Basavaraj Yaraganavi

Basavaraj Yaraganavi

Author - TV9 Kannada

basavaraj.yaraganavi@tv9.com
ತುಂಗಾನದಿ ಪಾತ್ರದಲ್ಲಿ ಸಿಡಿಮದ್ದು ಸ್ಫೋಟ: ಮೂವರ ಪೈಕಿ ಓರ್ವ ಬಾಲಕನ ಸ್ಥಿತಿ ಗಂಭೀರ

ತುಂಗಾನದಿ ಪಾತ್ರದಲ್ಲಿ ಸಿಡಿಮದ್ದು ಸ್ಫೋಟ: ಮೂವರ ಪೈಕಿ ಓರ್ವ ಬಾಲಕನ ಸ್ಥಿತಿ ಗಂಭೀರ

ತೀರ್ಥಹಳ್ಳಿಯ ತುಂಗಾ ನದಿ ತೀರದಲ್ಲಿ ತೆಪ್ಪೋತ್ಸವದ ಸಮಯದಲ್ಲಿ ನಡೆದ ಪಟಾಕಿ ಪ್ರದರ್ಶನದಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಮೂರು ಬಾಲಕರು ಪಟಾಕಿಗಳನ್ನು ಸಂಗ್ರಹಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಬಾಲಕನಿಗೆ ತೀರ್ಥಹಳ್ಳಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತಕ್ಕೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೆಂಗಳೂರಿಗಿಂತ ಮೊದಲೇ ಶಿವಮೊಗ್ಗದಲ್ಲಿ HMPV ವೈರಸ್ ಪತ್ತೆ..!

ಬೆಂಗಳೂರಿಗಿಂತ ಮೊದಲೇ ಶಿವಮೊಗ್ಗದಲ್ಲಿ HMPV ವೈರಸ್ ಪತ್ತೆ..!

ದೇಶದಲ್ಲಿ ಆತಂಕ ಮೂಡಿಸಿರುವ ಎಚ್‌ಎಂಪಿ ವೈರಸ್‌ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಎರಡು ಮೊದಲ ಕೇಸ್‌ ಪತ್ತೆಯಾದ ಬಳಿಕ ಇದೀಗ ಮಲೆನಾಡು ಶಿವಮೊಗ್ಗದಲ್ಲೂ ಎಚ್‌ಎಂಪಿವಿ ವೈರಸ್‌ ಪತ್ತೆಯಾಗಿದೆ. 1 ವರ್ಷ, 2 ವರ್ಷ ವಯಸ್ಸಿನ ಆರು ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ, ಶಿವಮೊಗ್ಗ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.

ವಿಷ ಲಡ್ಡು ಪ್ರಕರಣದ ಸ್ಫೋಟಕ ಸತ್ಯ ಬಯಲು: ಲವ್ ಬ್ರೇಕಪ್ ಆಗಿದ್ದಕ್ಕೆ ವಿಷ ಗಿಫ್ಟ್!

ವಿಷ ಲಡ್ಡು ಪ್ರಕರಣದ ಸ್ಫೋಟಕ ಸತ್ಯ ಬಯಲು: ಲವ್ ಬ್ರೇಕಪ್ ಆಗಿದ್ದಕ್ಕೆ ವಿಷ ಗಿಫ್ಟ್!

ಕಾಲೇಜ್ ವ್ಯಾಸ್ಯಾಂಗ ಮಾಡುತ್ತಿರುವಾಗ ಆ ವಿದ್ಯಾರ್ಥಿಗೆ ಡಾಕ್ಟರ್ ಮಗಳ ಮೇಲೆ ಲವ್ ಆಗಿತ್ತು. ವಿದ್ಯಾರ್ಥಿ ಜೀವನದಲ್ಲಿ ಇದು ಸರಿಯಲ್ಲ ಎಂದು ಕಾಲೇಜ್ ಆಡಳಿತ ಮಂಡಳಿ ಬುದ್ದಿ ಹೇಳಿತ್ತು. ಇದರ ಬಳಿಕ ಈತ ಲವ್ ಬ್ರೇಕ್ ಅಪ್ ಆಗಿತ್ತು. ಲವ್ ಬ್ರೇಕ್ ಅಪ್ ಬಳಿಕ ವಿದ್ಯಾರ್ಥಿಯು ಪಾಗಲ್ ಪ್ರೇಮಿ ಆಗಿದ್ದ. ಈ ಪಾಗಲ್ ಪ್ರೇಮಿ ಲವ್ ಬ್ರೇಕ್ ಅಪ್ ಗೆ ಸೇಡು ತೀರಿಸಿಕೊಂಡಿದ್ದು ಮಾತ್ರ ರಣರೋಚಕವಾಗಿದೆ. ಭಗ್ನ ಪ್ರೇಮಿ ತಂದ ಗಂಡಾಂತರ ಕುರಿತು ಒಂದು ವರದಿ ಇಲ್ಲಿದೆ..

