ಆದ್ಯ ವಚನಕಾರ ದೇವರ ದಾಸಿಮಯ್ಯನ ‘ಮುದನೂರು’ ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ ‘ಗುರು’ & ‘ಗಾಡ್ ಫಾದರ್’ ನನ್ನಪ್ಪ.
ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ.
‘ಹೆಣ್ಣಾಗಿದ್ದೇ ತಪ್ಪಾ?’ ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, ‘ವಿಷಾಮೃತ’ ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, ‘ಕೆರೆ ಉಳಿಸಿ’ ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, ‘ಆಪರೇಷನ್ ಚಿನ್ನ’ ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
ಚಿತ್ರದುರ್ಗದಲ್ಲಿ ಮಸೀದಿ ಕಟ್ಟಡ ನಿರ್ಮಾಣ ವಿವಾದ: ಸಿಡಿದೆದ್ದ ಹಿಂದೂ ಸಂಘಟನೆಗಳು, ಮುಸ್ಲಿಮರ ವಾದವೇನು?
ಚಿತ್ರದುರ್ಗದ ಸಾದಿಕ್ ನಗರದಲ್ಲಿ ಹೊಸ ಮಸೀದಿ ನಿರ್ಮಾಣ ವಿವಾದಕ್ಕೆ ಕಾರಣವಾಗಿದೆ. ಇದು ಅನಧಿಕೃತ ನಿರ್ಮಾಣ ಎಂದು ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಮುಸ್ಲಿಂ ಸಮುದಾಯದವರು ನಿಯಮಾನುಸಾರ ನಿರ್ಮಾಣ ನಡೆದಿದೆ ಎನ್ನುತ್ತಿದ್ದಾರೆ. ಸದ್ಯ ಸ್ಥಳೀಯರು ನಗರಸಭೆ ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ.
- Basavaraj Mudnur
- Updated on: Nov 28, 2025
- 5:37 pm
ಮುರುಘಾ ಶ್ರೀ ಪೋಕ್ಸೋ ಕೇಸ್ ಖುಲಾಸೆ; ಶಿವಮೂರ್ತಿ ಶರಣರು ನಿರಾಳ
Shivamurthy Murugha Sharana: ಮುರುಘಾಶ್ರೀ ವಿರುದ್ಧ ದಾಖಲಾಗಿರುವ ಎರಡು ಪೊಕ್ಸೋ ಪ್ರಕರಣಗಳ ಪೈಕಿ ಮೊದಲ ಕೇಸ್ನ ತೀರ್ಪು ಹೊರಬಿದ್ದಿದೆ. ಈ ಬಗ್ಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಮುರುಘಾಶ್ರೀಗೆ ಬಿಗ್ ರಿಲೀಫ್ ಕೊಟ್ಟಿದೆ. 2022ರ ಆಗಸ್ಟ್ 26ರಂದು ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಪ್ರಕರಣ ದಾಖಲಾಗಿತ್ತು.
- Basavaraj Mudnur
- Updated on: Nov 26, 2025
- 3:47 pm
ಪೊಲೀಸ್ ಕಿರುಕುಳಕ್ಕೆ ಆಟೋ ಡ್ರೈವರ್ ಆತ್ಮಹತ್ಯೆಗೆ ಯತ್ನ: ಸಿಡಿದೆದ್ದ ಆಟೋ ಚಾಲಕರು
ಚಿತ್ರದುರ್ಗದಲ್ಲಿ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ನೆಪದಲ್ಲಿ ಪೊಲೀಸ್ ಪೇದೆಯೊಬ್ಬರು ಆಟೋ ಚಾಲಕನಿಗೆ ಹಲ್ಲೆ ನಡೆಸಿ, ವಾಹನ ಜಪ್ತಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದು, ಆಟೋ ಚಾಲಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಕಾರಣರಾದ ಪೊಲೀಸರ ಅಮಾನತು, ಚಾಲಕನ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
- Basavaraj Mudnur
- Updated on: Nov 23, 2025
- 10:10 pm
ಪೊಲೀಸರ ಕಿರುಕುಳ ಆರೋಪ; ಚಿತ್ರದುರ್ಗದಲ್ಲಿ ನಡುರಸ್ತೆಯಲ್ಲಿ ಬೆಂಕಿ ಹಚ್ಚಿಕೊಂಡ ಆಟೋ ಚಾಲಕ
ಚಿತ್ರದುರ್ಗದಲ್ಲಿ ಪೊಲೀಸರ ಕಿರುಕುಳದಿಂದ ಬೇಸತ್ತ ಆಟೋ ಚಾಲಕ ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಡಿದು ವಾಹನ ಚಲಾಯಿಸಿದ್ದಾನೆಂದು ಪೊಲೀಸರು ಆತನ ಕಾಲರ್ ಹಿಡಿದು ಅವಮಾನಿಸಿದ್ದಾರೆಂದು ಆರೋಪಿಸಿದ ಆತ ಮನನೊಂದು, ಗಾಂಧಿ ವೃತ್ತದಲ್ಲಿ ಬೆಂಕಿ ಹಚ್ಚಿಕೊಂಡಿದ್ದಾನೆ. ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಪೊಲೀಸರ ಕಿರುಕುಳಕ್ಕೆ ಪಾಠ ಕಲಿಸಲು ಹೀಗೆ ಮಾಡಿದ್ದಾಗಿ ಚಾಲಕ ಹೇಳಿದ್ದಾನೆ.
