ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.
Karnataka Voter List Revision: ಎಸ್ಐಆರ್ ಬಗ್ಗೆ ನಿಮಗೆ ಗೊಂದಲಗಳಿವೆಯೇ? ಇಲ್ಲಿದೆ ನಿಮ್ಮ ಪ್ರಶ್ನೆಗಳಿಗೆ ಉತ್ತರ
ಇಂದಿನಿಂದ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ. ಈ ವೇಳೆ ನಿಮ್ಮ ಮನೆಗೆ ಬೀಗ ಹಾಕಿದ್ದರೆ ಏನು ಮಾಡಬೇಕು? ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದೆ? ಹೀಗೆ ಹಲವು ಪ್ರಶ್ನೆಗಳಿಗೆ ಉತ್ತರಗಳು ಇಲ್ಲಿವೆ.
- Bhavana Hegde
- Updated on: Jun 30, 2026
- 2:51 pm
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆ ಮುಂದುವರಿದಿರುವ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲದವರಿಗೆ ಈ ಸೌಲಭ್ಯಗಳನ್ನು ಏಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಇತರೆ ರಾಜ್ಯಗಳಾದ ಬಿಹಾರ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತಿರುವುದನ್ನು ಉಲ್ಲೇಖಿಸಿ, ಮತದಾರರಲ್ಲದವರಿಗೆ ಆರ್ಥಿಕ ನೆರವು ನೀಡುವುದನ್ನು ರಾಜ್ಯವೂ ಪರಿಗಣಿಸಬಹುದು ಎಂದು ಸೂಚಿಸಿದ್ದಾರೆ. ಮತದಾರರು ರಾಜ್ಯದಲ್ಲಿ ವಾಸವಾಗಿದ್ದರೆ ಮಾತ್ರ ಗ್ಯಾರಂಟಿ ಯೋಜನೆಗಳಿಗೆ ಅರ್ಹರಾಗಬೇಕು ಎಂಬುದು ಅವರ ಅಭಿಪ್ರಾಯ. ಒಂದು ವೇಳೆ ಅರ್ಜಿ ಸಲ್ಲಿಸದೆ ಮತದಾನದ ಹಕ್ಕನ್ನು ಕಳೆದುಕೊಂಡರೆ, ಭವಿಷ್ಯದಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಯಾವುದೇ ಗ್ಯಾರಂಟಿ ಯೋಜನೆಗಳು ಹಾಗೂ ಪೆನ್ಷನ್ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಮುನ್ನೆಚ್ಚರಿಕೆ ನೀಡಿದ್ದಾರೆ.
- Bhavana Hegde
- Updated on: Jun 30, 2026
- 1:06 pm
ಬಿಎಂಟಿಸಿ ಬಸ್ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸು! ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ
ಬೆಂಗಳೂರಿನ ಬಿಎಂಟಿಸಿ ಬಸ್ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸಾಗಿದೆ ಎಂದು 'X' ನಲ್ಲಿ ಪೋಸ್ಟ್ ಮಾಡಿರುವ ಅವರು, ಜನರು ಕೆಲಸ ಮಾಡಬೇಕೋ ಅಥವಾ ರಸ್ತೆಯಲ್ಲೇ ಕಾಯಬೇಕೋ ಎಂದು ಸಿಎಂಗೆ ಪ್ರಶ್ನಿಸಿದ್ದಾರೆ.
- Bhavana Hegde
- Updated on: Jun 30, 2026
- 12:42 pm
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್ಐಆರ್ಗೆ ಚಾಲನೆ!
ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅಧಿಕಾರಿಗಳೊಂದಿಗೆ ಸಹಕರಿಸಿ,7 ದಿನಗಳಲ್ಲೇ ಎಲ್ಲರಿಗೂ ಫಾರ್ಮ್ ಕೊಡುತ್ತಾರೆ. ದಯವಿಟ್ಟು ನಿಮ್ಮ ಫೋನ್ ನಂಬರ್, ಆಧಾರ್ ಕಾರ್ಡ್ ಮಾಹಿತಿಗಾಗಿ ಕೊಡಬೇಕು. ಬೇರೆ ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುತ್ತಿದ್ದಾರೆ. ಮತದಾನ ಇಲ್ಲದೆ ಇದ್ರೆ ನಾವು ಯಾಕೆ ಗ್ಯಾರಂಟಿ ಕೊಡಬೇಕು? ಹೀಗಾಗಿ ಈ ಅಭಿಯಾನದಲ್ಲಿ ಭಾಗಿಯಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ಸಿಎಂ ಹೇಳಿದ್ದಾರೆ.
