AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Yaraganavi

Basavaraj Yaraganavi

Author - TV9 Kannada

basavaraj.yaraganavi@tv9.com
ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ

ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಸಾವನ್ನಪ್ಪಿದ್ದು, ಹೃದಯಾಘಾತದ ಶಂಕೆ ವ್ಯಕ್ತವಾಗಿದೆ. ಆಟವಾಡುತ್ತಿದ್ದಾಗ ಕುಸಿದು ಬಿದ್ದ ತ್ರಿಲೋಕ್‌ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಇದು ಹಠಾತ್ ನಿಧನವೋ ಅಥವಾ ಆರೋಗ್ಯ ಸಮಸ್ಯೆಯಿತ್ತೇ ಎಂಬ ಕುರಿತು ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಸಕ್ರೆಬೈಲಿನಲ್ಲಿ ಒಡೆಯನಿಲ್ಲದೆ ‘ಭೀಷ್ಮ’ ಆನೆ ಅನಾಥ: ಹೆತ್ತ ಮಗನಂತೆ ಸಾಕಿ ಸಲಹುತ್ತಿದ್ದ ಮಾವುತ ಸಿದ್ದಿಕ್ ಪಾಷಾ ಇನ್ನಿಲ್ಲ

ಸಕ್ರೆಬೈಲಿನಲ್ಲಿ ಒಡೆಯನಿಲ್ಲದೆ ‘ಭೀಷ್ಮ’ ಆನೆ ಅನಾಥ: ಹೆತ್ತ ಮಗನಂತೆ ಸಾಕಿ ಸಲಹುತ್ತಿದ್ದ ಮಾವುತ ಸಿದ್ದಿಕ್ ಪಾಷಾ ಇನ್ನಿಲ್ಲ

ಸಕ್ರೆಬೈಲು ಆನೆ ಬಿಡಾರದ ದಕ್ಷ ಮಾವುತ ಸಿದ್ದಿಕ್ ಪಾಷಾ ಅವರ ಅಕಾಲಿಕ ನಿಧನವು ಇಡೀ ಬಿಡಾರದಲ್ಲಿ ಸೂತಕದ ಛಾಯೆ ಮೂಡಿಸಿದೆ. 16 ವರ್ಷಗಳಿಂದ ಕಾಡಾನೆಗಳನ್ನು ಪಳಗಿಸಿ, ಆರೈಕೆ ಮಾಡುತ್ತಿದ್ದ ಸಿದ್ದಿಕ್, ವಿಶೇಷವಾಗಿ ಬಲಿಷ್ಠ ಭೀಷ್ಮ ಆನೆಯ ಜವಾಬ್ದಾರಿ ಹೊತ್ತಿದ್ದರು. ಮೆದುಳು ಜ್ವರದಿಂದ ನಿಧನರಾದ ಅವರ ಅಗಲಿಕೆಯಿಂದಾಗಿ ಆನೆಗಳು ಹಾಗೂ ಸಿಬ್ಬಂದಿ ದುಃಖದಲ್ಲಿ ಮುಳುಗಿದ್ದಾರೆ, ಮಾವುತ-ಆನೆಗಳ ನಡುವಿನ ಪವಿತ್ರ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ.

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜೂನ್ 15 ರಿಂದಲೇ ಆದೇಶ ಜಾರಿ, ಪರ್ಯಾಯ ಮಾರ್ಗ ಇಲ್ಲಿದೆ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜೂನ್ 15 ರಿಂದಲೇ ಆದೇಶ ಜಾರಿ, ಪರ್ಯಾಯ ಮಾರ್ಗ ಇಲ್ಲಿದೆ

ಮಳೆಗಾಲದ ಹಿನ್ನೆಲೆಯಲ್ಲಿ ಜೂನ್ 15 ರಿಂದ ಮುಗಿಯುವವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಭೂಕುಸಿತ ಮತ್ತು ಅಪಘಾತಗಳನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದ್ದು, ಉಡುಪಿ ಹಾಗೂ ಶಿವಮೊಗ್ಗ ನಡುವೆ ಸಂಚರಿಸುವ ವಾಹನಗಳಿಗೆ ಕೊಲ್ಲೂರು ಮತ್ತು ಶೃಂಗೇರಿ ಜಾಗೋಳಿ ಮಾರ್ಗವಾಗಿ ಪರ್ಯಾಯ ರಸ್ತೆಗಳನ್ನು ಕಲ್ಪಿಸಲಾಗಿದೆ.