- Basavaraj Mudnur
- Updated on: Nov 23, 2025
- 11:37 am
ಆಧುನಿಕ ಪ್ರಪಂಚದಿಂದ ಬಲು ದೂರು ಉಳಿದ ಗ್ರಾಮ: ಈ ಹಳ್ಳಿಗೆ ಮೊಬೈಲ್ ಸಿಗ್ನಲ್, ಇಂಟರ್ನೆಟ್ ಇಲ್ಲ
ಮೊಬೈಲ್ ಮತ್ತು ಇಟರ್ನೆಟ್ ಇಡೀ ಜಗತ್ತನ್ನು ಆಳುತ್ತಿರುವ ಇಂದಿನ ಕಾಲದಲ್ಲಿ ಚಿತ್ರದುರ್ಗ ತಾಲೂಕಿನ ಅದೊಂದು ಗ್ರಾಮ ಮಾತ್ರ ಆಧುನಿಕತೆಯಿಂದ ಮೈಲಿಗಟ್ಟಲೆ ದೂರ ಉಳಿದುಕೊಂಡಿದೆ. ಒಂದು ದಶಕದಿಂದ ಇಲ್ಲಿನ ಜನರಿಗೆ ಮೊಬೈಲ್ ಸಿಗ್ನಲ್ ಮತ್ತು ಇಂಟರ್ನೆಟ್ ಸಂಪರ್ಕವೇ ಇಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಪರದಾಡುತ್ತಿದ್ದಾರೆ.
- Basavaraj Mudnur
- Updated on: Nov 21, 2025
- 7:43 pm
ನವೆಂಬರ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರು ನವೆಂಬರ್ನಲ್ಲಿ ಕೆಳಗಿಳಿಯಲಿದ್ದಾರೆ ಎಂಬ ಮಾತನ್ನು ತಳ್ಳಿಹಾಕಿದ್ದಾರೆ. ಇದು ಕಾಂಗ್ರೆಸ್ನ ಭ್ರಮೆ ಎಂದು ಹೇಳಿರುವ ಬೊಮ್ಮಾಯಿ, ಬಿಜೆಪಿ ಒಂದು ಬಲಿಷ್ಠ ಹಾಗೂ ಸ್ಥಿರ ರಾಷ್ಟ್ರೀಯ ಪಕ್ಷ ಎಂದು ಪ್ರತಿಪಾದಿಸಿದ್ದಾರೆ.
- Basavaraj Mudnur
- Updated on: Nov 12, 2025
- 8:26 pm
ATMನಲ್ಲಿ ಹಣ ವಿತ್ ಡ್ರಾ ಮಾಡುವಾಗ ಎಚ್ಚರ… ಎಚ್ಚರ: ಯಾಮಾರಿದ್ರೆ ಬಕ್ರಾ ಆಗೋದು ಫಿಕ್ಸ್!
