ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ 9 ಡಿಜಿಟಲ್ನಲ್ಲಿ ವೃತ್ತಿ ಜೀವನದ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.
ಬೆಣ್ಣೆ ನಗರಿ ಹುಡುಗಿಗೆ ಮನಸೋತ ನ್ಯೂಜಿಲೆಂಡ್ ಯುವಕ! ಅಪ್ಪಟ ಹಿಂದೂ ಸಂಪ್ರದಾಯದಂತೆ ದಾವಣಗೆರೆಯಲ್ಲಿ ನಡೀತು ಅದ್ದೂರಿ ವಿವಾಹ
ದಾವಣಗೆರೆಯ ಖಾಸಗಿ ರೆಸಾರ್ಟ್ನಲ್ಲಿ ನ್ಯೂಜಿಲೆಂಡ್ನ ಯುವಕನ ಜೊತೆ ದಾವಣಗೆರೆ ಹುಡುಗಿಯ ವಿವಾಹ ನೆರವೇರಿದ್ದು, ಪ್ರೇಮಕ್ಕೆ ದೇಶ-ಭಾಷೆಯೆಂಬ ತಾರತಮ್ಯವಿಲ್ಲವೆಂದು ಮತ್ತೊಮ್ಮೆ ಸಾಭೀತಾಗಿದೆ. ಯುವಕ ವಿದೇಶಿಗನಾದರೂ ಅರಿಶಿಣ ಶಾಸ್ತ್ರ, ಧಾರೆ ಶಾಸ್ತ್ರ ಎಂದು ಅಪ್ಪಟ ಹಿಂದೂ ಸಂಪ್ರದಾಯದಂತೆ ಬೆಣ್ಣೆ ನಗರಿಯ ಹುಡುಗಿಯ ಕೈ ಹಿಡಿದಿದ್ದಾನೆ.
- Bhavana Hegde
- Updated on: Dec 24, 2025
- 2:46 pm
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿದ್ದರೂ, ಈಗ ಅದು 40,000 ಕೋಟಿಗ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಭೂಸ್ವಾಧೀನ ವೆಚ್ಚ 2,250 ಕೋಟಿಯಿಂದ 5,195 ಕೋಟಿ ರೂ.ಗೆ ಹಾಗೂ ಸಿವಿಲ್ ಕಾಮಗಾರಿಗಳ ವೆಚ್ಚ 12,000 ಕೋಟಿಯಿಂದ 16,000 ಕೋಟಿ ರೂ.ಗೆ ಹೆಚ್ಚಳವಾಗಿದೆ. ಡಿಸೆಂಬರ್ 26ರೊಳಗೆ ಈ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.
- Bhavana Hegde
- Updated on: Dec 24, 2025
- 1:37 pm
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್
ಬೆಂಗಳೂರಿನ ಜ್ಞಾನಭಾರತಿಯಲ್ಲಿ ಠಾಣಾ ವ್ಯಾಪ್ತಿಯಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನೊಬ್ಬ ತನ್ನ ಪ್ರೇಯಸಿ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ. ಪ್ರೀತಿ ಹಾಗೂ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿದ್ದು, ಕಾರಿನಲ್ಲಿ ಬಂದ ನವೀನ್ ಯುವತಿಯನ್ನು ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿ ನವೀನ್ ಕುಮಾರ್ನನ್ನು ಬಂಧಿಸಿದ್ದಾರೆ.
- Bhavana Hegde
- Updated on: Dec 24, 2025
- 12:50 pm
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಮುತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ.
- Bhavana Hegde
- Updated on: Dec 24, 2025
- 11:51 am
Bengaluru Air Quality: ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು!
ಬೆಂಗಳೂರಿನ ವಾಯು ಗುಣಮಟ್ಟ ಇಂದು (AQI) 170ಕ್ಕೆ ಕುಸಿದಿದ್ದು, PM2.5 ಮಟ್ಟವು WHO ಸುರಕ್ಷತೆಯ ಮಿತಿಗಿಂತ 4 ಪಟ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಇದು ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಸೂಚನೆ ನೀಡಿದ್ದಾರೆ.
- Bhavana Hegde
- Updated on: Dec 24, 2025
- 8:28 am
ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ
Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣವೂ ತೀವ್ರವಿರಲಿದೆ ಎಂದು ಇಲಾಖೆ ತಿಳಿಸಿದೆ. ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯ ಚಳಿಗಾಳಿಯಿಂದ ತತ್ತರಿಸುತ್ತಿದೆ.
- Bhavana Hegde
- Updated on: Dec 24, 2025
- 7:35 am
Daily Devotional: ಮನೆಯಲ್ಲಿ ಗಂಡಸರು ಕಸ ಗುಡಿಸಬೇಕು ಯಾಕೆ ಗೊತ್ತಾ?
