ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ: ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆದಿದ್ದಕ್ಕೆ ಮಕ್ಕಳಿಗೆ ರಕ್ತ ಬರುವಂತೆ ಥಳಿಸಿದ ಶಿಕ್ಷಕಿ
ಶಿವಮೊಗ್ಗದ ಸಾಗರ ತಾಲೂಕಿನ ಕಿರುವಾಸೆ ಶಾಲೆಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಾರೆಂದು ಮೂವರು ವಿದ್ಯಾರ್ಥಿಗಳ ಬೆನ್ನಿಗೆ ರಕ್ತ ಬರುವಂತೆ ಅತಿಥಿ ಶಿಕ್ಷಕಿ ಥಳಿಸಿದ್ದಾರೆ. ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಶಿಕ್ಷಕಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
- Basavaraj Yaraganavi
- Updated on: Sep 4, 2026
- 8:00 pm
ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ಪಶ್ಚಿಮ ಘಟ್ಟ ರೈತ ಸಹಕಾರ ವೇದಿಕೆಯಿಂದ ಬೃಹತ್ ಪಾದಯಾತ್ರೆ
ಡಾ. ಕಸ್ತೂರಿ ರಂಗನ್ ವರದಿಯ ನ್ಯೂನತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಪಶ್ಚಿಮಘಟ್ಟ ರೈತ ಸಹಕಾರ ವೇದಿಕೆಯಿಂದ ಶಿವಮೊಗ್ಗದ ಸಾಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವರದಿಯಿಂದ ಜನವಸತಿ, ಕೃಷಿ ಭೂಮಿ ಹೊರಗಿಡಲು ಮತ್ತು ಭೌತಿಕ ಸರ್ವೆ ನಡೆಸಲು ಒತ್ತಾಯಿಸಿದರು. ವರದಿ ಹಿಂಪಡೆಯುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಈ ವೇಳೆ ಘೋಷಿಸಲಾಯಿತು.
- Basavaraj Yaraganavi
- Updated on: Sep 3, 2026
- 5:28 pm
ವಿಕಲಚೇತನರ ಪಿಂಚಣಿಗೆ ಲಂಚ ಪಡೆದಿದ್ದ ಉಪ ತಹಶೀಲ್ದಾರ್ಗೆ 4 ವರ್ಷ ಜೈಲು, 40 ಸಾವಿರ ರೂ. ದಂಡ
ಶಿವಮೊಗ್ಗದಲ್ಲಿ ವಿಕಲಚೇತನ ಪಿಂಚಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗ ನ್ಯಾಯಾಲಯ 4 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿದೆ. ಲೋಕಾಯುಕ್ತ ಬಲೆಗೆ ಬಿದ್ದಿದ್ದ ಈ ಭ್ರಷ್ಟ ಅಧಿಕಾರಿಗೆ ತೀರ್ಪು ಬಂದಿದೆ. ಭದ್ರಾವತಿಯ ಕಲ್ಲಿಹಾಳ ನಾಡಕಚೇರಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಇದಾಗಿದ್ದು, ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಈ ತೀರ್ಪು ಮಹತ್ವದ್ದಾಗಿದೆ.
- Basavaraj Yaraganavi
- Updated on: Sep 1, 2026
- 8:45 pm
2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಘೋಷಣೆ ಮಾಡಿದ ಮಾಜಿ ಡಿಸಿಎಂ ಈಶ್ವರಪ್ಪ: ಕ್ಷೇತ್ರ ಯಾವುದು?
2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಾವಾಗಲಿ ಅಥವಾ ತಮ್ಮ ಮಗ ಕೆ.ಇ. ಕಾಂತೇಶ್ ಅವರಾಗಲಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಬಿಜೆಪಿಯಲ್ಲಿ ಎಲ್ಲ ನಾಯಕರ , ಮುಖಂಡರ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ. ಆದರೆ ಈಶ್ವರಪ್ಪ ಕುಟುಂಬಕ್ಕೆ ಮಾತ್ರ ಅನ್ಯಾಯ ಆಗಿದೆ ಎಂದು ಅವರ ಪುತ್ರ ಕಾಂತೇಶ್ ಆರೋಪಿಸಿದ್ದಾರೆ.
