ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಸೋದರಸಂಬಂಧಿಯನ್ನೇ ವರಿಸಿದ ಯುವತಿ! ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ವಿವಾಹ
ದೇವನಹಳ್ಳಿಯ ಯುವತಿಯೊಬ್ಬಳು ತಾಯಿಯ ತಂಗಿಯ ಮಗನನ್ನೇ (ವರಸೆಯಲ್ಲಿ ತಮ್ಮ) ಪ್ರೀತಿಸಿ ಮದುವೆಯಾಗಿರುವ ವಿಚಿತ್ರ ವಿದ್ಯಮಾನ ಬೆಳಕಿಗೆ ಬಂದಿದೆ. ಮೇ 29ಕ್ಕೆ ಬೇರೊಬ್ಬನೊಂದಿಗೆ ನಡೆಯಬೇಕಿದ್ದ ಮದುವೆಯನ್ನು ನಿರಾಕರಿಸಿ, ಸೋದರಸಂಬಂಧಿಯನ್ನೇ ವರಿಸಿದ್ದಾಳೆ. ಸದ್ಯ ಈ ನವ ಜೋಡಿ ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಪೊಲೀಸರ ಮೊರೆ ಹೋಗಿದೆ.
- Bheemappa Patil
- Updated on: May 7, 2026
- 1:13 pm
ಎಗರಿಸಿದ್ದ ಮಾಂಗಲ್ಯ ಸರ ಮನೆ ಮುಂದೆ ಪ್ರತ್ಯಕ್ಷ: ಆದ್ರೂ ಅವನ್ನ ಹೊಡಿಬೇಕು ಎಂದ ಮಹಿಳೆ
ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಪ್ರಿಯಾ ಎಂಬುವವರ ಮಾಂಗಲ್ಯ ಸರ ಕಸಿದುಕೊಂಡಿದ್ದ ಕಳ್ಳರು, ನಂತರ ಅದನ್ನು ಅವರ ಮನೆ ಮುಂದೆಯೇ ಬಿಸಾಡಿ ಹೋಗಿದ್ದಾರೆ. ಕದ್ದ ಸರ ವಾಪಸ್ ಸಿಕ್ಕರೂ, ಪ್ರಿಯಾ ಸಮಾಧಾನಗೊಂಡಿಲ್ಲ. ತನಗೆ ಅನ್ಯಾಯ ಮಾಡಿದ ದುಷ್ಕರ್ಮಿಗಳು ಸಿಕ್ಕಿಬೀಳಬೇಕು, ಬೇರೆಯವರಿಗೆ ಇಂತಹ ಅನುಭವ ಆಗಬಾರದು ಎಂದು ಒತ್ತಾಯಿಸಿದ್ದಾರೆ.
- Bheemappa Patil
- Updated on: May 6, 2026
- 11:18 pm
ಚಿಕ್ಕಬಳ್ಳಾಪುರದಲ್ಲೊಂದು ಅಚ್ಚರಿಯ ಘಟನೆ: ಕಳುವಾಗಿದ್ದ ಮಹಿಳೆಯ ಬಂಗಾರದ ಸರ 2 ದಿನಗಳ ಬಳಿಕ ಮನೆ ಬಳಿಯೇ ಪ್ರತ್ಯಕ್ಷ!
ಚಿಕ್ಕಬಳ್ಳಾಪುರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬರ ಮಾಂಗಲ್ಯ ಸರ ಕಳುವಾದ 2 ದಿನಗಳ ಬಳಿಕ ಮತ್ತೆ ಅವರ ಮನೆ ಬಳಿಯೇ ಪ್ರತ್ಯಕ್ಷವಾಗಿದೆ. ಮೇ 3ರಂದು ಗೃಹಿಣಿಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದರು. ಆದರೆ ಮೇ 5ರಂದು ಅದನ್ನು ಮತ್ತೆ ಮನೆ ಬಳಿ ಇಟ್ಟು ಹೋಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ನಡುವೆ ನಡೆದಿರುವ ಈ ವಿಚಿತ್ರ ವಿದ್ಯಮಾನ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
- Bheemappa Patil
- Updated on: May 6, 2026
- 1:06 pm
20ರ ಯುವತಿ-46ರ ಅಂಕಲ್ ಲವ್: ಪ್ರೇಯಸಿ ಬೇಕು ಹೆಂಡ್ತಿನೂ ಬೇಕೆಂದ ಟೇಲರ್
46ರ ಅಂಕಲ್ 20 ವರ್ಷದ ಯುವತಿಯನ್ನು ಪ್ರೀತಿಸಿ (Love) ಕೈಕೊಟ್ಟ ಆರೋಪ ಕೇಳಿಬಂದಿದೆ. ಚಿಕ್ಕಬಳ್ಳಾಪುರದ (Chikkaballapur) ಬಾಗೇಪಲ್ಲಿ ಮೂಲದ ಟೈಲರ್ ರಮೇಶ ಎನ್ನುವಾತನಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ. ಸಾಲದಕ್ಕೆ ಮದುವೆ ಮಾಡಿಕೊಳ್ಳೊದಾಗಿ ನಂಬಿಸಿ ಆಕೆಯೊಂದಿಗೆ 2 ತಿಂಗಳ ಸಂಸಾರ ಸಹ ನಡೆಸಿದ್ದಾನೆ.
