ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಇಂಧನ ಕೊರತೆ ಭೀತಿ ಮೂಡಿದ ಹಿನ್ನೆಲೆ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ಗೆ ಜನ ಮುಗಿಬಿದ್ದಿದ್ದಾರೆ. ರಿಪ್ಪನ್ಪೇಟೆಯಲ್ಲಿ ಒಟ್ಟು 4 ಪೆಟ್ರೋಲ್ ಬಂಕ್ಗಳಿವೆ. ಮೂರು ಬಂಕ್ಗಳಲ್ಲಿ ಪೆಟ್ರೋಲ್, ಡೀಸೆಲ್ ಖಾಲಿಯಾದ ಹಿನ್ನೆಲೆ ಶಿವಮೊಗ್ಗ ರಸ್ತೆಯ ಹೆಚ್ಪಿ ಬಂಕ್ನಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತು ಇಂಧನ ಪಡೆದಿದ್ದಾರೆ.
- Basavaraj Yaraganavi
- Updated on: Mar 21, 2026
- 10:24 am
ಆ್ಯಂಬ್ಯುಲೆನ್ಸ್ ಕಾರು ನಡುವೆ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!
ಶಿವಮೊಗ್ಗದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬ್ರೀಜಾ ಕಾರು ಆಂಬ್ಯುಲೆನ್ಸ್ಗೆ ಡಿಕ್ಕಿ ಹೊಡೆದು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್, ದೊಡ್ಡ ಪ್ರಾಣಾಪಾಯ ತಪ್ಪಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ವೈರಲ್ ಆಗಿದ್ದು, ಪೂರ್ವ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
- Basavaraj Yaraganavi
- Updated on: Mar 20, 2026
- 1:33 pm
ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ: ತನಿಖೆಗೆ ಸಚಿವರ ಆದೇಶ
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ದಾರುಣವಾಗಿ ಮೃತಪಟ್ಟಿದ್ದಾರೆ. ದೇಹದ ಉಷ್ಣತೆಯನ್ನು ಪರೀಕ್ಷಿಸಲು ತೆರಳಿದ್ದ ವೇಳೆ ಗರ್ಭಿಣಿ ನೀರಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಅರಣ್ಯ ಸಚಿವರಿಂದ ತನಿಖಗೆ ಆದೇಶವಾಗಿದೆ.
- Basavaraj Yaraganavi
- Updated on: Mar 21, 2026
- 8:49 am
ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ
ಶಿವಮೊಗ್ಗದಲ್ಲಿ ಮದುವೆ ಸಮಾರಂಭಗಳಲ್ಲಿ ಸರಣಿ ಚಿನ್ನಾಭರಣ ಕಳ್ಳತನ ನಡೆಸುತ್ತಿದ್ದ ಬುರ್ಖಾಧಾರಿ ಕಳ್ಳಿ ರುಕ್ಸಾರ್ ಫಿರ್ದೋಸ್ ಅನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಇಲಿಯಾಜ್ ನಗರದ ಶಾದಿ ಮಹಲ್ನಲ್ಲಿ ಸಿಸಿಟಿವಿ ದೃಶ್ಯಾವಳಿಗಳಿಂದ ಸುಳಿವು ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, 120 ಗ್ರಾಂ ಚಿನ್ನಾಭರಣ (ಸುಮಾರು ₹18 ಲಕ್ಷ ಮೌಲ್ಯದ) ವಶಪಡಿಸಿಕೊಂಡಿದ್ದಾರೆ. ಈ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣಗಳು ಭೇದಿಸಲ್ಪಟ್ಟಿವೆ.
