AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

Author - TV9 Kannada

bheemappa.patil@tv9.com

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow On:
ದೇಗುಲದ ಹುಂಡೀಲಿ ಲವ್​​ ಲೆಟರ್​, ಫೋಟೋ: ಪ್ರೀತಿಸಿದ ಹುಡುಗಿ ಸಿಗಲಿ ಭಗವಂತ ಎಂದ ಭಕ್ತ!

ದೇಗುಲದ ಹುಂಡೀಲಿ ಲವ್​​ ಲೆಟರ್​, ಫೋಟೋ: ಪ್ರೀತಿಸಿದ ಹುಡುಗಿ ಸಿಗಲಿ ಭಗವಂತ ಎಂದ ಭಕ್ತ!

ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದ ಹುಂಡಿ ಎಣಿಕೆ ವೇಳೆ ಆಡಳಿತ ಮಂಡಳಿಗೆ ಅಚ್ಚರಿ ಕಾದಿತ್ತು. 15 ಲಕ್ಷ ಕಾಣಿಕೆ ಹಣದ ಜೊತೆಗೆ ಪ್ರೇಮಿಗಳ ಪೋಟೋ, ಲವ್ ಲೆಟರ್ ಹಾಗೂ ವೈಯಕ್ತಿಕ ಬೇಡಿಕೆಗಳ ಪತ್ರಗಳು ಪತ್ತೆಯಾಗಿವೆ. ಪ್ರೇಮ ವಿವಾಹಕ್ಕೆ ಒಪ್ಪಿಗೆ, ಕೆಲಸ, ಮಕ್ಕಳ ಭವಿಷ್ಯ ಹೀಗೆ ನಾನಾ ಬೇಡಿಕೆಗಳನ್ನು ಬರೆದು ಭಕ್ತರು ಹುಂಡಿಗೆ ಹಾಕಿದ್ದಾರೆ.

ಪ್ರೀತಿಸುತ್ತಿರುವ ಹುಡುಗಿಯ ತಂದೆ-ತಾಯಿಗೆ ಒಳ್ಳಿ ಬುದ್ದಿ ಕೊಡಿ: ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಪತ್ರಗಳು ಪತ್ತೆ

ಪ್ರೀತಿಸುತ್ತಿರುವ ಹುಡುಗಿಯ ತಂದೆ-ತಾಯಿಗೆ ಒಳ್ಳಿ ಬುದ್ದಿ ಕೊಡಿ: ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಪತ್ರಗಳು ಪತ್ತೆ

ಇದು ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮದ ತಪ್ಪಲಿನಲ್ಲಿರುವ ಪುರಾಣ ಪ್ರಸಿದ್ದ, ಐತಿಹಾಸ ಪ್ರಸಿದ್ದ ಶ್ರೀ ಭೋಗನಂದೀಶ್ವರ ದೇವಸ್ಥಾನ ಲವ್​ ಮ್ಯಾರೇಜ್​​​ನ ಕಲ್ಯಾಣ ಮಂಟಪವಾಗಿದೆ. ಹೀಗಾಗಿ ಇದರಿಂದಲೇ ಏನೋ ಕೆಲವು ಪ್ರೇಮಿಗಳು ತಮ್ಮ ಪ್ರೇಮ ವಿವೇದನೆಯನ್ನು ಹರಕೆ ರೂಪದಲ್ಲಿ ದೇವರ ಹುಂಡಿಯಲ್ಲಿ ಹಾಕಿದ್ದು ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿರುವ ಈ ದೇವಸ್ಥಾನ ಹುಂಡಿಯಲ್ಲಿ ಗರಿ ಗರಿ ನೋಟಿನ ಜೊತೆಗೆ ಚಿತ್ರ ವಿಚಿತ್ರ ಬೇಡಿಕೆಗಳ ಪತ್ರಗಳು ಪತ್ತೆಯಾಗಿವೆ. ಹುಂಡಿಯಲ್ಲಿ ಮಹಿಳೆಯ ಪೋಟೋ ಕಂಡು ಬಂದಿದ್ದು, ಆ ಪೋಟೋ ಹಿಂದೆ ಪದ್ಮ ಮತ್ತೆ ತಿರುಗಿ ಬಾ, ಅನ್ನೋ ಪ್ರೇಮ ನಿವೇದನೆ ಮಾಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಚಿಕ್ಕಬಳ್ಳಾಪುರದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಎರಡು ದಾರುಣ ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಗುಡಿಬಂಡೆ ತಾಲೂಕಿನ ಪೋಲಂಪಲ್ಲಿಯಲ್ಲಿ ವೃದ್ಧ ದಂಪತಿ ಸಾಲಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಬೆಂಗಳೂರು ಸಮೀಪ ಮಾದನಾಯಕನಹಳ್ಳಿ ವ್ಯಾಪ್ತಿಯಲ್ಲಿ ಪತಿ ಕಳೆದುಕೊಂಡ ದುಃಖದಿಂದಾಗಿ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನಂದಿಬೆಟ್ಟ, ಸ್ಕಂದಗಿರಿ ಸೇರಿ ಈ ಜಾಗಗಳಿಗೆ ಪಿಕ್​ನಿಕ್ ಹೋಗುವವರೇ ಎಚ್ಚರ: ಚಿಕ್ಕಬಳ್ಳಾಪುರದಲ್ಲಿ ಹೆಚ್ಚಿದೆ ಚಿರತೆ ಕಾಟ

