ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆ, ಪುತ್ರನ ಬಂಧಿಸಿದ ಬಾಗೇಪಲ್ಲಿ ಪೊಲೀಸರು
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದರೆಂಬ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ಪೌರತ್ವವಿಲ್ಲದಿದ್ದರೂ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಹಲವು ದಾಖಲೆಗಳನ್ನು ಹೊಂದಿದ್ದ ಆರೋಪವೂ ಅವರ ವಿರುದ್ಧ ಕೇಳಿಬಂದಿದೆ.
- Bheemappa Patil
- Updated on: Jul 11, 2026
- 10:10 am
ನಂದಿಗಿರಿಧಾಮದಲ್ಲಿ ಕರಡಿಗಳ ಹಿಂಡು ಪ್ರತ್ಯಕ್ಷ: ಪ್ರವಾಸಿಗರಲ್ಲಿ ಹೆಚ್ಚಿದ ಆತಂಕ!
ನಂದಿಗಿರಿಧಾಮದಲ್ಲಿ ರಾತ್ರಿ ವೇಳೆಯಲ್ಲಿ ಕರಡಿಗಳ ಹಿಂಡು ಕಾಣಿಸಿಕೊಳ್ಳುತ್ತಿರುವುದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಮನೆ, ಹೋಟೆಲ್, ರಸ್ತೆಗಳಲ್ಲಿ ಕರಡಿಗಳು ಕಾಣಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿವೆ. ಈ ಬೆನ್ನಲ್ಲೇ ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಪ್ರವಾಸಿಗರ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಹಕರಿಸುವಂತೆ ಮನವಿ ಮಾಡಿದೆ.
- Bheemappa Patil
- Updated on: Jul 9, 2026
- 10:02 pm
ತೀವ್ರ ಸ್ವರೂಪ ಪಡೆದ ಚಪ್ಪಲಿ ಎಸೆತ ಪ್ರಕರಣ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪರ ನಿಂತ ಅಹಿಂದ
ಚಿಕ್ಕಬಳ್ಳಾಪುರದಲ್ಲಿ ಮೊನ್ನೆ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೀಸೆ ತಿರುವಿ ತೊಡೆ ತಟ್ಟಿ ಪ್ರಚೋದನೆ ನೀಡಿದ್ದಾರೆಂದು ಆರೋಪಿ ಜೆಡಿಎಸ್, ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರ ಎಸ್ಪಿಗೆ ದೂರು ನೀಡಿದೆ. ಇದರ ಬೆನ್ನಲ್ಲೇ ಇದೀಗ ಪ್ರದೀಪ್ ಈಶ್ವರ್ ಬೆನ್ನಿಗೆ ಸ್ವಜಾತಿ ಬಲಿಜ ಸಂಘ ಹಾಗೂ ಅಹಿಂದ ನಿಂತಿದೆ.
- Bheemappa Patil
- Updated on: Jul 1, 2026
- 7:01 pm
ಹೋಂಸ್ಟೇನಲ್ಲಿ ಯುವತಿ ಶವಪತ್ತೆ: ನಂದಿಬೆಟ್ಟಕ್ಕೆ ಕರೆದೊಯ್ದು ಕೊಲೆ ಮಾಡಿದ್ನಾ ಅಲಿ?
ಬಹುತೇಕರಿಗೆ ನಂದಿಬೆಟ್ಟ ವಾರಾಂತ್ಯದ ಪ್ರವಾಸ ತಾಣವಾಗಿದೆ. ನಗರಜೀವನದ ಜಂಜಾಟದಿಂದ ದೂರವಾಗಿ ಪ್ರಕೃತಿಯ ಮಡಿಲಲ್ಲಿ ಕೆಲ ಕ್ಷಣ ಕಳೆಯುವ ತಾಣವಾಗಿ ಮಾರ್ಪಟ್ಟಿದೆ. ಇಲ್ಲಿಗೆ ಹೆಚ್ಚಾಗಿ ಪ್ರೇಮಿಗಳು ಆಗಮಿಸುತ್ತಾರೆ. ಹೀಗಾಗಿ ಒಂದು ರೀತಿ ಲವರ್ಸ್ ಹಾಟ್ ಸ್ಪಾಟ್ ಎಂದು ಹೇಳಲಾಗುತ್ತಿರುವ ನಂದಿಬೆಟ್ಟದಲ್ಲಿ ಯುವತಿ ಅನುಮಾಸ್ಪದವಾಗಿ ಯುವತಿಯೋರ್ವಳ ಶವ ಪತ್ತೆಯಾಗಿದೆ.
