ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.
ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಚಿನ್ನಾಭರಣ ದೋಚಿದ ಆಸಾಮಿ!
ಬೆಂಗಳೂರಿನ ಹೆಗ್ಗಡದೇವನಪುರದಲ್ಲಿ ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದ ಕಳ್ಳನೊಬ್ಬ, ಗರ್ಭಿಣಿಗೆ ಸಾವಿನ ಕಂಟಕದ ಹೆದರಿಕೆಯೊಡ್ಡಿ ಪೂಜೆಯ ನೆಪದಲ್ಲಿ 1.2 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ. ದೋಷ ನಿವಾರಣೆಯ ನೆಪದಲ್ಲಿ ಕುಡಿಕೆಯಲ್ಲಿ ಚಿನ್ನ ಇಡಿಸಿ, ದಂಪತಿಯನ್ನು ನಂಬಿಸಿ ವಂಚಿಸಿದ ಈ ಖದೀಮನ ಪತ್ತೆಗೆ ಮಾದನಾಯಕನಹಳ್ಳಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Bhavana Hegde
- Updated on: Jul 20, 2026
- 2:31 pm
ವಾಟ್ಸಾಪ್ನಲ್ಲಿ ಬರುವ APK ಲಿಂಕ್ ಮೇಲೆ ಕ್ಲಿಕ್ ಮಾಡುವ ಮುನ್ನ ಎಚ್ಚರ! ಕ್ಷಣಾರ್ಧದಲ್ಲಿ ನಿಮ್ಮ ಅಕೌಂಟ್ ಖಾಲಿ ಮಾಡ್ತಾರೆ ಕದೀಮರು
ವಾಟ್ಸಾಪ್ಗೆ ಬಂದ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯ ನಕಲಿ ಎಪಿಕೆ (.APK) ಲಿಂಕ್ ಕ್ಲಿಕ್ ಮಾಡಿದ ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಕೇವಲ ಅರ್ಧ ಗಂಟೆಯಲ್ಲಿ ಬರೋಬ್ಬರಿ 10 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಸ್ನೇಹಿತನ ಅಕೌಂಟ್ ಹ್ಯಾಕ್ ಮಾಡಿ ವಂಚಕರು ನಡೆಸಿದ ಈ ಡಿಜಿಟಲ್ ದರೋಡೆ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
- Bhavana Hegde
- Updated on: Jul 20, 2026
- 12:18 pm
TV9 Kannada News Live: ಮತ್ತೆ ಶುರುವಾಯ್ತು ಸಂಪುಟ ಸರ್ಕಸ್: ಡಿಕೆಶಿ, ಕೆಪಿಸಿಸಿ ಅಧ್ಯಕ್ಷ, ಸಿದ್ದರಾಮಯ್ಯ ನಾಳೆ ದಿಲ್ಲಿಗೆ
Karnataka News Today Live Updates: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಸರ್ಕಾರಿ ಗೌರವಗಳೊಂದಿಗಿನ ಅಂತ್ಯಕ್ರಿಯೆಯ ಲೈವ್ ಮಾಹಿತಿ ಇಲ್ಲಿದೆ. ಇದರೊಂದಿಗೆ ಬೆಂಗಳೂರಿನ ಸೊಪ್ಪು-ತರಕಾರಿಗಳಲ್ಲಿ ಸೀಸದ ವಿಷ ಪತ್ತೆಯಾದ ಆಘಾತಕಾರಿ ವರದಿ ಹಾಗೂ ದೆಹಲಿಯಲ್ಲಿ ಉಪವಾಸ ನಿರತರಾಗಿರುವ ಸೋನಮ್ ವಾಂಗ್ಚುಕ್ ಸತ್ಯಾಗ್ರಹದ ಕ್ಷಣಕ್ಷಣದ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ಸ್ ಇಲ್ಲಿದೆ.
