ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಆಸ್ಪತ್ರೆಯಲ್ಲಿ ನವಜಾತ ಶಿಶು ಬಿಟ್ಟು ಎಸ್ಕೇಪ್: ತನಿಖೆಯಲ್ಲಿ ತಾಯಿ ಅವಿವಾಹಿತೆ ಎನ್ನುವುದು ಪತ್ತೆ
ಆಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣವೇ ನವಜಾತ ಶಿಶುವನ್ನು ತೊರೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತಾಯಿ ಪ್ರತ್ಯಕ್ಷವಾಗಿದ್ದಾರೆ. ‘ತಾನು ಅವಿವಾಹಿತೆ, ಹಾಗಾಗಿ ಮಗು ಬೇಡ’ ಎಂದು ಬಿಟ್ಟುಹೋಗಿದ್ದಾಗಿ ಚಿಕ್ಕಬಳ್ಳಾಪುರ ಮಕ್ಕಳ ರಕ್ಷಣಾಧಿಕಾರಿಗೆ ಹೇಳಿಕೆ ನೀಡಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ದೇವನಹಳ್ಳಿಯ ನಕ್ಷತ್ರಾ ಖಾಸಗಿ ಆಸ್ಪತ್ರೆ ವೈದ್ಯರು ಎಡವಟ್ಟು ಬೆಳಕಿಗೆ ಬಂದಿದೆ.
- Bheemappa Patil
- Updated on: Jul 29, 2026
- 6:44 pm
ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು: ರಾಜೀವ್ ಗೌಡ ಬೆಂಬಲಿಗನಿಗೆ ಧರ್ಮದೇಟು
ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಸಂಘಟನ್ ಸೃಜನ್ ಅಭಿಯಾನದ ಸಭೆಯಲ್ಲಿ AICC ವೀಕ್ಷಕರ ಮುಂದೆಯೇ ಮಾಜಿ ಸಚಿವ ಶಾಸಕ ಡಾ. ಎಂ ಸಿ ಸುಧಾಕರ್ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಪರಾಜಿತ ಕಾಂಗ್ರೇಸ್ ಅಭ್ಯರ್ಥಿ ರಾಜೀವ್ ಗೌಡ ಬೆಂಬಲಿಗರು ನಡುವೆ ಗಲಾಟೆಯಾಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳೊ ಹಂತಕ್ಕೆ ಹೋಗಿದೆ.
- Bheemappa Patil
- Updated on: Jul 25, 2026
- 11:04 pm
ಚಿಕ್ಕಬಳ್ಳಾಪುರದಲ್ಲಿ ನಕಲಿ ಕೀಟನಾಶಕ ಜಾಲ ಪತ್ತೆ: ರೈತರಿಗೆ ವಂಚಿಸುತ್ತಿದ್ದ ‘ಬೆಳೆ ತಜ್ಞ’ ಕೃಷಿ ಇಲಾಖೆ ಬಲೆಗೆ!
ಚಿಕ್ಕಬಳ್ಳಾಪುರದಲ್ಲಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ ಮಾಡುತ್ತಿದ್ದ ಭಾರಿ ಜಾಲವನ್ನು ಕೃಷಿ ಜಾಗೃತ ದಳ ಬಯಲಿಗೆಳೆದಿದೆ. ತಾನೊಬ್ಬ ಬೆಳೆ ತಜ್ಞ ಎಂದು ನಂಬಿಸಿ ವಂಚಿಸುತ್ತಿದ್ದ ಸೋಮಸುಂದರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆತನಿಂದ 200 ಲೀಟರ್ ರಾಸಾಯನಿಕ ಹಾಗೂ ನಕಲಿ ಲೇಬಲ್ಗಳನ್ನು ಜಪ್ತಿ ಮಾಡಲಾಗಿದೆ. ನಕಲಿ ಔಷಧಗಳಿಂದ ಎಚ್ಚರಿಕೆ ವಹಿಸಲು ಕೃಷಿ ಇಲಾಖೆ ಸೂಚಿಸಿದೆ.
