AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

Author - TV9 Kannada

bheemappa.patil@tv9.com

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow On:
ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ!

ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ!

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಉದ್ಯಮಿಯೊಬ್ಬರು ಮನೆಯ ಮಾರಾಟದಿಂದ ಬಂದ ಹಣವನ್ನು ಬಸ್‌ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳರು ದೋಚಿ ಪರಾರಿಯಾಗಿದ್ದಾರೆ. ನಕಲಿ ನಂಬರ್ ಪ್ಲೇಟ್ ಕಾರು ಬಳಸಿ ಕೃತ್ಯ ಎಸಗಲಾಗಿದೆ. ಪೊಲೀಸರು ಆರೋಪಿಗಾಗಿ ತನಿಖೆ ನಡೆಸುತ್ತಿದ್ದು, ಇದು ರಾಜ್ಯದಲ್ಲಿ ನಡೆದ ಮತ್ತೊಂದು ದೊಡ್ಡ ನಗದು ಕಳ್ಳತನ ಪ್ರಕರಣವಾಗಿದೆ.

ಚಿಕ್ಕಬಳ್ಳಾಪುರ: 97ನೇ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕುಖ್ಯಾತ ಕಳ್ಳ; ಶತಕ ವಂಚಿತನಾದ ಖದೀಮ

ಚಿಕ್ಕಬಳ್ಳಾಪುರ: 97ನೇ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕುಖ್ಯಾತ ಕಳ್ಳ; ಶತಕ ವಂಚಿತನಾದ ಖದೀಮ

ಮೋಜು, ಮಸ್ತಿಗಾಗಿ ಕಳ್ಳತನವನ್ನೇ ವೃತ್ತಿಮಾಡಿಕೊಂಡಿದ್ದ ಭೂಪ ಇದೀಗ ಮತ್ತೆ ಜೈಲು ಪಾಲಾಗಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಕಳ್ಳತನ ಮೈಗಂಟಿಸಿಕೊಂಡಿದ್ದ ಕುಖ್ಯಾತ ಕಳ್ಳನನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಕದ್ದು ಖದೀಮ ಪರಾರಿಯಾಗಿದ್ದ. ನವೆಂಬರ್ 27ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿತ್ತು.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ಮಿನಿ ಟೆಂಪೋಗೆ ಡಿಕ್ಕಿಯಾಗಿ ಬಳಿಕ ಆಟೋಗೆ ಡಿಕ್ಕಿ ಹೊಡೆದಿರುವ ಟಿಪ್ಪರ್, ತಪ್ಪಿದ ಭಾರಿ ಅನಾಹುತ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ಮಿನಿ ಟೆಂಪೋಗೆ ಡಿಕ್ಕಿಯಾಗಿ ಬಳಿಕ ಆಟೋಗೆ ಡಿಕ್ಕಿ ಹೊಡೆದಿರುವ ಟಿಪ್ಪರ್, ತಪ್ಪಿದ ಭಾರಿ ಅನಾಹುತ

ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಿನಿ ಟೆಂಪೋಗೆ ಡಿಕ್ಕಿ ಹೊಡೆದ ಟಿಪ್ಪರ್ ಬಳಿಕ ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ತೀವ್ರ ಜಖಂಗೊಂಡಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ.

ನವವಿವಾಹಿತೆ ಸಂಸಾರ ಹಾಳು ಮಾಡಿದ ಆ ವಿಡಿಯೋ: ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ

ನವವಿವಾಹಿತೆ ಸಂಸಾರ ಹಾಳು ಮಾಡಿದ ಆ ವಿಡಿಯೋ: ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ

ಅವರಿಬ್ಬರೂ ಪರಸ್ಪರ ಪ್ರೀತಿಸಿ ಯಾವುದೋ ಕಾರಣಕ್ಕೆ ಬೇರೆಯಾಗಿದ್ರು. ಯುವತಿ ಎಲ್ಲವನ್ನು ಮರೆತು ಬೇರೊಬ್ಬರನ ಜೊತೆ ಮದುವೆ ಮಾಡಿಕೊಂಡು ಗಂಡನ ಮನೆ ಸೇರಿದ್ದಳು. ಆದ್ರೆ ಮಾಜಿ ಪ್ರಿಯಕರ ಮಾಡಿದ ಅದೊಂದು ಕಿತಾಪತಿಗೆ ಆಕೆಯ ಸಂಚಾರವೇ ಛಿದ್ರ ಛಿದ್ರವಾಗಿದೆ. ಪತಿ ಜೊತೆಗೆ ಬದುಕಿ ಬಾಳಬೇಕಿದ್ದ ಆಕೆಯ ಸಾಂಸಾರಿಕ ಜೀವನ ತಿಂಗಳು ಕಳೆಯುವುದರ ಒಳಗೆ ಅಂತ್ಯ ಕಂಡಿದೆ. ಹೀಗಾಗಿ ನೊಂದ ಯುವತಿ ಮಾಜಿ ಪ್ರಿಯಕರನ ಮನೆ ಮುಂದೆ ಧರಣಿ ಕೂತಿದ್ದಾಳೆ.

