ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದು ಕೊಲೆಗೆ ಯತ್ನಿಸಿದ ಪತ್ನಿ: ಆಗಿದ್ದೇನು?
ಗಂಡ-ಹೆಂಡತಿ ಜಗಳ ಉಂಡು ಮಲಗೋತನಕ ಅಂತಾರೆ. ಆದರೆ ಇಂದಿನ ದಿನಗಳಲ್ಲಿ ಉಂಡು, ಮಲಗಿ ಎದ್ದ ಮೇಲೂ ಗಂಡ ಹೆಂಡತಿ ಜಗಳ ಮುಂದುವರೆಯುತ್ತದೆ. ಹೌದು...ಇದಕ್ಕೆ ಪೂರಕವೆಂಬಂತೆ ಕಳೆದ 1 ವರ್ಷದ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿದ್ದ ದಂಪತಿ ನಡುವಿನ ಜಗಳ ತೀರಾ ಅತಿರೇಕಕ್ಕೇರಿದ್ದು, ಪತ್ನಿಯೇ ಪತಿಯನ್ನು ಕೊಲೆ ಮಾಡುವ ಹಂತಕ್ಕೆ ಹೋಗಿದ್ದಾಳೆ. ಅದೃಷ್ಟವಶಾತ್ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಟಕ್ಕೂ ಆಗಿದ್ದೇನು? ಎನ್ನುವ ವಿವರ ಇಲ್ಲಿದೆ.
- Bheemappa Patil
- Updated on: Mar 22, 2026
- 7:44 pm
ಯುಗಾದಿ ಹೊಸತೊಡಕು: ನಾಟಿ ಕೋಳಿಗೆ ಭಾರೀ ಡಿಮ್ಯಾಂಡ್, ರೇಟ್ ಎಷ್ಟು ಗೊತ್ತಾ?
ಚಿಕ್ಕಬಳ್ಳಾಪುರದಲ್ಲಿ ನಾಟಿ ಕೋಳಿ ಮತ್ತು ಮೊಟ್ಟೆಗಳಿಗೆ ಭಾರೀ ಬೇಡಿಕೆ ಬಂದಿದೆ. ವಿಶೇಷವಾಗಿ ಯುಗಾದಿ ಹೊಸತೊಡಕಿನಂದು, ನಾನ್ ವೆಜ್ ಪ್ರಿಯರು ನಾಟಿ ಕೋಳಿ ಮೊರೆ ಹೋಗಿದ್ದಾರೆ. ಹೀಗಾಗಿ ನಾಟಿ ಕೋಳಿಗೆ ಭಾರೀ ಡಿಮ್ಯಾಂಡ್ ಬಂದಿದೆ. ಗ್ರಾಹಕರು ಕೇಳಿದಷ್ಟು ಹಣ ಕೊಟ್ಟು ಖರೀದಿ ಮಾಡುತ್ತಿದ್ದಾರೆ.
- Bheemappa Patil
- Updated on: Mar 19, 2026
- 8:12 pm
ವೀಕೆಂಡ್ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂಬ ಕಾರಣಕ್ಕೆ ಬಾರದ ಜನ
ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆಯ ಬಿಸಿ ಹೋಟೆಲ್ಗಳಿಗಷ್ಟೇ ಅಲ್ಲ, ಪ್ರವಾಸೋದ್ಯಮಕ್ಕೂ ತಟ್ಟಲು ಶುರುವಾಗಿದೆ. ವಾರಾಂತ್ಯಗಳಲ್ಲಿ ಜನರಿಂದ ತುಂಬಿ ತುಳುಕುತ್ತಿದ್ದ ಚಿಕ್ಕಬಳ್ಳಾಪುರದ ನಂದಿ ಹಿಲ್ಸ್ ಭಾನುವಾರ ಬಿಕೋ ಎನ್ನುತ್ತಿತ್ತು. ಹೋಟೆಲ್ಗಳು ಬಂದ್ ಆಗಿದ್ದರೆ ಊಟ-ತಿಂಡಿ ಸಿಗಲ್ಲ ಎಂಬ ಆತಂಕದಿಂದ ಜನ ಅತ್ತ ಮುಖಮಾಡಲೇ ಇಲ್ಲ.
- Bheemappa Patil
- Updated on: Mar 16, 2026
- 7:55 am
ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಕೇವಲ 40 ದಿನದ ಹಸುಗೂಸನ್ನು ಅಜ್ಜಿ ಕೊಲೆಗೈದಿರುವಂತಹ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಜ್ಜಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಮೊಮ್ಮಗನನ್ನೇ ಅಜ್ಜಿ ಕೊಲೆ ಮಾಡಿದ್ದೇಕೆ ಅಂತ ಗೊತ್ತಾದರೆ ಶಾಕ್ ಆಗುತ್ತೀರಾ.