- Bheemappa Patil
- Updated on: Jul 24, 2026
- 3:04 pm
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ: ಜಲ ಯೋಜನೆಗಳ ಅನುಷ್ಠಾನ ವಿಚಾರವಾಗಿ ಕಿಡಿ
ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಚಿಕ್ಕಬಳ್ಳಾಪುರದಲ್ಲಿ ಬರ ಪರಿಶೀಲನಾ ಸಭೆಯಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನದ ವಿಳಂಬದ ಬಗ್ಗೆ ಅಧಿಕಾರಿಗಳ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೋಜನೆಗೆ ಹಣದ ಕೊರತೆ ಇಲ್ಲ, ಆದರೆ ಅನುಷ್ಠಾನದಲ್ಲಿ ಲೋಪವಾಗಿದೆ ಎಂದು ಅವರು ಹೇಳಿದ್ದು, ಕಾರ್ಯವನ್ನು ತಕ್ಷಣ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
- Bheemappa Patil
- Updated on: Jul 22, 2026
- 3:17 pm
ಅಸ್ವಸ್ಥಗೊಂಡಿದ್ದ ಬಾಲಕಿಗೆ ಸಕಾಲಕ್ಕೆ ಸಿಗದ ಚಿಕಿತ್ಸೆ: ಬಾಳಿ ಬದುಕಬೇಕಿದ್ದ 8 ವರ್ಷದ ಮಗು ದುರಂತ ಸಾವು
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಎಂಟು ವರ್ಷದ ಬಾಲಕಿ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ವೈದ್ಯರಿಲ್ಲದೆ, ಸೂಕ್ತ ವೈದ್ಯಕೀಯ ಸೌಲಭ್ಯಗಳಿಲ್ಲದೆ ಬಾಲಕಿ ಮೃತಪಟ್ಟಿದೆ ಎನ್ನಲಾಗುತ್ತಿದ್ದು, ಇಬ್ಬರು ಪ್ರಭಾವಿ ಜನಪ್ರತಿನಿಧಿಗಳ ಸ್ವಗ್ರಾಮದಲ್ಲೇ ಈ ದುರಂತ ಸಂಭವಿಸಿದ್ದು, ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
- Bheemappa Patil
- Updated on: Jul 20, 2026
- 9:30 pm
ಟೊಮೆಟೊ, ದಾಳಿಂಬೆ ಬೆನ್ನಲ್ಲೇ ದ್ರಾಕ್ಷಿ ಮೇಲೆ ಕಳ್ಳರ ಕಣ್ಣು: ರಾತ್ರೋರಾತ್ರಿ ಕೈಚಳಕ ತೋರಿಸಿದ ಖದೀಮರು!
Chikkaballapur Grape Theft: ಟೊಮೆಟೊ, ದಾಳಿಂಬೆ ಕಳವು ಮಾಡುತ್ತಿದ್ದ ಖದೀಮರು, ಇದೀಗ ಇದೇ ಮೊದಲ ಬಾರಿಗೆ ದ್ರಾಕ್ಷಿ ತೋಟಕ್ಕೂ ಕನ್ನ ಹಾಕಿದ್ದಾರೆ. ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ದ್ರಾಕ್ಷಿಯನ್ನು ಕದ್ದೊಯ್ದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೊಳವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸದ್ಯ ರೈತರು ಆತಂಕಗೊಂಡಿದ್ದು, ಪೊಲೀಸರ ಮೊರೆ ಹೋಗಿದ್ದಾರೆ.
- Bheemappa Patil
- Updated on: Jul 15, 2026
- 8:22 pm
ಚಂದ್ರದ್ರೋಣ ಪರ್ವತ ಚಾರಣ ದುರಂತದ ಎಫೆಕ್ಟ್: ಇನ್ನೂ ಆರಂಭವಾಗದ ಟ್ರೆಕಿಂಗ್, ಚಾರಣ ಪ್ರಿಯರ ಪರದಾಟ!
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಚಾರಣ ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ಟ್ರೆಕಿಂಗ್ ಚಟುವಟಿಕೆಗಳಿಗೆ ಬ್ರೇಕ್ ಹಾಕಿದೆ. ಸುರಕ್ಷತೆಗಾಗಿ ಅರಣ್ಯ ಇಲಾಖೆ ಜಾರಿಗೆ ತಂದಿರುವ ಹೊಸ ಎಸ್ಒಪಿ (SOP) ನಿಯಮಗಳ ಅನುಷ್ಠಾನ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಸ್ಕಂದಗಿರಿ, ಕೈವಾರ ಬೆಟ್ಟ ಸೇರಿದಂತೆ ಬೆಂಗಳೂರಿಗರ ಅಚ್ಚುಮೆಚ್ಚಿನ ತಾಣಗಳಲ್ಲಿ ಚಾರಣ ಇನ್ನೂ ಆರಂಭವಾಗಿಲ್ಲ. ಹೀಗಾಗಿ ಟ್ರೆಕಿಂಗ್ ಪ್ರಿಯರು ಪರದಾಡುವಂತಾಗಿದ್ದು, ಚಾರಣಕ್ಕೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.
- Bheemappa Patil
- Updated on: Jul 14, 2026
- 8:59 am
ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆ, ಪುತ್ರನ ಬಂಧಿಸಿದ ಬಾಗೇಪಲ್ಲಿ ಪೊಲೀಸರು
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದರೆಂಬ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ಪೌರತ್ವವಿಲ್ಲದಿದ್ದರೂ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಹಲವು ದಾಖಲೆಗಳನ್ನು ಹೊಂದಿದ್ದ ಆರೋಪವೂ ಅವರ ವಿರುದ್ಧ ಕೇಳಿಬಂದಿದೆ.
