ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಗ್ಯಾರಂಟಿ ಯೋಜನೆಗಳ ಎಫೆಕ್ಟ್: ಹಾಲು ಉತ್ಪಾದಕ ರೈತರ ಕೈಸೇರದ ಸಬ್ಸಿಡಿ ಹಣ!
Chikkaballapur News: ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಬರಬೇಕಾದ ಪ್ರೋತ್ಸಾಹಧನ ಕಳೆದ ನಾಲ್ಕು ತಿಂಗಳುಗಳಿಂದ ಬರೋಬ್ಬರಿ 31.20 ಕೋಟಿ ರೂ ಬಿಡುಗಡೆಯಾಗದೆ ಬಾಕಿ ಉಳಿದಿದೆ. ಸಕಾಲಕ್ಕೆ ಸಬ್ಸಿಡಿ ಹಣ ಕೈಸೇರದೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Bheemappa Patil
- Updated on: Aug 19, 2026
- 10:02 pm
ಚಿಕ್ಕಬಳ್ಳಾಪುರ: ಲಿಂಗಶೆಟ್ಟಿಪುರ ಗೇಟ್ ಬಳಿ 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಇರುವ ‘ರಾಷ್ಟ್ರೀಯ ಹೆದ್ದಾರಿ 44’ ಸಾವಿನ ತಾಣವಾಗಿದೆ. ಕಳೆದ ಎರಡು ವರ್ಷಗಳಲ್ಲಿ 30ಕ್ಕೂ ಹೆಚ್ಚು ಮಂದಿ ಇಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚೆಗೆ ನಡೆದ ಅಪಘಾತದಲ್ಲಿ ಉತ್ತರ ಭಾರತದ ಜೋಡಿ ಸಾವನ್ನಪ್ಪಿದ ನಂತರ, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳು ತಾತ್ಕಾಲಿಕವಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ.
- Bheemappa Patil
- Updated on: Aug 19, 2026
- 9:37 am
ಅಪಘಾತದಲ್ಲಿ ಯುವಕ-ಯುವತಿ ದುರ್ಮರಣ: ಆದಿಯೋಗಿ ದರ್ಶನ ಪಡೆದು ಮರಳುತ್ತಿದ್ದವರು ಮಸಣಕ್ಕೆ
Chikkaballapur Fatal Accident: ಈಶಾ ಆದಿಯೋಗಿ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕ, ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ನಡೆದಿದೆ. ಬೈಕ್ಗೆ ಲಾರಿ ಡಿಕ್ಕಿಯಾಗಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Bheemappa Patil
- Updated on: Aug 16, 2026
- 4:02 pm
ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ದಾಳಿಂಬೆ ಕದ್ದ ಕಳ್ಳರು: ಬರದ ನಡುವೆಯೂ ಬೆಳೆ ಬೆಳೆದ ರೈತ ಕಂಗಾಲು
Chikkaballapur News: ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಗ್ರಾಮದಲ್ಲಿ ಬರದ ನಡುವೆಯೂ ಕಷ್ಟಪಟ್ಟು ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಬೆಳೆಯನ್ನು ರಾತ್ರೋರಾತ್ರಿ ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ. ಪತ್ನಿಯ ಚಿನ್ನಾಭರಣ ಅಡವಿಟ್ಟು ಬೆಳೆ ಬೆಳೆದಿದ್ದ ರೈತ ಘಟನೆಯಿಂದ ಕಂಗಾಲಾಗಿದ್ದು, ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿದ್ದಾರೆ.
- Bheemappa Patil
- Updated on: Aug 11, 2026
- 7:06 pm
ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್ ವೇಳೆ ದುರಂತ ಅಂತ್ಯಕಂಡ ಕ್ರೀಡಾಪಟು: ಹೃದಯಾಘಾತದಿಂದ ಸಾವು?
Nandi Hills Monsoon Marathon: ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ನಂದಿಗಿರಿಧಾಮದಲ್ಲಿ ಆಯೋಜಿಸಲಾಗಿದ್ದ 'ಮಾನ್ಸೂನ್ ಮ್ಯಾರಥಾನ್' ಓಟದ ವೇಳೆ 31 ವರ್ಷದ ಕ್ರೀಡಾಪಟುವೊಬ್ಬರು ದಿಢೀರ್ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. 10 ಕಿಲೋಮೀಟರ್ ಹಾಗೂ 21 ಕಿಲೋಮೀಟರ್ ವಿಭಾಗಗಳಲ್ಲಿ ಈ ಮ್ಯಾರಥಾನ್ ನಡೆದಿದ್ದು, 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.
- Bheemappa Patil
- Updated on: Aug 9, 2026
- 1:12 pm
ಅಲರ್ಟ್: ಈ ಭಾನುವಾರ ನಂದಿಬೆಟ್ಟಕ್ಕೆ ಹೋಗುವ ಪ್ಲ್ಯಾನ್ ಇದ್ರೆ ಮುಂದೂಡಿ
ವೀಕೆಂಡ್ ಅಂದ್ರೆ ಸಾಕು ಬೆಂಗಳೂರಿಗರಿಗೆ ನಂದಿಬೆಟ್ಟ ಒಂದು ರೀತಿಯ ಎಂಜಾಯ್ ಮಾಡುವ ಹಾಟ್ಸ್ಪಾಟ್. ಅದರಲ್ಲೂ ಈ ಮಳೆಗಾಲದಲ್ಲೂ ಇಲ್ಲಿನ ವೆದರ್ ನೋಡಲು ಸುಂದರವಾಗಿರುತ್ತೆ. ಆದ್ರೆ ಈ ಭಾನುವಾರ ನಂದಿಬೆಟ್ಟಕ್ಕೆ ಹೋಗಬೇಕು ಅಂತ ಪ್ಲಾನ್ ಮಾಡಿಕೊಂಡವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಶಾಕ್ ಕೊಟ್ಟಿದೆ. ಆಗಸ್ಟ್ 9ರಂದು ನಂದಿ ಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇ ಬೇಕು.
- Bheemappa Patil
- Updated on: Aug 7, 2026
- 8:14 pm
ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಕೆಎಸ್ಆರ್ಟಿಸಿ ಬಸ್ ತಡೆದು ಸುಬ್ಬಾರೆಡ್ಡಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ .ಮೂರು ಬಾರಿ ಶಾಸಕರಾಗಿದ್ದರೂ ಸಹ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಪ್ರತಿಭಟನಾಕಾರರು ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ರಸ್ತೆ ಮಧ್ಯೆ ನಿಲ್ಲಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನ್ಯಾಯ ಸಿಗುವವರೆಗೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.
- Bheemappa Patil
- Updated on: Aug 5, 2026
- 11:08 am
ಸಚಿವ ಸ್ಥಾನ ವಂಚಿತ ಸುಬ್ಬಾರೆಡ್ಡಿ ಬೆಂಬಲಿಸಿ ಮೂರು ತಾಲೂಕುಗಳು ಬಂದ್: ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸಚಿವ ಸ್ಥಾನ ವಂಚಿತ ಎಸ್.ಎನ್. ಸುಬ್ಬಾರೆಡ್ಡಿ ಬೆಂಬಲಿಗರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ತಾಲೂಕುಗಳಲ್ಲಿ ಬಂದ್ಗೆ ಕರೆ ನೀಡಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಈ ಮೂರು ತಾಲೂಕುಗಳು ಬಂದ್ ಇರಲಿದ್ದು, ಪ್ರತಿಭಟನಾಕಾರರು ಬೆಳಗ್ಗೆಯೇ ಟೈರ್ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗಿದ್ದರೂ, ಬೆಂಬಲಿಗರ ಆಕ್ರೋಶ ಮುಂದುವರಿದಿದೆ.
- Bheemappa Patil
- Updated on: Aug 5, 2026
- 8:56 am
ಶಾಸಕ ಎಸ್ಎನ್ ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಭುಗಿಲೆದ್ದ ಆಕ್ರೋಶ: ನಾಳೆ 3 ತಾಲೂಕುಗಳ ಬಂದ್ಗೆ ಕರೆ!
ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಹೈಕಮಾಂಡ್ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ನಾಳೆ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳ ಬಂದ್ಗೆ ಕರೆ ನೀಡಿದ್ದಾರೆ.
- Bheemappa Patil
- Updated on: Aug 4, 2026
- 8:19 pm
ಆಸ್ಪತ್ರೆಯಲ್ಲಿ ನವಜಾತ ಶಿಶು ಬಿಟ್ಟು ಎಸ್ಕೇಪ್: ತನಿಖೆಯಲ್ಲಿ ತಾಯಿ ಅವಿವಾಹಿತೆ ಎನ್ನುವುದು ಪತ್ತೆ
ಆಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣವೇ ನವಜಾತ ಶಿಶುವನ್ನು ತೊರೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತಾಯಿ ಪ್ರತ್ಯಕ್ಷವಾಗಿದ್ದಾರೆ. ‘ತಾನು ಅವಿವಾಹಿತೆ, ಹಾಗಾಗಿ ಮಗು ಬೇಡ’ ಎಂದು ಬಿಟ್ಟುಹೋಗಿದ್ದಾಗಿ ಚಿಕ್ಕಬಳ್ಳಾಪುರ ಮಕ್ಕಳ ರಕ್ಷಣಾಧಿಕಾರಿಗೆ ಹೇಳಿಕೆ ನೀಡಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ದೇವನಹಳ್ಳಿಯ ನಕ್ಷತ್ರಾ ಖಾಸಗಿ ಆಸ್ಪತ್ರೆ ವೈದ್ಯರು ಎಡವಟ್ಟು ಬೆಳಕಿಗೆ ಬಂದಿದೆ.
- Bheemappa Patil
- Updated on: Jul 29, 2026
- 6:44 pm
ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು: ರಾಜೀವ್ ಗೌಡ ಬೆಂಬಲಿಗನಿಗೆ ಧರ್ಮದೇಟು
ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಸಂಘಟನ್ ಸೃಜನ್ ಅಭಿಯಾನದ ಸಭೆಯಲ್ಲಿ AICC ವೀಕ್ಷಕರ ಮುಂದೆಯೇ ಮಾಜಿ ಸಚಿವ ಶಾಸಕ ಡಾ. ಎಂ ಸಿ ಸುಧಾಕರ್ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಪರಾಜಿತ ಕಾಂಗ್ರೇಸ್ ಅಭ್ಯರ್ಥಿ ರಾಜೀವ್ ಗೌಡ ಬೆಂಬಲಿಗರು ನಡುವೆ ಗಲಾಟೆಯಾಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳೊ ಹಂತಕ್ಕೆ ಹೋಗಿದೆ.
- Bheemappa Patil
- Updated on: Jul 25, 2026
- 11:04 pm
ಚಿಕ್ಕಬಳ್ಳಾಪುರದಲ್ಲಿ ನಕಲಿ ಕೀಟನಾಶಕ ಜಾಲ ಪತ್ತೆ: ರೈತರಿಗೆ ವಂಚಿಸುತ್ತಿದ್ದ ‘ಬೆಳೆ ತಜ್ಞ’ ಕೃಷಿ ಇಲಾಖೆ ಬಲೆಗೆ!
ಚಿಕ್ಕಬಳ್ಳಾಪುರದಲ್ಲಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ ಮಾಡುತ್ತಿದ್ದ ಭಾರಿ ಜಾಲವನ್ನು ಕೃಷಿ ಜಾಗೃತ ದಳ ಬಯಲಿಗೆಳೆದಿದೆ. ತಾನೊಬ್ಬ ಬೆಳೆ ತಜ್ಞ ಎಂದು ನಂಬಿಸಿ ವಂಚಿಸುತ್ತಿದ್ದ ಸೋಮಸುಂದರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆತನಿಂದ 200 ಲೀಟರ್ ರಾಸಾಯನಿಕ ಹಾಗೂ ನಕಲಿ ಲೇಬಲ್ಗಳನ್ನು ಜಪ್ತಿ ಮಾಡಲಾಗಿದೆ. ನಕಲಿ ಔಷಧಗಳಿಂದ ಎಚ್ಚರಿಕೆ ವಹಿಸಲು ಕೃಷಿ ಇಲಾಖೆ ಸೂಚಿಸಿದೆ.
- Bheemappa Patil
- Updated on: Jul 24, 2026
- 3:04 pm