AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವರಾಜ ಮುದನೂರ್, ಚಿತ್ರದುರ್ಗ

ಬಸವರಾಜ ಮುದನೂರ್, ಚಿತ್ರದುರ್ಗ

Author - TV9 Kannada

basavaraj.mudnur@tv9.com

ಆದ್ಯ ವಚನಕಾರ ದೇವರ ದಾಸಿಮಯ್ಯನ ‘ಮುದನೂರು’ ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ ‘ಗುರು’ & ‘ಗಾಡ್ ಫಾದರ್’ ನನ್ನಪ್ಪ.

ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ.

‘ಹೆಣ್ಣಾಗಿದ್ದೇ ತಪ್ಪಾ?’ ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, ‘ವಿಷಾಮೃತ’ ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, ‘ಕೆರೆ ಉಳಿಸಿ’ ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, ‘ಆಪರೇಷನ್ ಚಿನ್ನ’ ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಶಾಲೆಯಲ್ಲೇ ಕಾಮದಾಟ, ಪ್ರಕರಣ ಬಯಲಾಗದಿರಲು ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದ ಗಣಿತ ಶಿಕ್ಷಕ! ಕೇಸ್ ದಾಖಲು

ಶಾಲೆಯಲ್ಲೇ ಕಾಮದಾಟ, ಪ್ರಕರಣ ಬಯಲಾಗದಿರಲು ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದ ಗಣಿತ ಶಿಕ್ಷಕ! ಕೇಸ್ ದಾಖಲು

ಚಿತ್ರದುರ್ಗದ ಚಳ್ಳಕೆರೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಶಿಕ್ಷಕ ರಾಜಣ್ಣ ಎಂಬಾತ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದಾಗ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದಾನೆ. ಘಟನೆ ಬಗ್ಗೆ ಮಾಹಿತಿ ತಿಳಿದು ಮಕ್ಕಳ ರಕ್ಷಣಾಧಿಕಾರಿ ದೂರು ನೀಡಿದ್ದು, ಅದರ ಮೇರೆಗೆ ಶಿಕ್ಷಕ ಹಾಗೂ ಗರ್ಭಪಾತ ಮಾಡಿದ ವೈದ್ಯೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಉದ್ಯಮಿಗೆ ಬೆದರಿಸಿ ಹಣ ಸುಲಿಗೆ: ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯ ಅಂದರ್, ಮತ್ತೋರ್ವ ವಶಕ್ಕೆ

ಉದ್ಯಮಿಗೆ ಬೆದರಿಸಿ ಹಣ ಸುಲಿಗೆ: ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯ ಅಂದರ್, ಮತ್ತೋರ್ವ ವಶಕ್ಕೆ

ಪುಣೆ ಮೂಲದ ಉದ್ಯಮಿಗೆ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯನನ್ನು ಬಂಧಿಸಲಾಗಿದೆ. ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದಾಗಿ ಆಮಿಷವೊಡ್ಡಿ ಉದ್ಯಮಿಯೋರ್ವರಿಂದ ಹಣ ಪಡೆದು ನಂತರ ಬೆದರಿಸಲಾಗಿತ್ತು. ಹಲವು ವಂಚನೆ ಪ್ರಕರಣಗಳಲ್ಲಿ ಆರೋಪಿ ಈ ಹಿಂದೆ ಜೈಲಿಗೆ ಹೋಗಿ ಬಂದಿದ್ದರೂ ಬುದ್ಧಿ ಕಲಿಯದೆ ಹಳೇ ಚಾಳಿ ಮುಂದುವರಿಸಿದ್ದ. ಈತನ ಕೃತ್ಯಕ್ಕೆ ಮಂಗಳೂರಿನ ಕುಖ್ಯಾತ ವಂಚಕನೊಬ್ಬ ಕೂಡ ಸಾಥ್​​ ನೀಡಿದ್ದು, ಆತನನ್ನೂ ವಶಕ್ಕೆ ಪಡೆಯಲಾಗಿದೆ.