- Bheemappa Patil
- Updated on: Jun 29, 2026
- 5:36 pm
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ: ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರ ಬಂಧನ; ಖರ್ಗೆ ಖಂಡನೆ
ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಬಿಜೆಪಿ-ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಘಟನೆ ಕುರಿತು ಸ್ವಯಂಪ್ರೇರಿತ ಎಫ್ಐಆರ್ ದಾಖಲಾಗಿದ್ದು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಜಿಲ್ಲಾಧಿಕಾರಿ ಜಿ. ಪ್ರಭು ತೀವ್ರ ಬೇಸರ ವ್ಯಕ್ತಪಡಿಸಿ ಕಾನೂನು ಕ್ರಮದ ಭರವಸೆ ನೀಡಿದ್ದಾರೆ.
- Bheemappa Patil
- Updated on: Jun 28, 2026
- 12:29 pm
ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ
ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆಯುತ್ತಿದ್ದ ಕೆಂಪೇಗೌಡ ಕಾರ್ಯಕ್ರಮದಲ್ಲಿ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಪ್ರದೀಪ್ ಈಶ್ವರ್ ಅವರನ್ನ ವೇದಿಕೆಯಿಂದ ಕೆಳಗಿಳಸಬೇಕೆಂದು ಗಲಾಟೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದು, ಬಳಿಕ ಸ್ವಾಮೀಜಿ ಮಧ್ಯೆ ಪ್ರವೇಶಿಸಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ಇದಾದ ನಂತರ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರಿಗೆ ಮೀಸೆ ತಿರುವಿ ತೋಳು ತಟ್ಟಿ ತಿರುಗೇಟು ನೀಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಪ್ರದೀಪ್ ಈಶ್ವರ್ ಕಾರಿನ ಸನ್ ರೂಫ್ ಮೂಲಕ ಮೆರವಣಿಗೆ ತೆರಳುತ್ತಿದ್ದ ವೇಳೆ ಕೆಲವರು ಚಪ್ಪಲಿ ಎಸೆದಿದ್ದು, ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
- Bheemappa Patil
- Updated on: Jun 27, 2026
- 4:55 pm
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ, ಪೊಲೀಸರಿಂದ ಲಘು ಲಾಠಿ ಚಾರ್ಜ್
ರಾಜ್ಯಾದೆಲ್ಲೆಡೆ ಇಂದು (ಜೂನ್ 27) ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮ ಆಚರಣೆ ಮಾಡಲಾಯ್ತು. ಆದ್ರೆ, ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ದೊಡ್ಡ ಹೈಡ್ರಾಮವೇ ನಡೆದಿದೆ. ಹೌದು...ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಅವಹೇಳನ ಹೇಳಿಕೆ ನೀಡಿದ ಸಂಬಂಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು. ಕಾರ್ಯಕ್ರಮ ವೇದಿಕೆಯಿಂದ ಅವರನ್ನು ಹೊರಕಳಿಸುವಂತೆ ಯುವಕರ ಗುಂಪು ಲ್ಲಿ ಗಲಾಟೆ ಮಾಡಿದ್ದು, ಈ ವೇಳೆ ಮಾತಿನ ಚಕಮಕಿ, ನೂಕಾಟ-ತಳ್ಳಾಟ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಹ ಹರಸಾಹಸಪಟ್ಟಿದ್ದು, ಆದರೂ ಗಲಾಟೆ ಕಂಟ್ರೋಲ್ ತಪ್ಪುತ್ತಿದ್ದಂತೆಯೇ ಪೊಲೀಸರು ಕೊನೆಗೆ ಲಘು ಲಾಠಿ ಪ್ರಹಾರ ನಡೆಸಿದರು.
- Bheemappa Patil
- Updated on: Jun 27, 2026
- 2:52 pm
ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ: ಚಿಕ್ಕಬಳ್ಳಾಪುರದಲ್ಲಿ 14 ಟನ್ ಗೋಧಿ ವಶಕ್ಕೆ
ಚಿಕ್ಕಬಳ್ಳಾಪುರದಲ್ಲಿ ಅನ್ನಭಾಗ್ಯ ಯೋಜನೆಗೆ ಸೇರಿದ್ದ 14 ಟನ್ ಗೋಧಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸರ್ಕಾರಿ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ತಲುಪಬೇಕಿದ್ದ ಗೋಧಿಯನ್ನು ಚಿಂತಾಮಣಿಯಿಂದ ಹೊಸಕೋಟೆಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಹೆಚ್ ಕ್ರಾಸ್ ಬಳಿ ದಾಳಿ ನಡೆಸಿ 250 ಚೀಲ ಗೋಧಿಯನ್ನು ವಶಪಡಿಸಿಕೊಂಡಿದ್ದಾರೆ.