ಜೈಲಿನಲ್ಲಿ ಕುಳಿತು ಪತ್ನಿ ಕೊಲೆಗೆ ಸ್ಕೆಚ್: ಶಿವಮೊಗ್ಗದಲ್ಲಿ ನಾಲ್ವರು ಬುರ್ಖಾ ಹಾಕಿಕೊಂಡು ಬಂದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಜೈಲಿನಲ್ಲಿ ಕುಳಿತು ಪತ್ನಿ ಕೊಲೆಗೆ ಸ್ಕೆಚ್: ಶಿವಮೊಗ್ಗದಲ್ಲಿ ನಾಲ್ವರು ಬುರ್ಖಾ ಹಾಕಿಕೊಂಡು ಬಂದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಶಿವಮೊಗ್ಗದ ಕೆ.ಆರ್. ಪುರಂನಲ್ಲಿ, ಜೈಲಿನಲ್ಲಿದ್ದ ಕೊಲೆ ಆರೋಪಿಯೊಬ್ಬ ತನ್ನ ಪತ್ನಿ ಮೇಲೆ ದಾಳಿ ಮಾಡಲು ಬುರ್ಖಾಧಾರಿ ಗ್ಯಾಂಗ್ ಕಳುಹಿಸಿದ್ದಾನೆ. ಐಷಾರಾಮಿ ಜೀವನಕ್ಕೆ ಹಣ ನೀಡುತ್ತಿಲ್ಲವೆಂದು ಪತ್ನಿ ಮೇಲೆ ಆಕ್ರೋಶಗೊಂಡಿದ್ದ ಪತಿ ಈ ಷಡ್ಯಂತ್ರ ಹೆಣೆದಿದ್ದ. ಆದರೆ, ಸ್ಥಳೀಯ ನಾಗರಿಕರ ಸಮಯಪ್ರಜ್ಞೆಯಿಂದ ಬುರ್ಖಾ ಗ್ಯಾಂಗ್ ಸಿಕ್ಕಿಬಿದ್ದು, ಪೊಲೀಸರಿಗೆ ಒಪ್ಪಿಸಲಾಗಿದೆ. ಇವರ ಸಮಯೋಚಿತ ನಡೆಯಿಂದ ಮಹಿಳೆಯ ಪ್ರಾಣ ಉಳಿದಿದೆ.

ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿಯಲ್ಲಿ ಮಹಾ ಯಡವಟ್ಟು: ಕಿರಿದಾದ ಮಣ್ಣಿನ ರಸ್ತೆಯಲ್ಲಿ ಲಾಕ್ ಆಯ್ತು ಗ್ಯಾಸ್ ಟ್ಯಾಂಕರ್

ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿಯಲ್ಲಿ ಮಹಾ ಯಡವಟ್ಟು: ಕಿರಿದಾದ ಮಣ್ಣಿನ ರಸ್ತೆಯಲ್ಲಿ ಲಾಕ್ ಆಯ್ತು ಗ್ಯಾಸ್ ಟ್ಯಾಂಕರ್

ಶಿವಮೊಗ್ಗ-ತುಮಕೂರು ರಾಷ್ಟ್ರೀಯ ಹೆದ್ದಾರಿ 206 ಕಾಮಗಾರಿಯಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಜನರಿಗೆ ತೀವ್ರ ತೊಂದರೆಯಾಗಿದೆ. ಕಿರಿದಾದ ತಾತ್ಕಾಲಿಕ ರಸ್ತೆಯಲ್ಲಿ ಅನಿಲ ಟ್ಯಾಂಕರ್ ನಿಯಂತ್ರಣ ಕಳೆದುಕೊಂಡು ಪ್ರಪಾತಕ್ಕೆ ಬೀಳುವುದರಿಂದ ಕೂದಲೆಳೆ ಅಂತರದಲ್ಲಿ ಭೀಕರ ದುರಂತ ತಪ್ಪಿದೆ. ಐದು ವರ್ಷಗಳಿಂದ ಸರ್ವಿಸ್ ರಸ್ತೆ ಇಲ್ಲದೆ ಗ್ರಾಮಸ್ಥರು ಆತಂಕದಲ್ಲಿದ್ದು, ಜಿಲ್ಲಾಡಳಿತದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಘಟನೆ ರಸ್ತೆ ಸುರಕ್ಷತೆ ಮತ್ತು ಕಾಮಗಾರಿ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಶಿವಮೊಗ್ಗದಲ್ಲಿ ವಿಶಿಷ್ಟ ಮಾವಿನ ಖಾದ್ಯಗಳ ಸ್ಪರ್ಧೆ: ಕೈಚಳಕ ತೋರಿಸಿದ ಮಹಿಳೆಯರು; ಇಲ್ಲಿವೆ ಫೋಟೋಸ್​

