Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

Author - TV9 Kannada

bheemappa.patil@tv9.com

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow On:
ಚಿಕ್ಕಬಳ್ಳಾಪುರ ನಗರಸಭೆಯ 6 ಸದಸ್ಯರು ಅನರ್ಹ: ಸೇಡು ತೀರಿಸಿಕೊಂಡ ಪ್ರದೀಪ್ ಈಶ್ವರ್!

ಚಿಕ್ಕಬಳ್ಳಾಪುರ ನಗರಸಭೆಯ 6 ಸದಸ್ಯರು ಅನರ್ಹ: ಸೇಡು ತೀರಿಸಿಕೊಂಡ ಪ್ರದೀಪ್ ಈಶ್ವರ್!

ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ ಸುಧಾಕರ್ ನಡುವೆ ಪ್ರತಿಷ್ಠೆಯಾಗಿದ್ದ ಚಿಕ್ಕಬಳ್ಳಾಪುರ ನಗರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಮುಗಿದು ಹೋಗಿದೆ. ಸುಧಾಕರ್​ ಬೆಂಬಲಿತರೇ ಅಧ್ಯಕ್ಷ-ಉಧ್ಯಾಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಚುನಾವಣೆ ವೇಳೆ ನಾನಾ ನೀನಾ ಸವಾಲಿನಲ್ಲಿ ಮುಖಭಂಗ ಅನುವಿಸಿದ್ದ ಶಾಸಕ ಪ್ರದೀಪ್ ಈಶ್ವರ್​ ತಮ್ಮ ಸೇಡನ್ನು ಬೇರೆ ರೀತಿಯಲ್ಲಿ ತೀರಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಸಪ್ತಪದಿ ತುಳಿದ ಎದುರು ಬದುರು ಮನೆಯ ಹಿಂದೂ-ಮುಸ್ಲಿಂ ಜೋಡಿ!

ಚಿಕ್ಕಬಳ್ಳಾಪುರ: ಸಪ್ತಪದಿ ತುಳಿದ ಎದುರು ಬದುರು ಮನೆಯ ಹಿಂದೂ-ಮುಸ್ಲಿಂ ಜೋಡಿ!

ಪ್ರೀತಿ ಕುರುಡು ಎನ್ನುವ ಹಾಗೆ ಜಾತಿ, ಧರ್ಮ, ಸಾಮಾಜಿಕ ಹಾಗೂ ಧಾರ್ಮಿಕ ಕಟ್ಟಲೆಗಳನ್ನು ಮೀರಿದ ಜೋಡಿಯೊಂದು ಪೊಲೀಸ್ ಠಾಣೆಯಲ್ಲಿ ಒಂದಾಗಿದೆ. ಎದುರು ಬದುರು ಮನೆಯ ಮಸ್ಲಿಂ ಯುವತಿ ಹಾಗೂ ಹಿಂದೂ ಯುವಕ ತಮ್ಮ-ತಮ್ಮ ಧರ್ಮ, ಜಾತಿಗೆ ತಿಲಾಂಜಲಿ ಇಟ್ಟು ಪೋಷಕರ ವಿರೋಧದ ನಡುವೆಯೂ ಒಂದಾಗಿದ್ದಾರೆ. ಹೆಚ್ಚಾಗಿ ಹಿಂದೂ ಯುವತಿಯರೇ ಮುಸ್ಲಿಂ ಯುವರನ್ನ ಪ್ರೀತಿಸಿ ಮದ್ವೆಯಾದ ಸಾಕಷ್ಟು ಉದಾಹರಣೆಗಳು ಇವೆ. ಇದರ ಮಧ್ಯೆ ಮುಸ್ಲಿಂ ಯುವತಿಯೇ ಹಿಂದೂ ಯುವಕನನ್ನು ವರಿಸುವುದರ ಮೂಲಕ ತನ್ನ ಪ್ರೀತಿಗೆ ಜೈ ಎಂದಿದ್ದಾಳೆ.

ಪ್ರವಾಸಿತಾಣ ನಂದಿಗಿರಿಧಾಮ 1 ತಿಂಗಳು ಬಂದ್: ವೀಕೆಂಡ್​​​ನಲ್ಲಿ ಮಾತ್ರ ಓಪನ್..!

ಪ್ರವಾಸಿತಾಣ ನಂದಿಗಿರಿಧಾಮ 1 ತಿಂಗಳು ಬಂದ್: ವೀಕೆಂಡ್​​​ನಲ್ಲಿ ಮಾತ್ರ ಓಪನ್..!