- Bheemappa Patil
- Updated on: May 5, 2026
- 7:44 pm
ರಣಬಿಸಿಲಲ್ಲೂ ನಳನಳಿಸಿದ ‘ದಿಲ್ ಖುಷ್’: ವಿಶಿಷ್ಟ ತಳಿಯ ದ್ರಾಕ್ಷಿಗೆ ಭಾರೀ ಡಿಮ್ಯಾಂಡ್; ರೈತರು ಖುಷಿಯೋ ಖುಷಿ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 'ದಿಲ್ ಖುಷ್' ದ್ರಾಕ್ಷಿ ತಳಿಗೆ ಭಾರೀ ಬೇಡಿಕೆ ಬಂದಿದೆ. ಐದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದು, ಮಹಾರಾಷ್ಟ್ರ ಮತ್ತು ಬಾಂಗ್ಲಾದೇಶದಿಂದಲೂ ವರ್ತಕರು ನೇರವಾಗಿ ತೋಟಗಳಿಗೆ ಬಂದು ಖರೀದಿಸುತ್ತಿದ್ದಾರೆ. ಇದು ರೈತರಿಗೆ ಉತ್ತಮ ಆದಾಯ ತಂದುಕೊಟ್ಟಿದ್ದು, ಖುಷಿ ಹೆಚ್ಚಿಸಿದೆ. ಫೋಟೋಸ್ ನೋಡಿ.
- Bheemappa Patil
- Updated on: May 3, 2026
- 8:10 pm
ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು: ಎದೆಯ ಮೇಲೆ ಯುವಕನ ಹೆಸರು ಹಚ್ಚೆ ಹಾಕಿಸಿಕೊಂಡಿದ್ದೇ ಕಾರಣವಾಯ್ತಾ?
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನವವಿವಾಹಿತೆ ಪ್ರೇಮಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹಚ್ಚೆ ವಿಚಾರವಾಗಿ ದಂಪತಿ ನಡುವೆ ನಡೆಯುತ್ತಿದ್ದ ಕಲಹ ಹಾಗೂ ವರದಕ್ಷಿಣೆ ಕಿರುಕುಳವೇ ಈ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಸದ್ಯ ಸಂತ್ರಸ್ತೆಯ ಕುಟುಂಬದವತು ನೀಡಿದ ದೂರಿನ ಆಧಾರದಲ್ಲಿ ಆಕೆಯ ಪತಿ ಶಿವಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ.
- Bheemappa Patil
- Updated on: May 2, 2026
- 3:25 pm
ಹಿಜಾಬ್ ಧರಿಸಿದ್ದಕ್ಕೆ CET ಬರೆಯಲು ಅವಕಾಶ ನಿರಾಕರಣೆ: ವಿದ್ಯಾರ್ಥಿನಿಯ ತಂದೆಯಿಂದ ದೂರು
ಚಿಕ್ಕಬಳ್ಳಾಪುರದ ಬಿಜಿಎಸ್ ಸೈನ್ಸ್ ಅಕಾಡೆಮಿಯಲ್ಲಿ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ನಿರಾಕರಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಕೆಇಎಗೆ ಲಿಖಿತ ದೂರು ನೀಡಿದ್ದು, ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚಿಸಲಾಗಿದ್ದು, ವಿದ್ಯಾರ್ಥಿನಿ, ತಂದೆ ಹಾಗೂ ಪ್ರಾಂಶುಪಾಲರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.
- Bheemappa Patil
- Updated on: Apr 29, 2026
- 6:54 pm
ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಹೋರಾಟದ ವೇಳೆ ರೈತರು, ಪೊಲೀಸರ ನಡುವೆ ಘರ್ಷಣೆ
ಚಿಕ್ಕಬಳ್ಳಾಪುರದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿಲ್ಲಾಡಳಿತ ಭವನದ ಎದುರು ನಡೆದ ಈ ಪ್ರತಿಭಟನೆ ವೇಳೆ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ನಡೆದಿದೆ. ರೈತರ ಮೇಲೆ ಪೊಲೀಸರು ಹಲ್ಲೆ ಮತ್ತು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸಚಿವರ ಕಾರಿಗೆ ಮುತ್ತಿಗೆ ಹಾಕುವ ಯತ್ನವೂ ಈ ವೇಳೆ ರೈತರಿಂದ ನಡೆದಿದೆ.
