ಶಿವಮೊಗ್ಗ: ಎಸ್ಐಆರ್ ಪ್ರಕ್ರಿಯೆ ವೇಳೆ ಹೃದಯಾಘಾತದಿಂದ ಮತ್ತೋರ್ವ ಬಿಎಲ್ಒ ಸಾವು!
SIR ಕರ್ತವ್ಯಕ್ಕೆ ತೆರಳುವಾಗ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ವಿಎಒ ಭುವನಾ ಮೃತಪಟ್ಟಿದ್ದಾರೆ. ಬಳಿಕ ಬೀದರ್ನಲ್ಲಿ ಹೃದಯಾಘಾತದಿಂದ ಬಿಎಲ್ಒ ಸಾವನ್ನಪ್ಪಿದ್ದಾರೆ. ಇವೆರಡು ಘಟನೆಗಳು ಮಾಸುವ ಮುನ್ನವೇ ಇಂದು ಭದ್ರಾವತಿ ತಾಲೂಕಿನಲ್ಲಿ ಕರ್ತವ್ಯ ವೇಳೆ ಮತ್ತೋರ್ವ ಬಿಎಲ್ಒ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
- Basavaraj Yaraganavi
- Updated on: Jul 6, 2026
- 7:19 pm
ಹೊಸನಗರದಲ್ಲಿ ಅಮಾನವೀಯ ಕೃತ್ಯ: ನಿರ್ಜನ ಪ್ರದೇಶದಲ್ಲಿ ನವಜಾತ ಹೆಣ್ಣು ಶಿಶು ಬಿಟ್ಟುಹೋದ ಅಪರಿಚಿತರು!
Shivamogga News: ಇನ್ನು 1.6 ಕೆಜಿ ತೂಕವಿರುವ ಹೆಣ್ಣು ಶಿಶುವಿಗೆ ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಆರೈಕೆ ನೀಡಿ ಬಳಿಕ ಚಿಕಿತ್ಸೆ ಹಾಗೂ ಪಾಲನೆಗಾಗಿ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ . ಮಗುವನ್ನು ಯಾರು ಮತ್ತು ಯಾವ ಕಾರಣಕ್ಕಾಗಿ ಇಲ್ಲಿ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ರಿಪ್ಪನಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
- Basavaraj Yaraganavi
- Updated on: Jul 6, 2026
- 2:21 pm
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ, ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆತ
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ( Jog falls) ಮತ್ತೆ ರಾಜಕಳೆ ಬಂದಿದೆ. ಹೌದು....ಜುಲೈ ಆರಂಭದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೋಗ ಜಲಪಾತದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆಯುತ್ತಿದ್ದು, ಈ ಅದ್ಭುತ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.
- Basavaraj Yaraganavi
- Updated on: Jul 5, 2026
- 9:42 pm
ಈ ಬಾರಿ ಮಳೆಗಾಲದಲ್ಲಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂದ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. 3.24 ಟಿಎಂಸಿ ಸಾಮರ್ಥ್ಯ ಗಾಜನೂರಿನ ತುಂಗಾ ಜಲಾಶಯವು ಪ್ರತಿ ವರ್ಷ ಜೂನ್ ಮೊದಲ ವಾರದಲ್ಲಿ ಭರ್ತಿಯಾಗುತ್ತಿತ್ತು. ಆದ್ರೆ ಬಾರಿ ಆರಂಭದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಒಂದು ತಿಂಗಳು ತಡವಾಗಿ ಅಂದ್ರೆ ಜುಲೈ ಮೊದಲ ವಾರದಲ್ಲಿ ತುಂಗಾ ಜಲಾಶಯ ತುಂಬಿದೆ.