- Bheemappa Patil
- Updated on: Jul 11, 2026
- 10:10 am
ನಂದಿಗಿರಿಧಾಮದಲ್ಲಿ ಕರಡಿಗಳ ಹಿಂಡು ಪ್ರತ್ಯಕ್ಷ: ಪ್ರವಾಸಿಗರಲ್ಲಿ ಹೆಚ್ಚಿದ ಆತಂಕ!
ನಂದಿಗಿರಿಧಾಮದಲ್ಲಿ ರಾತ್ರಿ ವೇಳೆಯಲ್ಲಿ ಕರಡಿಗಳ ಹಿಂಡು ಕಾಣಿಸಿಕೊಳ್ಳುತ್ತಿರುವುದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಮನೆ, ಹೋಟೆಲ್, ರಸ್ತೆಗಳಲ್ಲಿ ಕರಡಿಗಳು ಕಾಣಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿವೆ. ಈ ಬೆನ್ನಲ್ಲೇ ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಪ್ರವಾಸಿಗರ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಹಕರಿಸುವಂತೆ ಮನವಿ ಮಾಡಿದೆ.
- Bheemappa Patil
- Updated on: Jul 9, 2026
- 10:02 pm
ತೀವ್ರ ಸ್ವರೂಪ ಪಡೆದ ಚಪ್ಪಲಿ ಎಸೆತ ಪ್ರಕರಣ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪರ ನಿಂತ ಅಹಿಂದ
ಚಿಕ್ಕಬಳ್ಳಾಪುರದಲ್ಲಿ ಮೊನ್ನೆ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೀಸೆ ತಿರುವಿ ತೊಡೆ ತಟ್ಟಿ ಪ್ರಚೋದನೆ ನೀಡಿದ್ದಾರೆಂದು ಆರೋಪಿ ಜೆಡಿಎಸ್, ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರ ಎಸ್ಪಿಗೆ ದೂರು ನೀಡಿದೆ. ಇದರ ಬೆನ್ನಲ್ಲೇ ಇದೀಗ ಪ್ರದೀಪ್ ಈಶ್ವರ್ ಬೆನ್ನಿಗೆ ಸ್ವಜಾತಿ ಬಲಿಜ ಸಂಘ ಹಾಗೂ ಅಹಿಂದ ನಿಂತಿದೆ.
- Bheemappa Patil
- Updated on: Jul 1, 2026
- 7:01 pm
ಹೋಂಸ್ಟೇನಲ್ಲಿ ಯುವತಿ ಶವಪತ್ತೆ: ನಂದಿಬೆಟ್ಟಕ್ಕೆ ಕರೆದೊಯ್ದು ಕೊಲೆ ಮಾಡಿದ್ನಾ ಅಲಿ?
ಬಹುತೇಕರಿಗೆ ನಂದಿಬೆಟ್ಟ ವಾರಾಂತ್ಯದ ಪ್ರವಾಸ ತಾಣವಾಗಿದೆ. ನಗರಜೀವನದ ಜಂಜಾಟದಿಂದ ದೂರವಾಗಿ ಪ್ರಕೃತಿಯ ಮಡಿಲಲ್ಲಿ ಕೆಲ ಕ್ಷಣ ಕಳೆಯುವ ತಾಣವಾಗಿ ಮಾರ್ಪಟ್ಟಿದೆ. ಇಲ್ಲಿಗೆ ಹೆಚ್ಚಾಗಿ ಪ್ರೇಮಿಗಳು ಆಗಮಿಸುತ್ತಾರೆ. ಹೀಗಾಗಿ ಒಂದು ರೀತಿ ಲವರ್ಸ್ ಹಾಟ್ ಸ್ಪಾಟ್ ಎಂದು ಹೇಳಲಾಗುತ್ತಿರುವ ನಂದಿಬೆಟ್ಟದಲ್ಲಿ ಯುವತಿ ಅನುಮಾಸ್ಪದವಾಗಿ ಯುವತಿಯೋರ್ವಳ ಶವ ಪತ್ತೆಯಾಗಿದೆ.
- Bheemappa Patil
- Updated on: Jun 29, 2026
- 5:36 pm
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ: ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರ ಬಂಧನ; ಖರ್ಗೆ ಖಂಡನೆ
ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಬಿಜೆಪಿ-ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಘಟನೆ ಕುರಿತು ಸ್ವಯಂಪ್ರೇರಿತ ಎಫ್ಐಆರ್ ದಾಖಲಾಗಿದ್ದು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಜಿಲ್ಲಾಧಿಕಾರಿ ಜಿ. ಪ್ರಭು ತೀವ್ರ ಬೇಸರ ವ್ಯಕ್ತಪಡಿಸಿ ಕಾನೂನು ಕ್ರಮದ ಭರವಸೆ ನೀಡಿದ್ದಾರೆ.
- Bheemappa Patil
- Updated on: Jun 28, 2026
- 12:29 pm