ಕರ್ನಾಟಕದಲ್ಲೊಂದು ಅಪರೂಪದ ಘಟನೆ: ಸಿಬ್ಬಂದಿಗೆ ಬಂದೂಕು ಹೊತ್ತು ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ

ಕರ್ನಾಟಕದಲ್ಲೊಂದು ಅಪರೂಪದ ಘಟನೆ: ಸಿಬ್ಬಂದಿಗೆ ಬಂದೂಕು ಹೊತ್ತು ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ

ಶಾಲೆಗೆ ತಡವಾಗಿ ಹೋಗಿದ್ದಕ್ಕೆ ಅಥವಾ ಹೋಂ ವರ್ಕ್ ಮಾಡಿಕೊಂಡು ಹೋಗದಿದ್ದಕ್ಕೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಬಿಸಿನಲ್ಲಿ ನಿಲ್ಲಿಸಿದ ಉದಾಹರಣೆಗಳಿವೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಪಿಎಸ್​​ಐ, ತಮ್ಮ ಠಾಣೆಯ ಸಿಬ್ಬಂದಿಗೆ ಬಂದೂಕು ಹೊತ್ತು ಬಿಸಿನಲ್ಲಿ ನಿಲ್ಲುವ ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಪಿಎಸ್​​ಐ ನಡೆ ಬಗ್ಗೆ ಪರ ವಿರೋಧದ ಚರ್ಚೆಗಳು ಶುರುವಾಗಿವೆ.

ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗಲಾಟೆ ಸಂಭವಿಸಿದೆ. ಬೇವಿನಹಳ್ಳಿಯ ತೀರ್ಥೇಶ್ವರ ನಾಯ್ಕ್ ತಮ್ಮ ಅತ್ತೆ ಮಗಳು ಭಾವನಾ ಜೊತೆ ಫೆಬ್ರವರಿ 8ರಂದು ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದರು. ಆದರೆ ಭಾವನಾ ಪೋಷಕರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿ, ತೀರ್ಥೇಶ್ವರ ವಿರುದ್ಧ ಮತಾಂತರ ಆರೋಪ ಮಾಡಿದ್ದಾರೆ. ನಿನ್ನೆ ರಾಜಿ ಸಂಧಾನಕ್ಕೆ ಕರೆದು ಗಲಾಟೆ ನಡೆದಿದ್ದು, ಯುವತಿಯ ದೊಡ್ಡಪ್ಪ ಮಲ್ಲೇಶ್ ನಾಯ್ಕ್ ಸೇರಿದಂತೆ ಮೂವರಿಗೆ ಗಾಯಗಳಾಗುವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ

ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ನಲ್ಲಿ ಸ್ಫೋಟಕ ಮಾಹಿತಿ

ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ನಲ್ಲಿ ಸ್ಫೋಟಕ ಮಾಹಿತಿ

ಚಿತ್ರದುರ್ಗದಲ್ಲಿ BAMS ವಿದ್ಯಾರ್ಥಿನಿ ನಿಖಿತಾ ಆತ್ಮಹತ್ಯೆ ಪ್ರಕರಣದ ಡೆತ್ ನೋಟ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದೆ. ಪ್ರಾಧ್ಯಾಪಕ ರಾಜು ಜತೆ ಸುಳ್ಳು ಸಂಬಂಧ ಕಲ್ಪಿಸಿ, ಅಪಪ್ರಚಾರ ಮಾಡಿದ್ದರಿಂದ ಆಕೆ ತೀವ್ರವಾಗಿ ನೊಂದಿದ್ದಳು. ಪ್ರಾಧ್ಯಾಪಕರು ತಂದೆ ಸಮಾನ ಎಂದಿದ್ದ ನಿಖಿತಾ, ಅವರ ಪತ್ನಿ ಹಾಗೂ ಸಹಪಾಠಿಗಳೇ ತನ್ನ ಸಾವಿಗೆ ಕಾರಣ ಎಂದು ಉಲ್ಲೇಖಿಸಿದ್ದಾಳೆ. ಮಾನಸಿಕ ಹಿಂಸೆಯಿಂದಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾಳೆ.

ನಾಪತ್ತೆಯಾಗಿದ್ದ ಕಾಂಗ್ರೆಸ್​​ ಮುಖಂಡ ಶವವಾಗಿ ಪತ್ತೆ: ನಡೀತಾ ಭೀಕರ ಕೊಲೆ?

ನಾಪತ್ತೆಯಾಗಿದ್ದ ಕಾಂಗ್ರೆಸ್​​ ಮುಖಂಡ ಶವವಾಗಿ ಪತ್ತೆ: ನಡೀತಾ ಭೀಕರ ಕೊಲೆ?