ಪ್ರೇಮಿಗಳ ಪಾಲಿನ ಪ್ರೇಮಧಾಮ, ವಯೋವೃದ್ದರ ಪಾಲಿಗೆ ಆರೋಗ್ಯಧಾಮ, ಮಕ್ಕಳ ಪಾಲಿಗೆ ಆಟದ ಮೈದಾನ...ವಿಶ್ವವಿಖ್ಯಾತ ನಂದಿಗಿರಿಧಾಮ...ಅದರಲ್ಲೂ ಬೆಂಗಳೂರಿಗರ ಪಾಲಿಗಂತೂ ವಿಕೆಂಡ್​ ಹಾಟ್ ಫೇವರೆಟ್ ತಾಣ ಈ ಸುಂದರ ಪ್ರಕೃತಿ ಸೊಬಗಿನ ತಾಣ ನಂದಿಬೆಟ್ಟ. ಆದ್ರೆ ಈ ನಂದಿಬೆಟ್ಟದ ರಸ್ತೆಗೆ ಒಂದು ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ನಾಳೆಯಿಂದ (ಮಾರ್ಚ್ 24) ಒಂದು ತಿಂಗಳ ಕಾಲ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮ ಬಂದ್ ಇರಲಿದೆ. ಆದ್ರೆ, ವೀಕೆಂಡ್​ ಎಂಜಾಯ್ ಮಾಡಲು ಅವಕಾಶವಿದೆ.

6 ತಿಂಗಳಿನಿಂದ ಚಾರಣ ಮಾರ್ಗದರ್ಶಕರಿಗಿಲ್ಲ ಸಂಬಳ: ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

6 ತಿಂಗಳಿನಿಂದ ಚಾರಣ ಮಾರ್ಗದರ್ಶಕರಿಗಿಲ್ಲ ಸಂಬಳ: ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಕಂದಗಿರಿ ಬೆಟ್ಟದ ಚಾರಣ ಮಾರ್ಗದರ್ಶಕರು ಕಳೆದ ಆರು ತಿಂಗಳಿಂದ ವೇತನ ಪಡೆಯದೆ ತೊಂದರೆ ಅನುಭವಿಸುತ್ತಿದ್ದಾರೆ. ಅರಣ್ಯ ಇಲಾಖೆಯಿಂದ ಈ ಮಾರ್ಗದರ್ಶಕರ ನೇಮಕಾತಿ ಆಗಿದ್ದು, ಪ್ರತಿ ಟ್ರೆಕ್ಕಿಂಗ್‌ಗೆ 800 ರೂಪಾಯಿ ಸಂಭಾವನೆ ನೀಡುವುದಾಗಿ ಒಪ್ಪಂದವಾಗಿತ್ತು. ಆದರೆ, ಇಲಾಖೆಯು ಈ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಮಾರ್ಗದರ್ಶಕರು ಆರೋಪಿಸುತ್ತಿದ್ದಾರೆ. ಡಿಎಫ್ಒ ಒಂದು ವಾರದೊಳಗೆ ವೇತನ ಪಾವತಿಸುವ ಭರವಸೆ ನೀಡಿದ್ದಾರೆ.

ಮಹಿಳೆಯ ಮಾಟಮಂತ್ರಕ್ಕೆ‌ ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ ಜನ

ಮಹಿಳೆಯ ಮಾಟಮಂತ್ರಕ್ಕೆ‌ ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ ಜನ

ಚಿಕ್ಕಬಳ್ಳಾಪುರದ ಒಎಂಬಿ ನಗರದಲ್ಲಿ ಮಾಟಮಂತ್ರದ ಭೀತಿ ಹರಡಿದೆ. ನಿಂಬೆಹಣ್ಣು, ಅರಿಶಿನ, ಕುಂಕುಮದ ಕುರುಹುಗಳು ಕಂಡುಬಂದಿವೆ. ಟೈಲರ್ ಶಾಂತಕುಮಾರ್ ಅವರ ಅಂಗಡಿಯ ಮುಂದೆ ಇದೇ ರೀತಿಯ ಘಟನೆಗಳು ನಡೆದಿದ್ದು, ಸಿಸಿಟಿವಿ ಮೂಲಕ ಮುನಿಲಕ್ಷ್ಮಮ್ಮ ಎಂಬ ಮಹಿಳೆಯನ್ನು ಪತ್ತೆಹಚ್ಚಲಾಗಿದೆ. ಇದೇ ಪ್ರದೇಶದ ಜಯಲಕ್ಷ್ಮೀ ಅವರ ಪತಿಯ ಮರಣಕ್ಕೂ ಮಾಟಮಂತ್ರವನ್ನು ಕಾರಣವೆಂದು ಆರೋಪಿಸಲಾಗಿದೆ. ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ರೈತರಿಗೆ ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ಹೈನುಗಾರರಿಗೆ ಯುಗಾದಿ ಬೋನಸ್​

