AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವರಾಜ ಮುದನೂರ್, ಚಿತ್ರದುರ್ಗ

ಬಸವರಾಜ ಮುದನೂರ್, ಚಿತ್ರದುರ್ಗ

Author - TV9 Kannada

basavaraj.mudnur@tv9.com

ಆದ್ಯ ವಚನಕಾರ ದೇವರ ದಾಸಿಮಯ್ಯನ ‘ಮುದನೂರು’ ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ ‘ಗುರು’ & ‘ಗಾಡ್ ಫಾದರ್’ ನನ್ನಪ್ಪ.

ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ.

‘ಹೆಣ್ಣಾಗಿದ್ದೇ ತಪ್ಪಾ?’ ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, ‘ವಿಷಾಮೃತ’ ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, ‘ಕೆರೆ ಉಳಿಸಿ’ ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, ‘ಆಪರೇಷನ್ ಚಿನ್ನ’ ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಚಿತ್ರದುರ್ಗದಲ್ಲಿ ಬಸ್​​ ಭಸ್ಮ: ಮೂವರು ನಾಪತ್ತೆ, ಸಾವಿನ ಸಂಖ್ಯೆಯಲ್ಲಿ ಗೊಂದಲ

ಚಿತ್ರದುರ್ಗದಲ್ಲಿ ಬಸ್​​ ಭಸ್ಮ: ಮೂವರು ನಾಪತ್ತೆ, ಸಾವಿನ ಸಂಖ್ಯೆಯಲ್ಲಿ ಗೊಂದಲ

ಚಿತ್ರದುರ್ಗದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ ಬಗ್ಗೆ ಅಧಿಕಾರಿಗಳು ಮತ್ತು ಸಚಿವರ ನಡುವೆ ಗೊಂದಲವಿದೆ. ಐಜಿಪಿ ಒಂಭತ್ತು ಮೃತದೇಹಗಳ ಬಗ್ಗೆ ಮಾಹಿತಿ ನೀಡಿದರೆ, ಸಾರಿಗೆ ಸಚಿವರು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಹಾಸನ ಮೂಲದ ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ನವ್ಯಾ ಮತ್ತು ಮಾನಸ ಸೇರಿದಂತೆ ನಾಪತ್ತೆಯಾಗಿರುವ ಮೂವರಿಗಾಗಿ ಹುಡುಕಾಟ ಮುಂದುವರೆದಿದೆ.

ಡಿವೈಡರ್ ಹಾರಿ ಬಸ್​ನ ಡೀಸೆಲ್ ಟ್ಯಾಂಕ್​ಗೆ ಗುದ್ದಿದ ಲಾರಿ: ಅಪಘಾತ ಕಣ್ಣಾರೆ ಕಂಡ ವ್ಯಕ್ತಿ ಹೇಳಿದ್ದೇನು ನೋಡಿ

ಡಿವೈಡರ್ ಹಾರಿ ಬಸ್​ನ ಡೀಸೆಲ್ ಟ್ಯಾಂಕ್​ಗೆ ಗುದ್ದಿದ ಲಾರಿ: ಅಪಘಾತ ಕಣ್ಣಾರೆ ಕಂಡ ವ್ಯಕ್ತಿ ಹೇಳಿದ್ದೇನು ನೋಡಿ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಡಿಕ್ಕಿಯಾಗಿ ಸ್ಲೀಪರ್ ಕೋಚ್ ಬಸ್ ಬೆಂಕಿ ಹೊತ್ತಿಕೊಂಡ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಪಕ್ಕದಲ್ಲೇ ಸಾಗುತ್ತಿದ್ದ ಶಾಲಾ ಮಕ್ಕಳ ಬಸ್ ಚಾಲಕ ಸಚಿನ್, ಘಟನೆಯ ವಿವರಣೆ ನೀಡಿದ್ದಾರೆ.

ಚಿತ್ರದುರ್ಗ ಬಸ್ ಅಪಘಾತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್

ಚಿತ್ರದುರ್ಗ ಬಸ್ ಅಪಘಾತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್

ಹಿರಿಯೂರಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಘಟನೆಯ ಭಯಾನಕತೆ ಬಗ್ಗೆ ಬಸ್ ಕ್ಲೀನರ್ ಸಾಧಿಕ್ ಮಾತನಾಡಿದ್ದಾರೆ. ಅವರು ಬಚಾವಾಗಿದ್ಹೇಗೆ ಎಂದು ತಿಳಿಸಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಧಿಕ್ ಮಾತನಾಡಿರುವ ವಿಡಿಯೋ ಇಲ್ಲಿದೆ ನೋಡಿ.

ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್

ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದು, ಚಾಲಕ ಮತ್ತು ನಿರ್ವಾಹಕ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಮೃತಪಟ್ಟಿದ್ದಾನೆ.

ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

Chitradurga Bus Accident: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಚಿತ್ರದುರ್ಗ: ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ; ಕೃತ್ಯ ಎಸಗಿದ್ದು ಯಾರು?

