AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Yaraganavi

Basavaraj Yaraganavi

Author - TV9 Kannada

basavaraj.yaraganavi@tv9.com
ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎಂದ ಸಿಎಂ ಡಿಕೆಶಿ

ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎಂದ ಸಿಎಂ ಡಿಕೆಶಿ

ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಮಳೆ ಇಲ್ಲದೇ ಜಲಾಶಗಳು, ನದಿ, ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಹೀಗಾಗಿ ವ್ಯವಸಾಯಕ್ಕೆ ನೀರಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಈ ಬರದ ಬಗ್ಗೆ ಚಿತ್ರದುರ್ಗದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜಲಾಶಯ, ಕೆರೆಗಳು ತುಂಬದೆ ರೈತರ ವ್ಯವಸಾಯ ಮಾಡಬೇಡಿ ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸಿ ಎಂದು ಕರೆ ನೀಡಿದ್ದಾರೆ.

ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ, ಆಸ್ಪತ್ರೆಗೆ ದಾಖಲು!

ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ, ಆಸ್ಪತ್ರೆಗೆ ದಾಖಲು!

ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 50ರಿಂದ 70 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ವಸತಿ ಶಾಲೆಯಲ್ಲಿ ರಾತ್ರಿ ಅವಲಕ್ಕಿ ಹಾಗೂ ದಾಲ್ ಚಪಾತಿ ತಿಂದಿದ್ದ ವಿದ್ಯಾರ್ಥಿಗಳಲ್ಲಿ ದಿಢೀರ್ ವಾಂತಿ-ಭೇದಿ ಕಾಣಿಸಿಕೊಂಡು ಆರೋಗ್ಯ ಏರುಪೇರಾಗಿತ್ತು. ತಕ್ಷಣವೇ ಅಸ್ವಸ್ಥ ಮಕ್ಕಳನ್ನು ಕೋಣಂದೂರು ಸರ್ಕಾರಿ ಆಸ್ಪತ್ರೆ ಹಾಗೂ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ತುಂಗಾ ತುಂಬಿ ಹರಿಯುತ್ತಿದ್ದರೂ ಶಿವಮೊಗ್ಗದಲ್ಲಿ ನೀರಿಗೆ ಹಾಹಾಕಾರ: ನೀರಿಗಾಗಿ ಜೀವದ ಹಂಗು ತೊರೆದ ಜನರು

ತುಂಗಾ ತುಂಬಿ ಹರಿಯುತ್ತಿದ್ದರೂ ಶಿವಮೊಗ್ಗದಲ್ಲಿ ನೀರಿಗೆ ಹಾಹಾಕಾರ: ನೀರಿಗಾಗಿ ಜೀವದ ಹಂಗು ತೊರೆದ ಜನರು

shivamogga water crisis: ಶಿವಮೊಗ್ಗದ ಮಂಡ್ಲಿ ಕಲ್ಲೂರಿನಲ್ಲಿ ತುಂಗಾ ನದಿ ಹಾಗೂ ಡ್ಯಾಂ ಪಕ್ಕವಿದ್ದರೂ ಕುಡಿಯುವ ನೀರಿಲ್ಲದೆ 57 ಕುಟುಂಬಗಳು ಪರದಾಡುತ್ತಿವೆ. ಕೆಟ್ಟು ನಿಂತ ಬೋರ್‌ವೆಲ್, ಅಪರ್ಯಾಪ್ತ ಟ್ಯಾಂಕರ್ ನೀರು, ಕಲುಷಿತ ತುಂಗಾ ಕಾಲುವೆ ನೀರು ಬಳಸಿ ಜನರು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯದ ನಡುವೆ ನೀರಿಗಾಗಿ ನಿತ್ಯ ಹೋರಾಟ ನಡೆಸುತ್ತಿದ್ದಾರೆ.

ಮತ್ತೋರ್ವ ಆರೋಪಿ ಎಸ್ಕೇಪ್: ಊಟದ ನೆಪ ಒಡ್ಡಿ ಅರಣ್ಯ ಇಲಾಖೆ ಸಿಬ್ಬಂದಿಯನ್ನ ತಳ್ಳಿ ಪರಾರಿ

ಮತ್ತೋರ್ವ ಆರೋಪಿ ಎಸ್ಕೇಪ್: ಊಟದ ನೆಪ ಒಡ್ಡಿ ಅರಣ್ಯ ಇಲಾಖೆ ಸಿಬ್ಬಂದಿಯನ್ನ ತಳ್ಳಿ ಪರಾರಿ

Shivamogga prisoner escape: ಸೋಮವಾರ ಮಧ್ಯರಾತ್ರಿ ಕಲಬುರಗಿ ಸೆಂಟ್ರಲ್​ ಜೈಲಿನಿಂದ ಮೂರು ಸಜಾ ಕೈದಿಗಳು ಎಸ್ಕೇಪ್ ಆಗಿದ್ದರು. ಕಾರಗೃಹ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ವಿರುದ್ದ ಆಕ್ರೋಶ ಉಂಟಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ಎಸ್ಕೇಪ್​ ಆಗಿದ್ದಾನೆ.