- Basavaraj Yaraganavi
- Updated on: Mar 11, 2026
- 7:50 am
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್ ಒಡೆದು ಕಿಡಿಗೇಡಿಗಳಿಂದ ವಿಕೃತಿ
ಶಿವಮೊಗ್ಗ ನಗರದಲ್ಲಿ ಗಾಂಜಾ ಅಮಲಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಶರಾವತಿ ನಗರದ ಹಂದಿಜೋಗಿ ಕ್ಯಾಂಪ್ನಲ್ಲಿ ಹೊಸ ಕಾರೊಂದನ್ನು ಜಖಂಗೊಳಿಸಿದ್ದಾರೆ. ನಿನ್ನೆ ತಡರಾತ್ರಿ ನಡೆದ ಈ ಘಟನೆ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ. ಪುಂಡರ ಹಾವಳಿಯಿಂದ ಬೇಸತ್ತ ಸ್ಥಳೀಯರು ಪೊಲೀಸ್ ಇಲಾಖೆಗೆ ಸೂಕ್ತ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Basavaraj Yaraganavi
- Updated on: Mar 4, 2026
- 1:56 pm
ಸಚಿವರ ಬರ್ತ್ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಲಾಗಿದೆ. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
- Basavaraj Yaraganavi
- Updated on: Mar 2, 2026
- 8:37 pm
ಶಿವಮೊಗ್ಗ: ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರದಲ್ಲಿ ಗಲಾಟೆ-ಕಲ್ಲು ತೂರಾಟ, 10 ಜನರ ಬಂಧನ
ಶಿವಮೊಗ್ಗದ ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರವಾಗಿ ಮುಸ್ಲಿಮರ 2 ಗುಂಪುಗಳ ನಡುವೆ ವಾಗ್ವಾದ ನಡೆದು ಅದು ವಿಕೋಪಕ್ಕೆ ತಿರುಗಿದ ಪರಿಣಾಮ ರಸ್ತೆಯಲ್ಲಿ ಕಲ್ಲು ತೂರಾಟ ನಡೆದಿದೆ. ಎರಡೂ ಗುಂಪುಗಳು ಪರಸ್ಪರ ಬಡಿಗೆಗಳಿಂದ ಹೊಡೆದಾಡಿಕೊಂಡಿವೆ. ಸದ್ಯ ಘಟನೆ ಸಂಬಂಧ 10 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪಟ್ಟಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
- Basavaraj Yaraganavi
- Updated on: Mar 2, 2026
- 2:17 pm
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ ಸಿದ್ದರಾಮಯ್ಯ
ಇಸ್ರೇಲ್ ಮತ್ತು ಅಮೆರಿಕದ ಇರಾನ್ ಮೇಲಿನ ದಾಳಿ ಅನಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದೆಡೆ ಶಾಂತಿ ಮಂತ್ರ ಪಠಿಸಿ, ಮತ್ತೊಂದೆಡೆ ಯುದ್ಧವನ್ನು ಪ್ರಚೋದಿಸುವ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಸಿಎಂ ಖಂಡಿಸಿದ್ದಾರೆ. ಅಯತೊಲ್ಲಾ ಖೊಮೇನಿ ಅವರ ಸಾವಿನ ವರದಿ ಖಂಡನೀಯವಾಗಿದ್ದು, ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಂಡಿದೆ.
- Basavaraj Yaraganavi
- Updated on: Mar 1, 2026
- 3:38 pm
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್
ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಹುಲಿಕಲ್ ಬಾಳೆಬರೇ ಘಾಟಿಯಲ್ಲಿ ಬೆಂಕಿಗಾಹುತಿಯಾಗಿದೆ. ಇಂಜಿನ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಭಸ್ಮವಾಗಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆ ಹಾಗೂ ಪ್ರಯಾಣಿಕರ ಅರಿವಿನಿಂದ 20ಕ್ಕೂ ಹೆಚ್ಚು ಮಂದಿ ಅಪಾಯದಿಂದ ಪಾರಾಗಿದ್ದಾರೆ. ದೊಡ್ಡ ಅನಾಹುತ ತಪ್ಪಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.
