ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಹೊಸ ವರ್ಷದ ವೇಳೆಯೂ ಮದ್ಯಕ್ಕಿಲ್ಲ ಡಿಮ್ಯಾಂಡ್: ದಾಖಲೆ ಮಟ್ಟದಲ್ಲಿ ಬೇಡಿಕೆ ಕುಸಿತ
ಹೊಸ ವರ್ಷದ ಸಂಭ್ರಮದ ನಡುವೆಯೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮದ್ಯ ಬೇಡಿಕೆ ಶೇ. 58ಕ್ಕಿಂತ ಹೆಚ್ಚು ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮದ್ಯ ಮತ್ತು ಬಿಯರ್ ಮಾರಾಟ ಗಣನೀಯವಾಗಿ ಕಡಿಮೆಯಾಗಿದೆ. ಜನರ ಆದಾಯ ಕುಸಿತ ಮತ್ತು ಮದ್ಯದ ಬೆಲೆ ಏರಿಕೆ ಈ ಬೇಡಿಕೆ ಇಳಿಕೆಗೆ ಮುಖ್ಯ ಕಾರಣ ಎನ್ನಲಾಗಿದೆ. ಸದ್ಯದ ಸ್ಥಿತಿಯ ಕಾರಣ ಮಾರಾಟ ಗುರಿ ತಲುಪಲು ಅಬಕಾರಿ ಇಲಾಖೆ ಹೆಣಗಾಡುತ್ತಿದೆ.
- Bheemappa Patil
- Updated on: Dec 31, 2025
- 7:14 pm
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬಿರಿಯಾನಿ ಭಾಗ್ಯ, ಮೋದಿ ಅಭಿಮಾನಿಯಿಂದ ವ್ಯವಸ್ಥೆ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ ಜನರು ಮುಗಿಬಿದ್ದಿದ್ದಾರೆ.
- Bheemappa Patil
- Updated on: Dec 29, 2025
- 11:49 am
ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ?
ಆತನಿಗೆ ಮದುವೆಯಾಗಿ ಪತ್ನಿ ಮಕ್ಕಳಿದ್ದರು. ಕಾರುಗಳನ್ನು ಇಟ್ಟುಕೊಂಡು ಬಾಡಿಗೆಗೆ ಓಡಿಸುವ ಕಾಯಕ ಮಾಡಿಕೊಂಡಿದ್ದ. ತಾನು ಆಯ್ತು ತನ್ನ ಸಂಸಾರ ಆಯ್ತು ಅಂದುಕೊಂಡಿದ್ರೆ ಚನ್ನಾಗಿರುತ್ತಿತ್ತು. ಆದ್ರೆ ಇನ್ನೊಬ್ಬಳ ಸಹವಾಸ ಮಾಡಿ ಇದೀಗ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದು, ವಿವಾಹಿತ ವ್ಯಕ್ತಿಯ ದುಡುಕಿನ ನಿರ್ಧಾರದ ಹಿಂದೆ ಮಹಿಳೆ ಪಾತ್ರದ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಏನಿದು ಪ್ರಕರಣ? ವಿವಾಹಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ಯಾಕೆ ಎನ್ನುವ ವಿವರ ಇಲ್ಲಿದೆ.
- Bheemappa Patil
- Updated on: Dec 27, 2025
- 6:45 pm
Chikkaballapura: ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ: ಆರೇ ತಿಂಗಳಲ್ಲಿ ಪತಿ ದಾರುಣ ಸಾವು
ಬೈಕ್ಗೆ ಟಿಪ್ಪರ್ ಗುದ್ದಿದ ಪರಿಣಾಮ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ಚಿಕ್ಕಬಳ್ಳಾಪುರದಲ್ಲಿ ನಡೆತಿತ್ತು. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶಾಸಕ ಪ್ರದೀಪ್ ಈಶ್ವರ್ ಸಾಂತ್ವನ ಹೇಳಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಓರ್ವ ಯುವಕನಿಗೆ 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಆತನ ಜೊತೆ ಸಹೋದರನೂ ಪ್ರಾಣ ಕಳೆದುಕೊಂಡಿರುವ ಹಿನ್ನೆಲೆ ತಾಯಿಯ ಆಕ್ರಂದನ ಹೇಳತೀರದಾಗಿದೆ.