ರೈತರಿಗೆ ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ಹೈನುಗಾರರಿಗೆ ಯುಗಾದಿ ಬೋನಸ್​

ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಅಸ್ತಿತ್ವಕ್ಕೆ ಬಂದು ಬರೀ ಮೂರು ತಿಂಗಳಷ್ಟೇ ಆಗಿದೆ. ಆದರೆ ಆಗಲೇ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಭರ್ಜರಿ ವ್ಯಾಪಾರ ವಹಿವಾಟು ಮಾಡಿ ಭರಪೂರ ಲಾಭ ಮಾಡಿದೆ. ಹೀಗಾಗಿ ಲಾಭದಲ್ಲಿ ರೈತರಿಗೆ ಯುಗಾದಿ ಹಬ್ಬದ ಗಿಫ್ಟ್ ಕೊಡೋಕೆ ಮುಂದಾಗಿದೆ. ಇಡೀ ರಾಜ್ಯದಲ್ಲೇ ಯಾವ ಹಾಲು ಒಕ್ಕೂಟ ಮಾಡದ ಹೊಸ ಘೋಷಣೆಯೊಂದನ್ನ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮಾಡಿದೆ. ಏನದು ಹೊಸ ಘೋಷಣೆ? ಈ ಸುದ್ದಿ ಓದಿ.

ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು

ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು

ಚಿಕ್ಕಬಳ್ಳಾಪುರ ತಾಲ್ಲೂಕಿನ ಗೋಪಿನಾಥ ಬೆಟ್ಟದ ದೇವಸ್ಥಾನದ ಬಳಿ ನಿಲ್ಲಿಸಿದ್ದ ಯಲಹಂಕದ ನರಸಿಂಹಮೂರ್ತಿ ಅವರ ಬ್ರೀಜಾ ಕಾರು ಹೊತ್ತಿ ಉರಿದಿದೆ. ದೇವರ ದರ್ಶನಕ್ಕೆ ಹೋಗಿದ್ದ ಅವರು ಹಿಂತಿರುಗಿ ಬಂದಾಗ ಕಾರು ಬೆಂಕಿಯಲ್ಲಿ ಸುಟ್ಟುಹೋಗಿರುವುದನ್ನು ಕಂಡಿದ್ದಾರೆ. ಕಾರಿನ ಬಾನೆಟ್‌ನಿಂದ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಬಿಸಿಲಿಗೆ ಹೈರಾಣಾದ ಜನ: ವಾಂತಿ, ಬೇದಿ, ಜ್ವರ, ಜಾಂಡೀಸ್​ ಉಲ್ಬಣ

ಚಿಕ್ಕಬಳ್ಳಾಪುರದಲ್ಲಿ ಬಿಸಿಲಿಗೆ ಹೈರಾಣಾದ ಜನ: ವಾಂತಿ, ಬೇದಿ, ಜ್ವರ, ಜಾಂಡೀಸ್​ ಉಲ್ಬಣ

ಚಿಕ್ಕಬಳ್ಳಾಪುರ ಮತ್ತು ಮಂಡ್ಯದಲ್ಲಿ ಮಾರ್ಚ್ ತಿಂಗಳಲ್ಲೇ ತೀವ್ರ ಬಿಸಿಲಿನ ತಾಪಮಾನ ಏರಿಕೆಯಾಗಿದೆ. ಬಿಸಿಲಿನಿಂದ ಚಿಕ್ಕಬಳ್ಳಾಪುರದ ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಮತ್ತು ವೃದ್ಧರಲ್ಲಿ ಜ್ವರ, ವಾಂತಿ, ಮತ್ತು ಜಾಂಡೀಸ್‌ನಂತಹ ಕಾಯಿಲೆಗಳು ಹೆಚ್ಚಾಗುತ್ತಿವೆ. ಆಸ್ಪತ್ರೆಗಳಲ್ಲಿ ಜನಜಂಗುಳಿ ಉಂಟಾಗಿದೆ. ಹೆಚ್ಚಿನ ನೀರು ಸೇವಿಸುವುದು ಮತ್ತು ಬಿಸಿಲಿನಿಂದ ರಕ್ಷಿಸಿಕೊಳ್ಳುವುದು ಮುಖ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, ಇಬ್ಬರು ಸಜೀವ ದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, ಇಬ್ಬರು ಸಜೀವ ದಹನ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘನಘೋರ ಘಟನೆಯೊಂದು ನಡೆದಿದೆ. ಖಾಸಗಿ ಬಸ್‌ ಹಾಗೂ ಕಾರು ಮುಖಾಮುಖಿ​​ ಡಿಕ್ಕಿಯಾಗಿದ್ದು, ಬಸ್​ ಗುದ್ದಿದ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಪರಿಣಾಮ ಕಾರಿನಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸಜೀವದಹನವಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿ ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಹಿಳಾ ದಿನಾಚರಣೆ ವಿಶೇಷ: ಚಿಕ್ಕಬಳ್ಳಾಪುರದ ಸ್ವಚ್ಛ ವಾಹಿನಿ ರಥಕ್ಕೆ ಮಹಿಳಾ ಸಾರಥಿ

