AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Yaraganavi

Basavaraj Yaraganavi

Author - TV9 Kannada

basavaraj.yaraganavi@tv9.com
ಧರ್ಮಸ್ಥಳ ಕೇಸ್​​: ಜಾಮೀನು ಸಿಕ್ಕರೂ ಮಾಸ್ಕ್​​ಮ್ಯಾನ್​​ ಚಿನ್ನಯ್ಯಗಿಲ್ಲ ಬಿಡುಗಡೆ ಭಾಗ್ಯ!

ಧರ್ಮಸ್ಥಳ ಕೇಸ್​​: ಜಾಮೀನು ಸಿಕ್ಕರೂ ಮಾಸ್ಕ್​​ಮ್ಯಾನ್​​ ಚಿನ್ನಯ್ಯಗಿಲ್ಲ ಬಿಡುಗಡೆ ಭಾಗ್ಯ!

ಧರ್ಮಸ್ಥಳ 'ಬುರುಡೆ' ಕೇಸ್​​ ಪ್ರಕರಣದ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ನವೆಂಬರ್ 26ರಂದು ಷರತ್ತುಬದ್ಧ ಜಾಮೀನು ದೊರೆತಿದೆ. ಆದರೆ, ಒಂದು ಲಕ್ಷ ರೂಪಾಯಿ ಭದ್ರತಾ ಬಾಂಡ್ ಮತ್ತು ಇಬ್ಬರು ಜಾಮೀನುದಾರರನ್ನು ಒದಗಿಸಲು ಸಾಧ್ಯವಾಗದ ಕಾರಣ ಆತ ಇನ್ನೂ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲೇ ಉಳಿದಿದ್ದಾನೆ. ಜಾಮೀನು ಸಿಕ್ಕರೂ ಶ್ಯೂರಿಟಿ ಇಲ್ಲದೆ ಚಿನ್ನಯ್ಯ ಜೈಲಿನಲ್ಲಿ ನರಳುತ್ತಿದ್ದಾನೆ.

ಮದುವೆಯಾದ ಮರುದಿನವೇ ಮದುಮಗ ಹೃದಯಾಘಾತದಿಂದ ಸಾವು

ಮದುವೆಯಾದ ಮರುದಿನವೇ ಮದುಮಗ ಹೃದಯಾಘಾತದಿಂದ ಸಾವು

ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಸಮೀಪದ ಬಂಡ್ರಿ ಗ್ರಾಮದಲ್ಲಿ ಮದುವೆಯಾದ ಮರುದಿನವೇ ಯುವಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ನವೆಂಬರ್ 30ರಂದು ಮದುವೆಯಾಗಿ, ಡಿಸೆಂಬರ್ 1ರಂದು ವಧುವಿನ ಮನೆಗೆ ತೆರಳಿದಾಗ, ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದು, ವಧುವಿನ ಆಕ್ರಂದನ ಮುಗಿಲು ಮುಟ್ಟಿದೆ.

Shivamogga Bomb Blast: ಶಿಕಾರಿಪುರ ಬಳಿ ಕೆಎಸ್ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ, ಪ್ರಯಾಣಿಕರು ಬಚಾವ್

Shivamogga Bomb Blast: ಶಿಕಾರಿಪುರ ಬಳಿ ಕೆಎಸ್ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ, ಪ್ರಯಾಣಿಕರು ಬಚಾವ್

ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟಗೊಂಡಿದೆ. ಮುಡಬಸಿದ್ಧಾಪುರದಿಂದ ಶಿಕಾರಿಪುರಕ್ಕೆ ಬರುವ ಮಾರ್ಗದಲ್ಲಿ ಹಿರೇಕಲವತ್ತಿ ಬಳಿ ಸ್ಫೋಟ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಂದಿಗಳಿಂದ ಬೆಳೆ ರಕ್ಷಣೆಗೆ ಬಳಸುವ ಬಾಂಬ್ ಆಕಸ್ಮಿಕವಾಗಿ ರಸ್ತೆಯಲ್ಲಿ ಬಿದ್ದಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​ ಅಪ್ಡೇಟ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​ ಅಪ್ಡೇಟ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

