ಆದ್ಯ ವಚನಕಾರ ದೇವರ ದಾಸಿಮಯ್ಯನ ‘ಮುದನೂರು’ ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ ‘ಗುರು’ & ‘ಗಾಡ್ ಫಾದರ್’ ನನ್ನಪ್ಪ.
ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ.
‘ಹೆಣ್ಣಾಗಿದ್ದೇ ತಪ್ಪಾ?’ ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, ‘ವಿಷಾಮೃತ’ ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, ‘ಕೆರೆ ಉಳಿಸಿ’ ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, ‘ಆಪರೇಷನ್ ಚಿನ್ನ’ ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
ಪ್ರಯಾಣಿಕರೊಂದಿಗೆ ಬಸ್ ಚಾಲಕನ ಕಿರಿಕ್: ಹಾವು ಕಚ್ಚಲಿ, ಲಕ್ವಾ ಹೊಡೆಯಲಿ ಎಂದು ಶಾಪ
ಚಿತ್ರದುರ್ಗದಲ್ಲಿ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಗಂಟೆಗಳ ಕಾಲ ವಿಳಂಬವಾದ ಘಟನೆ ನಡೆದಿದೆ. ತಡವಾಗಿ ಬಂದ ಬಸ್ ಚಾಲಕ ಪ್ರಯಾಣಿಕರಿಗೆ ಹಾವು ಕಚ್ಚಲಿ, ಲಕ್ವಾ ಹೊಡೆಯಲಿ ಎಂದು ಶಾಪ ಹಾಕಿದ್ದಾನೆ. ಇದರಿಂದ ಕುಪಿತಗೊಂಡ ಪ್ರಯಾಣಿಕರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಬಸ್ ನಿಲ್ದಾಣದಲ್ಲಿ ಭಾರೀ ಗಲಾಟೆ ನಡೆದಿದೆ.
- Basavaraj Mudnur
- Updated on: Sep 16, 2026
- 1:47 pm
ಚಿತ್ರದುರ್ಗ: 7-8 ಕಿ.ಮೀ ನಡಿಗೆ, ಚಿರತೆ-ಕರಡಿಗಳ ಭಯ; ಬಸ್ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದ ಶಾಲಾ ಮಕ್ಕಳು ಸಾರಿಗೆ ವ್ಯವಸ್ಥೆ ಇಲ್ಲದೆ ಪ್ರತಿದಿನ 7-8 ಕಿ.ಮೀ. ನಡೆಯುವ ದುಸ್ಥಿತಿಯಲ್ಲಿದ್ದಾರೆ. ಕಾಡು ಪ್ರಾಣಿಗಳು, ಹಾವು-ಚೇಳುಗಳ ಭೀತಿಯ ಜೊತೆಗೆ ಹೆಣ್ಣು ಮಕ್ಕಳ ಸುರಕ್ಷತೆಯೂ ಪ್ರಶ್ನಾರ್ಥಕವಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು, ಪೋಷಕರ ಆತಂಕ ಹೆಚ್ಚಿದೆ.
- Basavaraj Mudnur
- Updated on: Sep 16, 2026
- 12:47 pm
ಚಿತ್ರದುರ್ಗ: ಅಸ್ಥಿಪಂಜರದಂತಾದ ಸರ್ಕಾರಿ ಶಾಲೆಗಳು; ಜೀವ ಭಯದಲ್ಲೇ ಪಾಠ ಕೇಳುತ್ತಿರುವ ಮಕ್ಕಳು!
ಚಿತ್ರದುರ್ಗ ನಗರದ ಕೆಳಗೋಟೆ ಬಡಾವಣೆಯಲ್ಲಿರುವ ಎರಡು ಸರ್ಕಾರಿ ಪ್ರಾಥಮಿಕ ಶಾಲೆಗಳ ಕಟ್ಟಡಗಳು ಅಸ್ಥಿಪಂಜರದಂತಾಗಿದ್ದು, ವಿದ್ಯಾರ್ಥಿಗಳು ಜೀವ ಭಯದಲ್ಲೇ ಕಲಿಯುವಂತಾಗಿದೆ. ಮೇಲ್ಛಾವಣಿಯ ಸಿಮೆಂಟ್ ಉದುರಿಬೀಳುತ್ತಿದ್ದು, ಹಲವು ಪೋಷಕರು ಈಗಾಗಲೇ ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಅನಾಹುತ ಸಂಭವಿಸುವ ಮುನ್ನವೇ ನೂತನ ಕೊಠಡಿಗಳನ್ನು ನಿರ್ಮಿಸಿಕೊಡುವಂತೆ ಪೋಷಕರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.