‘ಸಿಗಂದೂರು ಸೇತುವೆ’ಗೆ ಒಂದು ವರ್ಷದ ಸಂಭ್ರಮ: ವಿದ್ಯುತ್ ದೀಪಾಲಂಕಾರದ ವೈಭವ

‘ಸಿಗಂದೂರು ಸೇತುವೆ’ಗೆ ಒಂದು ವರ್ಷದ ಸಂಭ್ರಮ: ವಿದ್ಯುತ್ ದೀಪಾಲಂಕಾರದ ವೈಭವ

ಸಾಗರದ ಸಿಗಂದೂರು ಸೇತುವೆಗೆ ಒಂದು ವರ್ಷ. ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾದ ಈ ಐತಿಹಾಸಿಕ ಕೇಬಲ್ ಸೇತುವೆಯ ವಾರ್ಷಿಕೋತ್ಸವವನ್ನು ಮಲೆನಾಡಿನ ಜನತೆ ಹಬ್ಬದಂತೆ ಆಚರಿಸಿದ್ದಾರೆ. ವಿಶೇಷ ವಿದ್ಯುತ್ ದೀಪಾಲಂಕಾರದಿಂದ ಮಿಂಚಿದ ಸೇತುವೆಯ ರಾತ್ರಿಯ ಡ್ರೋನ್ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆ ಒಂದು ವರ್ಷ ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ.

ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೆ ಲಕ್ಷಾಂತರ ರೂ. ವಂಚನೆ: ಕಿಂಗ್‌ಪಿನ್ ರಾಹುಲ್ ಅರೆಸ್ಟ್!

ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೆ ಲಕ್ಷಾಂತರ ರೂ. ವಂಚನೆ: ಕಿಂಗ್‌ಪಿನ್ ರಾಹುಲ್ ಅರೆಸ್ಟ್!

ಶಿವಮೊಗ್ಗ ಜಿಲ್ಲೆಯಲ್ಲಿ ನಕಲಿ ಚಿನ್ನದ ಆಭರಣಗಳನ್ನು ಅಡವಿಟ್ಟು ವಿವಿಧ ಬ್ಯಾಂಕ್ ಹಾಗೂ ಸೌಹಾರ್ದ ಸಹಕಾರಿ ಸಂಘಗಳಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ತೀರ್ಥಹಳ್ಳಿಯ ಕಿಂಗ್‌ಪಿನ್ ಸಹೋದರರಾದ ರಾಹುಲ್ ಮತ್ತು ಲೋಕೇಶ್‌ನನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಪಂಜಾಬ್‌ನ ಅಮೃತಸರದಿಂದ ವಿಮಾನದ ಮೂಲಕ ನಕಲಿ ಕೋಟಿಂಗ್ ಚಿನ್ನ ತಂದು ವಂಚಿಸುತ್ತಿದ್ದ ಮಾಸ್ಟರ್‌ಮೈಂಡ್ ಶರತ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ

ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ

ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್‌ಗಳಿಗೆ 28.87 ಲಕ್ಷ ರೂ. ವಂಚಿಸಿದ ಆರೋಪದ ಮೇಲೆ ಸಹೋದರರಾದ ರಾಹುಲ್ ಮತ್ತು ಲೋಕೇಶ್‌ ಸೇರಿ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಲೋಕೇಶ್‌ ಬಂಧನವಾಗಿದೆ. ಕಿಂಗ್‌ಪಿನ್‌ ರಾಹುಲ್ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶಿವಮೊಗ್ಗ: ಎಸ್​ಐಆರ್ ಪ್ರಕ್ರಿಯೆ ವೇಳೆ ಹೃದಯಾಘಾತದಿಂದ ಮತ್ತೋರ್ವ ಬಿಎಲ್‌ಒ ಸಾವು!

ಶಿವಮೊಗ್ಗ: ಎಸ್​ಐಆರ್ ಪ್ರಕ್ರಿಯೆ ವೇಳೆ ಹೃದಯಾಘಾತದಿಂದ ಮತ್ತೋರ್ವ ಬಿಎಲ್‌ಒ ಸಾವು!