12 ಸಾವಿರ ಶಿಕ್ಷಕರನ್ನು ನೂತನವಾಗಿ ನಿಯೋಜಿಸಲಾಗುತ್ತಿದೆ. ಯಾವುದೇ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಮೋಷನ್‌ಗಳಿಂದ ಖಾಲಿ ಆಗುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ಯಾವಾಗ ಏನು ಬೇಕಾದರೂ ಆಗಬಹುದು: ಮಾರ್ಮಿಕ ಹೇಳಿಕೆ ಕೊಟ್ಟ ಬಿ.ಎಸ್. ಯಡಿಯೂರಪ್ಪ

ಯಾವಾಗ ಏನು ಬೇಕಾದರೂ ಆಗಬಹುದು: ಮಾರ್ಮಿಕ ಹೇಳಿಕೆ ಕೊಟ್ಟ ಬಿ.ಎಸ್. ಯಡಿಯೂರಪ್ಪ

ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕ ಸರಕಾರದ ಅಧಿಕಾರ ಕಿತ್ತಾಟ ಮತ್ತು ಅಭಿವೃದ್ಧಿ ಕೊರತೆಯನ್ನು ಟೀಕಿಸಿದ್ದಾರೆ. ಆರೆಂಟು ತಿಂಗಳಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಹೋರಾಟದಿಂದ ಜನ ಬೇಸತ್ತಿದ್ದಾರೆ. ಬರುವ ದಿನಗಳಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತಾರೆ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಅವರು ಹೇಳಿದ್ದಾರೆ.

ಸರ್ಕಾರಿ ನೌಕರನೇ ಬೇಕೆಂದು ಮದುವೆ ಆಗುವ ಯುವತಿಯರೇ ಜೋಕೆ: ಪತಿಯ ವರದಕ್ಷಿಣೆ ಟಾರ್ಚರ್​​ಗೆ ನಾಲೆಗೆ ಹಾರಿದ ಮಹಿಳೆ

ಸರ್ಕಾರಿ ನೌಕರನೇ ಬೇಕೆಂದು ಮದುವೆ ಆಗುವ ಯುವತಿಯರೇ ಜೋಕೆ: ಪತಿಯ ವರದಕ್ಷಿಣೆ ಟಾರ್ಚರ್​​ಗೆ ನಾಲೆಗೆ ಹಾರಿದ ಮಹಿಳೆ

ಸರ್ಕಾರಿ ನೌಕರಿಯಲ್ಲಿರೋ ವರನೇ ಬೇಕು ಎಂದು ಹುಡುಕಿ ಹುಡುಕಿ ಮದುವೆ ಆಗುವ ಯುವತಿಯರೇ ಎಚ್ಚರ. ಇದೇ ರೀತಿ ಯೋಚನೆ ಮಾಡಿ ಸರ್ಕಾರಿ ಎಂಜಿನಿಯರ್​​ಗೆ ಮಗಳ ಮದುವೆ ಮಾಡಿಕೊಟ್ಟು ಹೆತ್ತವರು ಕಣ್ಣೀರಲ್ಲಿ ಕೈತೊಳೆಯುತ್ತಿರೋ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪತಿ ಮತ್ತು ಆತನ ಮನೆಯವರ ಟಾರ್ಚರ್​​ ತಾಳಲಾರದೆ ನವ ವಿವಾಹಿತೆಯೋರ್ವರು ತೆಗೆದುಕೊಳ್ಳಬಾರದ ನಿರ್ಧಾರ ತೆಗೆದುಕೊಂಡಿದ್ದಾರೆ.

ಬಾಳೆಗೊನೆಯಲ್ಲಿ, ಸಿಬ್ಬಂದಿ ಒಳ ಉಡುಪಿನಲ್ಲಿ ಜೈಲಿಗೆ ಬಂತು ಗಾಂಜಾ! ಪರಪ್ಪನ ಅಗ್ರಹಾರ ಬಳಿಕ ಶಿವಮೊಗ್ಗದಲ್ಲಿ ಕೈದಿಗಳ ಹೈಟೆಕ್ ಬದುಕು ಬಯಲು

