ಶಿವಮೊಗ್ಗದಲ್ಲಿ ಕೈಕೊಟ್ಟ ಮಳೆ ಮಾಪನ ಕೇಂದ್ರಗಳು: ಬೆಳೆ ವಿಮೆ ಹಂಚಿಕೆಯಲ್ಲಿ ರೈತರಿಗೆ ದೋಖಾ
ಶಿವಮೊಗ್ಗದಲ್ಲಿ ಮಳೆ ಮಾಪನ ಕೇಂದ್ರ ಕೆಟ್ಟು ಹೋಗಿದ್ದರಿಂದ ಬೆಳೆ ವಿಮೆ ವಿತರಣೆಯಲ್ಲಿ ದೊಡ್ಡ ಯಡವಟ್ಟು ಉಂಟಾಗಿದೆ. ಇದೀಗ ಬೆಳೆ ವಿಮೆ ಮಾಡಿಸಿದ ರೈತರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಕಣ್ಣೀರಿನಲ್ಲಿ ಕೈತೊಳೆಯುವಂತೆ ಆಗಿದೆ. ಇದೊಂದು ಅವೈಜ್ಞಾನಿಕ ಬೆಳೆ ವಿಮೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Basavaraj Yaraganavi
- Updated on: Dec 11, 2025
- 7:10 pm
ಶಿವಮೊಗ್ಗ: ಬಲೆ ಹಾಕಿ ಬೀದಿ ನಾಯಿಯ ಹಿಡಿದು ಅಮಾನುಷವಾಗಿ ಕೊಲೆ, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಹಂದಿ ಮರಿಯನ್ನು ತಿನ್ನುತ್ತಿದೆ ಎಂದು ಹಂದಿ ಹಿಡಿಯುವ ಯುವಕರ ತಂಡವೊಂದು ಬೀದಿ ನಾಯಿಯನ್ನು ಬಲೆ ಹಾಕಿ ಹಿಡಿದು ಸಾರ್ವಜನಿಕವಾಗಿ ಅಮಾನುಷವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ಗೋಪಾಳ ಪೊಲೀಸ್ ಬಡಾವಣೆಯಲ್ಲಿ ನಡೆದಿದೆ. ಅಮಾನುಷ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
- Basavaraj Yaraganavi
- Updated on: Dec 9, 2025
- 8:03 am
ತಾಯಿ, ಮಗ ಆತ್ಮಹತ್ಯೆ: ಪೊಲೀಸರು ಬಿಚ್ಚಿಟ್ರು ಮೊದಲ ಸೊಸೆ ಸಾವಿನ ರಹಸ್ಯ
ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆ ವೈದ್ಯೆ ಮತ್ತು ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ನಡೆದಿದೆ. ಇತ್ತೀಚೆಗೆ ಇದೇ ಸೊಸೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಪ್ರಕರಣ ಕುರಿತಾಗಿ ಶಿವಮೊಗ್ಗ ಎಎಸ್ಪಿ ಎ.ಜಿ.ಕಾರಿಯಪ್ಪ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.
- Basavaraj Yaraganavi
- Updated on: Dec 5, 2025
- 10:57 pm
ರೈತರಿಗೆ ಪರಿಹಾರ ನೀಡಲು ವಿಳಂಬ: ಡಿಸಿ ಕಾರು, ಪೀಠೋಪಕರಣ ಜಪ್ತಿಗೆ ಕೋರ್ಟ್ ಆದೇಶ
ಶಿವಮೊಗ್ಗದ ಹರಮಘಟ್ಟ ಗ್ರಾಮದ ರೈತನಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಾರು ಹಾಗೂ ಕಚೇರಿಯ ಪೀಠೋಪಕರಣ ಜಪ್ತಿಗೆ ಶಿವಮೊಗ್ಗ 2 ನೇ ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ ಆದೇಶದಂತೆ ಇದೀಗ ಜಿಲ್ಲಾಡಳಿತಕ್ಕೆ 95 ಲಕ್ಷ ರೂ. ನೀಡುವಂತಾಗಿದೆ.
