ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.
Bengaluru Air Quality: ಬೆಂಗಳೂರಿನಲ್ಲಿ ಗಣನೀಯವಾಗಿ ಸುಧಾರಿಸಿದ ಗಾಳಿಯ ಗುಣಮಟ್ಟ
ಮುಂಗಾರು ಮಳೆಯ ಪ್ರಭಾವದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ 'ಉತ್ತಮ' ಮಟ್ಟಕ್ಕೆ ಸುಧಾರಿಸಿದೆ. ಬೆಂಗಳೂರಿನಲ್ಲಿ ಸರಾಸರಿ AQI 37 ರಷ್ಟಿದ್ದು, ರಾಮನಗರ ಮತ್ತು ಚಿಕ್ಕಮಗಳೂರಿನಲ್ಲಿ ಅತ್ಯಂತ ಸ್ವಚ್ಛ ಗಾಳಿ ದಾಖಲಾಗಿದೆ. ಮಾಲಿನ್ಯ ಮುಕ್ತ ವಾತಾವರಣದ ಸಂಪೂರ್ಣ ರಿಯಲ್-ಟೈಮ್ ಅಪ್ಡೇಟ್ ಇಲ್ಲಿದೆ.
- Bhavana Hegde
- Updated on: Jun 9, 2026
- 8:05 am
Karnataka Weather Forecast: ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ! ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ
Monsoon 2026: ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿಯ 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಮುಂದಿನ 3 ದಿನ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ 24 ಗಂಟೆಗಳ ತುರ್ತು ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಡಿಸಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ.
- Bhavana Hegde
- Updated on: Jun 9, 2026
- 7:44 am
Daily Devotional: ಮೊಬೈಲ್ ನಂಬರ್ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮೊಬೈಲ್ ನಂಬರ್ನ ಕೊನೇ 2 ಸಂಖ್ಯೆ ಯಾವುದಿರಬೇಕು? ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಸಂಖ್ಯಾಶಾಸ್ತ್ರದ ಪ್ರಕಾರ, ನಿಮ್ಮ ಮೊಬೈಲ್ ಸಂಖ್ಯೆಯ ಕೊನೆಯ ಎರಡು ಅಂಕೆಗಳು ನಿಮ್ಮ ಅದೃಷ್ಟ ಮತ್ತು ವ್ಯಕ್ತಿತ್ವದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ. ಜಗತ್ತು ಗ್ರಹಗಳ ಅಧೀನದಲ್ಲಿದ್ದು, ಗ್ರಹಗಳು ಸಂಖ್ಯೆಗಳ ಅಧೀನದಲ್ಲಿವೆ. ಈ ಅಂಕೆಗಳು ನಮ್ಮ ಬದುಕಿನ ಅನೇಕ ನಿರ್ಣಾಯಕ ಅಂಶಗಳನ್ನು ಪ್ರಭಾವಿಸುತ್ತವೆ.
- Bhavana Hegde
- Updated on: Jun 9, 2026
- 7:04 am
Horoscope Today: ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 09, ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸದಲ್ಲಿ ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಸುಬ್ರಹ್ಮಣ್ಯ ಮತ್ತು ನಾಗಗಳ ಆರಾಧನೆಗೆ ಪ್ರಾಶಸ್ತ್ಯವಿದೆ. ಜೂನ್ 9 ರಂದು ಜನ್ಮದಿನ ಅಥವಾ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ.
- Bhavana Hegde
- Updated on: Jun 9, 2026
- 7:02 am
ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ; ಮಹಿಳಾ ಭಕ್ತರ ಮೇಲೆ ಕಾಲಿನಿಂದ ನೀರೆರಚಿ ಸಿಬ್ಬಂದಿ ವಿಕೃತಿ!
ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದ ವೈಶಾಖ ಮಹೋತ್ಸವದಲ್ಲಿ ಕರ್ನಾಟಕದ ಭಕ್ತರ ಮೇಲೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ತೀವ್ರ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, 1,000 ರೂಪಾಯಿ ವಿಐಪಿ ಟಿಕೆಟ್ ಹೆಸರಿನಲ್ಲಿ ನಡೆಯುತ್ತಿರುವ ಸ್ಕ್ಯಾಮ್ ಸಹ ಬಯಲಾಗಿದೆ. ಹೀಗಾಗಿ ಯಾರೂ ಈ ದೇವಸ್ಥಾನಕ್ಕೆ ಬರಬೇಡಿ ಎಂದು ಕನ್ನಡಿಗರು ವೀಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
- Bhavana Hegde
- Updated on: Jun 8, 2026
- 12:37 pm
ರಾಜ್ಯಸಭೆಗೆ ಕಣಕ್ಕಿಳಿದ ಪ್ರೊ. ಎಂ. ನಾಗರಾಜ; ಮಾಜಿ ಪ್ರಧಾನಿ ದೇವೇಗೌಡರ ಸ್ಥಾನಕ್ಕೆ ಬಿಜೆಪಿ ಇವರನ್ನೇ ಆರಿಸಿದ್ದೇಕೆ?
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಹಿರಿಯ ಒಬಿಸಿ ನಾಯಕ ಪ್ರೊ. ಎಂ. ನಾಗರಾಜ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ಇವರನ್ನು ಆಯ್ಕೆ ಮಾಡಲಾಗಿದ್ದು, ಇದರೊಂದಿಗೆ ವಿಧಾನಪರಿಷತ್ ಚುನಾವಣೆಗೆ ಲಿಂಗರಾಜ ಪಾಟೀಲ ಮತ್ತು ರಘು ಕೌಟಿಲ್ಯ ಅವರ ಹೆಸರುಗಳನ್ನು ಬಿಜೆಪಿ ಪ್ರಕಟಿಸಿದೆ.
- Bhavana Hegde
- Updated on: Jun 8, 2026
- 10:59 am
Bengaluru Air Quality: ಬೆಂಗಳೂರಿನ ವಾಯು ಗುಣಮಟ್ಟ ಇಂದು ಉತ್ತಮ, ಉಡುಪಿಯ ಎಕ್ಯೂಐ ಎಲ್ಲದಕ್ಕಿಂತ ಬೆಸ್ಟ್!
ಕರ್ನಾಟಕದ ಪ್ರಮುಖ ನಗರಗಳಲ್ಲಿ ಮುಂಗಾರು ಮಳೆಯ ಆಗಮನದಿಂದಾಗಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಉತ್ತಮ ಹಾಗೂ ತೃಪ್ತಿದಾಯಕ ಮಟ್ಟದಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಎಕ್ಯೂಐ 14 ರಿಂದ 30ರ ಆಸುಪಾಸಿನಲ್ಲಿ ದಾಖಲಾಗಿದ್ದು, ಅತ್ಯಂತ ಸುರಕ್ಷಿತ ವಲಯದಲ್ಲಿದೆ. ಮೈಸೂರು, ಬೆಳಗಾವಿ, ಮಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಇಂದಿನ ವಾಯು ಮಾಲಿನ್ಯ ಮತ್ತು ಗಾಳಿ ಗುಣಮಟ್ಟದ ಸಂಪೂರ್ಣ ಮಾಹಿತಿ ಇಲ್ಲಿದೆ.
- Bhavana Hegde
- Updated on: Jun 8, 2026
- 8:21 am
Daily Devotional: ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಅಧಿಕ ಮಾಸ, ಇದನ್ನು ಪುರುಷೋತ್ತಮ ಮಾಸವೆಂದೂ ಕರೆಯುತ್ತಾರೆ, ಈ ಮಾಸದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಕುರಿತು ಕೆಲವೊಂದು ಪ್ರಮುಖ ವಿಚಾರಗಳನ್ನು ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ, ಚೈತ್ರ ಮಾಸದಿಂದ ಹಿಡಿದು 12 ಮಾಸಗಳಲ್ಲಿ ಶುಭ-ಅಶುಭಗಳು ಸಂಭವಿಸುತ್ತವೆ. ಆದರೆ, ಮಗುವಿನ ಜನನಕ್ಕೆ ವಿಶೇಷ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ, ಏಕೆಂದರೆ ಜನಿಸಿದ ಮಾಸಕ್ಕೆ ತಕ್ಕಂತೆ ದೇವರ ಅನುಗ್ರಹ ಆ ಮಗುವಿನ ಮೇಲೆ ಇರುತ್ತದೆ.
