ಕಳ್ಳರು ಚಿನ್ನ, ಬೆಳ್ಳಿ, ಬೈಕ್ ಸೇರಿದಂತೆ ಬೆಳೆಬಾಳುವ ವಸ್ತುಗಳನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಸುದ್ದಿಗಳಾಗುತ್ತಿರುತ್ತವೆ. ಆದರೆ, ಶಿವಮೊಗ್ಗ ನಗರದಲ್ಲಿ ಮೊಬೈಲ್ ಟವರನ್ನೇ ಗಪ್ ಚುಪ್ ಆಗಿ ಕದ್ದೊಯ್ದಿರುವ ಪ್ರಕರಣ ಬೆಳಕಿಗೆ ಬಂದಿದೆ! ಮೊಬೈಲ್ ಟವರ್ ಕಳ್ಳತನ ಪ್ರಕರಣದ ಅಚ್ಚರಿಯ ಮಾಹಿತಿ ಇಲ್ಲಿದೆ.
ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರ ತಪಾಸಣೆ ವೇಳೆ ಚಾಲಕನೊಬ್ಬ ಪೊಲೀಸ್ ಅಧಿಕಾರಿಯನ್ನು ಕಾರಿನ ಬಾನೆಟ್ ಮೇಲೆ ಹತ್ತಿಸಿಕೊಂಡು 100 ಮೀಟರ್ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿದ್ದಾನೆ.
ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರ ತಪಾಸಣೆ ವೇಳೆ ಚಾಲಕನೊಬ್ಬ ಪೊಲೀಸ್ ಅಧಿಕಾರಿಯನ್ನು ಕಾರಿನ ಬಂಪರ್ ಮೇಲೆ ಹತ್ತಿಸಿಕೊಂಡು 100 ಮೀಟರ್ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿದ್ದಾನೆ. ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಮಿಥುನ್ ಜಗದಾಳೆ ಎಂಬಾತನನ್ನು ಬಂಧಿಸಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಡಿ ಧಾರಾಕಾರ ಮಳೆ ಸುರಿದ ಪರಿಣಾಮ ಕೋಳಿ ಫಾರಂಗೆ ಕೆರೆ ನೀರು ನುಗ್ಗಿದೆ. ಸಾವಿರಾರು ಕೋಳಿ ಮರಿ ಸಾವನ್ನಪ್ಪಿವೆ.
ಬಿಗ್ಬಾಸ್ ಕನ್ನಡ ಸೀಸನ್ 11 ಆರಂಭವಾದಾಗಿನಿಂದಲೂ ಒಂದಲ್ಲ ಒಂದು ವಿವಾದಕ್ಕೆ ಗುರಿ ಆಗುತ್ತಲೇ ಇದೆ. ಈ ಹಿಂದೆ ಮಹಿಳಾ ಆಯೋಗ, ಮಾನವಹ ಹಕ್ಕು ಆಯೋಗಗಳು ಬಿಗ್ಬಾಸ್ಗೆ ನೊಟೀಸ್ಗೆ ನೀಡಿದ್ದವು. ಈಗ ಬಿಗ್ಬಾಸ್ ಶೋ ಅನ್ನು ನಿಲ್ಲಿಸಬೇಕೆಂದು ವಕೀಲರೊಬ್ಬರು ಅರ್ಜಿ ಹೂಡಿದ್ದು, ನ್ಯಾಯಾಲಯವು ಬಿಗ್ಬಾಸ್ಗೆ ನೊಟೀಸ್ ನೀಡಿದೆ.