- Basavaraj Yaraganavi
- Updated on: Feb 28, 2026
- 5:04 pm
ಅನಂತ್ ಕುಮಾರ್ ಹೆಗಡೆ ಮರಳಿ ರಾಜಕೀಯಕ್ಕೆ? ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣಕ್ಕೆ ಮರಳಿದರೆ ಸ್ವಾಗತಿಸುವುದಾಗಿ ಶ್ರೀರಾಮುಲು ಹೇಳಿದ್ದಾರೆ. ಅನಂತ್ ಕುಮಾರ್ ಹೆಗಡೆ ಅವರನ್ನು ಹಿಂದು ಫೈರ್ ಬ್ರಾಂಡ್ ಆಗಿದ್ದು, ಸಂಸದರಾಗಿದ್ದ ಅವರಿಗೆ ಕರಾವಳಿ ಪ್ರದೇಶದಲ್ಲಿ ಒಳ್ಳೆಯ ಹೆಸರಿದೆ. ಅನಂತ್ ಕುಮಾರ್ ಹೆಗಡೆ ಎಂದರೆ ಯುವಕರು ಕುಣಿದು ಕುಪ್ಪಳಿಸುತ್ತಾರೆ. ವಾಜಪೇಯಿ ಮತ್ತು ಅಡ್ವಾಣಿ ಬಂದಿದ್ದ ಸಮಯದಲ್ಲಿ ನಾನೇ ಅದನ್ನು ನೋಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
- Basavaraj Yaraganavi
- Updated on: Feb 27, 2026
- 2:07 pm
ಮಲೆನಾಡಿಗರ ದಶಕಗಳ ಕನಸು ನನಸು ಮಾಡಿದ ಕೇಂದ್ರ ಸರ್ಕಾರ
ಶಿವಮೊಗ್ಗದ ಆಕಾಶವಾಣಿ ಭದ್ರಾವತಿ ಕೇಂದ್ರದ ಎಫ್ಎಂ ಪ್ರಸಾರವು 1 ಕಿಲೋವ್ಯಾಟ್ನಿಂದ 10 ಕಿಲೋವ್ಯಾಟ್ಗೆ ಮೇಲ್ದರ್ಜೆಗೇರಿದೆ. ಕೇಂದ್ರ ಸಚಿವ ಡಾ. ಎಲ್. ಮುರುಗನ್ ಅವರು 10kW ಟ್ರಾನ್ಸ್ಮೀಟರ್ ಲೋಕಾರ್ಪಣೆ ಮಾಡಿದ್ದಾರೆ. ಆ ಮೂಲಕ ಮಲೆನಾಡಿಗರ ಬಹು ದಶಕಗಳ ಕನಸು ನನಸಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಬಾನುಲಿ ಪ್ರಸಾರ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ.
- Basavaraj Yaraganavi
- Updated on: Feb 26, 2026
- 6:39 pm
ಶಿವಮೊಗ್ಗ SSLC ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಂಕೇತ್ ಕೊಲೆ ರಹಸ್ಯ ಬಯಲು!
ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಮೊನ್ನೆ ಅಂದ್ರೆ ಸೋಮವಾರ ರಾತ್ರಿ ಘೋರವೇ ನಡೆದು ಹೋಗಿತ್ತು. ಸ್ಪೆಷಲ್ಕ್ಲಾಸ್ಗೆ ಅಂತಾ ಶಾಲೆಗೆ ಹೋಗಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಮನೆಗೆ ವಾಪಸ್ ಆಗುವಾಗ್ಲೇ ಕೊಲೆ ಆಗಿದ್ದ. ರಾತ್ರಿ 9.30 ರ ಹೊತ್ತಲ್ಲೇ ಹಲ್ಲೆ ನಡೆಸಿ ಸಂಕೇತ್ನನ್ನ ಕೊಂದವರು ಎಸ್ಕೇಪ್ ಆಗಿದ್ರು. ಅದೇ ಮರ್ಡರ್ ಕೇಸ್ಗೆ ಇಂದು ಟ್ವಿಸ್ಟ್ ಸಿಕ್ಕಿದೆ. ಜತೆಯಲ್ಲೇ ಓದುತ್ತಿದ್ದವರೇ ದುರುಳರು ಎನ್ನುವುದು ಬಯಲಾಗಿದೆ.
- Basavaraj Yaraganavi
- Updated on: Feb 25, 2026
- 9:38 pm