- Basavaraj Yaraganavi
- Updated on: Jul 5, 2026
- 4:23 pm
ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಒಣಮರದ ರೆಂಬೆ; ಸ್ಥಳದಲ್ಲೇ ಯುವಕ ಸಾವು, ಮತ್ತೊಬ್ಬ ಗಂಭೀರ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಭೀಕರ ಬೈಕ್ ದುರಂತ ಸಂಭವಿಸಿದೆ. ತಾರಿಗ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ರಸ್ತೆ ಬದಿಯಲ್ಲಿದ್ದ ಒಣಮರದ ದೊಡ್ಡ ರೆಂಬೆ ಮುರಿದು ಬಿದ್ದ ಕಾರಣ 26 ವರ್ಷದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೀನು ಹಿಡಿಯಲು ಹೊರಟಿದ್ದ ಸಂದರ್ಭದಲ್ಲಿ ನಡೆದ ಈ ಘಟನೆಯಲ್ಲಿ, ಬೈಕ್ನಲ್ಲಿದ್ದ ಮತ್ತೊಬ್ಬ ಯುವಕ ವೀರಭದ್ರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ರಿಪ್ಪನ್ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Basavaraj Yaraganavi
- Updated on: Jul 4, 2026
- 6:57 pm
ಸರ್ಕಾರಿ ಕೆಲಸದ ಹೆಸರಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಮಕ್ಮಲ್ ಟೋಪಿ: ಕೋಟ್ಯಂತರ ರೂ ವಂಚನೆ
ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಗೆ ಕೋಟ್ಯಂತರ ರೂ ವಂಚನೆ ಮಾಡಿರುವಂತಹ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನೂರಾರು ನಿರುದ್ಯೋಗಿಗಳಿಂದ 2 ಕೋಟಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಾರೆ. ನಕಲಿ ನೇಮಕಾತಿ ಪತ್ರಗಳನ್ನು ನೀಡಿ ವಂಚಿಸಿರುವ ಜೋಡಿಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ.
- Basavaraj Yaraganavi
- Updated on: Jul 2, 2026
- 7:40 pm
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ಶಿವಮೊಗ್ಗದಲ್ಲಿಂದು ಇಂಧನ ಸಚಿವ ಕೆ ಜೆ ಜಾರ್ಜ್ ಕೂಡಾ ಮಾತನಾಡಿದ್ದು, ವಿದ್ಯುತ್ ಖಾಸಗೀಕರಣ ವಿಚಾರದಲ್ಲಿ ಆತಂಕ ಬೇಡ. 2003ರಲ್ಲಿ ಬಿಜೆಪಿ ಅಧಿಕಾರ ಇದ್ದಾಗ ಖಾಸಗೀಕರಣಕ್ಕೆ ತಿದ್ದುಪಡಿ ತಂದರು. ಆದ್ರೆ ಇಷ್ಟರೊಳಗೆ ಕರ್ನಾಟಕದಲ್ಲಿ ಆಗಿಲ್ಲ. ಈಗ ಮತ್ತೆ ವಿದ್ಯುತ್ ಖಾಸಗೀಕರಣಕ್ಕೆ KERCಗೆ ಪ್ರಸ್ತಾವನೆಸಲ್ಲಿಸಿದಾರೆ. ನಮ್ಮ ವಿದ್ಯುತ್ ನಿಗಮಗಳಿಗೆ ಅಬ್ಜೆಕ್ಷನ್ ಫೈಲ್ ಮಾಡಲು ಹೇಳಿದ್ದೇವೆ. ಫೈನಲ್ ಆರ್ಡರ್ ಬಂದಮೇಲೆ ನಾವು ಏನ್ ಮಾಡ್ಬೇಕು ಯೋಚಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
- Basavaraj Yaraganavi
- Updated on: Jun 30, 2026
- 5:23 pm
ಲಿಂಗನಮಕ್ಕಿ ಜಲಾಶಯದಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ
ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಕನಿಷ್ಠ ಮಟ್ಟದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಕೆಪಿಟಿಸಿಎಲ್ ಮತ್ತು ಕೆಪಿಸಿಎಲ್ ಈ ನಿರ್ಧಾರ ಕೈಗೊಂಡಿವೆ. ಇದು ರಾಜ್ಯದ ವಿದ್ಯುತ್ ಪೂರೈಕೆ ಮೇಲೆ ಪರಿಣಾಮ ಬೀರಲಿದೆ.