ಚಳ್ಳಕೆರೆಯ ಕೆನರಾ ಬ್ಯಾಂಕ್ ATMನಲ್ಲಿ ವಂಚನೆ ನಡೆದಿದೆ. ಹಣ ವಿತ್ಡ್ರಾ ಮಾಡಲು ಬಂದವರಿಗೆ ನೆರವಾಗುವ ನೆಪದಲ್ಲಿ, ಖದೀಮ ಪಾಸ್ವರ್ಡ್ ನೋಡಿ ಕ್ಷಣಾರ್ಧದಲ್ಲಿ ATM ಕಾರ್ಡ್ ಬದಲಾಯಿಸಿದ್ದಾನೆ. ಬೇರೊಂದು ATMನಲ್ಲಿ ಹಣ ಡ್ರಾ ಮಾಡಿ ವಂಚಕ ಎಸ್ಕೇಪ್ ಆಗಿದ್ದು, ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
- Basavaraj Mudnur
- Updated on: Oct 31, 2025
- 11:22 am
ಬಾಲಕನನ್ನ ಕಾಲಲ್ಲಿ ಒದ್ದು, ತುಳಿದು ರಾಕ್ಷಸೀ ಕೃತ್ಯ: ಸಂಸ್ಕೃತ ಶಾಲೆಯಲ್ಲಿ ಇವನೆಂಥಾ ಸುಸಂಸ್ಕೃತ ಶಿಕ್ಷಕ
ಪುಟ್ಟ ಬಾಲಕನ ಮೇಲೆ ಅಮಾನುಷ ಹಲ್ಲೆ. ಕಾಲಲ್ಲಿ ಒದ್ದು ತುಳಿದು ರಾಕ್ಷಸೀ ಕೃತ್ಯ. ಸಂಸ್ಕೃತ ಶಾಲೆಯಲ್ಲಿ ಕ್ರೌರ್ಯ ಮೆರೆದ ರಕ್ಕಸ ಶಿಕ್ಷಕ. ಈ ದೃಶ್ಯಗಳು ಕಂಡು ಬಂದಿದ್ದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ. ಹೌದು, ಈ ಗ್ರಾಮದ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇಗುಲ ರಾಜ್ಯ ಮಾತ್ರ ಅಲ್ಲ ದೇಶಾದ್ಯಂತ ಭಕ್ತರನ್ನು ಹೊಂದಿದೆ. ಜಾತ್ರೆ, ರಥೋತ್ಸವ ಸಂದರ್ಭದಲ್ಲಿ ಮೂರು ಲಕ್ಷಕ್ಕೂ ಅಧಿಕ ಜನ ಸೇರುತ್ತಾರೆ. ಇದೇ ದೇಗುಲ ಸೇರಿದ ಸಂಸ್ಕೃತ, ವೇದ, ವೀರಶೈವಾಗಮ ಶಾಲೆಯೊಂದಿದೆ. ಕಳೆದ 8ವರ್ಷಗಳಿಂದ ದೇಗುಲ ಹೊಂದಿಕೊಂಡಂತಿರುವ ಹಿಂಭಾಗದ ಕಟ್ಟಡದಲ್ಲೇ ಸಂಸ್ಕೃತ ಶಾಲೆಯಿದೆ. ರಾಜ್ಯದ ವಿವಿದೆಡೆಯಿಂದ ಆಗಮಿಸಿದ ಸುಮಾರು ಮೂವತ್ತು ಜನ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ.
- Basavaraj Mudnur
- Updated on: Oct 21, 2025
- 7:36 pm
ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಾ ಬಾಲಕ?
ಅಜ್ಜಿಗೆ ಕರೆ ಮಾಡಿದ ವಿಚಾರಕ್ಕೆ ಮುಖ್ಯ ಶಿಕ್ಷಕನೋರ್ವ ವಿದ್ಯಾರ್ಥಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ಶಾಲೆಯಲ್ಲಿ ನಡೆದಿತ್ತು. ಕೇಸ್ಗೆ ಈಗ ಟ್ವಿಸ್ಟ್ ಸಿಕ್ಕಿದ್ದು, ಸ್ವಲ್ಪ ಯಾಮಾರಿದ್ದರೂ ಬಾಲಕನ ಪ್ರಾಣಪಕ್ಷಿ ಹಾರಿಹೋಗುತ್ತಿತ್ತು ಎಂಬ ವಿಚಾರ ಬಯಲಾಗಿದೆ.