ಪ್ರತಿಯೊಂದು ಕುಟುಂಬಕ್ಕೂ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನ ಜವಾಬ್ದಾರರು. ಒಬ್ಬರು ಸಂಪಾದನೆ ಮಾಡಿದರೆ, ಮತ್ತೊಬ್ಬರು ಮನೆಯನ್ನು ನಿರ್ವಹಿಸುತ್ತಾರೆ. ಆದರೆ ಮನೆಯ ಶುಚಿತ್ವ ಕಾಪಾಡುವುದು ಕೇವಲ ಮಹಿಳೆಯರ ಕರ್ತವ್ಯವಲ್ಲ. ಪುರುಷರು ಕೂಡ ಮನೆಯನ್ನು ಸ್ವಚ್ಛಗೊಳಿಸುವುದು, ವಿಶೇಷವಾಗಿ ಕಸ ಗುಡಿಸುವುದು ಶಾಸ್ತ್ರಗಳ ಪ್ರಕಾರ ಬಹಳ ಶುಭಕರ. ಇದು ಬಡತನವನ್ನು ನಿವಾರಿಸಿ ಸಂಪತ್ತು ವೃದ್ಧಿಗೆ ಕಾರಣವಾಗುತ್ತದೆ.
- Bhavana Hegde
- Updated on: Dec 25, 2025
- 12:12 pm
Horoscope Today 24 December: ಇಂದು ಈ ರಾಶಿಯವರ ಉದ್ಯೋಗದಲ್ಲಿ ವೃದ್ಧಿ
ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಉದ್ಯೋಗ, ಕೌಟುಂಬಿಕ ಸಂಬಂಧಗಳು, ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ವಿಶ್ಲೇಷಣೆ ನೀಡಲಾಗಿದೆ. ಕೆಲವು ರಾಶಿಗಳಿಗೆ ಆಕಸ್ಮಿಕ ಜಯ, ಧನಾಗಮನ, ವೃತ್ತಿ ಪ್ರಗತಿ ಮತ್ತು ವಾಹನ ಯೋಗದಂತಹ ಶುಭಫಲಗಳು ಕಾದಿವೆ. ಆದರೆ, ಕೆಲವು ರಾಶಿಗಳಿಗೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ, ಸಣ್ಣಪುಟ್ಟ ಕೋಪ-ತಾಪಗಳು ಅಥವಾ ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ.
- Bhavana Hegde
- Updated on: Dec 24, 2025
- 7:03 am
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಅನ್ನೇ ಕದ್ದೊಯ್ದ ಖದೀಮರು!
ನಗರದಲ್ಲಿರುವ AU ಚಿನ್ನಾಭರಣ ಅಂಗಡಿಯೊಂದರಲ್ಲಿ ಭಾರೀ ಕಳ್ಳತನ ನಡೆದಿದೆ. ಕಳ್ಳರು ಅಂಗಡಿಯ ಬೀಗ ಮುರಿದು ಸುಮಾರು 140 ಕೆಜಿ ಬೆಳ್ಳಿಯನ್ನು ಕದ್ದೊಯ್ದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಈ ಕುರಿತು ಮಾತನಾಡಿರುವ ಎಸ್ಪಿ ಕುಶಲ್ ಚೌಕ್ಸೆ, ಚಿನ್ನಾಭರಣಗಳು ಸುರಕ್ಷಿತವಾಗಿವೆ.ಕಳ್ಳರು ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಕದ್ದೊಯ್ದಿದ್ದಾರೆ. ಕಳ್ಳರ ಪತ್ತೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ರಾತ್ರಿ ವೇಳೆ ಶಟರ್ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು, ಯಾವ ಸುಳಿವೂ ಇರದಂತೆ ಕಳ್ಳತನ ಮಾಡಿದ್ದಾರೆ. ಇದರ ಹಿಂದೆ ಯಾವುದೋ ನುರಿತ ಗ್ಯಾಂಗ್ ಇರಬಹುದೆಂಬ ಶಂಕೆ ಇದೆ. ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.
