AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನಾ ಹೆಗಡೆ

ಭಾವನಾ ಹೆಗಡೆ

Sub Editor - TV9 Kannada

bhavanapurushottam.hegde@tv9.com

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow On:
ದೇವಕಿ-ಯಶೋದೆಯಂತೆ ಕನ್ನಡ ಮತ್ತು ಮರಾಠಿ: ಭಾಷಾ ಬಾಂಧವ್ಯದ ಬಗ್ಗೆ ಸುಧಾಮೂರ್ತಿ ಅವರ ಮನದಾಳದ ಮಾತು!

ದೇವಕಿ-ಯಶೋದೆಯಂತೆ ಕನ್ನಡ ಮತ್ತು ಮರಾಠಿ: ಭಾಷಾ ಬಾಂಧವ್ಯದ ಬಗ್ಗೆ ಸುಧಾಮೂರ್ತಿ ಅವರ ಮನದಾಳದ ಮಾತು!

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಕನ್ನಡ ಮತ್ತು ಮರಾಠಿ ಭಾಷೆಗಳ ನಡುವಿನ ಸಂಬಂಧವನ್ನು ತಾಯಿ ಮತ್ತು ಮೌಶಿ (ಚಿಕ್ಕಮ್ಮ) ಬಾಂಧವ್ಯಕ್ಕೆ ಹೋಲಿಸಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾಮೂರ್ತಿ ತಮ್ಮ ಜೀವನದಲ್ಲಿ ಈ ಎರಡು ಭಾಷೆಗಳ ಸ್ಥಾನವನ್ನು ಸುಂದರವಾಗಿ ಬಣ್ಣಿಸುತ್ತಾರೆ. ನನಗೆ ಕನ್ನಡ ನನ್ನ ಹೆತ್ತ ತಾಯಿಯಿದ್ದಂತೆ, ಆದರೆ ಮರಾಠಿ ಭಾಷೆ ನನಗೆ ಚಿಕ್ಕಮ್ಮನಿದ್ದಂತೆ. ಶ್ರೀಕೃಷ್ಣನಿಗೆ ದೇವಕಿ ಮತ್ತು ಯಶೋದೆಯೆಂಬ ಇಬ್ಬರು ತಾಯಂದಿರಿದ್ದಂತೆ, ನನಗೂ ಈ ಎರಡು ಭಾಷೆಗಳು ಅಷ್ಟೇ ಪ್ರಿಯವಾದವು ಎಂದು ಹೇಳಿದ್ದಾರೆ.

ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ? ಡಿಕೆ ಸುರೇಶ್ ಹೇಳ್ತಾರೆ ಕೇಳಿ

ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ? ಡಿಕೆ ಸುರೇಶ್ ಹೇಳ್ತಾರೆ ಕೇಳಿ

ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ. ಸುಮಾರು 136 ಕೋಟಿ ರೂ. ವೆಚ್ಚದಲ್ಲಿ ತುಪ್ಪ ಪೂರೈಕೆ ಮಾಡುತ್ತೇವೆ. ನಂದಿನಿ ತುಪ್ಪವು ಗುಣಮಟ್ಟಕ್ಕೆ ಹೆಸರುವಾಸಿಯಾಗಿದ್ದು, ಗ್ರಾಹಕರ ವಿಶ್ವಾಸ ಗಳಿಸಿದೆ. ಕಲಬೆರಕೆ ತಡೆಗಟ್ಟಲು ಡಿಜಿಟಲ್ ಲಾಕ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದು ಸುರೇಶ್ ತಿಳಿಸಿದ್ದಾರೆ.

ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಬೆಂಗಳೂರು ಬಿಬಿಎಂಪಿ (GBA) ಕೇಂದ್ರ ಕಚೇರಿಯ ಬೆಂಕಿ ಅವಘಡದ ನಂತರವೂ ಗುಣನಿಯಂತ್ರಣ ಪ್ರಯೋಗಾಲಯದ ಪುನಶ್ಚೇತನ ಕಾರ್ಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಇಂದಿಗೂ ಧೂಳು ಹಿಡಿಯುತ್ತಿದ್ದು, ಕಾಮಗಾರಿಗಳ ಗುಣಮಟ್ಟದ ಬಗ್ಗೆ ಈಗ ಸಂಶಯ ಮೂಡಿದೆ.