- Bheemappa Patil
- Updated on: Dec 26, 2025
- 11:55 am
ಚಿತ್ರದುರ್ಗ ಬಸ್ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ, ನಾಲ್ವರು ಸಾವು
ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ಕಂಟೇನರ್ ಡಿವೈಡರ್ ಹಾರಿ ಬಂದು ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಗುದ್ದಿದೆ. ಪರಿಣಾಮ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲಿ ಬೆಂಕಿಯ ಜ್ವಾಲೆ ಇಡೀ ಬಸ್ಗೆ ವಾಪಿಸಿಕೊಂಡಿದೆ. ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ. ಸೂರ್ಯೋದಯವಾಗುವುದರೊಳಗೆ ದುರ್ಘಟನೆ ಸಂಭವಿಸಿದ್ದು, ಇನ್ನು ಸೂರ್ಯಾಸ್ತವಾಗುತ್ತಿದ್ದಂತೆಯೇ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
- Bheemappa Patil
- Updated on: Dec 26, 2025
- 3:41 pm
KSRTC ಬಸ್ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್ನಲ್ಲಿ ಆರೋಪಿ ಅರೆಸ್ಟ್
ಊಟಕ್ಕೆಂದು KSRTC ಎಸಿ ಸ್ಲೀಪರ್ ಬಸ್ ನಿಲ್ಲಿಸಿದ್ದ ವೇಳೆ ಚಿಕ್ಕಬಳ್ಳಾಪುರದಲ್ಲಿ ಪ್ರಯಾಣಿಕರೊಬ್ಬರ 55 ಲಕ್ಷ ರೂ. ಹಣ ಕಳವು ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ವ್ಯಕ್ತಿ ಬಂಧಿತನಾಗಿದ್ದು, ಕಳುವಾಗಿದ್ದ ಹಣವನ್ನು ಸಂಪೂರ್ಣವಾಗಿ ವಸೂಲಿ ಮಾಡಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದ್ದು, ಬಸ್ಗಳಲ್ಲಿ ದರೋಡೆ ಮಾಡೋದೆ ಈ ಗ್ಯಾಂಗ್ ಕಾಯಕವಾಗಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ.
- Bheemappa Patil
- Updated on: Dec 25, 2025
- 5:48 pm
ಚಿಕ್ಕಬಳ್ಳಾಪುರ: ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದಳೇ ಅಜ್ಜಿ? ಚೇಳೂರಿನಲ್ಲಿ ಮರ್ಯಾದಾ ಹತ್ಯೆ ಶಂಕೆ
ಹುಬ್ಬಳ್ಳಿಯಲ್ಲಿ ನಡೆದ ಭೀಕರ ಮರ್ಯಾದಾ ಹತ್ಯೆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ. 40 ದಿನಗಳ ಗಂಡುಶಿಶುವಿನ ಸಾವಿಗೆ ಮುತ್ತಜ್ಜಿಯೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸ್ ದೂರು ದಾಖಲಾಗಿದೆ. ಘಟನೆಯ ವಿವರ ಇಲ್ಲಿದೆ.
- Bheemappa Patil
- Updated on: Dec 25, 2025
- 6:50 am
ಮಧ್ಯರಾತ್ರಿ ಎಂಟ್ರಿ, ಬೆಳಗಿನ ಜಾವ ಎಸ್ಕೇಪ್; ಎಯು ಜ್ಯುವೆಲ್ಲರ್ಸ್ನಿಂದ 140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ಚಿಕ್ಕಬಳ್ಳಾಪುರದ ನಗರದ ಬಿಬಿ ರಸ್ತೆಯಲ್ಲಿರುವ ಎ ಯು ಜ್ಯುವೆಲ್ಲರ್ಸ್ನಲ್ಲಿ ಸೋಮವಾರ ರಾತ್ರಿ ಭಾರೀ ದರೋಡೆ ನಡೆದಿದ್ದು, ಸುಮಾರು 140 ಕೆ.ಜಿಯಷ್ಟು ಬೆಳ್ಳಿ ವಸ್ತುಗಳು ಕಾಣೆಯಾಗಿದ್ದವು. ಸಿಸಿ ಕ್ಯಾಮೆರಾದ ಡಿವಿಆರ್ಅನ್ನೂ ದೋಚಿದ್ದ ಕದೀಮರನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದರು.ಇದೀಗ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಮೂವರು ಕಳ್ಳರು ಸೇರಿ ಸುಮಾರು ಮೂರು ಕೋಟಿ ರೂ. ಮೌಲ್ಯದ 140 ಕೆಜಿ ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.
