ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಹೆಲ್ಮೆಟ್ ಹಾಕಿಕೊಂಡು ಬಂದು ಬರ್ಬರ ಹತ್ಯೆ: ಬಾರ್ ಬಳಿ ನಾಗರಾಜ್ ಎಂಬ ವ್ಯಕ್ತಿಗೆ ಡ್ರ್ಯಾಗರ್ನಿಂದ ಇರಿದು ಕೊಲೆ
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಘಂಟಂವಾರಪಲ್ಲಿ ಗ್ರಾಮದಲ್ಲಿ ನಾಗರಾಜ್ ಎಂಬ ವ್ಯಕ್ತಿಯನ್ನು ಮದ್ಯಪಾನ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಡ್ರ್ಯಾಗರ್ನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನೆಯ ನಂತರ ಆರೋಪಿ ಸ್ಕೂಟರ್ನಲ್ಲಿ ಪರಾರಿಯಾಗಿದ್ದು, ಹಳೆ ದ್ವೇಷ, ಆರ್ಥಿಕ ಅಥವಾ ಇತರೆ ಕಾರಣಗಳಿಗಾಗಿ ಕೊಲೆ ನಡೆದಿರಬಹುದೆಂದು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
- Bheemappa Patil
- Updated on: Sep 5, 2026
- 9:56 pm
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನಿ
ರಾಜ್ಯ ಸರ್ಕಾರದ ಪಿಎಂ ಕುಸುಮ್ ಯೋಜನೆ ಅಡಿಯಲ್ಲಿ ಎಂಇಐಎಲ್ ಕಂಪನಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೌರ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಹಗಲು ಹೊತ್ತಿನಲ್ಲಿ ಗುಣಮಟ್ಟದ ವಿದ್ಯುತ್ ಒದಗಿಸುತ್ತಿದೆ. ಇದರಿಂದ ನೀರಾವರಿಗೆ ಅನುಕೂಲವಾಗಿ, 25,000ಕ್ಕೂ ಹೆಚ್ಚು ರೈತರು ಉತ್ತಮ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ವಿದ್ಯುತ್ ಸಮಸ್ಯೆಗಳಿಗೆ ಇದು ಪರಿಹಾರ ನೀಡಿದೆ.
- Bheemappa Patil
- Updated on: Sep 4, 2026
- 10:36 am
ಚಿಕ್ಕಬಳ್ಳಾಪುರ ನಗರಸಭೆಯಲ್ಲಿ 100 ಕೋಟಿ ಭೂ ಹಗರಣ: ಕೆರೆ, ರಾಜಕಾಲುವೆ ಜಾಗಕ್ಕೂ ನಕಲಿ ದಾಖಲೆ ಸೃಷ್ಟಿಸಿ ಗೋಲ್ಮಾಲ್
ಚಿಕ್ಕಬಳ್ಳಾಪುರದಲ್ಲಿ ರೂ 100 ಕೋಟಿ ಮೌಲ್ಯದ 24 ಎಕರೆ ಸರ್ಕಾರಿ ಬಿ-ಖರಾಬು ಜಮೀನು, ರೈಲ್ವೆ ಭೂಮಿ ಮತ್ತು ಕೆರೆಯಂಗಳಕ್ಕೆ ನಕಲಿ ದಾಖಲೆಗಳ ಮೂಲಕ ಖಾಸಗಿ ವ್ಯಕ್ತಿಗೆ ಅಕ್ರಮವಾಗಿ ಇ-ಖಾತೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಪೌರಾಯುಕ್ತ ಮನ್ಸೂರ್ ಅಲಿ ಸೇರಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದ್ದು, ರಿಯಲ್ ಎಸ್ಟೇಟ್ ಕೈವಾಡ ಶಂಕಿಸಲಾಗಿದೆ.
- Bheemappa Patil
- Updated on: Sep 3, 2026
- 6:22 pm
ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಘಟನೆ: ಮೃತ ಯುವಕನ ಹೊಟ್ಟೆಯಲ್ಲಿ ಬ್ಯಾಟರಿ, ಲೈಟರ್, ಕೀ ಪತ್ತೆ!