ಶಿವಮೊಗ್ಗದಲ್ಲಿ ವಿಶಿಷ್ಟ ಮಾವಿನ ಖಾದ್ಯಗಳ ಸ್ಪರ್ಧೆ: ಕೈಚಳಕ ತೋರಿಸಿದ ಮಹಿಳೆಯರು; ಇಲ್ಲಿವೆ ಫೋಟೋಸ್​

ಶಿವಮೊಗ್ಗದಲ್ಲಿ ನಡೆದ ಮಾವಿನಹಣ್ಣಿನ ಡೆಸರ್ಟ್ ಸ್ಪರ್ಧೆಯಲ್ಲಿ ಮಹಿಳೆಯರು ತಮ್ಮ ಅದ್ಭುತ ಕೈಚಳಕ ಪ್ರದರ್ಶಿಸಿದರು. ಮಾವಿನ ಲಡ್ಡು, ಮ್ಯಾಂಗೋ ಮೂಸ್, ಚೀಸ್ ಕೇಕ್ ಸೇರಿದಂತೆ ತರಹೇವಾರಿ ಖಾದ್ಯಗಳು ಎಲ್ಲರ ಕಣ್ಮನ ಸೆಳೆದವು. ಬಿವಿಐ ಮತ್ತು ಜೆಸಿಐ-ವಿವೇಕ್ ಸಂಸ್ಥೆಗಳು ಆಯೋಜಿಸಿದ್ದ ಈ ಸ್ಪರ್ಧೆ, ಆಹಾರ ಪ್ರಿಯರಿಗೆ ಹೊಸ ಅನುಭವ ನೀಡಿದೆ. ಫೋಟೋಸ್​ ಇಲ್ಲಿವೆ ನೋಡಿ.

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ಎಂದ ವಿಜಯೇಂದ್ರ

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ಎಂದ ವಿಜಯೇಂದ್ರ

ಸಿದ್ದರಾಮಯ್ಯ ರಾಜೀನಾಮೆ ನೀಡಿದರೂ ಹೊಸ ಮುಖ್ಯಮಂತ್ರಿ ತಾತ್ಕಾಲಿಕ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್‌ನ ಆಂತರಿಕ ಕಚ್ಚಾಟ ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆಗೆ ಕಾರಣವಾಗಲಿದೆ. ಹೈಕಮಾಂಡ್ ನಿರ್ಧಾರದಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಶಿವಮೊಗ್ಗ KSCA ಮೈದಾನದಲ್ಲಿ ಅಕ್ಷಯ್ ಅಂತಿಮ ದರ್ಶನ

ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಶಿವಮೊಗ್ಗ KSCA ಮೈದಾನದಲ್ಲಿ ಅಕ್ಷಯ್ ಅಂತಿಮ ದರ್ಶನ

ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ (39) ಭಾನುವಾರ ನಡೆದ ಕೆಎಸ್‌ಸಿಎ ಡಿವಿಷನ್ 3 ಕ್ರಿಕೆಟ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ ಬಳಿಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗ ಮೂಲದ ಅಕ್ಷಯ್, ವಿನಯ್ ಕುಮಾರ್ ಅವರಂತಹ ದಿಗ್ಗಜರಿದ್ದ ಕಾಲದಲ್ಲೂ ಕರ್ನಾಟಕ ಪರ 6 ಪ್ರಥಮ ದರ್ಜೆ, 3 ಲಿಸ್ಟ್ 'ಎ' ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದರು. ನಿವೃತ್ತಿಯ ನಂತರ ರಾಜ್ಯ ಅಂಡರ್-19 ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಇಂದು (ಮೇ 25) ಅಕ್ಷಯ ಪಾರ್ಥಿವ ಶರೀರ ಹುಟ್ಟೂರಿಗೆ ಆಗಮಿಸಿದ್ದು, ಶಿವಮೊಗ್ಗ KSCAಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸರಗಳ್ಳತನ ಮಾಡಿ ಮದುವೆಯಾಗಿ ಹತ್ತೇ ದಿನಕ್ಕೆ  ಜೈಲುಪಾಲಾದ ಶಿವಮೊಗ್ಗದ ನವ ವಿವಾಹಿತ!

