ಸಚಿವರ ಬರ್ತ್ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಲಾಗಿದೆ. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
- Basavaraj Yaraganavi
- Updated on: Mar 2, 2026
- 8:37 pm
ಶಿವಮೊಗ್ಗ: ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರದಲ್ಲಿ ಗಲಾಟೆ-ಕಲ್ಲು ತೂರಾಟ, 10 ಜನರ ಬಂಧನ
ಶಿವಮೊಗ್ಗದ ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರವಾಗಿ ಮುಸ್ಲಿಮರ 2 ಗುಂಪುಗಳ ನಡುವೆ ವಾಗ್ವಾದ ನಡೆದು ಅದು ವಿಕೋಪಕ್ಕೆ ತಿರುಗಿದ ಪರಿಣಾಮ ರಸ್ತೆಯಲ್ಲಿ ಕಲ್ಲು ತೂರಾಟ ನಡೆದಿದೆ. ಎರಡೂ ಗುಂಪುಗಳು ಪರಸ್ಪರ ಬಡಿಗೆಗಳಿಂದ ಹೊಡೆದಾಡಿಕೊಂಡಿವೆ. ಸದ್ಯ ಘಟನೆ ಸಂಬಂಧ 10 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪಟ್ಟಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
- Basavaraj Yaraganavi
- Updated on: Mar 2, 2026
- 2:17 pm
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ ಸಿದ್ದರಾಮಯ್ಯ
ಇಸ್ರೇಲ್ ಮತ್ತು ಅಮೆರಿಕದ ಇರಾನ್ ಮೇಲಿನ ದಾಳಿ ಅನಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದೆಡೆ ಶಾಂತಿ ಮಂತ್ರ ಪಠಿಸಿ, ಮತ್ತೊಂದೆಡೆ ಯುದ್ಧವನ್ನು ಪ್ರಚೋದಿಸುವ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಸಿಎಂ ಖಂಡಿಸಿದ್ದಾರೆ. ಅಯತೊಲ್ಲಾ ಖೊಮೇನಿ ಅವರ ಸಾವಿನ ವರದಿ ಖಂಡನೀಯವಾಗಿದ್ದು, ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಂಡಿದೆ.
- Basavaraj Yaraganavi
- Updated on: Mar 1, 2026
- 3:38 pm
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್
ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಹುಲಿಕಲ್ ಬಾಳೆಬರೇ ಘಾಟಿಯಲ್ಲಿ ಬೆಂಕಿಗಾಹುತಿಯಾಗಿದೆ. ಇಂಜಿನ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಭಸ್ಮವಾಗಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆ ಹಾಗೂ ಪ್ರಯಾಣಿಕರ ಅರಿವಿನಿಂದ 20ಕ್ಕೂ ಹೆಚ್ಚು ಮಂದಿ ಅಪಾಯದಿಂದ ಪಾರಾಗಿದ್ದಾರೆ. ದೊಡ್ಡ ಅನಾಹುತ ತಪ್ಪಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.
- Basavaraj Yaraganavi
- Updated on: Feb 28, 2026
- 5:04 pm
ಅನಂತ್ ಕುಮಾರ್ ಹೆಗಡೆ ಮರಳಿ ರಾಜಕೀಯಕ್ಕೆ? ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣಕ್ಕೆ ಮರಳಿದರೆ ಸ್ವಾಗತಿಸುವುದಾಗಿ ಶ್ರೀರಾಮುಲು ಹೇಳಿದ್ದಾರೆ. ಅನಂತ್ ಕುಮಾರ್ ಹೆಗಡೆ ಅವರನ್ನು ಹಿಂದು ಫೈರ್ ಬ್ರಾಂಡ್ ಆಗಿದ್ದು, ಸಂಸದರಾಗಿದ್ದ ಅವರಿಗೆ ಕರಾವಳಿ ಪ್ರದೇಶದಲ್ಲಿ ಒಳ್ಳೆಯ ಹೆಸರಿದೆ. ಅನಂತ್ ಕುಮಾರ್ ಹೆಗಡೆ ಎಂದರೆ ಯುವಕರು ಕುಣಿದು ಕುಪ್ಪಳಿಸುತ್ತಾರೆ. ವಾಜಪೇಯಿ ಮತ್ತು ಅಡ್ವಾಣಿ ಬಂದಿದ್ದ ಸಮಯದಲ್ಲಿ ನಾನೇ ಅದನ್ನು ನೋಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
- Basavaraj Yaraganavi
- Updated on: Feb 27, 2026
- 2:07 pm
ಮಲೆನಾಡಿಗರ ದಶಕಗಳ ಕನಸು ನನಸು ಮಾಡಿದ ಕೇಂದ್ರ ಸರ್ಕಾರ
ಶಿವಮೊಗ್ಗದ ಆಕಾಶವಾಣಿ ಭದ್ರಾವತಿ ಕೇಂದ್ರದ ಎಫ್ಎಂ ಪ್ರಸಾರವು 1 ಕಿಲೋವ್ಯಾಟ್ನಿಂದ 10 ಕಿಲೋವ್ಯಾಟ್ಗೆ ಮೇಲ್ದರ್ಜೆಗೇರಿದೆ. ಕೇಂದ್ರ ಸಚಿವ ಡಾ. ಎಲ್. ಮುರುಗನ್ ಅವರು 10kW ಟ್ರಾನ್ಸ್ಮೀಟರ್ ಲೋಕಾರ್ಪಣೆ ಮಾಡಿದ್ದಾರೆ. ಆ ಮೂಲಕ ಮಲೆನಾಡಿಗರ ಬಹು ದಶಕಗಳ ಕನಸು ನನಸಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಬಾನುಲಿ ಪ್ರಸಾರ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ.