Bengaluru Air Quality: ಬಳ್ಳಾರಿ ಜನರ ಉಸಿರಿಗೆ ಕುತ್ತು: ಮಾರಕ ಹಂತಕ್ಕೆ ತಲುಪಿದ ಗಾಳಿಯ ಗುಣಮಟ್ಟ!

Bengaluru Air Quality: ಬಳ್ಳಾರಿ ಜನರ ಉಸಿರಿಗೆ ಕುತ್ತು: ಮಾರಕ ಹಂತಕ್ಕೆ ತಲುಪಿದ ಗಾಳಿಯ ಗುಣಮಟ್ಟ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಇಂದು ಬಳ್ಳಾರಿಯ ಏರ್ ಕ್ವಾಲಿಟಿ ಹಠಾತ್ ಕುಸಿತ ಕಂಡಿದ್ದು, ಅಪಾಯಕಾರಿ ಮಟ್ಟದಲ್ಲಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.ಜನರು ತುರ್ತು ಕೆಲಸಗಳಿಲ್ಲದೆ ಹೊರಬರದಂತೆ ಮತ್ತು ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ!

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ!

Karnataka Weather: ರಾಜ್ಯದಲ್ಲಿ ಇಂದೂ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಉಳಿದೆಡೆ ಶುಷ್ಕ ವಾತಾವರಣ ಇರಲಿದೆ. ಹೀಟ್ ವೇವ್​ನಿಂದ ತತ್ತರಿಸಿದ್ದ ಕರಾವಳಿ ಪ್ರದೇಶದಲ್ಲಿಯೂ ಇಂದು ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Daily Devotional: ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?

Daily Devotional: ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?

ದೇವಾಲಯದಲ್ಲಿ ಪ್ರಸಾದ ಯಾಕೆ ತಿರಸ್ಕರಿಸಬಾರದು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇವಾಲಯಗಳು ನಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು, ಕಷ್ಟಗಳನ್ನು ಹೇಳಿಕೊಳ್ಳಲು ಮತ್ತು ಕರ್ಮಗಳನ್ನು ತೊಳೆದುಕೊಳ್ಳಲು ಒಂದು ಶಕ್ತಿ ಕೇಂದ್ರಗಳಾಗಿವೆ. ಇಂತಹ ಪವಿತ್ರ ಸ್ಥಳದಲ್ಲಿ ಭಗವಂತನಿಗೆ ಅರ್ಪಿಸಿದ ಪ್ರಸಾದವನ್ನು ನಿರ್ಲಕ್ಷಿಸುವುದು ಅಥವಾ ನಿರಾಕರಿಸುವುದು ದೊಡ್ಡ ತಪ್ಪು ಎಂದು ಗುರೂಜಿ ಹೇಳಿದ್ದಾರೆ.

Horoscope Today: ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ

Horoscope Today: ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 29, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.

ಬೆಂಗಳೂರು ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ಜಗಳ; ಸಹಾಯಕ ಪ್ರಾಧ್ಯಾಪಕಿಯಿಂದ ಜಾತಿ ಕಿರುಕುಳ ಆರೋಪ!

ಬೆಂಗಳೂರು ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ಜಗಳ; ಸಹಾಯಕ ಪ್ರಾಧ್ಯಾಪಕಿಯಿಂದ ಜಾತಿ ಕಿರುಕುಳ ಆರೋಪ!

ಕೆ.ಎಸ್. ಲೇಔಟ್‌ನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಕುಮಾರಿ ಮತ್ತು ಅವರ ರೂಮೇಟ್ ಪ್ರೀತಿ ಜೈನ್ ನಡುವೆ ಗಲಾಟೆ ನಡೆದಿದೆ. ಮಾರ್ಚ್‌ನಲ್ಲಿ ಹಾಸ್ಟೆಲ್ ಸೇರಿದ್ದ ಜ್ಯೋತಿ ಕುಮಾರಿಯವರಿಗೆ, ಪ್ರೀತಿ ಜೈನ್ ಜಾತಿ ಮತ್ತು ಆಹಾರ ಪದ್ಧತಿ ಆಧಾರದ ಮೇಲೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕಿರುಕುಳವು ಕೊನೆಗೆ ಹಲ್ಲೆಯಾಗಿ ಪರಿಣಮಿಸಿದೆ ಎಂದು ಜ್ಯೋತಿ ಕುಮಾರಿ ದೂರಿದ್ದಾರೆ. ಈ ಘಟನೆ ಬಗ್ಗೆ ಜ್ಯೋತಿ ಕುಮಾರಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ!