- Bheemappa Patil
- Updated on: Dec 24, 2025
- 2:16 pm
ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ
ಅವರಿಬ್ಬರೂ ಪರಸ್ಪರ ಪ್ರೀತಿಸಿ ಯಾವುದೋ ಕಾರಣಕ್ಕೆ ಬೇರೆಯಾಗಿದ್ರು. ಯುವತಿ ಎಲ್ಲವನ್ನು ಮರೆತು ಬೇರೊಬ್ಬರನ ಜೊತೆ ಮದುವೆ ಮಾಡಿಕೊಂಡು ಗಂಡನ ಮನೆ ಸೇರಿದ್ದಳು. ಆದ್ರೆ ಮಾಜಿ ಪ್ರಿಯಕರ ಮಾಡಿದ ಅದೊಂದು ಕಿತಾಪತಿಗೆ ಆಕೆಯ ಸಂಚಾರವೇ ಛಿದ್ರ ಛಿದ್ರವಾಗಿದೆ. ಪತಿ ಜೊತೆಗೆ ಬದುಕಿ ಬಾಳಬೇಕಿದ್ದ ಆಕೆಯ ಸಾಂಸಾರಿಕ ಜೀವನ ತಿಂಗಳು ಕಳೆಯುವುದರ ಒಳಗೆ ಅಂತ್ಯ ಕಂಡಿದೆ. ಅತ್ತ ಗಂಡ ಮನೆಯಿಂದ ಆಚೆ ಹಾಕಿದ್ರೆ, ಇತ್ತ ಪ್ರಿಯಕರ ಸಹ ಸೇರಿಸಿಕೊಳ್ಳುತ್ತಿಲ್ಲ. ಇದರಿಂದ ಯುವತಿ ಕಂಗಾಲಾಗಿದ್ದಾಳೆ.
- Bheemappa Patil
- Updated on: Dec 22, 2025
- 5:10 pm
ಮೋಜು ಮಸ್ತಿಗಾಗಿ ಲವರ್ ಜತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಹಾಕಿದ ಮಿತ್ರದ್ರೋಹಿ ಯುವತಿ
ಚಿಕ್ಕಬಳ್ಳಾಪುರದಲ್ಲಿ ಪ್ರೇಮಿಗಳ ಜೋಡಿಯೊಂದು ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಸ್ನೇಹಿತೆಯರಿಂದ ಲಕ್ಷಾಂತರ ರೂ. ವಂಚಿಸಿದ ಘಟನೆಯೊಂದು ಬಯಲಾಗಿದೆ. ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಪಂಗನಾಮ ಹಾಕಿದ್ದಾರೆ. ಸದ್ಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರೇಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
- Bheemappa Patil
- Updated on: Dec 22, 2025
- 4:19 pm
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಯುವಕರು ಕುಡಿದು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಮದ್ಯ ಸೇವಿಸಿದ ಅಮಲಿನಲ್ಲಿ ಮುಂದೆ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರಿನ ಚಾಲಕ ಸೇರಿ ಕಾರಿನಲ್ಲಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Bheemappa Patil
- Updated on: Dec 20, 2025
- 9:29 pm
ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಗೆ ನುಗ್ಗಿ ಬ್ಯಾಗ್ ಕದ್ದು ಎಸ್ಕೇಪ್: ಕಳುವಾಗಿದ್ದು ಅರ್ಧಕೋಟಿ ಹಣ!
ಕೆಎಸ್ಆರ್ಟಿಸಿ ಬಸ್ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಉದ್ಯಮಿಯೊಬ್ಬರು ಮನೆಯ ಮಾರಾಟದಿಂದ ಬಂದ ಹಣವನ್ನು ಬಸ್ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳರು ದೋಚಿ ಪರಾರಿಯಾಗಿದ್ದಾರೆ. ನಕಲಿ ನಂಬರ್ ಪ್ಲೇಟ್ ಕಾರು ಬಳಸಿ ಕೃತ್ಯ ಎಸಗಲಾಗಿದೆ. ಪೊಲೀಸರು ಆರೋಪಿಗಾಗಿ ತನಿಖೆ ನಡೆಸುತ್ತಿದ್ದು, ಇದು ರಾಜ್ಯದಲ್ಲಿ ನಡೆದ ಮತ್ತೊಂದು ದೊಡ್ಡ ನಗದು ಕಳ್ಳತನ ಪ್ರಕರಣವಾಗಿದೆ.
- Bheemappa Patil
- Updated on: Dec 19, 2025
- 7:59 am