- Basavaraj Yaraganavi
- Updated on: Aug 30, 2026
- 2:12 pm
ಮಲೆನಾಡಿನಲ್ಲಿ ಗಾಂಜಾ ಪೆಡ್ಲರ್ಗಳ ವಿರುದ್ಧ ಪೊಲೀಸ್ ಸಮರ: ‘ಬೇಡ ಬ್ರೋ ಗಾಂಜಾ’ ವಿನೂತನ ಜಾಗೃತಿ
ಶಿವಮೊಗ್ಗದಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳಲ್ಲಿ ಗಾಂಜಾ ಸೇವನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ನೂತನ ಎಸ್ಪಿ ನಿಖಿಲ್ ಅವರು ಬೇಡ ಬ್ರೋ ಗಾಂಜಾ ಅಭಿಯಾನವನ್ನು ಆರಂಭಿಸಿದ್ದಾರೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಈ ಕಾರ್ಯಕ್ರಮ, ಜಿಲ್ಲೆಯನ್ನು ನಶೆ ಮುಕ್ತಗೊಳಿಸುವ ಗುರಿ ಹೊಂದಿದೆ. ಪೊಲೀಸ್ ಇಲಾಖೆ ನಿರಂತರವಾಗಿ ಗಾಂಜಾ ಪೆಡ್ಲರ್ಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ.
- Basavaraj Yaraganavi
- Updated on: Aug 26, 2026
- 5:13 pm
ಶಿವಮೊಗ್ಗ: ಇಬ್ಬರು ಹೆಣ್ಣು ಮಕ್ಕಳನ್ನು ತುಂಗಾ ನದಿಗೆ ಎಸೆದ ತಾಯಿ; ಜೀವದ ಹಂಗು ತೊರೆದು ತಾಯಿ- 11 ತಿಂಗಳ ಮಗುವನ್ನು ರಕ್ಷಿಸಿದ ಯುವಕರು
ಶಿವಮೊಗ್ಗದಲ್ಲಿ ಕುಟುಂಬ ಕಲಹದಿಂದ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ತುಂಗಾ ನದಿಗೆ ಎಸೆದು, 11 ತಿಂಗಳ ಮಗುವಿನೊಂದಿಗೆ ತಾನೂ ಹಾರಿದ್ದಾಳೆ. ಸ್ಥಳೀಯ ಯುವಕರಿಂದ ತಾಯಿ ಮತ್ತು ಗಂಡು ಮಗು ರಕ್ಷಿಸಲ್ಪಟ್ಟಿದ್ದರೆ, ಆರು ಮತ್ತು ನಾಲ್ಕು ವರ್ಷದ ಇಬ್ಬರು ಹೆಣ್ಣುಮಕ್ಕಳು ನದಿಪಾಲಾಗಿದ್ದಾರೆ. ನಾಪತ್ತೆಯಾದ ಮಕ್ಕಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಮನಕಲಕುವ ಘಟನೆ ಶಿವಮೊಗ್ಗದಲ್ಲಿ ಭಾರಿ ಆಘಾತ ಮೂಡಿಸಿದೆ.