- Bhavana Hegde
- Updated on: Jul 20, 2026
- 10:15 pm
Chennamma Passed Away: ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಸಂಸ್ಕಾರ ಇಂದು ನೆರವೇರಲಿದೆ. ಈ ವೇಳೆ ಮಳೆಯ ನಡುವೆಯೂ ಸಾವಿರಾರು ಸಂಖ್ಯೆಯ ಜನರು ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಅವರ ನಿವಾಸದ ಬಳಿ ಆಗಮಿಸಿ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅಗಲಿದ ತಾಯಿಯ ಅಂತಿಮ ದರ್ಶನಕ್ಕೆ ಸಾರ್ವಜನಿಕರು ಮತ್ತು ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಅವರ ಮೇಲಿದ್ದ ಅಪಾರ ಗೌರವವನ್ನು ಪ್ರತಿಬಿಂಬಿಸುತ್ತದೆ.
- Bhavana Hegde
- Updated on: Jul 20, 2026
- 8:39 am
ಬೆಂಗಳೂರಿನಲ್ಲಿವೆ ಬರೋಬ್ಬರಿ 25 ಲಕ್ಷ ಪ್ರೈವೆಟ್ ಕಾರುಗಳು! ದೆಹಲಿ, ಮುಂಬೈಗೇ ಸೆಡ್ಡು ಹೊಡೆದ ಸಿಲಿಕಾನ್ ಸಿಟಿ
ದೇಶದ ಐಟಿ ಹಬ್ ಬೆಂಗಳೂರು ಬರೋಬ್ಬರಿ 25 ಲಕ್ಷ ಖಾಸಗಿ ಕಾರುಗಳನ್ನು ಹೊಂದುವ ಮೂಲಕ ಇಡೀ ದೇಶದಲ್ಲೇ ಅತಿ ಹೆಚ್ಚು ಖಾಸಗಿ ಕಾರುಗಳಿರುವ ನಗರವಾಗಿ ಹೊರಹೊಮ್ಮಿದೆ. ವಾಹನ ಒಡೆತನದಲ್ಲಿ ದೆಹಲಿ ಮತ್ತು ಮುಂಬೈ ನಗರಗಳನ್ನು ಹಿಂದಿಕ್ಕಿರುವ ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ರಸ್ತೆಗಳ ಮೇಲಿನ ಒತ್ತಡ ಹಾಗೂ ಸಂಚಾರ ದಟ್ಟಣೆ ತೀವ್ರವಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆ ಕೂಡ ಹೆಚ್ಚಾಗಿದೆ.
- Bhavana Hegde
- Updated on: Jul 20, 2026
- 9:55 am
Bengaluru Air Quality: ಮಲೆನಾಡಿನಲ್ಲಿ ಶುದ್ಧ ಗಾಳಿ, ಬೆಂಗಳೂರಿನಲ್ಲಿ ಉತ್ತಮ ಹವಾಮಾನ
ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟವು ಉತ್ತಮವಾಗಿದೆ. ಮುಂಗಾರು ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಗಳೂರು ಮತ್ತು ಚಿಕ್ಕಮಗಳೂರಿನಲ್ಲಿ ಮಾಲಿನ್ಯ ನಿಯಂತ್ರಣದಲ್ಲಿದ್ದು, ಜನರು ನಿರಾಳವಾಗಿ ಉಸಿರಾಡುವ ವಾತಾವರಣವಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು ಸರಾಸರಿ 50 ರಿಂದ 56ರ ಆಸುಪಾಸಿನಲ್ಲಿ ದಾಖಲಾಗಿದೆ.
- Bhavana Hegde
- Updated on: Jul 20, 2026
- 6:51 am
ಪತ್ನಿಯ ಪಾರ್ಥಿವ ಶರೀರವನ್ನ ಮನೆಯಿಂದ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡ್ರು
ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಮನೆಯಿಂದ ಅಂತಿಮ ಯಾತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಹೆಚ್.ಡಿ. ದೇವೇಗೌಡರು ತೀವ್ರವಾಗಿ ಭಾವುಕರಾದರು. ಪತ್ನಿ ಅಗಲಿಕೆಯ ನೋವು ತಾಳಲಾರದೆ ಅವರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಎಲ್ಲರ ಮನಸ್ಸನ್ನು ಕಲಕಿದವು. ಶೈತ್ಯಾಗಾರ ಪೆಟ್ಟಿಗೆಯ ಮೇಲೆ ಕೈಯಿಟ್ಟು ಕಣ್ಣೀರಿಟ್ಟ ದೇವೇಗೌಡರು, ತಮ್ಮ ಜೀವನ ಸಂಗಾತಿಯನ್ನು ಕಳೆದುಕೊಂಡ ದುಃಖವನ್ನು ವ್ಯಕ್ತಪಡಿಸಿದರು. ಅವರ ಪುತ್ರಿ ಹಾಗೂ ಇತರ ಕುಟುಂಬ ಸದಸ್ಯರು ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.