ಬಾಳೆಗೊನೆಯಲ್ಲಿ, ಸಿಬ್ಬಂದಿ ಒಳ ಉಡುಪಿನಲ್ಲಿ ಜೈಲಿಗೆ ಬಂತು ಗಾಂಜಾ! ಪರಪ್ಪನ ಅಗ್ರಹಾರ ಬಳಿಕ ಶಿವಮೊಗ್ಗದಲ್ಲಿ ಕೈದಿಗಳ ಹೈಟೆಕ್ ಬದುಕು ಬಯಲು

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಾಳೆಹಣ್ಣಿನ ಗೊನೆಯಲ್ಲಿ ಗಾಂಜಾ ಪತ್ತೆಯಾಗಿರುವುದು ಇದೀಗ ಇಡೀ ಜೈಲು ಅಧಿಕಾರಿಗಳನ್ನೇ ಆಘಾತಕ್ಕೊಳಗಾಗಿಸಿದೆ. ಮತ್ತೊಂದೆಡೆ, ಜೈಲಿಗೆ ಸಿಬ್ಬಂದಿ ಎಂಟ್ರಿಯಾಗುವ ಮುನ್ನವೇ, ಸಿಬ್ಬಂದಿ ಒಳ ಉಡುಪಿನಲ್ಲಿ ಗಾಂಜಾ ಪತ್ತೆಯಾಗಿರುವುದು ಇಡೀ ವ್ಯವಸ್ಥೆಯನ್ನೇ ಪ್ರಶ್ನೆ ಮಾಡುವಂತಾಗಿದೆ. ಸದಾ ಹದ್ದಿನ ಕಣ್ಣಿಡಲಾಗುವ ಕಾರಾಗೃಹಗಳಲ್ಲಿ ಕೈದಿಗಳ ಬದುಕು ಹೈಟೆಕ್ ಆಗಿದೆ.

ಶಿವಮೊಗ್ಗದಲ್ಲಿ ವ್ಯಾಪಾರಿ​​ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್​​: ಹಿಂದೂ ಸೇರಿ ಮೂವರು ಅರೆಸ್ಟ್​​

ಶಿವಮೊಗ್ಗದಲ್ಲಿ ವ್ಯಾಪಾರಿ​​ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್​​: ಹಿಂದೂ ಸೇರಿ ಮೂವರು ಅರೆಸ್ಟ್​​

ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಅನಿರೀಕ್ಷಿತ ತಿರುವು ಸಿಕ್ಕಿದೆ. ಆರಂಭದಲ್ಲಿ ಇದನ್ನು ಕೋಮು ಘಟನೆ ಎಂದು ಭಾವಿಸಲಾಗಿತ್ತಾದರೂ ತನಿಖೆ ವೇಳೆ ಹಲ್ಲೆಕೋರರ ಗ್ಯಾಂಗ್‌ನಲ್ಲಿ ಹಿಂದೂಗಳು ಕೂಡ ಇದ್ದರು ಎಂಬುದು ಬಯಲಾಗಿದೆ.  ಪ್ರಕರಣ ಸಂಬಂಧ ಓರ್ವ ಅಪ್ರಾಪ್ತ ಸೇರಿ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೇ ವಿಚಾರವಾಗಿ ಶಾಸಕ ಚನ್ನಬಸಪ್ಪ ಅವರನ್ನು ಭೇಟಿಯಾಗಿ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಕೂಡ ಮಾಹಿತಿ ಕಲೆಹಾಕಿದ್ದಾರೆ.

ಸಾಕಷ್ಟು ವಿರೋಧ ಮಧ್ಯೆ ಕುವೆಂಪು ವಿವಿಯಲ್ಲಿ ನಡೆದ ಭಗವದ್ಗೀತೆ ಕುರಿತ ವಿಚಾರಗೋಷ್ಠಿ: ಹಲವರು ಭಾಗಿ

ಸಾಕಷ್ಟು ವಿರೋಧ ಮಧ್ಯೆ ಕುವೆಂಪು ವಿವಿಯಲ್ಲಿ ನಡೆದ ಭಗವದ್ಗೀತೆ ಕುರಿತ ವಿಚಾರಗೋಷ್ಠಿ: ಹಲವರು ಭಾಗಿ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 'ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ' ವಿಚಾರಗೋಷ್ಠಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟಿಸಿತ್ತು. ವಿರೋಧದ ನಡುವೆಯೂ ವಿಚಾರಗೋಷ್ಠಿ ನಡೆಯಿತು. ಕರ್ನಾಟಕ ಉಚ್ಛ ನ್ಯಾಯಾಲಯ ನಿವೃತ್ತ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ಭಗವದ್ಗೀತೆ ಜೀವನ ಪಥ ದರ್ಶನ ಮಾಡಿಸುತ್ತದೆ ಎಂದಿದ್ದಾರೆ.