- Basavaraj Yaraganavi
- Updated on: Aug 25, 2026
- 7:35 pm
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು: ಜೀವ ಹಂಗು ತೊರೆದು ಬಸ್ಸಿನಲ್ಲಿ ನೇತಾಡುತ್ತಿರುವ ಮಹಿಳೆಯರು, ವಿದ್ಯಾರ್ಥಿಗಳು
ಸೊರಬದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್ ಕೊರತೆಯಿಂದ ಪ್ರತಿನಿತ್ಯ ಪರದಾಡುತ್ತಿದ್ದಾರೆ. ಕಿಕ್ಕಿರಿದ ಬಸ್ಗಳಲ್ಲಿ, ಬಾಗಿಲುಗಳಿಗೆ ನೇತಾಡುತ್ತಾ ಜೀವ ಪಣಕ್ಕಿಟ್ಟು ಪ್ರಯಾಣಿಸುವುದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಇದರಿಂದ ಭೀಕರ ಅವಘಡ ಸಂಭವಿಸುವ ಭೀತಿ ಇದೆ. ಈ ಸಮಸ್ಯೆಗೆ ಪರಿಹಾರವಾಗಿ ಹೆಚ್ಚಿನ ಸರ್ಕಾರಿ ಬಸ್ಗಳನ್ನು ಓಡಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಸಾರಿಗೆ ಇಲಾಖೆಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
- Basavaraj Yaraganavi
- Updated on: Aug 20, 2026
- 11:59 am
ಅಪ್ರಾಪ್ತ ಬಾಲಕನಿಗೆ ಬೈಕ್ ಕೊಟ್ಟ ಮಾಲೀಕನಿಗೆ ಬಿತ್ತು ಬರೋಬ್ಬರಿ 27000 ರೂ.ದಂಡ!, ಇರಲಿ ಎಚ್ಚರ!
ಅಪ್ರಾಪ್ತ ವಯಸ್ಸಿನವರಿಗೆ ವಾಹನ ಚಾಲನೆಗೆ ನೀಡುವುದು ಅಕ್ಷಮ್ಯ ಅಪರಾಧವಾಗಿದ್ದು, ವಾಹನ ನೀಡುವ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದರೂ ಸಹ ಪೋಷಕರು, ಚಲಾಯಿಸಲು ಮಕ್ಕಳ ಕೈಗೆ ವಾಹನಗಳನ್ನ ನೀಡುತ್ತಲೇ ಇದ್ದಾರೆ. ಅದರಂತೆ ಶಿವಮೊಗ್ಗದಲ್ಲಿ ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದ ಮಾಲೀಕ ಬರೋಬ್ಬರಿ 27,000 ರೂಪಾಯಿ ದಂಡ ತೆತ್ತುವಂತಾಗಿದೆ.
- Basavaraj Yaraganavi
- Updated on: Aug 19, 2026
- 6:49 pm
ಬುದ್ಧಿ ಮಾತು ಹೇಳಿದ್ದೇ ತಪ್ಪಾಯ್ತಾ? ಸ್ನೇಹಿತನ ಮೇಲೆ ಮನಸೋ ಇಚ್ಛೆ ಹಲ್ಲೆ; ಮಲೆನಾಡನ್ನೇ ಬೆಚ್ಚಿಬೀಳಿಸಿದ ಕೃತ್ಯ
Shivamogga News: ಕ್ಷುಲಕ್ಕೆ ಕಾರಣಕ್ಕೆ ಓರ್ವ ಸ್ನೇಹಿತ ತನ್ನ ಗೆಳೆಯನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೇರಿ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಈ ಘಟನೆಯಿಂದ ಇಡೀ ಮಲೆನಾಡೇ ಬೆಚ್ಚಿಬಿದ್ದಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
- Basavaraj Yaraganavi
- Updated on: Aug 16, 2026
- 7:53 pm
ರಾತ್ರೋರಾತ್ರಿ ಕೊಟ್ಟಿಗೆಗೆ ನುಗ್ಗಿ ಗೋವುಗಳ ಕಳತನ: ಹಿಡಿಯಲು ಹೋದ ಬಜರಂಗದಳ ಕಾರ್ಯಕರ್ತರ ಹತ್ಯೆಗೆ ಯತ್ನ
Bajrang Dal Workers Attack: ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಯತ್ನಿಸಿದ ಬಜರಂಗದಳ ಕಾರ್ಯಕರ್ತನ ಮೇಲೆ ಗೋ ಕಳ್ಳರು ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಬಿಜೆಪಿ ದಾಳಿಯನ್ನು ಖಂಡಿಸಿದ್ದು, ಗೋ ಕಳ್ಳರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲು ಸಂಘಟನೆಗಳು ಆಗ್ರಹಿಸಿವೆ.