ಸರಗಳ್ಳತನ ಮಾಡಿ ಮದುವೆಯಾಗಿ ಹತ್ತೇ ದಿನಕ್ಕೆ ಜೈಲುಪಾಲಾದ ಶಿವಮೊಗ್ಗದ ನವ ವಿವಾಹಿತ!

ಶಿವಮೊಗ್ಗದ ಅಬ್ಬಲಗೇರಿಯಲ್ಲಿ ಕಾರಿನಲ್ಲಿ ಬಂದು ಪ್ರೇಮಿಗಳ ಸರ ಕದ್ದಿದ್ದ ಹೈಟೆಕ್ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿವಾಹವಾಗಿ ಹತ್ತೇ ದಿನಕ್ಕೆ ಈ ನವವಿವಾಹಿತ ಶೋಕಿಗಾಗಿ ಕಳ್ಳತನ ಮಾಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಕೃತ್ಯಕ್ಕೆ ಆರೋಪಿ ಬಳಸಿದ್ದ ಕಾರನ್ನೂ ಪತ್ತೆ ಮಾಡಲಾಗಿದೆ. ಮದುವೆಗೆ ಮಾಡಿದ್ದ ಅಲಂಕಾರ ಕಾರಿಗೆ ಇನ್ನೂ ಹಾಗೆಯೇ ಇರುವುದು ಕಂಡುಬಂದಿದೆ.

ಕರ್ನಾಟಕ ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ

ಕರ್ನಾಟಕ ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬಿಜೆಪಿ ಮುಖಂಡ ಮತ್ತು ವಕೀಲ ಭರತ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಪತಿಯ ಸ್ನೇಹಿತನೆಂದು ಪರಿಚಯಿಸಿಕೊಂಡು ಮಹಿಳೆ ಮೇಲೆ ದೌರ್ಜನ್ಯ ಎಸಗಲಾಗಿದೆ ಎನ್ನಲಾಗುತ್ತಿದೆ. ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭರತ್ ಪರಾರಿಯಾಗಿದ್ದಾನೆ. ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ಘಟನೆ ಭದ್ರಾವತಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ, ತಿಂಗಳಾದರೂ ಸಿಗದ ಸುಳಿವು

ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ, ತಿಂಗಳಾದರೂ ಸಿಗದ ಸುಳಿವು

ತಾಯಿ ಬೈದಿದ್ದಕ್ಕೆ ಮನನೊಂದು ಅಪ್ರಾಪ್ತ ಸಹೋದರಿಯರು ಮನೆ ಬಿಟ್ಟು ನಾಪತ್ತೆಯಾಗಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ಶಿವಮೊಗ್ಗದಲ್ಲಿ ಒಂದೇ ಕುಟುಂಬದ ನಾಲ್ವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಒಂದು ತಿಂಗಳಿಂದ ನಾಲ್ವರು ನಾಪತ್ತೆಯಾಗಿದ್ದು, ಇದುವರೆಗೂ ಸುಳಿವು ಇಲ್ಲ. ಇದರಿಂದ ಸಂಬಂಧಿಕರು ಆತಂಕಗೊಂಡಿದ್ದು, ಅಂತಿಮವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಶಾಪಿಂಗ್ ಮಾಲ್​​​ನ ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ಹೇಗೆ ನೋಡಿ

ಶಾಪಿಂಗ್ ಮಾಲ್​​​ನ ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ಹೇಗೆ ನೋಡಿ

ಶಾಪಿಂಗ್ ಮಾಡಲೇಂದು ತೆರಳಿದ್ದ 9 ಜನರು ಲಿಫ್ಟ್​​ನಲ್ಲಿ ಸಿಲುಕಿ ಪರದಾಡಿರುವ ಘಟನೆ ಶಿವಮೊಗ್ಗ ನಗರದ (Shivamogga) ಶಾಪಿಂಗ್ ಮಾಲ್​​​​​ನಲ್ಲಿ ನಡೆದಿದೆ. ಶಿವಮೊಗ್ಗ ನಗರದ ಆಲ್ಕೋಳ ವೃತ್ತದ ಬಳಿ ಇರುವ ಶಾಪಿಂಗ್ ಮಾಲ್ ನ ಲಿಫ್ಟ್​​ನಲ್ಲಿ ಅರ್ಧ ಗಂಟೆ ಕಾಲ ಸಿಲುಕಿದ್ದು, ಕೊನೆಗೆ ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಟ್ಟು ರಕ್ಷಣೆ ಮಾಡಿದ್ದಾರೆ.

ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