ನಂದಿಬೆಟ್ಟ, ಸ್ಕಂದಗಿರಿ ಸೇರಿ ಈ ಜಾಗಗಳಿಗೆ ಪಿಕ್​ನಿಕ್ ಹೋಗುವವರೇ ಎಚ್ಚರ: ಚಿಕ್ಕಬಳ್ಳಾಪುರದಲ್ಲಿ ಹೆಚ್ಚಿದೆ ಚಿರತೆ ಕಾಟ

ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ಕೆಲ ದಿನಗಳಿಂದ ಚಿಕ್ಕಬಳ್ಳಾಪುರದಲ್ಲಿ ಚಿರತೆಗಳ ಹಾವಳಿ ಹೆಚ್ಚಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ನಂದಿ ಬೆಟ್ಟದಂತಹ ಪ್ರವಾಸಿ ತಾಣಗಳಲ್ಲಿಯೂ ಚಿರತೆಗಳ ಹಿಂಡು ಬೀಡುಬಿಟ್ಟಿದ್ದು, ಪ್ರವಾಸಿಗರಲ್ಲಿ ಭೀತಿ ಮನೆಮಾಡಿದೆ. ಇದರಿಂದ ರೈತರು ತೋಟಗಳಿಗೆ ಹೋಗಲು ಹಿಂಜರಿಯುತ್ತಿದ್ದು, ಚಿರತೆಗಳಿಂದ ಹೆದರುವ ಅಗತ್ಯವಿಲ್ಲವೆಂದೂ, ಚಿರತೆ ಕಾಣಿಸಿದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಆತ್ಮಹತ್ಯೆ ಮಾಡಿಕೊಂಡ 18 ವರ್ಷದ ಯುವತಿ, ಸಾವಿನ ಹಿಂದಿದ್ಯಾ ದೆವ್ವದ ಕಾಟ?

ಚಿಕ್ಕಬಳ್ಳಾಪುರ: ಆತ್ಮಹತ್ಯೆ ಮಾಡಿಕೊಂಡ 18 ವರ್ಷದ ಯುವತಿ, ಸಾವಿನ ಹಿಂದಿದ್ಯಾ ದೆವ್ವದ ಕಾಟ?

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬುರಡುಗುಂಟೆ ಗ್ರಾಮದಲ್ಲಿ 18 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆದರೆ ಪೋಷಕರು ದೆವ್ವದ ಕಾಟ ಅಥವಾ ಮಾಟ-ಮಂತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಹೆತ್ತವರು ಕಾಲು ಹಿಡಿದರೂ ಪ್ರಿಯಕರನನ್ನು ಬಿಡದ ಮಗಳು, ಮದುವೆ ಬಳಿಕ ಎಸ್​ಪಿ ಕಚೇರಿಯಲ್ಲೇ ಒಂದಾದ ಪ್ರೇಮಿಗಳು!

ಚಿಕ್ಕಬಳ್ಳಾಪುರ: ಹೆತ್ತವರು ಕಾಲು ಹಿಡಿದರೂ ಪ್ರಿಯಕರನನ್ನು ಬಿಡದ ಮಗಳು, ಮದುವೆ ಬಳಿಕ ಎಸ್​ಪಿ ಕಚೇರಿಯಲ್ಲೇ ಒಂದಾದ ಪ್ರೇಮಿಗಳು!

