚ ಕೌಂಟರ್ಗಳಲ್ಲಿ ವಿವಿಧ ಭಕ್ಷ್ಯಗಳ ಭರ್ಜರಿ ಭೋಜನ ವ್ಯವಸ್ಥೆ ಮಾಡಲಾಗಿದೆ.
- Basavaraj Mudnur
- Updated on: May 9, 2026
- 2:13 pm
ಬಿಎಸ್ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ: ಇದರ ವಿಶೇಷತೆಯೇನು?
ನಾಳೆ ನಡೆಯಲಿರುವ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಯಡಿಯೂರಪ್ಪನವರಿಗೆ ಅದೃಷ್ಟ ತಂದ ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. ಬಿಎಸ್ವೈ ರಾಜಕೀಯ ಪ್ರಯಾಣದಲ್ಲಿ ಈ ಕಾರು ಪ್ರಮುಖ ಪಾತ್ರ ವಹಿಸಿದ್ದು, ನಗರ ಕೇಂದ್ರೀಕೃತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗೆ ಕೊಂಡೊಯ್ದು ಸಂಘಟನೆ ಬಲಪಡಿಸುವಲ್ಲಿ ಈ ವಾಹನ ನೆರವಾಗಿದೆ. ರಸ್ತೆಗಳು ದುಸ್ಥಿತಿಯಲ್ಲಿದ್ದ ದಿನಗಳಲ್ಲಿ, ಯಡಿಯೂರಪ್ಪ, ಅನಂತ್ ಕುಮಾರ್, ಶಂಕರ್ ಮೂರ್ತಿಗಳಂತಹ ನಾಯಕರು ರಾಜ್ಯಾದ್ಯಂತ ಇದೇ ಕಾರಿನಲ್ಲಿ ಸಂಚರಿಸಿದ್ದರು ಎನ್ನಲಾಗಿದೆ.
- Basavaraj Mudnur
- Updated on: May 8, 2026
- 2:32 pm
ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಅಮಿತ್ ಶಾ ಭಾಗಿ, ಕೇಸರಿಮಯವಾದ ನಗರ
ಕೋಟೆನಾಡು ಚಿತ್ರದುರ್ಗದಲ್ಲಿ ನಾಳೆ ಬಿ.ಎಸ್.ಯಡಿಯೂರಪ್ಪ ಅವರ ‘ಬಿಎಸ್ವೈ ಅಭಿಮಾನೋತ್ಸವ’ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಅದ್ದೂರಿ ವೇದಿಕೆ ಸಿದ್ಧವಾಗಿದ್ದು, ಮೆರವಣಿಗೆ ಮತ್ತು ಜನಪದ ಕಲಾಮೇಳಗಳ ಮೂಲಕ ಇಂದೇ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಕಾರ್ಯಕ್ರಮ ಸಿದ್ಧತೆ ಕುರಿತ ವಿಡಿಯೋ ಸಹಿತ ವಿವರ ಇಲ್ಲಿದೆ.
- Basavaraj Mudnur
- Updated on: May 8, 2026
- 9:48 am