- Bhavana Hegde
- Updated on: Jul 19, 2026
- 3:27 pm
Chennamma Passed Away: ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರು ತಮ್ಮ ಪತಿ ದೇವೇಗೌಡ ಅವರೊಂದಿಗೆ ಕಳೆದ ಕೊನೆ ಕ್ಷಣಗಳ ವೀಡಿಯೋ ಇಲ್ಲಿದೆ. ಜೀವನದ ಕೊನೆ ಕ್ಷಣಗಳನ್ನು ಪತಿಯೊಂದಿಗೆ ಕಳೆದ ಚೆನ್ನಮ್ಮ, ಸಾವಿಗೂ ಮುನ್ನ ಗೌಡರ ಆಶೀರ್ವಾದವನ್ನು ಪಡೆದಿದ್ದಾರೆ. 72 ವರ್ಷಗಳ ಕಾಲ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ಹೆಚ್ಡಿಡಿ ಇದೀಗ ದುಃಖದಲ್ಲಿ ಮುಳುಗಿದ್ದಾರೆ.
- Bhavana Hegde
- Updated on: Jul 19, 2026
- 2:37 pm
ರಸ್ತೆ, ಫುಟ್ಪಾತ್ಗಳ ಮೇಲೆ ಜಪ್ತಿ ವಾಹನಗಳ ರಾಶಿ: ಕೋಟ್ಯಂತರ ರೂ. ಮೌಲ್ಯದ ಸಾವಿರಾರು ವಾಹನಗಳು ಇಲ್ಲಿ ತುಕ್ಕು ಹಿಡಿಯುತ್ತಿರುವುದೇಕೆ?
ಬೆಂಗಳೂರಿನ ವಿವಿಧ ಪೊಲೀಸ್ ಠಾಣೆ ಹಾಗೂ ಯಾರ್ಡ್ಗಳಲ್ಲಿ ವಶಪಡಿಸಿಕೊಂಡ ಸಾವಿರಾರು ವಾಹನಗಳು ವರ್ಷಗಳಿಂದ ತುಕ್ಕು ಹಿಡಿಯುತ್ತಾ ಬಿದ್ದಿವೆ. ಕಾನೂನು ಪ್ರಕ್ರಿಯೆಯ ವಿಳಂಬ ಮತ್ತು ಹರಾಜು ನಡೆಸದ ಕಾರಣ ರಸ್ತೆ ಬದಿ ಹಾಗೂ ಫುಟ್ಪಾತ್ಗಳು ಜಲಾವೃತಗೊಂಡಂತೆ ವಾಹನಗಳಿಂದ ತುಂಬಿಹೋಗಿದ್ದು, ಇವು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದಲ್ಲದೆ ಭಾರಿ ಅಗ್ನಿ ಅವಘಡಗಳ ಭೀತಿಯನ್ನು ಒಡ್ಡುತ್ತಿವೆ.
- Bhavana Hegde
- Updated on: Jul 19, 2026
- 12:43 pm
ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆದ ಕರ್ನಾಟಕ: 15,395 ಎಂಬಿಬಿಎಸ್ ಸೀಟುಗಳೊಂದಿಗೆ ದಾಖಲೆ ಬರೆದ ರಾಜ್ಯ!