Chikkaballapur News: ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ಗ್ರಾಮ ಅಚ್ಚರಿ ಘಟನೆಗೆ ಸಾಕ್ಷಿಯಾಗಿದೆ. ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕನ ಹೊಟ್ಟೆಯೊಳಗೆ ರಾಶಿ ರಾಶಿ ವಸ್ತುಗಳು ಪತ್ತೆ ಆಗಿವೆ. ಮರಣೋತ್ತರ ಪರೀಕ್ಷೆ ವೇಳೆ ಇವುಗಳನ್ನು ಕಂಡು ವೈದ್ಯರೇ ಶಾಕ್ ಆಗಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Bheemappa Patil
- Updated on: Aug 30, 2026
- 7:19 pm
ಮುಜರಾಯಿ ದೇವಸ್ಥಾನದಲ್ಲಿ ಇದೆಂಥಾ ಪ್ರಮಾದ: ಭಕ್ತರ ಪ್ರಸಾದದ ತಟ್ಟೆ ಕಿತ್ತು ಬಿಸಾಡಿದ ಸಿಬ್ಬಂದಿ
Chikkaballapur News: ದೇವರ ಪ್ರಸಾದದ ತಟ್ಟೆಯನ್ನು ಸಿಬ್ಬಂದಿ ಕಿತ್ತು ಎಸೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ದೇವಸ್ಥಾನದಲ್ಲಿ ನಡೆದಿದೆ. ಮುಜರಾಯಿ ದೇವಸ್ಥಾನದಲ್ಲಿ ನಡದ ಪ್ರಮಾದ ತಡವಾಗಿ ಬೆಳಕಿಗೆ ಬಂದಿದ್ದು, ನೊಂದ ಕುಟುಂಬ ಇದೀಗ ಸಿಎಂ ಡಿಕೆ ಶಿವಕುಮಾರ್ಗೆ ದೂರು ನೀಡಿದೆ.
- Bheemappa Patil
- Updated on: Aug 30, 2026
- 7:31 pm
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ: ಸೀಮೆ ಹಸು ಸೇರಿ ಭರ್ಜರಿ ಗಿಫ್ಟ್
ಚಿಕ್ಕಬಳ್ಳಾಪುರದ ಬಾಗೇಪಲ್ಲಿಯ ಗಡಿದಂ ಕ್ಷೇತ್ರದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ನೇತೃತ್ವದಲ್ಲಿ 125 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ನವದಂಪತಿಗಳಿಗೆ ಚಿನ್ನದ ತಾಳಿ, ಕಾಲುಂಗುರ, 50 ಸಾವಿರ ರೂಪಾಯಿ ಹಣ, ರೇಷ್ಮೆ ಬಟ್ಟೆ ಹಾಗೂ ಜೀವನೋಪಾಯಕ್ಕಾಗಿ ಸೀಮೆ ಹಸು ಉಡುಗೊರೆಯಾಗಿ ನೀಡಲಾಯಿತು.
- Bheemappa Patil
- Updated on: Aug 26, 2026
- 5:24 pm
ಚಿಕ್ಕಬಳ್ಳಾಪುರದಲ್ಲಿ ‘ಟಾಕ್ಸಿಕ್’ ಕ್ರೇಜ್: ಯಶ್ ಅಭಿಮಾನಿಗಳಿಂದ ಅದ್ಧೂರಿ ಸಂಭ್ರಮ
Toxic movie release in Chikkaballapur: ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಯಶ್ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಬಾಲಾಜಿ ಚಿತ್ರಮಂದಿರದಲ್ಲಿ ಫ್ಯಾನ್ಸ್ ಶೋ ವೀಕ್ಷಿಸಲು ಬಂದ ಅಭಿಮಾನಿಗಳು ಪಟಾಕಿ ಸಿಡಿಸಿ, ತಮಟೆ ಬಾರಿಸಿ ಸಂಭ್ರಮಿಸಿದರು. ಚಿತ್ರಮಂದಿರದ ಎದುರು ಬೃಹತ್ ಕಟೌಟ್ಗಳನ್ನು ಅಳವಡಿಸಲಾಗಿದೆ.