- Bhavana Hegde
- Updated on: Dec 23, 2025
- 3:16 pm
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ: ಬೆಂಗಳೂರು ಬಳಿಕ ಮಂಗಳೂರು ಜೈಲು ಪರಿಶೀಲನೆ
ಇತ್ತೀಚೆಗೆ ಪರಪ್ಪನ ಅಗ್ರಹಾರ, ಕಾರವಾರ ಜೈಲು ಸೇರಿದಂತೆ ಬಳ್ಳಾರಿಯಲ್ಲಿಯೂ ಹಲವು ಅಕ್ರಮಗಳು ನಡೆದಿದದ್ದವು. ಕೈದಿಗಳ ಬಳಿ ಮೊಬೈಲ್ ಫೋನ್ಗಳು ಸಿಕ್ಕಿದ್ದಲ್ಲದೆ, ಜಗಳ, ರಂಪಾಟಗಳೂ ನಡೆದಿದದ್ದವು. ಈ ಎಲ್ಲದರ ನಡುವೆ ಕಾರಾಗೃಹದ ಭದ್ರತೆ ಮತ್ತು ಆಡಳಿತಾತ್ಮಕ ವ್ಯವಸ್ಥೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಕಾರಾಗೃಹ ಡಿಜಿಪಿಯಾದ ಬಳಿಕ ಅಲೋಕ್ ಕುಮಾರ್ ಅವರಿಗೆ ಮಂಗಳೂರು ಜೈಲಿಗೆ ಇದು ಮೊದಲ ಭೇಟಿಯಾಗಿದೆ. ಮಂಗಳೂರು ನಗರದ ಪಿವಿಎಸ್ ಪ್ರದೇಶದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಆಗಮಿಸಿದ ಡಿಜಿಪಿ ಗೌರವ ವಂದನೆ ಸ್ವೀಕರಿಸಿದ ನಂತರ ಜೈಲಿನೊಳಗೆ ತೆರಳಿ ಪರಿಶೀಲನಾ ಕಾರ್ಯವನ್ನು ಕೈಗೊಂಡರು. ಈ ಭೇಟಿಗೂ ಮುನ್ನ ಜೈಲಿನ ಅಧಿಕಾರಿಗಳು ಈಗಾಗಲೇ ಕಾರಾಗೃಹದೊಳಗೆ ಅಕ್ರಮವಾಗಿ ಇರಿಸಲಾಗಿದ್ದ ಆರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದರು.
- Bhavana Hegde
- Updated on: Dec 23, 2025
- 2:24 pm
ಕರ್ನಾಟಕದ ಈ ನಾಲ್ಕು ಜಿಲ್ಲೆಗಳಲ್ಲಿ ಅತಿ ಹೆಚ್ಚು ಜನ ಸಾಯುವುದೇ ಕಾಡು ಪ್ರಾಣಿ ದಾಳಿಯಿಂದ!
ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ ಗಣನೀಯವಾಗಿ ಹೆಚ್ಚಿದ್ದು, 2022 ರಿಂದ 2025 ರ ನವೆಂಬರ್ವರೆಗೆ 203 ಜನರ ಸಾವಿಗೆ ಕಾರಣವಾಗಿದೆ. ಚಾಮರಾಜನಗರ, ಕೊಡಗು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಕಾಡುಪ್ರಾಣಿ ದಾಳಿಗಳು ಹೆಚ್ಚಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಈ ಜಿಲ್ಲೆಗಳಲ್ಲಿ ಕಾಡು ಪ್ರಾಣಿಗಳ ದಾಳಿ ಹೆಚ್ಚಿದ್ದು, ಸಾವಿಗೀಡಾದವರ ಅಂಕಿ ಅಂಶಗಳ ಪಟ್ಟಿ ಬಹಿರಂಗವಾಗಿದೆ.
- Bhavana Hegde
- Updated on: Dec 23, 2025
- 11:56 am
Bengaluru Air Quality: ದಿನೇ ದಿನೇ ಹದಗೆಡುತ್ತಿರುವ ಗಾಳಿಯ ಗುಣಮಟ್ಟ, ದೆಹಲಿಯನ್ನು ನೆನಪಿಸುತ್ತಿದೆ ಬೆಂಗಳೂರಿನ ಏರ್ ಕ್ವಾಲಿಟಿ
ಬೆಂಗಳೂರಿನ ವಾಯು ಗುಣಮಟ್ಟ (AQI) 170ಕ್ಕೆ ಕುಸಿದಿದ್ದು, ಕಳೆದ ಐದು ವರ್ಷಗಳಲ್ಲಿ 20-25% ಹೆಚ್ಚಳ ಕಂಡಿದೆ. PM2.5 ಮಟ್ಟವು WHO ಮಿತಿಗಿಂತ 4 ಪಟ್ಟು ಹೆಚ್ಚಾಗಿದ್ದು, ಮುಂಬೈ, ಕೋಲ್ಕತ್ತಾಗೆ ಸವಾಲು ಹಾಕುವ ಮಟ್ಟಕ್ಕೆ ಮಾಲಿನ್ಯ ತಲುಪಿದೆ. ಇದು ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಹೇಳುತ್ತಾರೆ.
- Bhavana Hegde
- Updated on: Dec 23, 2025
- 8:28 am