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ

ಮಗನ ಮೇಲಿನ ದಾಳಿಯನ್ನು ತಡೆಯಲು ಹೋಗಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾವು ಹಲ್ಲೆ ನಡೆಸಿದ್ದ ವ್ಯಕ್ತಿಗೆ ಉಪಚರಿಸಿರುವುದನ್ನೇ ನೆಪ ಮಾಡಿಕೊಂಡು ಜಗಳ ತೆಗೆದಿರುವ ಆರೋಪಿಗಳು, ಮೃತ ಮಹಿಳೆಯ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಮಚ್ಚಿನಿಂದ ದಾಳಿಗೂ ಯತ್ನಿಸಿದ್ದು, ಈ ವೇಳೆ ತಡೆಯಲು ಯತ್ನಿಸಿದ ಮಹಿಳೆಗೆ ಮಚ್ಚಿನೇಟು ಬಿದ್ದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಗ್ಗೆ ಊರಿಗೆ ಬರ್ತೆನೆಂದು ತಾಯಿಗೆ ಮಾತು ಕೊಟ್ಟಿದ್ದ ಮಗಳು ಹಾಸ್ಟೆಲ್​​ನಲ್ಲಿ ನಿಗೂಢ ಸಾವು

ಬೆಳಗ್ಗೆ ಊರಿಗೆ ಬರ್ತೆನೆಂದು ತಾಯಿಗೆ ಮಾತು ಕೊಟ್ಟಿದ್ದ ಮಗಳು ಹಾಸ್ಟೆಲ್​​ನಲ್ಲಿ ನಿಗೂಢ ಸಾವು

ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್​​ ನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ನೇಣುಬಿಗಿದ ಸ್ಥಿತಿ ಯಲ್ಲಿ ಯುವತಿ ಶವ ಪತ್ತೆಯಾಗಿದ್ದರೂ ಸಹ ಸಾವಿನ ಸುತ್ತ ನೂರೆಂಟು ಅನುಮಾನ ಹುಟ್ಟಿಕೊಂಡಿವೆ. ರಾತ್ರಿ ತಾಯಿಗೆ ಕರೆ ಮಾಡಿ ಬೆಳಗ್ಗೆ ಮನೆಗೆ ಬರುತ್ತೇನೆಂದು ಹೇಳಿದ್ದ ಯುವತಿ, ಏಕಾಏಕಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮಗಳ ಸಾವಿಗೆ ಕಾರಣರಾದ ಅವರಿಬ್ಬರನ್ನು ಬಂಧಿಸಿ: ಪರಿಪರಿಯಾಗಿ ಬೇಡಿಕೊಂಡ ತಂದೆ

ಮಗಳ ಸಾವಿಗೆ ಕಾರಣರಾದ ಅವರಿಬ್ಬರನ್ನು ಬಂಧಿಸಿ: ಪರಿಪರಿಯಾಗಿ ಬೇಡಿಕೊಂಡ ತಂದೆ

ಎನ್ಆರ್ ಪುರ ಮೂಲದ ಗೃಹಿಣಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳ ಸಾವಿಗೆ ಅಳಿಯನ ಅಕ್ಕ ಮತ್ತು ತಾಯಿಯೇ ಮುಖ್ಯ ಕಾರಣ ಎಂದು ಮೃತಳ ತಂದೆ ಆರೋಪಿಸಿದ್ದಾರೆ. ವರದಕ್ಷಿಣೆಗಾಗಿ ಕಿರುಕುಳ ನೀಡಲಾಗುತ್ತಿತ್ತು. ದೂರು ನೀಡಿದರೂ ಪೊಲೀಸರು ಅಳಿಯನ ಅಕ್ಕ ಮತ್ತು ತಾಯಿಯನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