- Bhavana Hegde
- Updated on: Jun 8, 2026
- 6:58 am
Horoscope Today: ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 08, ಸೋಮವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ ಅಷ್ಟಮಿ, ಪೂರ್ವಾಭಾದ್ರ ನಕ್ಷತ್ರ, ವಿಷ್ಕಂಭ ಯೋಗ ಮತ್ತು ಬಾಲವಕರಣ ಇರತಕ್ಕಂತಹ ಈ ದಿನದ ರಾಹುಕಾಲ 7:29 ರಿಂದ 9:05 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ 9:05 ರಿಂದ 10:42 ರವರೆಗೆ ಇರುತ್ತದೆ.
- Bhavana Hegde
- Updated on: Jun 8, 2026
- 6:56 am
ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!
ವಿದೇಶದಲ್ಲಿ ಎಂಬಿಬಿಎಸ್ ಓದುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಯ ಗಡುವಿನ ಆತಂಕವನ್ನು ಬಳಸಿಕೊಂಡು ಬೆಂಗಳೂರಿನಲ್ಲಿ ಸೈಬರ್ ವಂಚಕರು ಒಂದು ಲಕ್ಷ ರೂಪಾಯಿ ಲೂಟಿ ಮಾಡಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತೆಯ ಸೋಗಿನಲ್ಲಿ ಮಾತನಾಡಿದ ಮಹಿಳೆ, ವಿದೇಶಿ ವಿನಿಮಯ ದರ ಕಡಿತವಿಲ್ಲದೆ ಹಣ ತಲುಪಿಸುವುದಾಗಿ ನಂಬಿಸಿ ಗೂಗಲ್ ಪೇ ಮೂಲಕ ಹಣ ಪಡೆದು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಸಿ.ಕೆ. ಅಚುಕಟ್ಟು ಠಾಣೆಯಲ್ಲಿ ದೂರು ದಾಖಲಾಗಿದೆ.
- Bhavana Hegde
- Updated on: Jun 7, 2026
- 3:07 pm
CM DKS in Metro: ಮೆಟ್ರೋ ಪ್ರಯಾಣಿಕರ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಫೋಟೋ !
ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂದು ವಿಧಾನಸೌಧದಿಂದ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಬಿಎಂಆರ್ಸಿಎಲ್ ಉನ್ನತಾಧಿಕಾರಿಗಳಿಂದ ಬೆಂಗಳೂರಿನ ಮೆಟ್ರೋ ಜಾಲ ಮತ್ತು ಮುಂಬರುವ ಸಂಪರ್ಕ ಯೋಜನೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡರು.
- Bhavana Hegde
- Updated on: Jun 7, 2026
- 12:08 pm
ಬೆಂಗಳೂರು ಪೂರ್ವ ನಗರ ನಿಗಮದಿಂದ ಬೃಹತ್ ಸ್ವಚ್ಛತಾ ಸಪ್ತಾಹ; 100 ಟನ್ ಕಸ ವಿಲೇವಾರಿ!
ವಿಶ್ವ ಪರಿಸರ ದಿನದ ಅಂಗವಾಗಿ ಬೆಂಗಳೂರು ಪೂರ್ವ ನಗರ ನಿಗಮವು ಕೆ.ಆರ್. ಪುರಂ ಮತ್ತು ದೊಡ್ಡನೆಕ್ಕುಂದಿ ವಾರ್ಡ್ಗಳಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನಡೆಸಿದೆ. ಕಮಿಷನರ್ ಡಿ.ಎಸ್. ರಮೇಶ್ ನೇತೃತ್ವದಲ್ಲಿ 100 ಟನ್ಗೂ ಹೆಚ್ಚು ಕಸವನ್ನು ವಿಲೇವಾರಿ ಮಾಡಲಾಗಿದ್ದು, ವೆಂಗಯ್ಯನ ಕೆರೆಯಲ್ಲಿ 60 ಸಸಿಗಳನ್ನು ನೆಡಲಾಗಿದೆ. ಇದೇ ವೇಳೆ ನಿಷೇಧಿತ ಪ್ಲಾಸ್ಟಿಕ್ ಬಳಸಿದ ಗ್ರಾಹಕರು ಹಾಗೂ ವ್ಯಾಪಾರಿಗಳಿಂದ 30,000 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.
- Bhavana Hegde
- Updated on: Jun 7, 2026
- 10:09 am