- Basavaraj Yaraganavi
- Updated on: Aug 16, 2026
- 6:48 pm
ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, KPS ಶಾಲೆಗಳ ಶೀಘ್ರ ಆರಂಭ: ಸಚಿವ ಮಧು ಬಂಗಾರಪ್ಪ ಪ್ರಮುಖ ಘೋಷಣೆ
ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ರಾಜ್ಯದ ವಿದ್ಯಾರ್ಥಿ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. 1 ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಆರಂಭಗೊಂಡಿದ್ದು, ಶಾಲೆಗಳಿಗೆ ಪುಸ್ತಕ ಪೂರೈಕೆ ಪೂರ್ಣಗೊಂಡಿದೆ. ಕಳಪೆ ಶೂಗಳ ದೂರುಗಳ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಟೆಂಡರ್ ಕರೆಯಲಾಗಿದ್ದು, 800 KPS ಶಾಲೆಗಳ ಸ್ಥಾಪನೆ ಯೋಜನೆಗೆ ಅನುಮೋದನೆ ದೊರೆತಿದೆ. ಶಿಕ್ಷಣ ಸುಧಾರಣೆಗೆ ಸರ್ಕಾರ ಬದ್ಧವಾಗಿದೆ.
- Basavaraj Yaraganavi
- Updated on: Aug 15, 2026
- 1:43 pm
Independence Day 2026: ಸಿಗಂದೂರು ಸೇತುವೆ ಮೇಲೆ ನಡುರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!
ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಐತಿಹಾಸಿಕ ಸಿಗಂದೂರು ಸೇತುವೆಯ ಮೇಲೆ ಕರೂರು ಹೋಬಳಿಯ ಸ್ಥಳೀಯ ಜನರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ದೇಶಪ್ರೇಮ ಮೆರೆದಿದ್ದಾರೆ. ಕರೂರಿನ ಕಳಸವಳ್ಳಿ-ಅಂಬಾರಗೋಡ್ಲು ಸಂಪರ್ಕಿಸುವ ಶರಾವತಿ ಹಿನ್ನೀರಿನ ಬೃಹತ್ ಸೇತುವೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ, 'ವಂದೇ ಮಾತರಂ' ಹಾಗೂ 'ಭಾರತ್ ಮಾತಾ ಕೀ ಜೈ' ಎಂಬ ದೇಶಭಕ್ತಿಯ ಘೋಷಣೆಗಳನ್ನು ಕೂಗಿ ಸಂಭ್ರಮಿಸಲಾಯಿತು. ಈ ಅಪರೂಪದ ಕ್ಷಣದಲ್ಲಿ ಸ್ಥಳೀಯ ಪ್ರಮುಖರಾದ ಪ್ರಸನ್ನ ಕೆರೆಕೈ, ರಾಜೇಂದ್ರ ಅವಿನಹಳ್ಳಿ, ಗಿರೀಶ್, ಶ್ರೀಧರ್ ಚುಟ್ಟಿಕೆರೆ ಸೇರಿದಂತೆ ನೂರಾರು ದೇಶಪ್ರೇಮಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ತಡರಾತ್ರಿಯಲ್ಲೂ ಕಂಠಪೂರ್ತಿ ದೇಶಪ್ರೇಮದ ಗೀತೆಗಳನ್ನು ಹಾಡಿ ಸಂಭ್ರಮ ಹಂಚಿಕೊಂಡರು.
- Basavaraj Yaraganavi
- Updated on: Aug 15, 2026
- 10:26 am