ಜಾತಿ ಭೇದ ಮತ್ತು ಪೋಷಕರ ವಿರೋಧದ ನಡುವೆ ಯುವತಿಯೊಬ್ಬಳು ಇನ್‌ಸ್ಟಾಗ್ರಾಮ್‌ ಪರಿಚಯದ ಪ್ರಿಯಕರನನ್ನು ಮದುವೆಯಾಗಿ, ನಂತರ ರಕ್ಷಣೆ ಕೋರಿ ಎಸ್‌ಪಿ ಕಚೇರಿಗೆ ಬಂದ ವಿದ್ಯಮಾನ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪೋಷಕರು ಪೊಲೀಸ್ ಠಾಣೆಗೆ ಬಂದು ಕಾಲು ಹಿಡಿದರೂ ಯುವತಿ ಪ್ರಿಯಕರನ ಜೊತೆ ತೆರಳಿದ್ದಾಳೆ. ಚಿಕ್ಕಬಳ್ಳಾಪುರ ಪೊಲೀಸ್ ಠಾಣೆ ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರುವವರಿಗೆ ಉಚಿತ ಪೆಟ್ರೋಲ್, ಮುಗಿಬಿದ್ದ ಜನ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರುವವರಿಗೆ ಉಚಿತ ಪೆಟ್ರೋಲ್, ಮುಗಿಬಿದ್ದ ಜನ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಹ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಬೈಕ್‌ನಲ್ಲಿ ಬರುವವರಿಗೆ ಕಾಂಗ್ರೆಸ್ ಮುಖಂಡರು ಉಚಿತ ಪೆಟ್ರೋಲ್ ನೀಡುತ್ತಿದ್ದು, ಉಚಿತ ಪೆಟ್ರೋಲ್​ಗಾಗಿ ಜನ ಮುಗಿಬಿದ್ದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ವಿಚ್ಛೇದಿತ ಮಹಿಳೆಯರಿಗೆ ವಂಚನೆ ಆರೋಪಿ ಸೂಸೈಡ್​: ಹೆದರಿ ಪ್ರಾಣ ಕಳೆದುಕೊಂಡ್ನಾ ಗಿರೀಶ್​?

ವಿಚ್ಛೇದಿತ ಮಹಿಳೆಯರಿಗೆ ವಂಚನೆ ಆರೋಪಿ ಸೂಸೈಡ್​: ಹೆದರಿ ಪ್ರಾಣ ಕಳೆದುಕೊಂಡ್ನಾ ಗಿರೀಶ್​?

ವಿಚ್ಛೇದಿತ ಮಹಿಳೆಯರನ್ನು ಮರುಮದುವೆಯಾಗುವುದಾಗಿ ವಂಚಿಸಿದ್ದ ಪ್ರಕರಣದ ಆರೋಪಿ ಸಿ.ಎಂ. ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫೇಸ್‌ಬುಕ್ ಮೂಲಕ ಪರಿಚಯವಾಗಿ, ಹಣ ಹಾಗೂ ಲೈಂಗಿಕ ಶೋಷಣೆ ಮಾಡಿದ ಆರೋಪ ಎದುರಿಸುತ್ತಿದ್ದ ಈತನ ವಿರುದ್ಧ ಹಲವು ಮಹಿಳೆಯರು ದೂರು ದಾಖಲಿಸಿದ್ದರು. ದೂರುಗಳ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮದ್ವೆ ಆದ್ಮೇಲೂ ಬೇರೆ ಹುಡುಗಿಯರಿಗೆ ಮೆಸೇಜ್: ಗಂಡನ ಅಸಲಿ ಮುಖ ಬಯಲಿಗೆಳೆದ ಪತ್ನಿ

ಮದ್ವೆ ಆದ್ಮೇಲೂ ಬೇರೆ ಹುಡುಗಿಯರಿಗೆ ಮೆಸೇಜ್: ಗಂಡನ ಅಸಲಿ ಮುಖ ಬಯಲಿಗೆಳೆದ ಪತ್ನಿ

ಚಿಂತಾಮಣಿಯ ಯುವಕನೊರ್ವ ಹಲವು ಮಹಿಳೆಯರಿಗೆ ವಂಚನೆ ಮಾಡಿದ್ದಾನೆ. ವಿವಾಹಿತ ಮಹಿಳೆಯರನ್ನು ಮರು ಮದುವೆಯಾಗುವ ನೆಪದಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮೂಲಕ ಪರಿಚಯಿಸಿಕೊಂಡು ಲಕ್ಷಾಂತರ ರೂ. ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ.