- Bheemappa Patil
- Updated on: Jun 27, 2026
- 6:24 am
ಬಿಜೆಪಿಯಲ್ಲಿ ಮತ್ತೆ ಶುರುವಾಯ್ತು ನಾಯಕರ ವಾರ್:ಸುಧಾಕರ್ಗೆ ವಿಶ್ವನಾಥ್ ಬಹಿರಂಗ ಸವಾಲ್
ಲೋಕಸಭೆ ಚುನಾವಣೆ ನಂತರವೂ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸರಿದಾರಿಗೆ ಬರುತ್ತಿಲ್ಲ. ಹೌದು...ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಮತ್ತು ಶಾಸಕ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ ನಡುವಿನ ವಾರ್ ಮತ್ತೆ ತಾರಕಕ್ಕೇರಿದೆ. 2024ರ ಲೋಕಸಭಾ ಎಲೆಕ್ಷನ್ ಸಂದರ್ಭದಲ್ಲಿ ಶುರುವಾದ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗವಾಗಿ ಕಾದಾಟದ ಹಂತಕ್ಕೆ ಬಂದು ತಲುಪಿದೆ.
- Bheemappa Patil
- Updated on: Jun 26, 2026
- 8:21 pm
1 ರೂಪಾಯಿಗೆ ಟಿ ಶರ್ಟ್: ಚಿಂತಾಮಣಿಯಲ್ಲಿ ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ಹೊಸದಾಗಿ ಆರಂಭವಾದ ಬಟ್ಟೆ ಅಂಗಡಿ ಮಾಲಕರು ಕೇವಲ 1 ರೂಪಾಯಿಗೆ ಟಿ-ಶರ್ಟ್ ಆಫರ್ ಘೋಷಿಸಿದ್ದರಿಂದ ಗ್ರಾಹಕರು ಮುಗಿಬಿದ್ದ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ನಡೆದಿದೆ. ಚಿಂತಾಮಣಿ ನಗರದ ಬೆಂಗಳೂರು ಮುಖ್ಯರಸ್ತೆಯಲ್ಲಿ ಇರುವ ಅಂಗಡಿ ಬಳಿ ಜನದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
- Bheemappa Patil
- Updated on: Jun 22, 2026
- 5:37 pm
ತಾಳಿ ಕಿತ್ತೆಸೆದು ಹೋಗಿದ್ದವಳೇ ಮತ್ತೆ ಕಟ್ಟಿಸಿಕೊಂಡಳು! ಇದು ಪೇಂಟರ್ ಹುಡುಗ, ಶ್ರೀಮಂತ ಹುಡುಗಿಯ ಸಿನಿಮೀಯ ಲವ್ ಸ್ಟೋರಿ
ಚಿಕ್ಕಬಳ್ಳಾಪುರದಲ್ಲಿ ಪೋಷಕರ ಒತ್ತಾಯಕ್ಕೆ ಮಣಿದು ಪೊಲೀಸ್ ಠಾಣೆಯಲ್ಲೇ ಪತಿಯ ತಾಳಿ ಕಿತ್ತೆಸೆದು ಹೋಗಿದ್ದ ಶ್ರೀಮಂತ ಯುವತಿಯೊಬ್ಬಳು, 6 ತಿಂಗಳ ಬಳಿಕ ಬಡ ಪೇಂಟರ್ ಪ್ರಿಯಕರನ ಬಳಿಗೆ ಮರಳಿ ಬಂದು ದೇವಾಲಯದಲ್ಲಿ ಮರುಮದುವೆಯಾಗಿದ್ದಾಳೆ. ಅಂತಸ್ತು ಮತ್ತು ಜಾತಿಯ ಗೋಡೆಗಳನ್ನು ಮೀರಿ ಒಂದಾದ ಈ ಜೋಡಿಯ ಸಿನಿಮೀಯ ಪ್ರೇಮಕಥೆ ಈಗ ಭಾರೀ ಸದ್ದುಮಾಡಿದೆ.
- Bheemappa Patil
- Updated on: Jun 19, 2026
- 7:44 am
ಪ್ರಯಾಣಿಕರೇ ಗಮನಿಸಿ: ರೈತರ ‘ವಿಧಾನಸೌಧ ಚಲೋ’ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ರಸ್ತೆ ಬಂದ್ ಭೀತಿ
ಕೆಐಎಡಿಬಿ ಭೂಸ್ವಾಧೀನ ಖಂಡಿಸಿ ನಾಳೆ (ಜೂನ್ 5) ರೈತ ಸಂಘದ ವತಿಯಿಂದ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ 5,000 ಬೈಕ್ಗಳ ಬೃಹತ್ ರ್ಯಾಲಿ ನಡೆಯಲಿದ್ದು, ಹೆಬ್ಬಾಳ ಹಾಗೂ ದೇವನಹಳ್ಳಿ ಏರ್ಪೋರ್ಟ್ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಕೊನೇ ಕ್ಷಣದ ಸಮಸ್ಯೆ ತಪ್ಪಿಸಲು ವಿಮಾನ ಪ್ರಯಾಣಿಕರು ಮುಂಚಿತವಾಗಿ ಹೊರಡವುದು ಉತ್ತಮ.
- Bheemappa Patil
- Updated on: Jun 4, 2026
- 6:14 pm