- Bheemappa Patil
- Updated on: Aug 26, 2026
- 9:34 am
ಗಿಫ್ಟ್ಗೆ ಆಸೆ ಬಿದ್ದು ಕಮ್ಮಿ ವಯಸ್ಸಿಗೆ ಮದುವೆಗೆ ಯತ್ನ: 25 ಜೋಡಿಗಳ ಮದುವೆ ತಡೆದ ಅಧಿಕಾರಿಗಳು
ಬಾಗೇಪಲ್ಲಿಯ ಗಡಿದಂ ಕ್ಷೇತ್ರದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ, 25ಕ್ಕೂ ಹೆಚ್ಚು ಅಪ್ರಾಪ್ತ ಜೋಡಿಗಳ ಮದುವೆಗೆ ಅಧಿಕಾರಿಗಳು ತಡೆ ನೀಡಿದ್ದಾರೆ. ವಧು-ವರರಿಗೆ ಚಿನ್ನ, ನಗದು ಬಹುಮಾನ, ಸೀಮೆಹಸು ಸೇರಿ ಭರ್ಜರಿ ಕೊಡುಗೆಗಳಿದ್ದವು. ಕಳೆದ 23 ವರ್ಷಗಳಿಂದ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ವಯಸ್ಸಿನ ದಾಖಲೆ ಇಲ್ಲದವರನ್ನು ತಡೆದ ಅಧಿಕಾರಿಗಳ ಕ್ರಮಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ.
- Bheemappa Patil
- Updated on: Aug 25, 2026
- 7:02 pm
ಗ್ಯಾರಂಟಿ ಯೋಜನೆಗಳ ಎಫೆಕ್ಟ್: ಹಾಲು ಉತ್ಪಾದಕ ರೈತರ ಕೈಸೇರದ ಸಬ್ಸಿಡಿ ಹಣ!
Chikkaballapur News: ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಬರಬೇಕಾದ ಪ್ರೋತ್ಸಾಹಧನ ಕಳೆದ ನಾಲ್ಕು ತಿಂಗಳುಗಳಿಂದ ಬರೋಬ್ಬರಿ 31.20 ಕೋಟಿ ರೂ ಬಿಡುಗಡೆಯಾಗದೆ ಬಾಕಿ ಉಳಿದಿದೆ. ಸಕಾಲಕ್ಕೆ ಸಬ್ಸಿಡಿ ಹಣ ಕೈಸೇರದೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Bheemappa Patil
- Updated on: Aug 19, 2026
- 10:02 pm
ಚಿಕ್ಕಬಳ್ಳಾಪುರ: ಲಿಂಗಶೆಟ್ಟಿಪುರ ಗೇಟ್ ಬಳಿ 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಇರುವ ‘ರಾಷ್ಟ್ರೀಯ ಹೆದ್ದಾರಿ 44’ ಸಾವಿನ ತಾಣವಾಗಿದೆ. ಕಳೆದ ಎರಡು ವರ್ಷಗಳಲ್ಲಿ 30ಕ್ಕೂ ಹೆಚ್ಚು ಮಂದಿ ಇಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚೆಗೆ ನಡೆದ ಅಪಘಾತದಲ್ಲಿ ಉತ್ತರ ಭಾರತದ ಜೋಡಿ ಸಾವನ್ನಪ್ಪಿದ ನಂತರ, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳು ತಾತ್ಕಾಲಿಕವಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ.
- Bheemappa Patil
- Updated on: Aug 19, 2026
- 9:37 am
ಅಪಘಾತದಲ್ಲಿ ಯುವಕ-ಯುವತಿ ದುರ್ಮರಣ: ಆದಿಯೋಗಿ ದರ್ಶನ ಪಡೆದು ಮರಳುತ್ತಿದ್ದವರು ಮಸಣಕ್ಕೆ
Chikkaballapur Fatal Accident: ಈಶಾ ಆದಿಯೋಗಿ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕ, ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ನಡೆದಿದೆ. ಬೈಕ್ಗೆ ಲಾರಿ ಡಿಕ್ಕಿಯಾಗಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Bheemappa Patil
- Updated on: Aug 16, 2026
- 4:02 pm
ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ದಾಳಿಂಬೆ ಕದ್ದ ಕಳ್ಳರು: ಬರದ ನಡುವೆಯೂ ಬೆಳೆ ಬೆಳೆದ ರೈತ ಕಂಗಾಲು
Chikkaballapur News: ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಗ್ರಾಮದಲ್ಲಿ ಬರದ ನಡುವೆಯೂ ಕಷ್ಟಪಟ್ಟು ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಬೆಳೆಯನ್ನು ರಾತ್ರೋರಾತ್ರಿ ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ. ಪತ್ನಿಯ ಚಿನ್ನಾಭರಣ ಅಡವಿಟ್ಟು ಬೆಳೆ ಬೆಳೆದಿದ್ದ ರೈತ ಘಟನೆಯಿಂದ ಕಂಗಾಲಾಗಿದ್ದು, ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿದ್ದಾರೆ.
- Bheemappa Patil
- Updated on: Aug 11, 2026
- 7:06 pm