ಫೇಸ್​​ ಬುಕ್​​ನಲ್ಲಿ ಗಾಳ, ವಾಟ್ಸಪ್​​ನಲ್ಲಿ ಆಟ: ವಿವಾಹಿತ ಒಂಟಿ ಮಹಿಳೆಯರೇ ಈತನ ಟಾರ್ಗೆಟ್

ಫೇಸ್​​ ಬುಕ್​​ನಲ್ಲಿ ಗಾಳ, ವಾಟ್ಸಪ್​​ನಲ್ಲಿ ಆಟ: ವಿವಾಹಿತ ಒಂಟಿ ಮಹಿಳೆಯರೇ ಈತನ ಟಾರ್ಗೆಟ್

ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಯುವಕನೊಬ್ಬ ವಿವಾಹಿತ ಮಹಿಳೆಯರನ್ನು ಮರು ಮದುವೆಯಾಗುವ ನೆಪದಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮೂಲಕ ಪರಿಚಯಿಸಿಕೊಂಡು ಲಕ್ಷಾಂತರ ರೂ. ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಪ್ರೀತಿ, ಪ್ರೇಮದ ನಾಟಕವಾಡಿ ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾನೆ. ಸದ್ಯ ಮೂವರು ಸಂತ್ರಸ್ತೆ ಮಹಿಳೆಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಚಿಕ್ಕಬಳ್ಳಾಪುರ: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್​​ ಸವಾರನಿಗೆ ಚಾಕು ಇರಿದ ಲೇಡಿ ಟೆಕ್ಕಿ

ಚಿಕ್ಕಬಳ್ಳಾಪುರ: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್​​ ಸವಾರನಿಗೆ ಚಾಕು ಇರಿದ ಲೇಡಿ ಟೆಕ್ಕಿ

ಓರ್ವ ಮಹಿಳಾ ಟೆಕ್ಕಿ ಹೈವೇಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಚಲಾಯಿಸಿದ್ದು, ಇದನ್ನ ಕಂಡ ಯುವಕರು ಯಾಕಮ್ಮ ಹಂಗೆ ಓಡಿಸ್ತೀಯಾ, ಸರಿಯಾಗಿ ಓಡಿಸೋಕೆ ಆಗಲ್ವಾ ಅಂತ ಪ್ರಶ್ನಿಸಿದ್ದಾರೆ. ಬುದ್ದಿವಾದ ಹೇಳಿದ ಬೈಕ್ ಸವಾರರಿಗೆ ಆ ಮಹಿಳಾ ಟೆಕ್ಕಿ ಮಾಡಿದ್ದೇನು ಗೊತ್ತಾ? ಈ ಸ್ಟೋರಿ ಓದಿ.

ಕುಡಿಯಬೇಡ ಅಂದಿದ್ದೇ ತಪ್ಪಾಯ್ತು: ಹೆಂಡತಿ ಜೀವವನ್ನೇ ಬಲಿ ಪಡೆದ ಪಾಪಿ ಪತಿ

ಕುಡಿಯಬೇಡ ಅಂದಿದ್ದೇ ತಪ್ಪಾಯ್ತು: ಹೆಂಡತಿ ಜೀವವನ್ನೇ ಬಲಿ ಪಡೆದ ಪಾಪಿ ಪತಿ

ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಗಂಡ-ಹೆಂಡತಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ತಾಯಿ ಮೃತಪಟ್ಟಿದ್ದರೆ, ತಂದೆ ಜೈಲು ಸೇರಿರುವ ಕಾರಣ 4 ವರ್ಷದ ಗಂಡು ಮಗು ಅನಾಥವಾಗಿದೆ. ಇತ್ತ ಬೆಂಗಳೂರಲ್ಲೂ ನೇಣು ಬಿಗಿದ ಸ್ಥಿತಿಯಲ್ಲಿ 28 ವರ್ಷದ ಗೃಹಿಣಿಯ ಮೃತದೇಹ ಪತ್ತೆಯಾಗಿದ್ದು, ಪತಿಯೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