- Basavaraj Yaraganavi
- Updated on: Dec 5, 2025
- 7:17 pm
ಡೆತ್ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ: 6 ತಿಂಗಳ ಹಿಂದಷ್ಟೇ 2ನೇ ಮದ್ವೆಯಾಗಿದ್ದ ಮಗ ಸಹ ಸಾವು
ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಡೆತ್ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಅದನ್ನು ನೋಡಿ ಮಗ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ವಿನೋಬನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
- Basavaraj Yaraganavi
- Updated on: Dec 5, 2025
- 5:52 pm
ಧರ್ಮಸ್ಥಳ ಕೇಸ್: ಜಾಮೀನು ಸಿಕ್ಕರೂ ಮಾಸ್ಕ್ಮ್ಯಾನ್ ಚಿನ್ನಯ್ಯಗಿಲ್ಲ ಬಿಡುಗಡೆ ಭಾಗ್ಯ!
ಧರ್ಮಸ್ಥಳ 'ಬುರುಡೆ' ಕೇಸ್ ಪ್ರಕರಣದ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ನವೆಂಬರ್ 26ರಂದು ಷರತ್ತುಬದ್ಧ ಜಾಮೀನು ದೊರೆತಿದೆ. ಆದರೆ, ಒಂದು ಲಕ್ಷ ರೂಪಾಯಿ ಭದ್ರತಾ ಬಾಂಡ್ ಮತ್ತು ಇಬ್ಬರು ಜಾಮೀನುದಾರರನ್ನು ಒದಗಿಸಲು ಸಾಧ್ಯವಾಗದ ಕಾರಣ ಆತ ಇನ್ನೂ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲೇ ಉಳಿದಿದ್ದಾನೆ. ಜಾಮೀನು ಸಿಕ್ಕರೂ ಶ್ಯೂರಿಟಿ ಇಲ್ಲದೆ ಚಿನ್ನಯ್ಯ ಜೈಲಿನಲ್ಲಿ ನರಳುತ್ತಿದ್ದಾನೆ.
- Basavaraj Yaraganavi
- Updated on: Dec 4, 2025
- 2:21 pm
ಮದುವೆಯಾದ ಮರುದಿನವೇ ಮದುಮಗ ಹೃದಯಾಘಾತದಿಂದ ಸಾವು
ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಸಮೀಪದ ಬಂಡ್ರಿ ಗ್ರಾಮದಲ್ಲಿ ಮದುವೆಯಾದ ಮರುದಿನವೇ ಯುವಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ನವೆಂಬರ್ 30ರಂದು ಮದುವೆಯಾಗಿ, ಡಿಸೆಂಬರ್ 1ರಂದು ವಧುವಿನ ಮನೆಗೆ ತೆರಳಿದಾಗ, ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದು, ವಧುವಿನ ಆಕ್ರಂದನ ಮುಗಿಲು ಮುಟ್ಟಿದೆ.
- Basavaraj Yaraganavi
- Updated on: Dec 3, 2025
- 10:34 am
Shivamogga Bomb Blast: ಶಿಕಾರಿಪುರ ಬಳಿ ಕೆಎಸ್ಆರ್ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ, ಪ್ರಯಾಣಿಕರು ಬಚಾವ್
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟಗೊಂಡಿದೆ. ಮುಡಬಸಿದ್ಧಾಪುರದಿಂದ ಶಿಕಾರಿಪುರಕ್ಕೆ ಬರುವ ಮಾರ್ಗದಲ್ಲಿ ಹಿರೇಕಲವತ್ತಿ ಬಳಿ ಸ್ಫೋಟ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಂದಿಗಳಿಂದ ಬೆಳೆ ರಕ್ಷಣೆಗೆ ಬಳಸುವ ಬಾಂಬ್ ಆಕಸ್ಮಿಕವಾಗಿ ರಸ್ತೆಯಲ್ಲಿ ಬಿದ್ದಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
- Basavaraj Yaraganavi
- Updated on: Dec 2, 2025
- 3:14 pm
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ
12 ಸಾವಿರ ಶಿಕ್ಷಕರನ್ನು ನೂತನವಾಗಿ ನಿಯೋಜಿಸಲಾಗುತ್ತಿದೆ. ಯಾವುದೇ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಮೋಷನ್ಗಳಿಂದ ಖಾಲಿ ಆಗುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
- Basavaraj Yaraganavi
- Updated on: Nov 29, 2025
- 7:50 pm
ಯಾವಾಗ ಏನು ಬೇಕಾದರೂ ಆಗಬಹುದು: ಮಾರ್ಮಿಕ ಹೇಳಿಕೆ ಕೊಟ್ಟ ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕ ಸರಕಾರದ ಅಧಿಕಾರ ಕಿತ್ತಾಟ ಮತ್ತು ಅಭಿವೃದ್ಧಿ ಕೊರತೆಯನ್ನು ಟೀಕಿಸಿದ್ದಾರೆ. ಆರೆಂಟು ತಿಂಗಳಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಹೋರಾಟದಿಂದ ಜನ ಬೇಸತ್ತಿದ್ದಾರೆ. ಬರುವ ದಿನಗಳಲ್ಲಿ ಜನರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತಾರೆ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಅವರು ಹೇಳಿದ್ದಾರೆ.