- Bheemappa Patil
- Updated on: Apr 29, 2026
- 2:47 pm
ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ: 10ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ
ಗೌರಿಬಿದನೂರು ತಾಲೂಕಿನ ವೇದಲ ವೇಣಿ ಬಳಿ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿಯಾಗಿದೆ. ಚಾಲಕನ ಎಡವಟ್ಟಿನಿಂದ ಸಂಭವಿಸಿದ ಈ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದು, ಎಂಟು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಗಂಭೀರ ಗಾಯಗೊಂಡವರನ್ನು ಬೆಂಗಳೂರಿಗೆ ರವಾನಿಸಲಾಗಿದೆ.
- Bheemappa Patil
- Updated on: Apr 28, 2026
- 5:11 pm
ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ: ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ?
ಚಿಕ್ಕಬಳ್ಳಾಪುರದಲ್ಲಿ ನವವಿವಾಹಿತೆ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮದುವೆಯಾಗಿ ಐದೇ ತಿಂಗಳಲ್ಲಿ ನಡೆದ ಈ ಘಟನೆ ತೀವ್ರ ಅನುಮಾನಕ್ಕೆ ಕಾರಣವಾಗಿದ್ದು, ಪತಿಯ ಅನುಮಾನದ ಭೂತವೇ ಇದಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಯುವತಿ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪೊಲೀಸರ ತನಿಖೆ ಬಳಿಕವೇ ಗೊತ್ತಾಗಬೇಕಿದೆ.
- Bheemappa Patil
- Updated on: Apr 28, 2026
- 4:35 pm
ಚಿಕ್ಕಬಳ್ಳಾಪುರ ಜನಿವಾರ ಜಟಾಪಟಿ: ಪೊಲೀಸರು ಮನವಿ ಮಾಡಿದ್ರೂ ದೂರು ನೀಡಲು ಪರೀಕ್ಷಾರ್ಥಿ ಹಿಂದೇಟು
ಚಿಕ್ಕಬಳ್ಳಾಪುರದಲ್ಲಿ ಸಿಇಟಿ ಪರೀಕ್ಷೆ ವೇಳೆ ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ವಿಚಾರ ವಿವಾದಕ್ಕೀಡಾಗಿದೆ. ಆದರೆ ಪೊಲೀಸರೇ ದೂರು ನೀಡುವಂತೆ ಮನವಿ ಮಾಡಿದ್ದರೂ ದೂರು ನೀಡಲು ಪರೀಕ್ಷಾರ್ಥಿ ಹಾಗೂ ಪೋಷಕರು ಹಿಂದೇಟು ಹಾಕಿದ್ದಾರೆ. ಈ ಮಧ್ಯೆ ನಾಗಾರ್ಜುನ ಕಾಲೇಜು ಆಡಳಿತ ಮಂಡಳಿಯ ಪ್ರಭಾವದ ಆರೋಪ ಕೇಳಿಬಂದಿದೆ.
- Bheemappa Patil
- Updated on: Apr 26, 2026
- 5:16 pm
ಜನಿವಾರ ತೆಗೆಯುತ್ತೇನೆ ಎಂದರೂ ಕೇಳದೆ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಚಿಕ್ಕಬಳ್ಳಾಪುರದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿ ಸುಪ್ರೀತ್ ಕೆ.ಆರ್. ಅವರ ಜನಿವಾರವನ್ನು ಅವರು ತೆಗೆದು ಇಟ್ಟುಕೊಳ್ಳಲು ಅವಕಾಶ ನೀಡದೆ ಕತ್ತರಿಸಿ ಕಸದ ಬುಟ್ಟಿಗೆ ಎಸೆಯಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಉಪನಯನವಾಗಿ ಕೇವಲ ಎಂಟು ದಿನಗಳಾಗಿದ್ದ ಈ ಘಟನೆಯು ಸುಪ್ರೀತ್ಗೆ ತೀವ್ರ ಆಘಾತ ಉಂಟುಮಾಡಿದ್ದು, ಪರೀಕ್ಷೆ ಮೇಲೆ ಪರಿಣಾಮ ಬೀರಿದೆ. ಬ್ರಾಹ್ಮಣ ಸಭಾದ ಬೆಂಬಲದೊಂದಿಗೆ ದೂರು ದಾಖಲಿಸಲು ಅವರು ಸಿದ್ಧರಾಗಿದ್ದಾರೆ.
- Bheemappa Patil
- Updated on: Apr 25, 2026
- 2:29 pm