ಚಿತ್ರದುರ್ಗದಲ್ಲಿ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶಿವಲಿಂಗಪ್ಪ ಶವವಾಗಿ ಪತ್ತೆಯಾಗಿದ್ದು, ಇದು ಭೀಕರ ಕೊಲೆ ಎಂದು ಶಂಕಿಸಲಾಗಿದೆ. ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಂಬಂಧಿಕರು ತನಿಖೆಗೆ ಆಗ್ರಹಿಸಿದ್ದಾರೆ. ಇದೇ ವೇಳೆ, ದಾವಣಗೆರೆಯಲ್ಲಿ ಹಿಟ್ ಅಂಡ್ ರನ್‍ಗೆ ಇಬ್ಬರು ಬೈಕ್ ಸವಾರರು ಬಲಿಯಾಗಿದ್ದು, ಚಿಕ್ಕಮಗಳೂರಿನಲ್ಲಿ ಹಾವು ಕಡಿತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ನನ್ನ ಸಾವಿಗೆ ಇವರೇ ಕಾರಣ: ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!

ನನ್ನ ಸಾವಿಗೆ ಇವರೇ ಕಾರಣ: ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕರೊಂದಿಗಿನ ಸಂಬಂಧದ ಕುರಿತ ಸುಳ್ಳು ಅಪಪ್ರಚಾರಕ್ಕೆ ಮನನೊಂದು ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ರಾಜು, ಅವರ ಪತ್ನಿ ಹಾಗೂ ಇತರೆ ವಿದ್ಯಾರ್ಥಿನಿಯರ ಹೆಸರನ್ನು ಉಲ್ಲೇಖಿಸಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಪ್ರೀತಿಸಿ ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು... ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು. ಆದ್ರೆ, ವಿಧಿ ಜೋಡಿಯನ್ನು ಬಾಳಲು ಬಿಟ್ಟಿಲ್ಲ. ಈ ಸಂಬಂಧ ಸಂಬಂಧಿಕ ಆಕ್ರಂದನ ಮುಗಿಲು ಮುಟ್ಟಿದೆ.

ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ

ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ

ಚಿತ್ರದುರ್ಗ ಹೊರವಲಯದ ಮಾಳಪ್ಪನಹಟ್ಟಿಯಲ್ಲೊಂದು ದುಷ್ಕೃತ್ಯ ನಡೆದಿದೆ. ಮಹಿಳೆ ಸೇರಿದಂತೆ ಕುಟುಂಬ ಸದಸ್ಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ನಂತರ ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಸದ್ಯ ಚಿತ್ರದುರ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಮದುವೆಗೆ ಹೋಗುತ್ತಿದ್ದ ಇವರಿದ್ದ ಕಾರು, ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.

ಹೆಗ್ಗೆರೆ ಬಳಿ ಕಾರು-ಲಾರಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಹೆಗ್ಗೆರೆ ಬಳಿ ಕಾರು-ಲಾರಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ, ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವಿದ್ಯಾರ್ಥಿನಿಗೆ ಹಾವು ಕಡಿತ: ಬಾಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕ ಆಸ್ಪತ್ರೆಗೆ ದಾಖಲು

ವಿದ್ಯಾರ್ಥಿನಿಗೆ ಹಾವು ಕಡಿತ: ಬಾಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕ ಆಸ್ಪತ್ರೆಗೆ ದಾಖಲು

ಚಿತ್ರದುರ್ಗದಲ್ಲಿ 6 ವರ್ಷದ ವಿದ್ಯಾರ್ಥಿನಿಗೆ ನಾಗರಹಾವು ಕಡಿತದಿಂದ ಸ್ಥಿತಿ ಗಂಭೀರವಾಗಿರುವಂತಹ ಘಟನೆ ನಡೆದಿದೆ. ಇನ್ನು ಈ ವೇಳೆ ಶಾಲಾ ಶಿಕ್ಷಕ ಬಾಯಿಂದ ವಿಷ ತೆಗೆಯಲು ಯತ್ನಿಸಿದ್ದು, ಅವರು ಕೂಡ ಅಸ್ವಸ್ಥಗೊಂಡಿದ್ದಾರೆ. ಸದ್ಯ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.