- Bhavana Hegde
- Updated on: Jun 30, 2026
- 12:32 pm
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಭಾರಿ ಅವಾಂತರ ಸೃಷ್ಟಿಯಾಗಿದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಹವಾಮಾನ ಇಲಾಖೆಯು ಜುಲೈ 2ರವರೆಗೆ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಜನರಿಗೆ ಮನವಿ ಮಾಡಿದ್ದಾರೆ.
- Bhavana Hegde
- Updated on: Jun 30, 2026
- 10:48 am
ಮುಂಗಾರು ಮಳೆಯ ಹಿನ್ನೆಲೆ ರಾಜ್ಯದ ಹಲವೆಡೆ ಶುದ್ಧ ಗಾಳಿ, ವಾಯು ಗುಣಮಟ್ಟದಲ್ಲಿ ಸುಧಾರಣೆ
ರಾಜ್ಯಾದ್ಯಂತ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ತೃಪ್ತಿಕರವಾಗಿದೆ. ಸಿಲಿಕಾನ್ ಸಿಟಿಯ ಬಿಟಿಎಂ ಲೇಔಟ್, ಜಯನಗರ ಸೇರಿದಂತೆ ಹಲವೆಡೆ ಶುದ್ಧ ಗಾಳಿ ದಾಖಲಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಯಾದಗಿರಿಯಲ್ಲಿ ಮಾಲಿನ್ಯದ ಮಟ್ಟ ಗಣನೀಯವಾಗಿ ಕುಸಿದಿದೆ. ಒಟ್ಟಾರೆ ವಾತಾವರಣ ಆರೋಗ್ಯಕರವಾಗಿದೆ.
- Bhavana Hegde
- Updated on: Jun 30, 2026
- 7:41 am
Karnataka Weather Forecast: ರಾಜ್ಯದೆಲ್ಲೆಡೆ ವರುಣಾರ್ಭಟ; ಕಡಲತೀರದ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಆರೆಂಜ್ ಅಲರ್ಟ್!
Monsoon 2026:ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 2 ರವರೆಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಸಾರ್ವಜನಿಕರು ನದಿ ದಡ ಮತ್ತು ಕಡಲತೀರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕಟ್ಟೆಚ್ಚರದ ಮುನ್ನೆಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಒಳನಾಡಿನಲ್ಲೂ ಸಾಧಾರಣ ಮಳೆಯಾಗಲಿದೆ.
- Bhavana Hegde
- Updated on: Jun 30, 2026
- 7:16 am
Horoscope Today: ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 30, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ಬ್ರಹ್ಮಯೋಗ ಮತ್ತು ಬಾಲವ ಕರಣವನ್ನು ಒಳಗೊಂಡಿದೆ. ಮಂಗಳವಾರವು ಸುಬ್ರಮಣ್ಯ ಮತ್ತು ಹನುಮನ ಆರಾಧನೆಗೆ ಪ್ರಾಶಸ್ತ್ಯದ ದಿನವಾಗಿದೆ. ಈ ದಿನ ರವಿ ಮಿಥುನ ರಾಶಿಯಲ್ಲಿ ಮತ್ತು ಚಂದ್ರ ಧನುಸ್ಸು ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಗುರೂಜಿ ಅವರು ಪ್ರತಿ ರಾಶಿಗೆ ಐದು ಅಥವಾ ಆರು ಗ್ರಹಗಳ ಶುಭಫಲಗಳನ್ನು ವಿವರಿಸಿದ್ದಾರೆ.
- Bhavana Hegde
- Updated on: Jun 30, 2026
- 6:46 am
ಬೆಂಗಳೂರಲ್ಲಿ ಸಿಸಿಬಿ ಬಿಗ್ ಬೇಟೆ: ಲಗೇಜ್ ಬ್ಯಾಗ್ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್; ಮೂವರು ನೈಜೀರಿಯನ್ನರ ಬಂಧನ!