ಸತ್ತಂತೆ ನಟಿಸಿ ದರೋಡೆಕೋರರಿಂದ ಬಚಾವ್ ಆದ ಮಹಿಳೆ ​​: ಶಿಡ್ಲಘಟ್ಟದಲ್ಲೊಂದು ವಿಚಿತ್ರ ಕೇಸ್​​

ಸತ್ತಂತೆ ನಟಿಸಿ ದರೋಡೆಕೋರರಿಂದ ಬಚಾವ್ ಆದ ಮಹಿಳೆ ​​: ಶಿಡ್ಲಘಟ್ಟದಲ್ಲೊಂದು ವಿಚಿತ್ರ ಕೇಸ್​​

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ನಡೆದ ವಿಚಿತ್ರ ದರೋಡೆ ಪ್ರಕರಣದಲ್ಲಿ ಮಹಿಳೆಯೊಬ್ಬರು ಸತ್ತಂತೆ ನಟಿಸಿ ದರೋಡೆಕೋರರಿಂದ ಪ್ರಾಣ ಉಳಿಸಿಕೊಂಡಿದ್ದಾರೆ. ಮನೆಯಲ್ಲಿದ್ದ ಕೆಜಿಗಟ್ಟಲೆ ಚಿನ್ನಾಭರಣ ಕಳ್ಳತನವಾಗಿದೆ. ಆದರೆ, ಮಹಿಳೆಯ ಕುಟುಂಬಸ್ಥರು ಚಿನ್ನದ ಪ್ರಮಾಣದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಪ್ರಕರಣಕ್ಕೆ ಕೌಟುಂಬಿಕ ಕಲಹದ ತಿರುವು ಸಿಕ್ಕಿದೆ. ಪೊಲೀಸರು ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಚಿಕ್ಕಬಳ್ಳಾಪುರ: ಗಲಾಟೆಯಲ್ಲಿ ಜಸ್ಟ್​ ತಳ್ಳಿದಕ್ಕೆ ಬಿದ್ದು ಸತ್ತ ದೊಡ್ಡಪ್ಪ, ಅಸಲಿಗೆ ಆಗಿದ್ದೇನು?

ಚಿಕ್ಕಬಳ್ಳಾಪುರ: ಗಲಾಟೆಯಲ್ಲಿ ಜಸ್ಟ್​ ತಳ್ಳಿದಕ್ಕೆ ಬಿದ್ದು ಸತ್ತ ದೊಡ್ಡಪ್ಪ, ಅಸಲಿಗೆ ಆಗಿದ್ದೇನು?

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗುರ್ರಂಪಲ್ಲಿ ಗ್ರಾಮದಲ್ಲಿ ಹಣಕಾಸಿನ ವಿಚಾರದಲ್ಲಿ ನಡೆದ ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ನಡೆದಿದೆ. ಸದ್ಯ ಕೊಲೆ ಆರೋಪ ಕೂಡ ಕೇಳಿಬಂದಿದೆ. ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್ಕೇಪ್​​ ಆಗಿರುವ ಆರೋಪಿಗಾಗಿ ಶೋಧ ನಡೆಸಿದ್ದಾರೆ.

ದೇಗುಲದ ಹುಂಡೀಲಿ ಲವ್​​ ಲೆಟರ್​, ಫೋಟೋ: ಪ್ರೀತಿಸಿದ ಹುಡುಗಿ ಸಿಗಲಿ ಭಗವಂತ ಎಂದ ಭಕ್ತ!

ದೇಗುಲದ ಹುಂಡೀಲಿ ಲವ್​​ ಲೆಟರ್​, ಫೋಟೋ: ಪ್ರೀತಿಸಿದ ಹುಡುಗಿ ಸಿಗಲಿ ಭಗವಂತ ಎಂದ ಭಕ್ತ!

ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದ ಹುಂಡಿ ಎಣಿಕೆ ವೇಳೆ ಆಡಳಿತ ಮಂಡಳಿಗೆ ಅಚ್ಚರಿ ಕಾದಿತ್ತು. 15 ಲಕ್ಷ ಕಾಣಿಕೆ ಹಣದ ಜೊತೆಗೆ ಪ್ರೇಮಿಗಳ ಪೋಟೋ, ಲವ್ ಲೆಟರ್ ಹಾಗೂ ವೈಯಕ್ತಿಕ ಬೇಡಿಕೆಗಳ ಪತ್ರಗಳು ಪತ್ತೆಯಾಗಿವೆ. ಪ್ರೇಮ ವಿವಾಹಕ್ಕೆ ಒಪ್ಪಿಗೆ, ಕೆಲಸ, ಮಕ್ಕಳ ಭವಿಷ್ಯ ಹೀಗೆ ನಾನಾ ಬೇಡಿಕೆಗಳನ್ನು ಬರೆದು ಭಕ್ತರು ಹುಂಡಿಗೆ ಹಾಕಿದ್ದಾರೆ.

ಪ್ರೀತಿಸುತ್ತಿರುವ ಹುಡುಗಿಯ ತಂದೆ-ತಾಯಿಗೆ ಒಳ್ಳಿ ಬುದ್ದಿ ಕೊಡಿ: ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಪತ್ರಗಳು ಪತ್ತೆ

ಪ್ರೀತಿಸುತ್ತಿರುವ ಹುಡುಗಿಯ ತಂದೆ-ತಾಯಿಗೆ ಒಳ್ಳಿ ಬುದ್ದಿ ಕೊಡಿ: ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಪತ್ರಗಳು ಪತ್ತೆ

ಇದು ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮದ ತಪ್ಪಲಿನಲ್ಲಿರುವ ಪುರಾಣ ಪ್ರಸಿದ್ದ, ಐತಿಹಾಸ ಪ್ರಸಿದ್ದ ಶ್ರೀ ಭೋಗನಂದೀಶ್ವರ ದೇವಸ್ಥಾನ ಲವ್​ ಮ್ಯಾರೇಜ್​​​ನ ಕಲ್ಯಾಣ ಮಂಟಪವಾಗಿದೆ. ಹೀಗಾಗಿ ಇದರಿಂದಲೇ ಏನೋ ಕೆಲವು ಪ್ರೇಮಿಗಳು ತಮ್ಮ ಪ್ರೇಮ ವಿವೇದನೆಯನ್ನು ಹರಕೆ ರೂಪದಲ್ಲಿ ದೇವರ ಹುಂಡಿಯಲ್ಲಿ ಹಾಕಿದ್ದು ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿರುವ ಈ ದೇವಸ್ಥಾನ ಹುಂಡಿಯಲ್ಲಿ ಗರಿ ಗರಿ ನೋಟಿನ ಜೊತೆಗೆ ಚಿತ್ರ ವಿಚಿತ್ರ ಬೇಡಿಕೆಗಳ ಪತ್ರಗಳು ಪತ್ತೆಯಾಗಿವೆ. ಹುಂಡಿಯಲ್ಲಿ ಮಹಿಳೆಯ ಪೋಟೋ ಕಂಡು ಬಂದಿದ್ದು, ಆ ಪೋಟೋ ಹಿಂದೆ ಪದ್ಮ ಮತ್ತೆ ತಿರುಗಿ ಬಾ, ಅನ್ನೋ ಪ್ರೇಮ ನಿವೇದನೆ ಮಾಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಚಿಕ್ಕಬಳ್ಳಾಪುರದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಎರಡು ದಾರುಣ ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಗುಡಿಬಂಡೆ ತಾಲೂಕಿನ ಪೋಲಂಪಲ್ಲಿಯಲ್ಲಿ ವೃದ್ಧ ದಂಪತಿ ಸಾಲಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಬೆಂಗಳೂರು ಸಮೀಪ ಮಾದನಾಯಕನಹಳ್ಳಿ ವ್ಯಾಪ್ತಿಯಲ್ಲಿ ಪತಿ ಕಳೆದುಕೊಂಡ ದುಃಖದಿಂದಾಗಿ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನಂದಿಬೆಟ್ಟ, ಸ್ಕಂದಗಿರಿ ಸೇರಿ ಈ ಜಾಗಗಳಿಗೆ ಪಿಕ್​ನಿಕ್ ಹೋಗುವವರೇ ಎಚ್ಚರ: ಚಿಕ್ಕಬಳ್ಳಾಪುರದಲ್ಲಿ ಹೆಚ್ಚಿದೆ ಚಿರತೆ ಕಾಟ

