ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಹಬ್ಬ ಹತ್ತಿರ ಬರುತ್ತಿದ್ದಂತೆ ರಾಜ್ಯಾದ್ಯಂತ ಕುರಿ, ಮೇಕೆ ಹಾಗೂ ಕೋಳಿಗಳ ಖರೀದಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಅದರಲ್ಲೂ ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪೆರೆಸಂದ್ರ ಕುರಿ ಸಂತೆಯಲ್ಲಿ ವರ್ತಕರು ಕುರಿ, ಮೇಕೆ ಖರೀದಿಗೆ ಮುಗಿಬಿದ್ದಿದ್ದಾರೆ. ಈ ಸಂತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ, ತಮಿಳುನಾಡು ಮತ್ತು ಕೇರಳದಿಂದಲೂ ವರ್ತಕರು ಆಗಮಿಸುತ್ತಿದ್ದಾರೆ.
- Bheemappa Patil
- Updated on: May 25, 2026
- 12:45 pm
ಅಧಿಕ ಮಾಸದ ಎಫೆಕ್ಟ್: ಶುಭ ಸಮಾರಂಭಗಳಿಗೆ ಬ್ರೇಕ್; ಚಿಕ್ಕಬಳ್ಳಾಪುರದಲ್ಲಿ ತರಕಾರಿ ಬೆಲೆ ದಿಢೀರ್ ಕುಸಿತ
ಅಧಿಕ ಮಾಸದ ಕಾರಣ ಶುಭ ಸಮಾರಂಭಗಳು ಕಡಿಮೆಯಾದ್ದರಿಂದ ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿಗಳಿಗೆ ಬೇಡಿಕೆ ಕುಸಿದಿದೆ. ಸೌತೆಕಾಯಿ, ಟೊಮ್ಯಾಟೊ, ಬೀನ್ಸ್ ಸೇರಿದಂತೆ ಹಲವು ತರಕಾರಿಗಳ ಬೆಲೆ ಗಣನೀಯವಾಗಿ ಇಳಿದಿದೆ. ಇದು ಗ್ರಾಹಕರಿಗೆ ಖುಷಿ ನೀಡಿದರೆ, ರೈತರು ತಮ್ಮ ಬೆಳೆ ವೆಚ್ಚವನ್ನು ಭರಿಸಲು ಹೆಣಗಾಡುತ್ತಿದ್ದಾರೆ.
- Bheemappa Patil
- Updated on: May 22, 2026
- 10:44 pm
ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ!
ಚಿಕ್ಕಬಳ್ಳಾಪುರದ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ನರ್ಮದಾ ಎಂಬ ಮಹಿಳೆ ಮೃತಪಟ್ಟಿದ್ದಾರೆ. ವೈದ್ಯರು ಸಣ್ಣ ಕರಳು ಕತ್ತರಿಸಿದ್ದರಿಂದ ಸೋಂಕು ತಗುಲಿ ಸಾವು ಸಂಭವಿಸಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ಆಸ್ಪತ್ರೆ ಮುಂದೆ ಕುಟುಂಬಸ್ಥರಿಂದ ಧರಣಿ ನಡೆಯುತ್ತಿದೆ. ಈ ಘಟನೆ ವೈದ್ಯಕೀಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- Bheemappa Patil
- Updated on: May 11, 2026
- 11:38 am
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಅನಿಲ್ ಎಂಬ ರೈತರ ಚಿಕ್ಕಬಳ್ಳಾಪುರ ಜಿಲ್ಲೆಯ ಅಡ್ಡಗಲ್ ಗ್ರಾಮದಲ್ಲಿ ಸೇಬು ಬೆಳೆದು ಯಶಸ್ಸಿನ ಕಥೆ ಬರೆದಿದ್ದಾರೆ. ಸಾಮಾನ್ಯವಾಗಿ ತಂಪಾದ ವಾತಾವರಣದಲ್ಲಿ ಬೆಳೆಯುವ ಸೇಬನ್ನು, ಬಿಸಿಲಿನ ವಾತಾವರಣವಿರುವ ಚಿಕ್ಕಬಳ್ಳಾಪುರದಲ್ಲಿ ಬೆಳೆಸುವುದು ದೊಡ್ಡ ಸವಾಲಾಗಿತ್ತು. ಆರಂಭದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯುತ್ತಿದ್ದ ಅನಿಲ್ ಅವರು, ಹೊಸ ಪ್ರಯತ್ನವಾಗಿ ಸೇಬು ಕೃಷಿಯತ್ತ ಆಸಕ್ತಿ ವಹಿಸಿದರು.
- Bheemappa Patil
- Updated on: May 11, 2026
- 10:23 am
ಯ್ಯೂಟೂಬೇ ಗುರು: ಬಿಸಿಲಿನ ಅಬ್ಬರದ ನಡುವೆ ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದ ರೈತ!