- Bheemappa Patil
- Updated on: Mar 10, 2026
- 3:13 pm
ಗಂಡ-ಹೆಂಡತಿ ಜಗಳ ಸಾವಿನಲ್ಲಿ ಅಂತ್ಯ; ಅಳಿಯನೇ ಮಗಳನ್ನು ಸಾಯಿಸಿದ್ದಾನೆಂದ ಕುಟುಂಬಸ್ಥರು!
ಜಿಲ್ಲೆಯ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ವರಲಕ್ಷ್ಮಿ (25) ಎಂಬ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೇಮಿಗಳ ನಡುವೆ ಮಧ್ಯಸ್ಥಿಕೆ ವಹಿಸಬೇಡಿ ಎಂದು ಗಂಡ ಗಂಗರಾಜು ಬುದ್ದಿವಾದ ಹೇಳಿದ ಹಿನ್ನೆಲೆ ಗಂಡ-ಹೆಂಡತಿಯ ನಡುವೆ ಗಲಾಟೆ ನಡೆದಿದ್ದಾಗಿ ತಿಳಿದುಬಂದಿದೆ. ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷ್ಮಿಗೆ ಕರೆ ಮಾಡಿದ್ದು, ಅದನ್ನು ಗಂಗರಾಜು ಸ್ವೀಕರಿಸಿದ್ದರಿಂದ ಜಗಳ ಉಂಟಾಗಿತ್ತು ಎನ್ನಲಾಗಿದೆ. ನಂತರ ವರಲಕ್ಷ್ಮಿ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪತ್ನಿಯನ್ನು ಹೊಡೆದು ಬಳಿಕ ನೇಣು ಹಾಕಿದ್ದಾರೆ ಎಂದು ಮೃತಳ ತವರು ಮನೆಯವರು ಗಂಗರಾಜು ಹಾಗೂ ಅವನ ತಂದೆ-ತಾಯಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಇದೇ ವೇಳೆ ಶವವನ್ನು ಸಕಾಲಕ್ಕೆ ತೋರಿಸಲಿಲ್ಲ ಎಂದು ಆರೋಪಿಸಿ ಪೆರೇಸಂದ್ರ ಪೊಲೀಸರು ಹಾಗೂ ಗುಡಿಬಂಡೆ ತಾಲೂಕು ಆಸ್ಪತ್ರೆ ವಿರುದ್ಧ ಮೃತಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Bheemappa Patil
- Updated on: Mar 9, 2026
- 11:21 am
ಕಾರಿನಲ್ಲಿದ್ದ ಹಣದ ಬ್ಯಾಗ್ ಎಗರಿಸಿ ಪರಾರಿಯಾಗುವಷ್ಟರಲ್ಲಿ ಸಿಕ್ಕಿಬಿದ್ದ ಕಳ್ಳರು: ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರಿಂದ ಥಳಿತ
ಚಿಕ್ಕಬಳ್ಳಾಪುರ ನಗರ ಹೊರಹೊಲಯದ ಕೆವಿ ಕ್ಯಾಂಪಸ್ ಬಳಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ದರೋಡೆಕೋರರ ಅದೃಷ್ಟ ಸರಿ ಇರಲಿಲ್ಲವೆನಿಸುತ್ತದೆ. ಸ್ಥಳೀಯರು ಇಬ್ಬರು ಕಳ್ಳರನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಥಳಿಸಿ, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಮತ್ತೊಬ್ಬ ಕಳ್ಳ ಹಣದ ಬ್ಯಾಗ್ ಸಮೇತ ಪರಾರಿಯಾಗಿದ್ದಾನೆ.
- Bheemappa Patil
- Updated on: Mar 8, 2026
- 5:34 pm
ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್; ರೈತರ ಕೈ ಸೇರಲಿದೆ ಲಾಭದ ಹಣ!