ಪ್ರಸಿದ್ಧ ವ್ಯಕ್ತಿಯ ಹುಟ್ಟು ಹಬ್ಬಕ್ಕೆ ಕೆಜಿ ಗಟ್ಟಲೇ ಕೇಕ್ ತಂದು ಕಟ್ ಮಾಡಿ ಆಚರಿಸಿಕೊಳ್ಳುವುದು ಸರ್ವೆ ಸಾಮಾನ್ಯ. ಆದರೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ತಾಂಡದಲ್ಲಿ ಗೂಳಿಯ ಜನ್ಮದಿನಕ್ಕೆ 20 ಕೆಜಿ ಕೇಕ್ ತಂದು ಹುಟ್ಟಿದ ಹಬ್ಬ ಆಚರಿಸಲಾಗಿದೆ.
ಬಾಂಗ್ಲಾ ಪ್ರಜೆಗಳ ಬಳಿ ಮಂಗಳೂರು ವಿಳಾಸ ಇರುವ ಆಧಾರ್ ಕಾರ್ಡ್ ಪತ್ತೆ ಆಗಿದೆ. ಕೆಲಸಕ್ಕೆ ಮೇಸ್ತ್ರಿ ಕರೆದುಕೊಂಡು ಬಂದಿರುವ ಬಗ್ಗೆ ಮಾಹಿತಿ ಇದೆ. ಬಾಂಗ್ಲಾದೇಶದ 7 ಪ್ರಜೆಗಳನ್ನ ಜಯನಗರ ಠಾಣೆಗೆ ಕರೆದೊಯ್ದ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಂದಿನಿಂದ ಮತ್ತೊಂದು ವಿಮಾನ ಹಾರಾಟ ಆರಂಭವಾಗಿದೆ. ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್ಗೆ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ ತೋರಿದ್ದಾರೆ. ಆ ಮೂಲಕ ಶಿವಮೊಗ್ಗ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ರೋಗಿಯನ್ನು ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ಬಂದ್ರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ. ಜೀವ ಉಳಿಸಬೇಕಾಗಿದ್ದ ಆಸ್ಪತ್ರೆಯ ವೈದ್ಯರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲಿಲ್ಲ. ಇದರಿಂದ ರೋಗಿಯು ಒದ್ದಾಡಿ ಒದ್ದಾಡಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾನೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯರ ಯಡವಟ್ಟು ಕುರಿತು ಒಂದು ವರದಿ ಇಲ್ಲಿದೆ.
ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಮೈಸೂರು ಬಿಟ್ಟರೇ ಅದ್ದೂರಿ ದಸರಾ ನೋಡಲು ಸಿಗುವುದು ಶಿವಮೊಗ್ಗ ನಗರದಲ್ಲಿ. ದಶಕಗಳಿಂದ ಶಿವಮೊಗ್ಗದಲ್ಲಿ ದಸರಾ ಜಂಬೂ ಸವಾರಿಯು ಅದ್ಧೂರಿಯಾಗಿ ನಡೆಯುತ್ತಿದೆ. ಹೀಗಾಗಿ ಶಿವಮೊಗ್ಗ ದಸರಾ ಹಬ್ಬಕ್ಕಾಗಿ ಮೂರು ಆನೆಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಶಿವಮೊಗ್ಗದ ಜಂಬೂ ಸವಾರಿಗಾಗಿ ಸಕ್ರೆಬೈಲು ಆನೆ ಬಿಡಾರದಿಂದ ಆನೆಗಳು ಬರಲಿವೆ.
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ ಶಿಮುಲ್ 7 ಕೋಟಿ ರೂ. ನಷ್ಟದಲ್ಲಿದ್ದು, ಅದರಿಂದ ಹೊರಬರಲು ಖರೀದಿ ದರ ಇಳಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಆ ಮೂಲ ನಷ್ಟದ ನೆಪ ಹೇಳಿ ರೈತರಿಂದ ಖರೀದಿಸುವ ಹಾಲಿನ ದರ ಇಳಿಕೆ ಮಾಡಿದೆ. 33.03 ರೂ.ಗೆ ಹಾಲು ಉತ್ಪಾದಕರ ಸೊಸೈಟಿಗಳಿಂದ ಶಿಮುಲ್ ಖರೀದಿಸುತ್ತಿದೆ.