ಚಿಕ್ಕಬಳ್ಳಾಪುರದ ರಯತನೋರ್ವ ಯೂಟ್ಯೂಬ್ ನೆರವಿನಿಂದ ಬಿಸಿಲಿನ ವಾತಾವರಣದಲ್ಲೂ ಕಾಶ್ಮೀರಿ ಸೇಬು ಬೆಳೆದು ಗಮನ ಸೆಳೆದಿದ್ದಾರೆ. ಟೊಮ್ಯಾಟೊ ಕೃಷಿಯಲ್ಲಿ ನಷ್ಟ ಅನುಭವಿಸಿದ ನಂತರ, ಅವರು ಒಂದು ಎಕರೆ ಜಮೀನಿನಲ್ಲಿ ಇಸ್ರೇಲ್ ತಳಿಯ 400 ಸೇಬು ಗಿಡಗಳನ್ನು ನೆಟ್ಟು ಯಶಸ್ವಿಯಾಗಿದ್ದಾರೆ. ಪ್ರತಿ ಗಿಡದಲ್ಲಿ 10 ಕೆಜಿ ಫಸಲು ಬಂದಿದ್ದು, ಇದು ಕೃಷಿಯಲ್ಲಿ ನವೀನ ಪ್ರಯೋಗಗಳಿಗೆ ಉತ್ತಮ ಉದಾಹರಣೆ ಎಂಬಂತಿದೆ.
- Bheemappa Patil
- Updated on: May 10, 2026
- 7:53 pm
ಸೋದರಸಂಬಂಧಿಯನ್ನೇ ವರಿಸಿದ ಯುವತಿ! ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ವಿವಾಹ
ದೇವನಹಳ್ಳಿಯ ಯುವತಿಯೊಬ್ಬಳು ತಾಯಿಯ ತಂಗಿಯ ಮಗನನ್ನೇ (ವರಸೆಯಲ್ಲಿ ತಮ್ಮ) ಪ್ರೀತಿಸಿ ಮದುವೆಯಾಗಿರುವ ವಿಚಿತ್ರ ವಿದ್ಯಮಾನ ಬೆಳಕಿಗೆ ಬಂದಿದೆ. ಮೇ 29ಕ್ಕೆ ಬೇರೊಬ್ಬನೊಂದಿಗೆ ನಡೆಯಬೇಕಿದ್ದ ಮದುವೆಯನ್ನು ನಿರಾಕರಿಸಿ, ಸೋದರಸಂಬಂಧಿಯನ್ನೇ ವರಿಸಿದ್ದಾಳೆ. ಸದ್ಯ ಈ ನವ ಜೋಡಿ ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಪೊಲೀಸರ ಮೊರೆ ಹೋಗಿದೆ.
- Bheemappa Patil
- Updated on: May 7, 2026
- 1:13 pm
ಎಗರಿಸಿದ್ದ ಮಾಂಗಲ್ಯ ಸರ ಮನೆ ಮುಂದೆ ಪ್ರತ್ಯಕ್ಷ: ಆದ್ರೂ ಅವನ್ನ ಹೊಡಿಬೇಕು ಎಂದ ಮಹಿಳೆ
ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಪ್ರಿಯಾ ಎಂಬುವವರ ಮಾಂಗಲ್ಯ ಸರ ಕಸಿದುಕೊಂಡಿದ್ದ ಕಳ್ಳರು, ನಂತರ ಅದನ್ನು ಅವರ ಮನೆ ಮುಂದೆಯೇ ಬಿಸಾಡಿ ಹೋಗಿದ್ದಾರೆ. ಕದ್ದ ಸರ ವಾಪಸ್ ಸಿಕ್ಕರೂ, ಪ್ರಿಯಾ ಸಮಾಧಾನಗೊಂಡಿಲ್ಲ. ತನಗೆ ಅನ್ಯಾಯ ಮಾಡಿದ ದುಷ್ಕರ್ಮಿಗಳು ಸಿಕ್ಕಿಬೀಳಬೇಕು, ಬೇರೆಯವರಿಗೆ ಇಂತಹ ಅನುಭವ ಆಗಬಾರದು ಎಂದು ಒತ್ತಾಯಿಸಿದ್ದಾರೆ.
- Bheemappa Patil
- Updated on: May 6, 2026
- 11:18 pm
ಚಿಕ್ಕಬಳ್ಳಾಪುರದಲ್ಲೊಂದು ಅಚ್ಚರಿಯ ಘಟನೆ: ಕಳುವಾಗಿದ್ದ ಮಹಿಳೆಯ ಬಂಗಾರದ ಸರ 2 ದಿನಗಳ ಬಳಿಕ ಮನೆ ಬಳಿಯೇ ಪ್ರತ್ಯಕ್ಷ!
ಚಿಕ್ಕಬಳ್ಳಾಪುರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬರ ಮಾಂಗಲ್ಯ ಸರ ಕಳುವಾದ 2 ದಿನಗಳ ಬಳಿಕ ಮತ್ತೆ ಅವರ ಮನೆ ಬಳಿಯೇ ಪ್ರತ್ಯಕ್ಷವಾಗಿದೆ. ಮೇ 3ರಂದು ಗೃಹಿಣಿಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದರು. ಆದರೆ ಮೇ 5ರಂದು ಅದನ್ನು ಮತ್ತೆ ಮನೆ ಬಳಿ ಇಟ್ಟು ಹೋಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ನಡುವೆ ನಡೆದಿರುವ ಈ ವಿಚಿತ್ರ ವಿದ್ಯಮಾನ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
- Bheemappa Patil
- Updated on: May 6, 2026
- 1:06 pm
20ರ ಯುವತಿ-46ರ ಅಂಕಲ್ ಲವ್: ಪ್ರೇಯಸಿ ಬೇಕು ಹೆಂಡ್ತಿನೂ ಬೇಕೆಂದ ಟೇಲರ್
46ರ ಅಂಕಲ್ 20 ವರ್ಷದ ಯುವತಿಯನ್ನು ಪ್ರೀತಿಸಿ (Love) ಕೈಕೊಟ್ಟ ಆರೋಪ ಕೇಳಿಬಂದಿದೆ. ಚಿಕ್ಕಬಳ್ಳಾಪುರದ (Chikkaballapur) ಬಾಗೇಪಲ್ಲಿ ಮೂಲದ ಟೈಲರ್ ರಮೇಶ ಎನ್ನುವಾತನಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ. ಸಾಲದಕ್ಕೆ ಮದುವೆ ಮಾಡಿಕೊಳ್ಳೊದಾಗಿ ನಂಬಿಸಿ ಆಕೆಯೊಂದಿಗೆ 2 ತಿಂಗಳ ಸಂಸಾರ ಸಹ ನಡೆಸಿದ್ದಾನೆ.
- Bheemappa Patil
- Updated on: May 5, 2026
- 7:44 pm
ರಣಬಿಸಿಲಲ್ಲೂ ನಳನಳಿಸಿದ ‘ದಿಲ್ ಖುಷ್’: ವಿಶಿಷ್ಟ ತಳಿಯ ದ್ರಾಕ್ಷಿಗೆ ಭಾರೀ ಡಿಮ್ಯಾಂಡ್; ರೈತರು ಖುಷಿಯೋ ಖುಷಿ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 'ದಿಲ್ ಖುಷ್' ದ್ರಾಕ್ಷಿ ತಳಿಗೆ ಭಾರೀ ಬೇಡಿಕೆ ಬಂದಿದೆ. ಐದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದು, ಮಹಾರಾಷ್ಟ್ರ ಮತ್ತು ಬಾಂಗ್ಲಾದೇಶದಿಂದಲೂ ವರ್ತಕರು ನೇರವಾಗಿ ತೋಟಗಳಿಗೆ ಬಂದು ಖರೀದಿಸುತ್ತಿದ್ದಾರೆ. ಇದು ರೈತರಿಗೆ ಉತ್ತಮ ಆದಾಯ ತಂದುಕೊಟ್ಟಿದ್ದು, ಖುಷಿ ಹೆಚ್ಚಿಸಿದೆ. ಫೋಟೋಸ್ ನೋಡಿ.
- Bheemappa Patil
- Updated on: May 3, 2026
- 8:10 pm
ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು: ಎದೆಯ ಮೇಲೆ ಯುವಕನ ಹೆಸರು ಹಚ್ಚೆ ಹಾಕಿಸಿಕೊಂಡಿದ್ದೇ ಕಾರಣವಾಯ್ತಾ?
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನವವಿವಾಹಿತೆ ಪ್ರೇಮಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹಚ್ಚೆ ವಿಚಾರವಾಗಿ ದಂಪತಿ ನಡುವೆ ನಡೆಯುತ್ತಿದ್ದ ಕಲಹ ಹಾಗೂ ವರದಕ್ಷಿಣೆ ಕಿರುಕುಳವೇ ಈ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಸದ್ಯ ಸಂತ್ರಸ್ತೆಯ ಕುಟುಂಬದವತು ನೀಡಿದ ದೂರಿನ ಆಧಾರದಲ್ಲಿ ಆಕೆಯ ಪತಿ ಶಿವಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ.
- Bheemappa Patil
- Updated on: May 2, 2026
- 3:25 pm
ಹಿಜಾಬ್ ಧರಿಸಿದ್ದಕ್ಕೆ CET ಬರೆಯಲು ಅವಕಾಶ ನಿರಾಕರಣೆ: ವಿದ್ಯಾರ್ಥಿನಿಯ ತಂದೆಯಿಂದ ದೂರು
ಚಿಕ್ಕಬಳ್ಳಾಪುರದ ಬಿಜಿಎಸ್ ಸೈನ್ಸ್ ಅಕಾಡೆಮಿಯಲ್ಲಿ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ನಿರಾಕರಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಕೆಇಎಗೆ ಲಿಖಿತ ದೂರು ನೀಡಿದ್ದು, ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚಿಸಲಾಗಿದ್ದು, ವಿದ್ಯಾರ್ಥಿನಿ, ತಂದೆ ಹಾಗೂ ಪ್ರಾಂಶುಪಾಲರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.
- Bheemappa Patil
- Updated on: Apr 29, 2026
- 6:54 pm