- Basavaraj Yaraganavi
- Updated on: Nov 27, 2025
- 6:39 pm
ಸರ್ಕಾರಿ ನೌಕರನೇ ಬೇಕೆಂದು ಮದುವೆ ಆಗುವ ಯುವತಿಯರೇ ಜೋಕೆ: ಪತಿಯ ವರದಕ್ಷಿಣೆ ಟಾರ್ಚರ್ಗೆ ನಾಲೆಗೆ ಹಾರಿದ ಮಹಿಳೆ
ಸರ್ಕಾರಿ ನೌಕರಿಯಲ್ಲಿರೋ ವರನೇ ಬೇಕು ಎಂದು ಹುಡುಕಿ ಹುಡುಕಿ ಮದುವೆ ಆಗುವ ಯುವತಿಯರೇ ಎಚ್ಚರ. ಇದೇ ರೀತಿ ಯೋಚನೆ ಮಾಡಿ ಸರ್ಕಾರಿ ಎಂಜಿನಿಯರ್ಗೆ ಮಗಳ ಮದುವೆ ಮಾಡಿಕೊಟ್ಟು ಹೆತ್ತವರು ಕಣ್ಣೀರಲ್ಲಿ ಕೈತೊಳೆಯುತ್ತಿರೋ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪತಿ ಮತ್ತು ಆತನ ಮನೆಯವರ ಟಾರ್ಚರ್ ತಾಳಲಾರದೆ ನವ ವಿವಾಹಿತೆಯೋರ್ವರು ತೆಗೆದುಕೊಳ್ಳಬಾರದ ನಿರ್ಧಾರ ತೆಗೆದುಕೊಂಡಿದ್ದಾರೆ.
- Basavaraj Yaraganavi
- Updated on: Nov 26, 2025
- 5:20 pm
ಬಾಳೆಗೊನೆಯಲ್ಲಿ, ಸಿಬ್ಬಂದಿ ಒಳ ಉಡುಪಿನಲ್ಲಿ ಜೈಲಿಗೆ ಬಂತು ಗಾಂಜಾ! ಪರಪ್ಪನ ಅಗ್ರಹಾರ ಬಳಿಕ ಶಿವಮೊಗ್ಗದಲ್ಲಿ ಕೈದಿಗಳ ಹೈಟೆಕ್ ಬದುಕು ಬಯಲು
ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಾಳೆಹಣ್ಣಿನ ಗೊನೆಯಲ್ಲಿ ಗಾಂಜಾ ಪತ್ತೆಯಾಗಿರುವುದು ಇದೀಗ ಇಡೀ ಜೈಲು ಅಧಿಕಾರಿಗಳನ್ನೇ ಆಘಾತಕ್ಕೊಳಗಾಗಿಸಿದೆ. ಮತ್ತೊಂದೆಡೆ, ಜೈಲಿಗೆ ಸಿಬ್ಬಂದಿ ಎಂಟ್ರಿಯಾಗುವ ಮುನ್ನವೇ, ಸಿಬ್ಬಂದಿ ಒಳ ಉಡುಪಿನಲ್ಲಿ ಗಾಂಜಾ ಪತ್ತೆಯಾಗಿರುವುದು ಇಡೀ ವ್ಯವಸ್ಥೆಯನ್ನೇ ಪ್ರಶ್ನೆ ಮಾಡುವಂತಾಗಿದೆ. ಸದಾ ಹದ್ದಿನ ಕಣ್ಣಿಡಲಾಗುವ ಕಾರಾಗೃಹಗಳಲ್ಲಿ ಕೈದಿಗಳ ಬದುಕು ಹೈಟೆಕ್ ಆಗಿದೆ.
- Basavaraj Yaraganavi
- Updated on: Nov 22, 2025
- 7:52 am