ಚಿತ್ರದುರ್ಗ: ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ; ಕೃತ್ಯ ಎಸಗಿದ್ದು ಯಾರು?

ನಟ ದರ್ಶನ್​​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣ 2024ರ ಜೂನ್​​ ತಿಂಗಳಿನಲ್ಲಿ ಬೆಂಗಳೂರಲ್ಲಿ ಭೀಕರವಾಗಿ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಸಮಾಧಿಯ ನಾಮಫಲಕವನ್ನು ಧ್ವಂಸ ಮಾಡಲಾಗಿದೆ. ಚಿತ್ರದುರ್ಗದಲ್ಲಿರುವ ಸಮಾಧಿ ಬಳಿ ಲೇಔಟ್​​ ನಿರ್ಮಾಣ ಮಾಡುವ ವೇಳೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ರೇಣುಕಾಸ್ವಾಮಿ ಕುಟುಂಬಸ್ಥರು ತಿಳಿಸಿದ್ದಾರೆ.

ಇವನೆಂಥಾ ಪಾಪಿ ತಂದೆ: ಹೆತ್ತ ಮಕ್ಕಳನ್ನೂ ಬಿಟ್ಟಿಲ್ಲ ಕಾಮುಕ; ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ

ಇವನೆಂಥಾ ಪಾಪಿ ತಂದೆ: ಹೆತ್ತ ಮಕ್ಕಳನ್ನೂ ಬಿಟ್ಟಿಲ್ಲ ಕಾಮುಕ; ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ

ಹೆತ್ತ ತಂದೆಯೇ ಮದ್ಯದ ಅಮಲಿನಲ್ಲಿ ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ ಮಾಡಿರುವ ಅಮಾನವೀಯ ಮತ್ತು ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸುದ್ದಿ ಕೇಳಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಆರೋಪಿ ಈ ಹಿಂದೆ ತನ್ನ ತಾಯಿ ಮೇಲೂ ಲೈಂಗಿಕ ದೌರ್ಜನ್ಯ ಯತ್ನ ನಡೆಸಿದ್ದ ಎಂಬ ವಿಷಯವೂ ಬಹಿರಂಗವಾಗಿದೆ. ಕಾಮುಕನಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಒತ್ತಾಯ ಕೇಳಿಬಂದಿದ್ದು, ಎಸ್ಪಿ ಕಚೇರಿಗೂ ಮನವಿ ಸಲ್ಲಿಸಲಾಗಿದೆ.

ಚಿತ್ರದುರ್ಗದಲ್ಲಿ ಮಸೀದಿ ಕಟ್ಟಡ ನಿರ್ಮಾಣ ವಿವಾದ: ಸಿಡಿದೆದ್ದ ಹಿಂದೂ ಸಂಘಟನೆಗಳು, ಮುಸ್ಲಿಮರ ವಾದವೇನು?​​

ಚಿತ್ರದುರ್ಗದಲ್ಲಿ ಮಸೀದಿ ಕಟ್ಟಡ ನಿರ್ಮಾಣ ವಿವಾದ: ಸಿಡಿದೆದ್ದ ಹಿಂದೂ ಸಂಘಟನೆಗಳು, ಮುಸ್ಲಿಮರ ವಾದವೇನು?​​

ಚಿತ್ರದುರ್ಗದ ಸಾದಿಕ್ ನಗರದಲ್ಲಿ ಹೊಸ ಮಸೀದಿ ನಿರ್ಮಾಣ ವಿವಾದಕ್ಕೆ ಕಾರಣವಾಗಿದೆ. ಇದು ಅನಧಿಕೃತ ನಿರ್ಮಾಣ ಎಂದು ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಮುಸ್ಲಿಂ ಸಮುದಾಯದವರು ನಿಯಮಾನುಸಾರ ನಿರ್ಮಾಣ ನಡೆದಿದೆ ಎನ್ನುತ್ತಿದ್ದಾರೆ. ಸದ್ಯ ಸ್ಥಳೀಯರು ನಗರಸಭೆ ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ.

ಮುರುಘಾ ಶ್ರೀ ಪೋಕ್ಸೋ ಕೇಸ್ ಖುಲಾಸೆ; ಶಿವಮೂರ್ತಿ ಶರಣರು ನಿರಾಳ

ಮುರುಘಾ ಶ್ರೀ ಪೋಕ್ಸೋ ಕೇಸ್ ಖುಲಾಸೆ; ಶಿವಮೂರ್ತಿ ಶರಣರು ನಿರಾಳ

Shivamurthy Murugha Sharana: ಮುರುಘಾಶ್ರೀ ವಿರುದ್ಧ ದಾಖಲಾಗಿರುವ ಎರಡು ಪೊಕ್ಸೋ ಪ್ರಕರಣಗಳ ಪೈಕಿ ಮೊದಲ ಕೇಸ್​​ನ ತೀರ್ಪು ಹೊರಬಿದ್ದಿದೆ. ಈ ಬಗ್ಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಮುರುಘಾಶ್ರೀಗೆ ಬಿಗ್​​ ರಿಲೀಫ್​​​​ ಕೊಟ್ಟಿದೆ. 2022ರ ಆಗಸ್ಟ್​​ 26ರಂದು ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಪೊಲೀಸ್​ ಕಿರುಕುಳಕ್ಕೆ ಆಟೋ ಡ್ರೈವರ್ ಆತ್ಮಹತ್ಯೆಗೆ ಯತ್ನ: ಸಿಡಿದೆದ್ದ ಆಟೋ ಚಾಲಕರು