- Basavaraj Mudnur
- Updated on: Oct 21, 2025
- 6:41 pm
ಚಿತ್ರದುರ್ಗ: ಅಜ್ಜಿಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಮುಖ್ಯ ಶಿಕ್ಷಕ; ವಿಡಿಯೋ ವೈರಲ್
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ಒಂದು ಅಮಾನವೀಯ ಘಟನೆ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕ ವಿದ್ಯಾರ್ಥಿಯೊಬ್ಬನಿಗೆ ಮನಸು ಬಂದಂತೆ ಥಳಿಸಿದ್ದು, ವಿಡಿಯೋ ವೈರಲ್ ಆಗಿದೆ. ಶಿಕ್ಷಕನ ವಿರುದ್ಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Basavaraj Mudnur
- Updated on: Oct 21, 2025
- 8:52 am
ಪೆಟ್ರೋಲ್ ಬಂಕಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಎಂಜಿನಿಯರಿಂಗ್ ಓದ್ತಿರೋ ಯುವತಿಗೆ ಲವ್, ಮದುವೆ! ಆಮೇಲೇನಾಯ್ತು?
ಆ ಜೋಡಿ ಒಂದೇ ಗ್ರಾಮದವರು, ಒಂದೇ ಸಮುದಾಯದವರು. ಅಷ್ಟೇ ಅಲ್ಲ, ಸಂಬಂಧದಲ್ಲಿ ಯುವತಿಗೆ ಆ ಯುವಕ ಮಾವನೇ ಆಗಬೇಕು. ಆದರೂ, ಪೋಷಕರು ಮಾತ್ರ ಯುವಪ್ರೇಮಿಗಳಿಗೆ ವಿಲನ್ ಆಗಿದ್ದು ನೆಮ್ಮದಿ ಕೆಡಿಸಿದ್ದಾರೆ. ಇದೀಗ ಪೋಷಕರ ವಿರೋಧ ಇದ್ದರೂ ಮದುವೆಯಾಗಿರುವ ಯುವ ಜೋಡಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿ ರಕ್ಷಣೆ ನೀಡುವಂತೆ ಮನವಿ ಮಾಡಿದೆ.
- Basavaraj Mudnur
- Updated on: Oct 17, 2025
- 8:56 am
SSLC ಓದಿದ ಹುಡ್ಗನಿಗೆ ಮನಸೋತ ಇಂಜಿನಿಯರ್ ಮುಗಿಸಿದ ಹುಡ್ಗಿ:ಪ್ರೇಮ ವಿವಾಹವಾದ ಜೋಡಿಗೆ ಬೆದರಿಕೆ
ಪ್ರೀತಿ ಮಾಯೆ ಹುಷಾರು ಅಂತ ದೊಡ್ಡವರು ಸುಮ್ನೆ ಹೇಳಿಲ್ಲ. ಒಂದು ಪ್ರೀತಿ ಬೇಕು ಎಂದ್ರೆ ಇನ್ನೊಂದು ಪ್ರೀತಿ (Love) ಕಳೆದುಕೊಳ್ಳಲು ರೆಡಿಯಿರಬೇಕು. ಅದೇ ಪರಿಸ್ಥಿತಿ ಬಂದಿದೆ ಚಿತ್ರದುರ್ಗದ (Chitradurga) ಈ ಜೋಡಿದೆ. ಹೌದು...ಬಿಇ ಓದಿರುವ ಯುವತಿ ಹಾಗೂ ಎಸ್ ಎಸ್ಎಲ್ ಓದಿರುವ ಯುವಕ ಪ್ರೀತಿಸಿ ವಿವಾಹವಾಗಿದ್ದಾರೆMarriage). ಆದರೆ, ಈ ಜೋಡಿಗೆ ಕುಟುಂಬಸ್ಥರ ಭಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ರಕ್ಷಣೆ ನೀಡಿ ಬೇಕೆಂದು ಯುವ ಜೋಡಿ ಚಿತ್ರದುರ್ಗ ಎಸ್ಪಿ ಕಚೇರಿಯ ಮೆಟ್ಟಿಲೇರಿದೆ.
- Basavaraj Mudnur
- Updated on: Oct 16, 2025
- 6:08 pm