ನ್ಯಾಷನಲ್ ಮೆಡಿಕಲ್ ಕಮಿಷನ್ (NMC) ಬಿಡುಗಡೆ ಮಾಡಿರುವ ಹೊಸ ಪಟ್ಟಿಯ ಪ್ರಕಾರ, ಕರ್ನಾಟಕವು ಒಟ್ಟು 15,395 ಎಂಬಿಬಿಎಸ್ ಸೀಟುಗಳನ್ನು ಹೊಂದುವ ಮೂಲಕ ದೇಶದಲ್ಲೇ ವೈದ್ಯಕೀಯ ಶಿಕ್ಷಣದಲ್ಲಿ ಅಗ್ರಸ್ಥಾನಕ್ಕೇರಿದೆ. ಈ ವರ್ಷ ಖಾಸಗಿ ಕಾಲೇಜುಗಳಲ್ಲಿ 1,150 ಮತ್ತು ಸರ್ಕಾರಿ ಕಾಲೇಜುಗಳಲ್ಲಿ 150 ಸೀಟುಗಳು ಹೆಚ್ಚಾಗಿದ್ದು, ಇನ್ನೂ 6 ಸರ್ಕಾರಿ ಕಾಲೇಜುಗಳು ಹೆಚ್ಚುವರಿ ಸೀಟುಗಳಿಗಾಗಿ ಕಾಯುತ್ತಿವೆ.
- Bhavana Hegde
- Updated on: Jul 19, 2026
- 10:14 am
ಬೆಂಗಳೂರಿನ ಕಾಫಿ ಪ್ರಿಯರೇ ಎಚ್ಚರ! ಅತಿಯಾದ ಕೆಫಿನ್ ತರುತ್ತಿದೆ ನಿಮ್ಮ ಆರೋಗ್ಯಕ್ಕೆ ಕಂಟಕ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೆಫೆ ಸಂಸ್ಕೃತಿಯು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮಾಡರ್ನ್ ಕೆಫೆ ಕಾಫಿಗಳಲ್ಲಿನ ಅತಿಯಾದ ಸಕ್ಕರೆ ಹಾಗೂ ಕೆಫಿನ್ ಅಂಶವು ಮಧುಮೇಹ ಮತ್ತು ಆಸಿಡ್ ರಿಫ್ಲಕ್ಸ್ನಂತಹ ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ಆರೋಗ್ಯ ಹದಗೆಡದಂತೆ ದಿನಕ್ಕೆ 400mg ಗಿಂತ ಕಡಿಮೆ ಕೆಫಿನ್ ಸೇವಿಸುವುದು ಮತ್ತು ಮಧ್ಯಾಹ್ನ 2 ಗಂಟೆಯ ನಂತರ ಕಾಫಿ ಕುಡಿಯುವುದನ್ನು ನಿಲ್ಲಿಸುವುದು ಉತ್ತಮ ಎಂದು ತಜ್ಞರು ಎಚ್ಚರಿಸಿದ್ದಾರೆ.
- Bhavana Hegde
- Updated on: Jul 19, 2026
- 8:30 am
Bengaluru Air Quality: ವರುಣನ ಕೃಪೆಯಿಂದ ಬೆಂಗಳೂರಿಗರಿಗೆ ಸಿಕ್ತು ಬಿಗ್ ರಿಲೀಫ್: ರಾಜ್ಯದ ಪ್ರಮುಖ ನಗರಗಳ ಇಂದಿನ AQI ಹೇಗಿದೆ ಗೊತ್ತಾ?
ನಿರಂತರ ಮುಂಗಾರು ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಪ್ರಮುಖ ನಗರಗಳಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಉತ್ತಮ ಮಟ್ಟ ತಲುಪಿದೆ. ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಮೈಸೂರು, ಮಂಗಳೂರು ಹಾಗೂ ಮಲೆನಾಡಿನ ಜಿಲ್ಲೆಗಳು ರಾಜ್ಯದಲ್ಲೇ ಅತ್ಯಂತ ಸ್ವಚ್ಛ ಮತ್ತು ಆರೋಗ್ಯಕರ ಗಾಳಿಯನ್ನು ಹೊಂದಿವೆ.
- Bhavana Hegde
- Updated on: Jul 19, 2026
- 7:40 am