- Basavaraj Yaraganavi
- Updated on: Jun 27, 2026
- 2:29 pm
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್ನಲ್ಲಿ ಭಾರೀ ಅವಘಡ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಬಳಿ ಇರುವ ಶರಾವತಿ ಜಲವಿದ್ಯುದಾಗಾರದ 7ನೇ ಘಟಕದ ದುರಸ್ತಿ ಕಾರ್ಯದ ವೇಳೆ ಗುರುವಾರ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಬೃಹತ್ ಪೆನ್ಸ್ಟಾಕ್ ಪೈಪ್ನ ಡ್ರೈನ್ ವಾಲ್ವ್ನಲ್ಲಿ ಲೀಕೇಜ್ ಉಂಟಾಗಿ ನೆಲಮಾಳಿಗೆಗೆ ನೀರು ನುಗ್ಗಿದ ಕಾರಣ, ಮುಂಜಾಗ್ರತಾ ಕ್ರಮವಾಗಿ 3 ಘಟಕಗಳ ವಿದ್ಯುತ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
- Basavaraj Yaraganavi
- Updated on: Jun 26, 2026
- 8:54 am
17 ಶಾಸಕರ ಖರೀದಿಸಿ 2019ರಲ್ಲಿ ಸರ್ಕಾರ ರಚಿಸಿತ್ತಾ ಬಿಜೆಪಿ?: ಈಶ್ವರಪ್ಪ ಹೇಳಿಕೆ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಚರ್ಚೆ
2019ರಲ್ಲಿ 17 ಶಾಸಕರನ್ನು ಹಣ ನೀಡಿ ಖರೀದಿಸಿ ಬಿಜೆಪಿ ಸರ್ಕಾರ ರಚಿಸಲಾಗಿತ್ತು ಎಂಬ ಉಚ್ಛಾಟಿತ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದ್ದು, ಹಳೆಯ 'ಕುದುರೆ ವ್ಯಾಪಾರ'ದ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಶಾಸಕರ ರಾಜೀನಾಮೆಯಿಂದ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡು ಪತನವಾಗಿತ್ತು. ಆ ವೇಳೆ ಬಿಜೆಪಿಯಿಂದ ಶಾಸಕರ ಖರೀದಿ ಆರೋಪ ಕೇಳಿಬಂದಿತ್ತು.
- Basavaraj Yaraganavi
- Updated on: Jun 22, 2026
- 2:43 pm
ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಸಾವನ್ನಪ್ಪಿದ್ದು, ಹೃದಯಾಘಾತದ ಶಂಕೆ ವ್ಯಕ್ತವಾಗಿದೆ. ಆಟವಾಡುತ್ತಿದ್ದಾಗ ಕುಸಿದು ಬಿದ್ದ ತ್ರಿಲೋಕ್ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಇದು ಹಠಾತ್ ನಿಧನವೋ ಅಥವಾ ಆರೋಗ್ಯ ಸಮಸ್ಯೆಯಿತ್ತೇ ಎಂಬ ಕುರಿತು ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
- Basavaraj Yaraganavi
- Updated on: Jun 15, 2026
- 10:08 am
ಸಕ್ರೆಬೈಲಿನಲ್ಲಿ ಒಡೆಯನಿಲ್ಲದೆ ‘ಭೀಷ್ಮ’ ಆನೆ ಅನಾಥ: ಹೆತ್ತ ಮಗನಂತೆ ಸಾಕಿ ಸಲಹುತ್ತಿದ್ದ ಮಾವುತ ಸಿದ್ದಿಕ್ ಪಾಷಾ ಇನ್ನಿಲ್ಲ
ಸಕ್ರೆಬೈಲು ಆನೆ ಬಿಡಾರದ ದಕ್ಷ ಮಾವುತ ಸಿದ್ದಿಕ್ ಪಾಷಾ ಅವರ ಅಕಾಲಿಕ ನಿಧನವು ಇಡೀ ಬಿಡಾರದಲ್ಲಿ ಸೂತಕದ ಛಾಯೆ ಮೂಡಿಸಿದೆ. 16 ವರ್ಷಗಳಿಂದ ಕಾಡಾನೆಗಳನ್ನು ಪಳಗಿಸಿ, ಆರೈಕೆ ಮಾಡುತ್ತಿದ್ದ ಸಿದ್ದಿಕ್, ವಿಶೇಷವಾಗಿ ಬಲಿಷ್ಠ ಭೀಷ್ಮ ಆನೆಯ ಜವಾಬ್ದಾರಿ ಹೊತ್ತಿದ್ದರು. ಮೆದುಳು ಜ್ವರದಿಂದ ನಿಧನರಾದ ಅವರ ಅಗಲಿಕೆಯಿಂದಾಗಿ ಆನೆಗಳು ಹಾಗೂ ಸಿಬ್ಬಂದಿ ದುಃಖದಲ್ಲಿ ಮುಳುಗಿದ್ದಾರೆ, ಮಾವುತ-ಆನೆಗಳ ನಡುವಿನ ಪವಿತ್ರ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ.
- Basavaraj Yaraganavi
- Updated on: Jun 12, 2026
- 6:58 pm