ಪೊಲೀಸ್​ ಕಿರುಕುಳಕ್ಕೆ ಆಟೋ ಡ್ರೈವರ್ ಆತ್ಮಹತ್ಯೆಗೆ ಯತ್ನ: ಸಿಡಿದೆದ್ದ ಆಟೋ ಚಾಲಕರು

ಚಿತ್ರದುರ್ಗದಲ್ಲಿ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ನೆಪದಲ್ಲಿ ಪೊಲೀಸ್ ಪೇದೆಯೊಬ್ಬರು ಆಟೋ ಚಾಲಕನಿಗೆ ಹಲ್ಲೆ ನಡೆಸಿ, ವಾಹನ ಜಪ್ತಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದು, ಆಟೋ ಚಾಲಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಕಾರಣರಾದ ಪೊಲೀಸರ ಅಮಾನತು, ಚಾಲಕನ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪೊಲೀಸರ ಕಿರುಕುಳ ಆರೋಪ; ಚಿತ್ರದುರ್ಗದಲ್ಲಿ ನಡುರಸ್ತೆಯಲ್ಲಿ ಬೆಂಕಿ ಹಚ್ಚಿಕೊಂಡ ಆಟೋ ಚಾಲಕ

ಪೊಲೀಸರ ಕಿರುಕುಳ ಆರೋಪ; ಚಿತ್ರದುರ್ಗದಲ್ಲಿ ನಡುರಸ್ತೆಯಲ್ಲಿ ಬೆಂಕಿ ಹಚ್ಚಿಕೊಂಡ ಆಟೋ ಚಾಲಕ

ಚಿತ್ರದುರ್ಗದಲ್ಲಿ ಪೊಲೀಸರ ಕಿರುಕುಳದಿಂದ ಬೇಸತ್ತ ಆಟೋ ಚಾಲಕ ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಡಿದು ವಾಹನ ಚಲಾಯಿಸಿದ್ದಾನೆಂದು ಪೊಲೀಸರು ಆತನ ಕಾಲರ್ ಹಿಡಿದು ಅವಮಾನಿಸಿದ್ದಾರೆಂದು ಆರೋಪಿಸಿದ ಆತ ಮನನೊಂದು, ಗಾಂಧಿ ವೃತ್ತದಲ್ಲಿ ಬೆಂಕಿ ಹಚ್ಚಿಕೊಂಡಿದ್ದಾನೆ. ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಪೊಲೀಸರ ಕಿರುಕುಳಕ್ಕೆ ಪಾಠ ಕಲಿಸಲು ಹೀಗೆ ಮಾಡಿದ್ದಾಗಿ ಚಾಲಕ ಹೇಳಿದ್ದಾನೆ.

ಆಧುನಿಕ ಪ್ರಪಂಚದಿಂದ ಬಲು ದೂರು ಉಳಿದ ಗ್ರಾಮ: ಈ ಹಳ್ಳಿಗೆ ಮೊಬೈಲ್ ಸಿಗ್ನಲ್, ಇಂಟರ್​ನೆಟ್ ಇಲ್ಲ

ಆಧುನಿಕ ಪ್ರಪಂಚದಿಂದ ಬಲು ದೂರು ಉಳಿದ ಗ್ರಾಮ: ಈ ಹಳ್ಳಿಗೆ ಮೊಬೈಲ್ ಸಿಗ್ನಲ್, ಇಂಟರ್​ನೆಟ್ ಇಲ್ಲ

ಮೊಬೈಲ್​ ಮತ್ತು ಇಟರ್​​ನೆಟ್​ ಇಡೀ ಜಗತ್ತನ್ನು ಆಳುತ್ತಿರುವ ಇಂದಿನ ಕಾಲದಲ್ಲಿ ಚಿತ್ರದುರ್ಗ ತಾಲೂಕಿನ ಅದೊಂದು ಗ್ರಾಮ ಮಾತ್ರ ಆಧುನಿಕತೆಯಿಂದ ಮೈಲಿಗಟ್ಟಲೆ ದೂರ ಉಳಿದುಕೊಂಡಿದೆ. ಒಂದು ದಶಕದಿಂದ ಇಲ್ಲಿನ ಜನರಿಗೆ ಮೊಬೈಲ್ ಸಿಗ್ನಲ್ ಮತ್ತು ಇಂಟರ್ನೆಟ್ ಸಂಪರ್ಕವೇ ಇಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಪರದಾಡುತ್ತಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