- Basavaraj Mudnur
- Updated on: Sep 12, 2026
- 8:39 am
ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಸೂರ್ಯಕಾಂತಿ ಬೆಳೆ ನಷ್ಟದಿಂದ ರೈತರು ಕಂಗಾಲು
ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದ್ದು, ಸೂರ್ಯಕಾಂತಿ ಬೆಳೆ ಸಂಪೂರ್ಣವಾಗಿ ವಿಫಲವಾಗಿದೆ. 4 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದ ಸೂರ್ಯಕಾಂತಿ ನೆಲಕಚ್ಚಿದೆ. ರಾಜಕಾರಣಿಗಳ ಭೇಟಿ, ಪರಿಶೀಲನೆಗಳ ನಂತರವೂ ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲ ಅಥವಾ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿಲ್ಲ. ಇದರಿಂದ ಬೇಸತ್ತ ರೈತರು ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.
- Basavaraj Mudnur
- Updated on: Aug 25, 2026
- 10:48 pm
ಹಿರಿಯೂರಿನ ಐಮಂಗಲ ಬಳಿ ಬಸ್ ಅಪಘಾತ: ಇಬ್ಬರು ಸಾವು; 26 ಮಂದಿಗೆ ಗಾಯ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಕ್ಲೀನರ್ ಮೃತಪಟ್ಟಿದ್ದು, 26 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ನಲ್ಲಿ ಗೋವಾಕ್ಕೆ ತೆರಳುತ್ತಿದ್ದವರು ಬೆಂಗಳೂರಿನ ಯುನಿವರ್ಸಲ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
- Basavaraj Mudnur
- Updated on: Aug 21, 2026
- 7:45 pm
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ತಮ್ಮ ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಅಥವಾ ಪಕ್ಕದ ಚಳ್ಳಕೆರೆ ಕ್ಷೇತ್ರಕ್ಕೆ ಸೇರಿಸುವ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮೊಳಕಾಲ್ಮೂರು ಕ್ಷೇತ್ರವು ಅಭಿವೃದ್ಧಿಗೆ ಅವಕಾಶವಿಲ್ಲದಂತಾಗಿದೆ ಎಂಬ ನೋವು ಮತ್ತು ಹತಾಶೆಯಿಂದ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
- Basavaraj Mudnur
- Updated on: Aug 16, 2026
- 12:54 pm
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಪ್ರಮುಖ ಆರೋಪದ ಮೇಲೆ ಸ್ವಾಮೀಜಿಗೆ ಸ್ಥಳೀಯರು ಸರಿಯಾಗಿ ಥಳಿಸಿದ್ದಾರೆ. ಬಳ್ಳಾರಿ ಮೂಲದ ಮಹಿಳೆಯ ಸಂಬಂಧಿಕರು ಈ ಹಲ್ಲೆಯನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ. ಸ್ವಾಮೀಜಿ ವಾಮಾಚಾರ ಮತ್ತು ಅನಾರೋಗ್ಯ ನಿವಾರಣೆ ಮಾಡುವ ನೆಪದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ದೂರುಗಳೂ ಈ ಹಿಂದೆಯೇ ಇದ್ದವು. ಈ ಆರೋಪಗಳು ಸಾಬೀತಾಗುವ ಮೊದಲೇ, ಮಹಿಳೆಯ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಘಟನೆ ನಡೆದು, ಅದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
- Basavaraj Mudnur
- Updated on: Aug 16, 2026
- 12:41 pm
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿತ್ರದುರ್ಗದ ಮಂಕಿ ಮ್ಯಾನ್ ಜ್ಯೋತಿರಾಜ್ ಅವರ ವಿವಾಹ ನಿವೇದಿತಾ ಅವರೊಂದಿಗೆ ಆಗಸ್ಟ್ 22 ಮತ್ತು 23ರಂದು ನೆರವೇರಲಿದೆ. ಇದು ಪ್ರೀತಿ ಮತ್ತು ಅರೇಂಜ್ ಮದುವೆಯ ಮಿಶ್ರಣವಾಗಿದ್ದು, ವಧು ಚಿಕ್ಕಂದಿನಿಂದಲೇ ಜ್ಯೋತಿರಾಜ್ ಅವರೊಂದಿಗೆ ಪರಿಚಿತರಾಗಿದ್ದಾರೆ. ಸಾಮಾಜಿಕ ಕಾರ್ಯಗಳಲ್ಲೂ ನಿರತರಾಗಿರುವ ಜ್ಯೋತಿರಾಜ್ಗೆ ವಧು ಸಂಪೂರ್ಣ ಬೆಂಬಲ ನೀಡಲಿದ್ದಾರೆ.
- Basavaraj Mudnur
- Updated on: Aug 14, 2026
- 10:43 pm
‘ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ’: ಸಚಿವ ಜಮೀರ್ ಹೀಗಂದಿದ್ಯಾರಿಗೆ?