ಬಿಎಂಆರ್​ಸಿಎಲ್ ತನ್ನ ಪ್ರಯಾಣಿಕರಿಗೆ ಶುಭ ಸುದ್ದಿ ಕೊಟ್ಟಿದೆ. ನಮ್ಮ ಮೆಟ್ರೋದ ಪಿಂಕ್ ಲೈನ್ ಮಾರ್ಗದಲ್ಲಿ ಇಂದಿನಿಂದ ಮೇ 12ರವರೆಗೆ ಆರ್‌ಡಿಎಸ್‌ಒ ತಾಂತ್ರಿಕ ಪರೀಕ್ಷೆಗಳು ನಡೆಯಲಿವೆ. ಕಾಳೇನ ಅಗ್ರಹಾರ ಮತ್ತು ತಾವರೆಕೆರೆ ನಡುವಿನ ಸಂಚಾರಕ್ಕೆ ಅಗತ್ಯವಾದ ವೇಗ ಪ್ರಮಾಣೀಕರಣಕ್ಕಾಗಿ ಈ ಪರೀಕ್ಷೆ ಕೈಗೊಳ್ಳಲಾಗಿದ್ದು, ವರ್ಷಾಂತ್ಯಕ್ಕೆ ಸಂಪೂರ್ಣ ಮಾರ್ಗ ಸಿದ್ಧವಾಗುವ ನಿರೀಕ್ಷೆಯಿದೆ.

ಬಿಸಿಲ ಬೇಗೆಗೆ ಬೆಂದ ಬೆಂಗಳೂರು: ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್!

ಬಿಸಿಲ ಬೇಗೆಗೆ ಬೆಂದ ಬೆಂಗಳೂರು: ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್!

ಬೆಂಗಳೂರಿನಲ್ಲಿ ದಾಖಲೆ ಮಟ್ಟದ ತಾಪಮಾನ ಏರಿಕೆಯಾಗಿದ್ದು, ಸಾರ್ವಜನಿಕರು ಸೆಕೆಯಿಂದ ತಪ್ಪಿಸಿಕೊಳ್ಳಲು ಎಸಿ, ಕೂಲರ್ ಮತ್ತು ಮಣ್ಣಿನ ಮಡಿಕೆಗಳ ಮೊರೆ ಹೋಗುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಹಲವೆಡೆ ಸ್ಟಾಕ್ ಕೊರತೆ ಎದುರಾಗಿದೆ. ವ್ಯಾಪಾರಸ್ಥರ ಮುಖದಲ್ಲಿ ಲಾಭದ ಮಂದಹಾಸ ಮೂಡಿದೆ.

Bengaluru Air Quality: ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಲ್ಲದಕ್ಕಿಂತ ಬೆಸ್ಟ್!

Bengaluru Air Quality: ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಲ್ಲದಕ್ಕಿಂತ ಬೆಸ್ಟ್!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಇಂದು ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಕಂಡಿದ್ದು, ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಬಳ್ಳಾರಿ ಮತ್ತು ಮಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಕರ್ನಾಟಕ ಹವಾಮಾನ ವರದಿ: ಹೀಟ್ ವೇವ್ ಬೆನ್ನಲ್ಲೇ ಆಲಿಕಲ್ಲು ಮಳೆ ಅಬ್ಬರ: ಉತ್ತರ ಒಳನಾಡಿನ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ!

ಕರ್ನಾಟಕ ಹವಾಮಾನ ವರದಿ: ಹೀಟ್ ವೇವ್ ಬೆನ್ನಲ್ಲೇ ಆಲಿಕಲ್ಲು ಮಳೆ ಅಬ್ಬರ: ಉತ್ತರ ಒಳನಾಡಿನ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ!

Karnataka Weather: ರಾಜ್ಯದಲ್ಲಿ ಇಂದೂ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಹೀಟ್ ವೇವ್​ನಿಂದ ತತ್ತರಿಸಿದ್ದ ಕರಾವಳಿ ಪ್ರದೇಶದಲ್ಲಿಯೂ ಇಂದು ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.