ಮಾತ್ರೆಗಳನ್ನು ನೀಡಿದ್ದಕ್ಕೆ ಸಿಟ್ಟಾಗಿ ಶಿವಮೊಗ್ಗ ಎಂಎಲ್​ಸಿ ಹೆಸರಿನಲ್ಲಿ ವೈದ್ಯರಿಗೆ ವಿಷಪೂರಿತ ಸ್ವೀಟ್ಸ್​ ಕಳುಹಿಸಿದ್ದ ಮಾನಸಿಕ ರೋಗಿ ಅರೆಸ್ಟ್​​

ಮಾತ್ರೆಗಳನ್ನು ನೀಡಿದ್ದಕ್ಕೆ ಸಿಟ್ಟಾಗಿ ಶಿವಮೊಗ್ಗ ಎಂಎಲ್​ಸಿ ಹೆಸರಿನಲ್ಲಿ ವೈದ್ಯರಿಗೆ ವಿಷಪೂರಿತ ಸ್ವೀಟ್ಸ್​ ಕಳುಹಿಸಿದ್ದ ಮಾನಸಿಕ ರೋಗಿ ಅರೆಸ್ಟ್​​

ಶಿವಮೊಗ್ಗದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​ಗಳನ್ನು ಕಳುಹಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಸೌಹಾರ್ದ ಪಟೇಲ್ ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಸೌಹಾರ್ದ ಪಟೇಲ್​ ನ್ಯಾಯಾಂಗ ಬಂಧನದಲ್ಲಿದ್ದಾನೆ.

Na D’Souza passes away: ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ

Na D’Souza passes away: ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ

ಖ್ಯಾತ ಕನ್ನಡ ಸಾಹಿತಿ ಡಾ. ನಾ. ಡಿಸೋಜಾ ಅವರು ಇಂದು ಸಂಜೆ 7.50ಕ್ಕೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತೀವ್ರ ನಷ್ಟವಾಗಿದೆ.

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲೂ ಬಾಣಂತಿ ಸಾವು, ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲೂ ಬಾಣಂತಿ ಸಾವು, ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಉತ್ತರ ಕರ್ನಾಟಕದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸರಣಿ ಸಾವಿನ ಆತಂಕ ಇದೀಗ ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸಿದೆ. ಜಿಲ್ಲೆಯಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಸದ್ಯ, ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮತ್ತೊಂದೆಡೆ, ಬಾಣಂತಿಯರ ಸಾವಿನ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಶಿವಮೊಗ್ಗ: ಮಲೆನಾಡಿನಲ್ಲಿ ಮತ್ತೆ ಶುರುವಾದ ಮಂಗನಕಾಯಿಲೆ ಆತಂಕ, ಕೆಎಫ್​ಡಿ ವೈರಸ್ ಪತ್ತೆ

ಶಿವಮೊಗ್ಗ: ಮಲೆನಾಡಿನಲ್ಲಿ ಮತ್ತೆ ಶುರುವಾದ ಮಂಗನಕಾಯಿಲೆ ಆತಂಕ, ಕೆಎಫ್​ಡಿ ವೈರಸ್ ಪತ್ತೆ

ಕಳೆದ ಬೇಸಿಗೆಯಲ್ಲಿ ಶಿವಮೊಗ್ಗ ಸೇರಿದಂತೆ ಮಲೆನಾಡಿನ ವಿವಿಧೆಡೆ ಮಂಗನಕಾಯಿಲೆ ಜನರನ್ನು ಆತಂಕಕ್ಕೀಡುಮಾಡಿತ್ತು. ಇದೀಗ ಈ ವರ್ಷ ಬೇಸಿಗೆ ಆರಂಭದ ಮೊದಲೇ ಮಲೆನಾಡಿನ ಜನರಿಗೆ ಭಯ ಶುರುವಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಉಣುಗುವಿನಲ್ಲಿ ಕೆಎಫ್​ಡಿ ವೈರಸ್ ಕಂಡು ಬಂದಿದ್ದು, ಮತ್ತಷ್ಟು ಆತಂಕಕ್ಕೆ ಎಡೆಮಾಡಿದೆ.

ಹೆಚ್ಚು ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಯುವತಿ ಹೀಗಾ ಮಾಡೋದು..!

ಹೆಚ್ಚು ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಯುವತಿ ಹೀಗಾ ಮಾಡೋದು..!

ಟಿವಿ ರಿಮೋರ್ಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿಯೋರ್ವಳು ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೊನ್ನೆ ಅಷ್ಟೇ ಶಿವಮೊಗ್ಗದಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಮೊಬೈಲ್​ ನೋಡಬೇಡ ಎಂದು ಫೋಷಕರು ಬುದ್ಧಿವಾದ ಹೇಳಿದ್ದಕ್ಕೆ 20 ವರ್ಷದ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆದ್ರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ

ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಲೈಂಗಿಕ‌ ಕಿರುಕುಳ: ಆಡಳಿತಾಧಿಕಾರಿ ವಿರುದ್ಧ ಸಚಿವರಿಗೆ ದೂರು

ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಲೈಂಗಿಕ‌ ಕಿರುಕುಳ: ಆಡಳಿತಾಧಿಕಾರಿ ವಿರುದ್ಧ ಸಚಿವರಿಗೆ ದೂರು

ಶಿವಮೊಗ್ಗ ಜಿಲ್ಲೆಯ ಸೊರಬದ ಖಾಸಗಿ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ಮಂಜುನಾಥ್ ವಿರುದ್ಧ ವಿದ್ಯಾರ್ಥಿಗಳು ಅಸಭ್ಯ ವರ್ತನೆ ಮತ್ತು ಲೈಂಗಿಕ ಕಿರುಕುಳ ಆರೋಪ ಮಾಡಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಮಂಜುನಾಥ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ. ಸಚಿವ ಮಧು ಬಂಗಾರಪ್ಪಗೂ ದೂರು ನೀಡಲಾಗಿದೆ.

ಟಿವಿ ರಿಮೋರ್ಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ!

ಟಿವಿ ರಿಮೋರ್ಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ!

ಪ್ರಸ್ತುತ ದಿನಮಾನಗಳಲ್ಲಿ ಟೀಚರ್ ಹಾಗೂ ಪೋಷಕರು ಮಕ್ಕಳಿಗೆ ಬೈಯುವಂತಿಲ್ಲ. ಬುದ್ಧಿ ಮಾತಿಗೋ, ಇಲ್ಲ ಯಾವುದೋ ಕಾರಣ ದೊಡ್ಡವರು ಸ್ವಲ್ಪ ಬೈದರೆ ಸಾಕು ಮಕ್ಕಳು, ಅಷ್ಟಕ್ಕೆ ಮನನೊಂದುಕೊಂಡುಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಇದರಿಂದ ಶಾಲಾ-ಕಾಲೇಜುಗಳಲ್ಲಿ ಟೀಚರ್ಸ್ ಹಾಗೂ ಮನೆಯಲ್ಲಿ ಪೋಷಕರು , ಮಕ್ಕಳು ತಪ್ಪು ಮಾಡಿದರೂ ಏನು ಮಾಡದ ಸ್ಥಿತಿಯಲ್ಲಿದ್ದಾರೆ. ಅದರಂತೆ ಶಿವಮೊಗ್ಗದಲ್ಲಿ ಟಿವಿ ರಿಮೋಟ್ ವಿಚಾರಕ್ಕೆ ಅಜ್ಜಿ ಬೈದಿದ್ದಕ್ಕೆ ಮೊಮ್ಮಗಳು ಪ್ರಾಣ ಕಳೆದುಕೊಂಡಿದ್ದಾಳೆ.

ಭದ್ರಾವತಿ: ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ, 7 ಜನರಿಗೆ ಗಾಯ, ಓರ್ವ ನಾಪತ್ತೆ

ಭದ್ರಾವತಿ: ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ, 7 ಜನರಿಗೆ ಗಾಯ, ಓರ್ವ ನಾಪತ್ತೆ

ಭದ್ರಾವತಿಯ ಚನ್ನಗಿರಿ ರಸ್ತೆಯ ಗಣೇಶ್ ರೈಸ್ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿ 7 ಜನರು ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾನೆ. ಸ್ಫೋಟದಿಂದ ರೈಸ್ ಮಿಲ್‌ ಸೇರಿದಂತೆ ಸುತ್ತಮುತ್ತಲಿನ ಮನೆಗಳಿಗೂ ಹಾನಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪ್ರವಾಸಿಗರ ಗಮನಕ್ಕೆ: ವಿಶ್ವವಿಖ್ಯಾತ ಜೋಗ ಜಲಪಾತ ಎರಡೂವರೆ ತಿಂಗಳು ಬಂದ್!

ಪ್ರವಾಸಿಗರ ಗಮನಕ್ಕೆ: ವಿಶ್ವವಿಖ್ಯಾತ ಜೋಗ ಜಲಪಾತ ಎರಡೂವರೆ ತಿಂಗಳು ಬಂದ್!

ವಿಶ್ವವಿಖ್ಯಾತ ಜೋಗ ಜಲಪಾತದ ಕಡೆ ಹೋಗುವವರಿಗೆ ಇದು ಅತ್ಯಂತ ಮುಖ್ಯವಾದ ಮಾಹಿತಿ. ಏಕೆಂದರೆ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬರೋಬ್ಬರಿ ಎರಡುವರೆ ತಿಂಗಳು ಜೋಗ ಜಲಪಾತ ವಿಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಹೀಗಾಗಿ ಪ್ರವಾಗರು ಜೋಗಕ್ಕೆ ಹೋಗುವ ಪ್ಲ್ಯಾನ್ ಹಾಕಿದ್ದವರು ಇದನ್ನು ಗಮನಿಸಲೇಬೇಕು. ಹಾಗಾದ್ರೆ, ಜೋಗ ಯಾವಾಗಿನಿಂದ ಬಂದ್? ಕಾರಣವೇನು ಎನ್ನುವ ವಿವರ ಈ ಕೆಳಗಿನಂತಿದೆ.