- Basavaraj Yaraganavi
- Updated on: Feb 26, 2026
- 6:39 pm
ಶಿವಮೊಗ್ಗ SSLC ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಂಕೇತ್ ಕೊಲೆ ರಹಸ್ಯ ಬಯಲು!
ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಮೊನ್ನೆ ಅಂದ್ರೆ ಸೋಮವಾರ ರಾತ್ರಿ ಘೋರವೇ ನಡೆದು ಹೋಗಿತ್ತು. ಸ್ಪೆಷಲ್ಕ್ಲಾಸ್ಗೆ ಅಂತಾ ಶಾಲೆಗೆ ಹೋಗಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಮನೆಗೆ ವಾಪಸ್ ಆಗುವಾಗ್ಲೇ ಕೊಲೆ ಆಗಿದ್ದ. ರಾತ್ರಿ 9.30 ರ ಹೊತ್ತಲ್ಲೇ ಹಲ್ಲೆ ನಡೆಸಿ ಸಂಕೇತ್ನನ್ನ ಕೊಂದವರು ಎಸ್ಕೇಪ್ ಆಗಿದ್ರು. ಅದೇ ಮರ್ಡರ್ ಕೇಸ್ಗೆ ಇಂದು ಟ್ವಿಸ್ಟ್ ಸಿಕ್ಕಿದೆ. ಜತೆಯಲ್ಲೇ ಓದುತ್ತಿದ್ದವರೇ ದುರುಳರು ಎನ್ನುವುದು ಬಯಲಾಗಿದೆ.
- Basavaraj Yaraganavi
- Updated on: Feb 25, 2026
- 9:38 pm
ಅನ್ಯಕೋಮಿನ ಹುಡುಗರಿಂದ ಸಂಕೇತ್ ಕೊಲೆ: ಸಹಾಯಕ್ಕೆ ಬಂದು ಹತ್ಯೆಯಾದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಟಿಟ್ಟ ಗೆಳೆಯ
ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್ನ ಎದೆಗೆ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಮೃತಪಟ್ಟಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಯಾವುದೇ ಕೋಮುಗಲಭೆ ಆಗಬಾರದು ಎಂದು ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು ತನ್ನ ಸಹಾಯಕಕ್ಕೆ ಬಂದು ಸಂಕೇತ್ ಸಾವನ್ನಪ್ಪಿರುವ ಬಗ್ಗೆ ಗಿರೀಶ್ ಟಿವಿ9 ಜತೆ ಮಾತನಾಡಿ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಟ್ಟಿದ್ದಾನೆ.
- Basavaraj Yaraganavi
- Updated on: Feb 25, 2026
- 3:05 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ
ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಸಹ ಪ್ರತಿಕ್ರಿಯಿಸಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕೇಸ್ ಬಗ್ಗೆ ಶಿವಮೊಗ್ಗ ಎಸ್.ಪಿ. ನಿಖಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈಗಾಗಲೇ 7 ಜನ ಅಪ್ರಾಪ್ತರನ್ನು ಕೊಲೆ ಸಂಬಂಧ ಬಂಧಿಸಲಾಗಿದೆ
- Basavaraj Yaraganavi
- Updated on: Feb 24, 2026
- 4:02 pm
ಶಿವಮೊಗ್ಗ ಎಸ್ಎಸ್ಎಲ್ಸಿ ವಿದ್ಯಾರ್ಥಿ ಕೊಲೆ ಪ್ರಕರಣ: 15 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ
ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣದಲ್ಲಿ ಮೃತನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇಂಥ ಘಟನೆ ಮರುಕಳಿಸದಂತೆ ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
- Basavaraj Yaraganavi
- Updated on: Feb 24, 2026
- 1:52 pm
ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ? ಆಘಾತಕಾರಿ ಮಾಹಿತಿ ಬಯಲು
Shivamogga SSLC Student Murder: ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಸ್ಪೇಶಲ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುತ್ತಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಅದೇ ಬಡಾವಣೆಯ 9ನೇ ತರಗತಿ ಫೇಲ್ ಆಗಿರುವ ಬಾಲಕರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಅಸಲಿಗೆ ಅಲ್ಲಿ ಏನು ನಡೆಯಿತು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
- Basavaraj Yaraganavi
- Updated on: Feb 24, 2026
- 9:25 am
ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಕೊಲೆ
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಸಂಕೇತ್ ಕೊಲೆ ನಡೆದಿದೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆ ಬಳಿ ವಿದ್ಯಾರ್ಥಿಗಳ ನಡುವಿನ ಜಗಳ ಬಿಡಿಸಲು ಹೋದ ಸಂಕೇತ್ ಮೇಲೆ ಹಲ್ಲೆ ನಡೆದಿದ್ದು, ಎದೆಗೆ ಬಲವಾದ ಗುದ್ದಿದ ಪರಿಣಾಮ ಆತ ಮೃತಪಟ್ಟಿದ್ದಾನೆ. ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
- Basavaraj Yaraganavi
- Updated on: Feb 24, 2026
- 6:29 am