ಸಚಿವ ಸ್ಥಾನ ಕೈತಪ್ಪಿದವರ ಅಸಮಾಧಾನ ಸಹಜ, ಸಿಎಂ ಡಿ.ಕೆ. ಶಿವಕುಮಾರ್ ಸಮಾಧಾನಪಡಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಚಿತ್ರದುರ್ಗದಲ್ಲಿ ಹೇಳಿದ್ದಾರೆ. ಯಾವುದೇ ಖಾತೆಯನ್ನು ನಿರ್ವಹಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಸಚಿವ ಬಿ. ನಾಗೇಂದ್ರ ಅವರಿಗೆ ಎಸ್ಐಟಿ ಕ್ಲೀನ್ ಚಿಟ್ ನೀಡಿದ್ದು, ಅವರನ್ನು ಮುಳುಗಿಸಲು ಪಿತೂರಿ ನಡೆಯುತ್ತಿದೆ ಎಂದರು. ಹೈಕಮಾಂಡ್ ಸರ್ವೆ ಆಧಾರದ ಮೇಲೆ ಸಚಿವ ಸ್ಥಾನ ನೀಡುತ್ತದೆ, ಹಣದ ವದಂತಿ ಊಹಾಪೋಹ ಎಂದಿದ್ದಾರೆ.
- Basavaraj Mudnur
- Updated on: Aug 7, 2026
- 11:29 am
ಬರದ ನಡುವೆಯೂ ಊಟಿಯ ಅನುಭವ ನೀಡುತ್ತಿದೆ ಚಿತ್ರದುರ್ಗದ ಜೋಗಿಮಟ್ಟಿ! ಪ್ರಕೃತಿ ಸೌಂದರ್ಯ ಸವಿಯಲು ಹರಿದು ಬರುತ್ತಿರುವ ಪ್ರವಾಸಿಗರು
ಚಿತ್ರದುರ್ಗ, ಜುಲೈ 20: ಒಂದು ಕಡೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೂ ಜನ ಪರದಾಡುತ್ತಿದ್ದಾರೆ. ಆದರೆ ಇದೇ ಜಿಲ್ಲೆಯ ಜೋಗಿಮಟ್ಟಿ ವನ್ಯಧಾಮ ಮಾತ್ರ ಸಂಪೂರ್ಣ ಭಿನ್ನ ಚಿತ್ರಣವನ್ನು ಕಟ್ಟಿಕೊಟ್ಟಿದೆ. ಮಂಜಿನ ಹೊದಿಕೆ, ತಂಪಾದ ಗಾಳಿ ಮತ್ತು ಹಸಿರು ಪರಿಸರದಿಂದ ಜೋಗಿಮಟ್ಟಿ ಇದೀಗ ಬಯಲುಸೀಮೆಯ ‘ಊಟಿ’ಯಾಗಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.
- Basavaraj Mudnur
- Updated on: Jul 20, 2026
- 9:53 am
ಕರ್ನಾಟಕದಲ್ಲಿ ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್!
ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ತಿಂಗಳುಗಳೇ ಕಳೆದಿದ್ದು, ಡಿಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಸಹ ಕೆಲ ಸರ್ಕಾರಿ ಬೋರ್ಡ್ಗಳಲ್ಲಿ ಇನ್ನೂ ಸಿದ್ದರಾಮಯ್ಯನವರೇ ಸಿಎಂ ಎಂದೇ ಇದೆ. ಸರ್ಕಾರಿ ಮಾಹಿತಿ ನಾಮಫಲಕಗಳಲ್ಲಿ ಸಿಎಂ ಹೆಸರು ಮತ್ತು ಭಾವಚಿತ್ರ ಬದಲಾಗಿಸಿಲ್ಲ. ಹೌದು....ಚಿತ್ರದುರ್ಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಾಹಿತಿ ಬೋರ್ಡ್ನಲ್ಲಿ ಸಿದ್ದರಾಮಯ್ಯನವರು ಇನ್ನೂ ಸಿಎಂ ಆಗಿಯೇ ಉಳಿದಿದ್ದರೆ, ಡಿಕೆ ಶಿವಕುಮಾರ್ ಡಿಸಿಎಂ ಎನ್ನುವ ನಾಮಫಲಕ ರಾರಾಜಿಸುತ್ತಿದೆ.
- Basavaraj Mudnur
- Updated on: Jul 16, 2026
- 3:07 pm
ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ವಿಧಿವಶ
ಗಾಂಧಿ ಪರಿವಾರದ ಆಪ್ತ ಹಾಗೂ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಂದು ಚಿತ್ರದುರ್ಗದ ಮುಕ್ತಿಧಾಮದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಜಯದೇವ ಕ್ರೀಡಾಂಗಣ ಸೇರಿದಂತೆ ವಿವಿಧೆಡೆ ವ್ಯವಸ್ಥೆ ಮಾಡಲಾಗಿದೆ. ಮೃತರ ಅಂತಿಮ ದರ್ಶನ ಪಡೆಯಲು ಸಿಎಂ ಹಾಗೂ ಡಿಸಿಎಂ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಾರೆ.
- Basavaraj Mudnur
- Updated on: Jul 13, 2026
- 8:34 am