ಮಹಿಳಾ ದಿನಾಚರಣೆ ವಿಶೇಷ: ಚಿಕ್ಕಬಳ್ಳಾಪುರದ ಸ್ವಚ್ಛ ವಾಹಿನಿ ರಥಕ್ಕೆ ಮಹಿಳಾ ಸಾರಥಿ

ಚಿಕ್ಕಬಳ್ಳಾಪುರ ಜಿಲ್ಲೆಯ ತಿಪ್ಪೇನಹಳ್ಳಿ ಗ್ರಾಮದ ನಂದಿನಿ ಎಂಬುವರು ಗ್ರಾಮ ಪಂಚಾಯತಿಯ ಸ್ವಚ್ಛತಾ ವಾಹನದ ಚಾಲಕಿಯಾಗಿದ್ದಾರೆ. ನಂದಾದೀಪ ಸ್ವಸಹಾಯ ಸಂಘದ ಸಹಾಯದಿಂದ ಚಾಲನಾ ತರಬೇತಿ ಪಡೆದ ಅವರು, ಪುರುಷರಿಗಿಂತ ಕಡಿಮೆಯಿಲ್ಲದೆ ವಾಹನ ಚಾಲನೆ ಮಾಡುತ್ತಿದ್ದಾರೆ. ಅವರ ದುಡಿಮೆಗೆ ಗ್ರಾಮ ಪಂಚಾಯತಿ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದ್ದಾರೆ.

ಚಿಂತಾಮಣಿ: ಕೃಷಿ ಹೊಂಡದಲ್ಲಿ ವಿದ್ಯುತ್​ ಸ್ಪರ್ಶಿಸಿ ಮೂವರು ಯುವಕರು ದುರ್ಮರಣ

ಚಿಂತಾಮಣಿ: ಕೃಷಿ ಹೊಂಡದಲ್ಲಿ ವಿದ್ಯುತ್​ ಸ್ಪರ್ಶಿಸಿ ಮೂವರು ಯುವಕರು ದುರ್ಮರಣ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯಲ್ಲಿ ಕೃಷಿ ಹೊಂಡದಲ್ಲಿ ವಿದ್ಯುತ್ ಆಘಾತದಿಂದ ಮೂವರು ಯುವಕರು ಮೃತಪಟ್ಟಿದ್ದಾರೆ. ಪಂಪ್ ಸೆಟ್ ರಿಪೇರಿ ಮಾಡುವಾಗ ವಿದ್ಯುತ್ ಆಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತರೆಲ್ಲರೂ ಮುಂತಕೆದಿರೇನಹಳ್ಳಿ ನಿವಾಸದ ಸಂಬಂಧಿಕರು ಎನ್ನಲಾಗಿದೆ.

ಬಿಸಿಲ ಬೇಗೆಗೆ ಬಿಲದಿಂದ ಹೊರಬರುತ್ತಿರುವ ಹಾವುಗಳು: ಚಿಕ್ಕಬಳ್ಳಾಪುರದಲ್ಲಿ 2 ತಿಂಗಳಲ್ಲಿ 85 ಜನಕ್ಕೆ ಕಚ್ಚಿರುವುದು ನಾಗರಹಾವುಗಳೇ

ಬಿಸಿಲ ಬೇಗೆಗೆ ಬಿಲದಿಂದ ಹೊರಬರುತ್ತಿರುವ ಹಾವುಗಳು: ಚಿಕ್ಕಬಳ್ಳಾಪುರದಲ್ಲಿ 2 ತಿಂಗಳಲ್ಲಿ 85 ಜನಕ್ಕೆ ಕಚ್ಚಿರುವುದು ನಾಗರಹಾವುಗಳೇ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೇಸಿಗೆಯ ಉಷ್ಣತೆಯಿಂದಾಗಿ ಹಾವುಗಳ ಕಾಟ ಹೆಚ್ಚಾಗಿದೆ. ಕಳೆದ ಎರಡು ತಿಂಗಳಲ್ಲಿ 85 ಜನರಿಗೆ ಹಾವು ಕಚ್ಚಿದ್ದು, ಕಳೆದ ಒಂದು ವರ್ಷದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಹಾವು ಕಚ್ಚುವಿಕೆಯಿಂದ ತಕ್ಷಣ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದೆ.