ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಚಿಕ್ಕಬಳ್ಳಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 5140 ಮೊಬೈಲ್ಗಳನ್ನ ಕದ್ದಿದ್ದ ಕಳ್ಳರ ಬಂಧನ
ಸರಿಸುಮಾರು 5 ಕೋಟಿ ಮೌಲ್ಯದ ಮೊಬೈಲ್ಗಳು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಬರುತ್ತಿದ್ದವು. ಆದರೆ, ದಾರಿ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮೊಬೈಲ್ಗಳನ್ನು ಸಿನಿಮೀಯ ಶೈಲಿಯಲ್ಲಿ ಕಳವು ಮಾಡಲಾಗಿತ್ತು. ಚಾಲೆಂಜಿಂಗ್ ಆಗಿದ್ದ ಪ್ರಕರಣವನ್ನು ಚಿಕ್ಕಬಳ್ಳಾಪುರ ಪೊಲೀಸರು ಪ್ರತಿಷ್ಠೆಯಾಗಿ ಸ್ವೀಕರಿಸಿ ಭೇದಿಸಿದ್ದಾರೆ. ಚಿಕ್ಕಬಳ್ಳಾಪುರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
- Bheemappa Patil
- Updated on: Apr 29, 2025
- 5:56 pm
ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು
ಚಿಕ್ಕಬಳ್ಳಾಪುರ ಜಿಲ್ಲೆ ಟೊಮ್ಯಾಟೊ ಬೆಳೆಯಲ್ಲಿ ಪ್ರಸಿದ್ಧವಾಗಿದೆ. ಈ ಬಾರಿ ಟೊಮ್ಯಾಟೊ ಬೆಲೆ ಕುಸಿತದಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಿಮೆ ಬೇಡಿಕೆಯಿಂದಾಗಿ ಟೊಮ್ಯಾಟೊ ಬೆಲೆ ಕುಸಿದಿದೆ. ರೈತರು ಹೆಚ್ಚಿನ ವೆಚ್ಚದಲ್ಲಿ ಬೆಳೆದ ಟೊಮ್ಯಾಟೊಗೆ ಸೂಕ್ತ ಬೆಲೆ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ಸರ್ಕಾರದಿಂದ ನೆರವನ್ನು ಒತ್ತಾಯಿಸುತ್ತಿದ್ದಾರೆ.
- Bheemappa Patil
- Updated on: Apr 27, 2025
- 8:59 pm
ಚಿಕ್ಕಬಳ್ಳಾಪುರ: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿಯ ಸಂಬಂಧಿಯಿಂದ ಫೈರಿಂಗ್
ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್ಗೆ ರಸ್ತೆ ನಿರ್ಮಾಣಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಶಾಸಕ ವೈ.ಎ. ನಾರಾಯಣಸ್ವಾಮಿ ಅವರ ಸಂಬಂಧಿ ಫೈರಿಂಗ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಭೇಟಿ ನೀಡಿದ್ದಾರೆ.
- Bheemappa Patil
- Updated on: Apr 23, 2025
- 5:00 pm
ಚಿಕ್ಕಬಳ್ಳಾಪುರ: ಕಂಟೇನರ್ ಬಿದ್ದು ತಂದೆ-ಮಗಳು ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ ತಾಲ್ಲೂಕಿನ ಮರಸನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಕಂಟೇನರ್ ಬೈಕ್ ಮೇಲೆ ಬಿದ್ದ ಪರಿಣಾಮ ತಂದೆ ಮತ್ತು ನಾಲ್ಕು ವರ್ಷದ ಮಗಳು ದೀಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೆಂಕಟೇಶ್ ಪತ್ನಿ ರೂಪಾ ಅವರ ಸ್ಥಿತಿ ಗಂಭೀರವಾಗಿದೆ. ವಾಹನಗಳ ಅಜಾಗರೂಕ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
- Bheemappa Patil
- Updated on: Apr 19, 2025
- 7:55 pm
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್ಗೆ
ಈವರೆಗೆ ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದ 108 ಆಂಬ್ಯುಲೆನ್ಸ್ಗಳನ್ನು ಇನ್ಮುಂದೆ ಸರ್ಕಾರವೇ ನಿರ್ವಹಿಸಲಿದೆ. ಹೌದು. ಈವರೆಗೂ ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿತ್ತು. ಆದ್ರೆ, ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆಯನ್ನು ರಾಜ್ಯ ಸರ್ಕಾರವೇ ನಿಭಾಯಿಸಲಿದೆ. ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
- Bheemappa Patil
- Updated on: Apr 10, 2025
- 10:00 pm
ಮನೆಯಿಂದ ಆಚೆ ಹಾಕಿದ್ದ ಮಗಳಿಗೆ ತಕ್ಕ ಪಾಠ ಕಲಿಸಿದ ಅಪ್ಪ: ಮಗಳಿಗೆ ತಕ್ಕ ತಂದೆ..!
ಆಸ್ತಿಗಾಗಿ ಅಪ್ಪ ಮಗನ ನಡುವೆ ಜಟಾಪಟಿ ನಡೆಯುವುದು ಸಾಮಾನ್ಯ..ಆದ್ರೆ ಇಲ್ಲಿ ಅಪ್ಪ ಮಗಳ ನಡುವೆಯೇ ಬೀದಿ ರಂಪಾಟ ನಡೆದಿದೆ. ಅಪ್ಪನ ಮನೆ ಸೇರಿದ್ದ ಮಗಳು, ಅಪ್ಪನನ್ನ ಮನೆಯಿಂದ ಹೊರದೂಡಿದ್ದಳು. ಇದರಿಂದ ನೊಂದ ತಂದೆ ಎ.ಸಿ ನ್ಯಾಯಾಲಯದ ಮೊರೆ ಹೋಗಿದ್ದು, ಕೊನೆಗೆ ನ್ಯಾಯಾಲಯವು ಮನೆಯಲ್ಲಿದ್ದ ಮಗಳನ್ನು ಹೊರ ಹಾಕಿ ತಂದೆಗೆ ಮನೆ ಕಲ್ಪಿಸಿಕೊಟ್ಟಿದೆ. ಇದು ಮಗಳಿಗೆ ತಕ್ಕ ತಂದೆಯ ಸ್ಟೋರಿ.
- Bheemappa Patil
- Updated on: Apr 10, 2025
- 5:11 pm
ಮಾಜಿ ಶಾಸಕರ ಸಂಬಂಧಿ, ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು: ಕಾರಣ ನಿಗೂಢ
2024-25ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು ಫುಲ್ ಖುಷ್ ಆಗಿದ್ದಾರೆ. ಇನ್ನು ಅನುತೀರ್ಣ ಹಾಗೂ ಕಡಿಮೆ ಅಂಕಗಳು ಬಂದಿವೆ ಎಂದು ರಾಜ್ಯಾದ್ಯಂತ ಐವರು ಇದ್ಯಾರ್ಥಿಗಳು ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಮಾಜಿ ಶಾಸಕ ಸಂಬಂಧಿ ಎಂಬಿಬಿಎಸ್ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಮತ್ತೊಂದೆಡೆ ಕಾಲೇಜಿಗೆ ಹೋಗು ಎಂದು ಪೋಷಕರು ಬೈದು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿ ಸಾವಿಗೆ ಶರಣಾಗಿದ್ದಾನೆ. ಮತ್ತೊಂದೆಡೆ ವ್ಯಕ್ತಿಯೋರ್ವ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂರು ಪ್ರತ್ಯೇಕ ಘಟನೆಗಳ ವಿವರ ಇಲ್ಲಿದೆ.
- Bheemappa Patil
- Updated on: Apr 9, 2025
- 8:06 pm
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕರ್ನಾಟಕದಲ್ಲಿ ಬೆಲೆ ಏರಿಕೆ ವಿರುದ್ಧ ವಿಪಕ್ಷ ಬಿಜೆಪಿ ಬೀದಿಗಳಿದ ಪ್ರತಿಭಟನೆ ನಡೆಸಿದೆ. ಜನಾಕ್ರೋಶದ ಹೆಸರಿನಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು,ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇನ್ನು ಬಿಜೆಪಿಯವರ ಜನಾಕ್ರೋಶ ಪ್ರತಿಭಟನೆ ಬಗ್ಗೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರತಿಕ್ರಿಯಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಒಪ್ಪಿಕೊಂಡಿದ್ದಾರೆ.
- Bheemappa Patil
- Updated on: Apr 9, 2025
- 7:34 pm
ಚಿಕ್ಕಬಳ್ಳಾಪುರಕ್ಕೆ ತೋರಣವಾದ ತಬೂಬಿಯಾ ರೋಸಿಯಾ ಮರದ ಹೂವುಗಳು
ಚಿಕ್ಕಬಳ್ಳಾಪುರದ ಬಿಬಿ ರಸ್ತೆಯಲ್ಲಿ ಅರಳಿರುವ ತಬೂಬಿಯಾ ರೋಸಿಯಾ ಹೂಗಳು ನಗರಕ್ಕೆ ಅದ್ಭುತ ಸೌಂದರ್ಯವನ್ನು ನೀಡಿವೆ. ಜನರನ್ನು ಆಕರ್ಷಿಸುತ್ತಿವೆ. ಹೂಗಳ ರಾಶಿ ಪ್ರಯಾಣಿಕರ ಮನಸ್ಸಿಗೆ ಮುದ ನೀಡುತ್ತಿವೆ. ಈ ಹೂಗಳ ಸೌಂದರ್ಯ ಕಂಡು ಜನರು ಮಾರುಹೋಗಿದ್ದಾರೆ. ಸೆಲ್ಫಿ ತೆಗೆದುಕೊಳ್ಳುವುದು ಮತ್ತು ವಿಡಿಯೋ ಮಾಡಿಕೊಳ್ಳುತ್ತಿದ್ದಾರೆ. ಚಿಕ್ಕಬಳ್ಳಾಪುರದ ಅರಣ್ಯ ಇಲಾಖೆಯ ಅಧಿಕಾರಿಗಳ ಶ್ರಮ ಇದರ ಹಿಂದಿದೆ.
- Bheemappa Patil
- Updated on: Apr 8, 2025
- 10:05 pm
ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ
ಪ್ರೀತಿ ಕುರುಡು ಎನ್ನುವ ಹಾಗೆ ಜಾತಿ, ಧರ್ಮ, ಸಾಮಾಜಿಕ ಹಾಗೂ ಧಾರ್ಮಿಕ ಕಟ್ಟಲೆಗಳನ್ನು ಮೀರಿದ ಜೋಡಿಯೊಂದು ಪ್ರೇಮ ವಿವಾಹವಾಗಿತ್ತು. ಎದುರು ಬದುರು ಮನೆಯ ಮಸ್ಲಿಂ ಯುವತಿ ಹಾಗೂ ಹಿಂದೂ ಯುವಕ ತಮ್ಮ-ತಮ್ಮ ಧರ್ಮ, ಜಾತಿಗೆ ತಿಲಾಂಜಲಿ ಇಟ್ಟು ಪೋಷಕರ ವಿರೋಧದ ನಡುವೆಯೇ ಸಪ್ತಪದಿ ತುಳಿದಿತ್ತು. ಆದ್ರೆ, ಈ ಪ್ರೇಮ ವಿವಾಹ ಎರಡೇ ವಾರಕ್ಕೆ ಮುರಿದು ಬಿದ್ದಿದೆ. ಯವಕನನ್ನು ನಡು ನೀರಿನಲ್ಲೇ ಬಿಟ್ಟು ಯುವತಿ ಹೋಗಿದ್ದಾಳೆ.
- Bheemappa Patil
- Updated on: Apr 7, 2025
- 6:02 pm
ಚಿಕ್ಕಬಳ್ಳಾಪುರ ಸರ್ಕಾರಿ ಶಾಲಾ ಶಿಕ್ಷಕಿ ಎಡವಟ್ಟು: ಕಣ್ಣಿನ ದೃಷ್ಟಿ ಕಳೆದುಕೊಂಡ ಬಾಲಕ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಓರ್ವ ಶಿಕ್ಷಕಿ ಮಾಡಿದ ಎಡವಟ್ಟಿನಿಂದ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವಂತಹ ಘಟನೆ ನಡೆದಿದೆ. ಘಟನೆ ನಡೆದು ಒಂದು ವರ್ಷ ಕಳೆದರೂ, ಶಿಕ್ಷಕಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಪೋಷಕರು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದು, ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
- Bheemappa Patil
- Updated on: Apr 6, 2025
- 12:33 pm
ಪ್ರತ್ಯೇಕ ಘಟನೆ: ಚಿಕ್ಕಬಳ್ಳಾಪುರದಲ್ಲಿ ಮೂವರು, ವಿಜಯಪುರದಲ್ಲಿ ಇಬ್ಬರು ಜಲಸಮಾಧಿ
ಪ್ರತ್ಯೇಕ ಘಟನೆ: ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸಸಾಗರ ಜಲಾಶಯದ ನೀರಿನಲ್ಲಿ ಬಿದ್ದಿದ್ದ ಮಗುವನ್ನು ರಕ್ಷಿಸಲು ಹೋದ ಮೂವರು ಮೃತಪಟ್ಟಿದ್ದಾರೆ. ಫರೀನಾ ಬೇಗಂ, ಬಶೀರ್ ಮತ್ತು ಇಮ್ರಾನ್ ಮೃತರು. ವಿಜಯಪುರ ತಾಲೂಕಿನ ಕುಮಟಗಿ ಗ್ರಾಮದ ಹೊರ ಭಾಗದಲ್ಲಿರುವ ಕೆರೆಯಲ್ಲಿ ಈಜಲು ತೆರೆಳಿದ್ದ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ.
- Bheemappa Patil
- Updated on: Apr 2, 2025
- 8:12 pm