ನಗರದಲ್ಲಿ ಸಿಸಿಬಿ (CCB) ಅಧಿಕಾರಿಗಳು ಬೃಹತ್ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿದ್ದು, 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮೂವರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತರು ಮಾದನಾಯಕನಹಳ್ಳಿಯ ಬೈಲಕೊನೆಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
- Bhavana Hegde
- Updated on: Jun 29, 2026
- 2:07 pm
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದಲ್ಲಿ ಒಂದೆಡೆ ವರುಣನ ಆರ್ಭವಿದ್ದರೆ, ಇನ್ನೊಂದೆಡೆ ಬರಗಾಲದ ಆತಂಕ ಎದುರಾಗಿದೆ. ಕಾರವಾರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಗೋಕರ್ಣದಲ್ಲಂತೂ ನಿರಂತರ 36 ಗಂಟೆಗಳ ಮಳೆಗೆ ಗೋಕರ್ಣದ ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ನೀರು ನುಗ್ಗಿ, ಆತ್ಮಲಿಂಗವೂ ಜಲಾವೃತವಾಗಿದೆ. ಗೋಕರ್ಣದ ಬೀದಿಗಳು ಹಾಗೂ ಅಂಗಡಿಗಳು ನೀರಿನಿಂದ ಆವೃತವಾಗಿ ಭಕ್ತರು, ವ್ಯಾಪಾರಿಗಳು ಪರದಾಡಿದರು. ಕುಮಟಾ-ಸಿದ್ದಾಪುರ ರಾಜ್ಯ ಹೆದ್ದಾರಿಯೂ ಹೊಳೆಯಂತಾಗಿತ್ತು.
- Bhavana Hegde
- Updated on: Jun 29, 2026
- 11:53 am
ರಸ್ತೆ ಅಪಘಾತ ಮತ್ತು ಅತಿ ವೇಗ ಚಾಲನೆಯಲ್ಲಿ ಇಡೀ ದೇಶದಲ್ಲೇ ಬೆಂಗಳೂರಿಗೆ ಮೊದಲ ಸ್ಥಾನ!
ಕೇಂದ್ರ ಸಾರಿಗೆ ಇಲಾಖೆಯ 2024 ರ ವರದಿಯ ಪ್ರಕಾರ, ದೇಶದಲ್ಲೇ ಅತಿ ವೇಗದ ಚಾಲನೆ ಹಾಗೂ ನೇರ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ನಗರದಲ್ಲಿ ಕಳೆದ ವರ್ಷ ಒಟ್ಟು 4,769 ಅಪಘಾತಗಳು ಸಂಭವಿಸಿದ್ದು, 894 ಜನರು ಜೀವ ಕಳೆದುಕೊಂಡಿದ್ದಾರೆ. ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳೇ ಇಲ್ಲಿ ಅತಿ ಹೆಚ್ಚು ಬಲಿಯಾಗುತ್ತಿದ್ದಾರೆ.
- Bhavana Hegde
- Updated on: Jun 29, 2026
- 10:53 am
Free Bus Pass For All Students: ಇಂದಿನಿಂದ ಫ್ರೀ ಬಸ್ ಪಾಸ್ಗೆ ಅರ್ಜಿ ಸಲ್ಲಿಕೆ
ಕರ್ನಾಟಕದಲ್ಲಿ ಪ್ರಸ್ತುತ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್ಗಾಗಿ ಇಂದಿನಿಂದಲೇ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಶಾಲಾ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಉಚಿತ ಬಸ್ ಪಾಸ್ ಘೋಷಣೆಗೂ ಮುನ್ನ ಬಸ್ ಪಾಸ್ ಪಡೆದುಕೊಂಡು ಶುಲ್ಕ ಪಾವತಿಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಸರ್ಕಾರವು ಹಣ ಮರುಪಾವತಿಸುವ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಾಗ ಪಾವತಿಸಿದ್ದ ಶುಲ್ಕವನ್ನು ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
- Bhavana Hegde
- Updated on: Jun 29, 2026
- 10:29 am