ನಂದಿನಿ ಉತ್ಪನ್ನಗಳ ಬೇಡಿಕೆ ಹೆಚ್ಚಳದಿಂದ ಚಿಮುಲ್ 2 ಕೋಟಿ ರೂ. ಲಾಭ ಗಳಿಸಿದೆ. ಈ ಲಾಭವನ್ನು ಚಿಕ್ಕಬಳ್ಳಾಪುರ ರೈತರಿಗೆ ಹಂಚಲು ಮುಂದಾಗಿ, ಮೇ ತಿಂಗಳವರೆಗೆ ಪ್ರತಿ ಲೀಟರ್ ಹಾಲಿಗೆ 1.50 ರೂ. ಹೆಚ್ಚುವರಿ ದರ ನೀಡಲಿದೆ. ಈ ನಿರ್ಧಾರವು ರೈತರಿಗೆ ಉತ್ತಮ ಪ್ರೋತ್ಸಾಹ ನೀಡಲಿದ್ದು, ಚಿಮುಲ್ ರಾಜ್ಯದಲ್ಲೇ ಅತಿ ಹೆಚ್ಚು ಹಾಲಿನ ದರ ನೀಡುವ ಒಕ್ಕೂಟಗಳಲ್ಲಿ ಒಂದಾಗಲಿದೆ.
- Bheemappa Patil
- Updated on: Mar 7, 2026
- 3:17 pm
Tomato price down: ಮಾರ್ಕೆಟ್ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
- Bheemappa Patil
- Updated on: Mar 7, 2026
- 10:07 am
‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿ ಪಿಎಸ್ಐ, ಎಎಸ್ಐ ಇದೀಗ ಲೋಕಾಯುಕ್ತ ಅತಿಥಿ
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ವಿವಾದ ಪ್ರಕರಣದಲ್ಲಿ 'ಬಿ-ರಿಪೋರ್ಟ್' ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಅವರ ಮೇಲಿದೆ. ಮೊದಲ ಕಂತಾಗಿ 70,000 ರೂ. ಪಡೆಯುತ್ತಿದ್ದಾಗ ಎಎಸ್ಐ ವೆಂಕಟೇಶಪ್ಪ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ತನಿಖೆ ನಂತರ ಪಿಎಸ್ಐ ಶರಣಪ್ಪ ಕೂಡ ಬಂಧಿತರಾಗಿದ್ದು, ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತದ ಕಟ್ಟುನಿಟ್ಟಿನ ಕ್ರಮ ಪ್ರದರ್ಶಿಸಿದೆ.
- Bheemappa Patil
- Updated on: Mar 3, 2026
- 10:38 pm
ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೇಯವನ ಜತೆ ಲವ್ವಿಡವ್ವಿ: ಮಂಚದ ಮೇಲೆಯೇ ಬಿತ್ತು ಹೆಣ
ಆಕೆ ತಾನಾಯ್ತು ತನ್ನ ಪಾಡಾಯ್ತು ಎಂದು ಮಕ್ಕಳ ಜೊತೆ ಆಯಾಗಿರಬೇಕಿತ್ತು. ಆದರೆ ಆಕೆ ಅವನು ಬಿಟ್ಟು ಇವನು, ಇವನು ಬಿಟ್ಟು ಇನ್ನೊಬ್ಬನೊಂದಿಗೆ ಚಕ್ಕಂದವಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡಿದ್ದಾಳೆ. ಹೌದು..ಇಬ್ಬರು ಗಂಡಂದಿರನ್ನು ಬಿಟ್ಟುಯುವಕನೊಂದಿಗೆ ಲಿವಿಂಗ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆ ಮಂಚದ ಮೇಲೆಯೇ ಹೆಣವಾಗಿದ್ದಾಳೆ. ಅಷ್ಟಕ್ಕೂ ಆಕೆ ಯಾರು?. ಆಕೆಯ ಹಿನ್ನಲೆ ಏನು? ಮಂಚದ ಮೇಲೆ ಆಗಿದ್ದಾದರೂ ಏನು ಎನ್ನುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
- Bheemappa Patil
- Updated on: Mar 2, 2026
- 9:55 pm
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
- Bheemappa Patil
- Updated on: Mar 1, 2026
- 3:04 pm
ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!
Ali Khamenei Death: ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಚಿಕ್ಕಬಳ್ಳಾಪುರದ ಅಲೀಪುರದ ಮಸೀದಿಗೂ ಬಂದಿದ್ದರು. ಅಲೀಪುರದ ಸುಮಾರು 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು ಎನ್ನಲಾಗಿದ್ದು, ಇದೀಗ ಖಮೇನಿ ಹತ್ಯೆಯಿಂದ ಅಲೀಪುರದ ಶಿಯಾ ಮುಸ್ಲಿಮರು ದುಃಖತಪ್ತರಾಗಿದ್ದಾರೆ.
- Bheemappa Patil
- Updated on: Mar 1, 2026
- 10:25 am