SIR ಕರ್ತವ್ಯಕ್ಕೆ ತೆರಳುವಾಗ ಬೈಕ್​​​ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ವಿಎಒ ಭುವನಾ ಮೃತಪಟ್ಟಿದ್ದಾರೆ. ಬಳಿಕ ಬೀದರ್​ನಲ್ಲಿ ಹೃದಯಾಘಾತದಿಂದ ಬಿಎಲ್‌ಒ ಸಾವನ್ನಪ್ಪಿದ್ದಾರೆ. ಇವೆರಡು ಘಟನೆಗಳು ಮಾಸುವ ಮುನ್ನವೇ ಇಂದು ಭದ್ರಾವತಿ ತಾಲೂಕಿನಲ್ಲಿ ಕರ್ತವ್ಯ ವೇಳೆ ಮತ್ತೋರ್ವ ಬಿಎಲ್‌ಒ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೊಸನಗರದಲ್ಲಿ ಅಮಾನವೀಯ ಕೃತ್ಯ: ನಿರ್ಜನ ಪ್ರದೇಶದಲ್ಲಿ ನವಜಾತ ಹೆಣ್ಣು ಶಿಶು ಬಿಟ್ಟುಹೋದ ಅಪರಿಚಿತರು!

ಹೊಸನಗರದಲ್ಲಿ ಅಮಾನವೀಯ ಕೃತ್ಯ: ನಿರ್ಜನ ಪ್ರದೇಶದಲ್ಲಿ ನವಜಾತ ಹೆಣ್ಣು ಶಿಶು ಬಿಟ್ಟುಹೋದ ಅಪರಿಚಿತರು!

Shivamogga News: ಇನ್ನು 1.6 ಕೆಜಿ ತೂಕವಿರುವ ಹೆಣ್ಣು ಶಿಶುವಿಗೆ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಆರೈಕೆ ನೀಡಿ ಬಳಿಕ ಚಿಕಿತ್ಸೆ ಹಾಗೂ ಪಾಲನೆಗಾಗಿ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ . ​ಮಗುವನ್ನು ಯಾರು ಮತ್ತು ಯಾವ ಕಾರಣಕ್ಕಾಗಿ ಇಲ್ಲಿ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ರಿಪ್ಪನಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ವಿಶ್ವ ವಿಖ್ಯಾತ  ಜೋಗ್ ಫಾಲ್ಸ್  ಗೆ ರಾಜಕಳೆ, ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆತ

ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ, ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆತ

ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ  ( Jog falls) ಮತ್ತೆ ರಾಜಕಳೆ ಬಂದಿದೆ. ಹೌದು....ಜುಲೈ ಆರಂಭದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೋಗ ಜಲಪಾತದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆಯುತ್ತಿದ್ದು, ಈ ಅದ್ಭುತ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.

ಈ ಬಾರಿ ಮಳೆಗಾಲದಲ್ಲಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ

ಈ ಬಾರಿ ಮಳೆಗಾಲದಲ್ಲಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ

ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂದ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. 3.24 ಟಿಎಂಸಿ ಸಾಮರ್ಥ್ಯ ಗಾಜನೂರಿನ ತುಂಗಾ ಜಲಾಶಯವು ಪ್ರತಿ ವರ್ಷ ಜೂನ್ ಮೊದಲ ವಾರದಲ್ಲಿ ಭರ್ತಿಯಾಗುತ್ತಿತ್ತು. ಆದ್ರೆ ಬಾರಿ ಆರಂಭದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಒಂದು ತಿಂಗಳು ತಡವಾಗಿ ಅಂದ್ರೆ ಜುಲೈ ಮೊದಲ ವಾರದಲ್ಲಿ ತುಂಗಾ ಜಲಾಶಯ ತುಂಬಿದೆ.

ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಒಣಮರದ ರೆಂಬೆ; ಸ್ಥಳದಲ್ಲೇ ಯುವಕ ಸಾವು, ಮತ್ತೊಬ್ಬ ಗಂಭೀರ

ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಒಣಮರದ ರೆಂಬೆ; ಸ್ಥಳದಲ್ಲೇ ಯುವಕ ಸಾವು, ಮತ್ತೊಬ್ಬ ಗಂಭೀರ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಭೀಕರ ಬೈಕ್ ದುರಂತ ಸಂಭವಿಸಿದೆ. ತಾರಿಗ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ರಸ್ತೆ ಬದಿಯಲ್ಲಿದ್ದ ಒಣಮರದ ದೊಡ್ಡ ರೆಂಬೆ ಮುರಿದು ಬಿದ್ದ ಕಾರಣ 26 ವರ್ಷದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೀನು ಹಿಡಿಯಲು ಹೊರಟಿದ್ದ ಸಂದರ್ಭದಲ್ಲಿ ನಡೆದ ಈ ಘಟನೆಯಲ್ಲಿ, ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ವೀರಭದ್ರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