ನಂದಿಬೆಟ್ಟ, ಸ್ಕಂದಗಿರಿ ಸೇರಿ ಈ ಜಾಗಗಳಿಗೆ ಪಿಕ್​ನಿಕ್ ಹೋಗುವವರೇ ಎಚ್ಚರ: ಚಿಕ್ಕಬಳ್ಳಾಪುರದಲ್ಲಿ ಹೆಚ್ಚಿದೆ ಚಿರತೆ ಕಾಟ

ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ಕೆಲ ದಿನಗಳಿಂದ ಚಿಕ್ಕಬಳ್ಳಾಪುರದಲ್ಲಿ ಚಿರತೆಗಳ ಹಾವಳಿ ಹೆಚ್ಚಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ನಂದಿ ಬೆಟ್ಟದಂತಹ ಪ್ರವಾಸಿ ತಾಣಗಳಲ್ಲಿಯೂ ಚಿರತೆಗಳ ಹಿಂಡು ಬೀಡುಬಿಟ್ಟಿದ್ದು, ಪ್ರವಾಸಿಗರಲ್ಲಿ ಭೀತಿ ಮನೆಮಾಡಿದೆ. ಇದರಿಂದ ರೈತರು ತೋಟಗಳಿಗೆ ಹೋಗಲು ಹಿಂಜರಿಯುತ್ತಿದ್ದು, ಚಿರತೆಗಳಿಂದ ಹೆದರುವ ಅಗತ್ಯವಿಲ್ಲವೆಂದೂ, ಚಿರತೆ ಕಾಣಿಸಿದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಆತ್ಮಹತ್ಯೆ ಮಾಡಿಕೊಂಡ 18 ವರ್ಷದ ಯುವತಿ, ಸಾವಿನ ಹಿಂದಿದ್ಯಾ ದೆವ್ವದ ಕಾಟ?

ಚಿಕ್ಕಬಳ್ಳಾಪುರ: ಆತ್ಮಹತ್ಯೆ ಮಾಡಿಕೊಂಡ 18 ವರ್ಷದ ಯುವತಿ, ಸಾವಿನ ಹಿಂದಿದ್ಯಾ ದೆವ್ವದ ಕಾಟ?

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬುರಡುಗುಂಟೆ ಗ್ರಾಮದಲ್ಲಿ 18 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆದರೆ ಪೋಷಕರು ದೆವ್ವದ ಕಾಟ ಅಥವಾ ಮಾಟ-ಮಂತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಹೆತ್ತವರು ಕಾಲು ಹಿಡಿದರೂ ಪ್ರಿಯಕರನನ್ನು ಬಿಡದ ಮಗಳು, ಮದುವೆ ಬಳಿಕ ಎಸ್​ಪಿ ಕಚೇರಿಯಲ್ಲೇ ಒಂದಾದ ಪ್ರೇಮಿಗಳು!

ಚಿಕ್ಕಬಳ್ಳಾಪುರ: ಹೆತ್ತವರು ಕಾಲು ಹಿಡಿದರೂ ಪ್ರಿಯಕರನನ್ನು ಬಿಡದ ಮಗಳು, ಮದುವೆ ಬಳಿಕ ಎಸ್​ಪಿ ಕಚೇರಿಯಲ್ಲೇ ಒಂದಾದ ಪ್ರೇಮಿಗಳು!

ಜಾತಿ ಭೇದ ಮತ್ತು ಪೋಷಕರ ವಿರೋಧದ ನಡುವೆ ಯುವತಿಯೊಬ್ಬಳು ಇನ್‌ಸ್ಟಾಗ್ರಾಮ್‌ ಪರಿಚಯದ ಪ್ರಿಯಕರನನ್ನು ಮದುವೆಯಾಗಿ, ನಂತರ ರಕ್ಷಣೆ ಕೋರಿ ಎಸ್‌ಪಿ ಕಚೇರಿಗೆ ಬಂದ ವಿದ್ಯಮಾನ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪೋಷಕರು ಪೊಲೀಸ್ ಠಾಣೆಗೆ ಬಂದು ಕಾಲು ಹಿಡಿದರೂ ಯುವತಿ ಪ್ರಿಯಕರನ ಜೊತೆ ತೆರಳಿದ್ದಾಳೆ. ಚಿಕ್ಕಬಳ್ಳಾಪುರ ಪೊಲೀಸ್ ಠಾಣೆ ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