ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.
ದೇವಸ್ಥಾನದ ಜಾಗದಲ್ಲಿ ಚರ್ಚ್ ನಿರ್ಮಾಣ ಆರೋಪ: ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ನಿಷೇಧಾಜ್ಞೆ ಜಾರಿ!
Raichur News: ರಾಯಚೂರು ತಾಲೂಕಿನ ಬಿಚ್ಚಾಲಿ ಕ್ಯಾಂಪ್ನಲ್ಲಿ ದೇವಸ್ಥಾನಕ್ಕೆ ಮೀಸಲಾದ ಜಾಗದಲ್ಲಿ ಚರ್ಚ್ ನಿರ್ಮಿಸಲಾಗಿದೆ ಎಂಬ ಆರೋಪ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸದ್ಯ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Bhemesh Poojar
- Updated on: Aug 12, 2026
- 10:41 pm
ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿಗನ ಜೊತೆ ಸಂಪರ್ಕ: ರಾಯಚೂರಲ್ಲಿ ಯುವಕನ ಬಂಧನ
Raichur News: ಭಾರತದಲ್ಲಿ ಗಲಭೆ ಹಾಗೂ ಅಶಾಂತಿ ಸೃಷ್ಟಿಸಲು ಅರಬ್ ಮೂಲದ ವಿದೇಶಿ ವ್ಯಕ್ತಿಯೊಂದಿಗೆ ಸಂಪರ್ಕ ಸಾಧಿಸಿ ಪ್ರಚೋದನೆ ಪಡೆಯುತ್ತಿದ್ದ ಯುವಕನೊಬ್ಬನನ್ನು ರಾಯಚೂರಿನ ಸದರಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರಲು ಯತ್ನಿಸಿದ ಆರೋಪದಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Bhemesh Poojar
- Updated on: Aug 9, 2026
- 10:51 am
ಮಳೆ ಅಭಾವದಿಂದ ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಭೀಕರತೆ ಹೆಚ್ಚಿದೆ. ಮಳೆಯಿಲ್ಲದೆ ತುಂಗಭದ್ರಾ ನದಿ ಬತ್ತಿಹೋಗಿದ್ದು, ರಾಯಚೂರು, ಗದಗ, ಬೀದರ್ ಜಿಲ್ಲೆಗಳ ರೈತರು ಬೆಳೆಗಳನ್ನು ಕಿತ್ತೆಸೆಯುವಂತಾಗಿದೆ. ಮಂತ್ರಾಲಯದಲ್ಲಿ ಪುಣ್ಯಸ್ನಾನಕ್ಕೂ ನೀರಿಲ್ಲದೆ ಭಕ್ತರು ಪರದಾಡುತ್ತಿದ್ದಾರೆ. ಪ್ರಕೃತಿಯ ಈ ವೈಪರೀತ್ಯದಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.
- Bhemesh Poojar
- Updated on: Aug 4, 2026
- 9:38 pm
ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ಸಿಡಿದೆದ್ದ ರೈತರು; ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ!
ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯು 390 ಎಕರೆ ಜಮೀನಿಗೆ ಪರಿಹಾರ ನೀಡದೇ ರೈತರ ಗಮನಕ್ಕೆ ತರದೆ ಇಸಿ ದಾಖಲೆಗಳಲ್ಲಿ ಕಂಪನಿ ಹೆಸರು ನಮೂದಿಸಿದೆ ಎಂದು ರೈತರು ಆರೋಪಿಸಿದ್ದಾರೆ. ಇದರಿಂದ ಸಾಲ ಸೌಲಭ್ಯ ಹಾಗೂ ಬೆಳೆ ಪರಿಹಾರ ಸಿಗದೆ ತೊಂದರೆಗೊಳಗಾಗಿರುವ ಸಂತ್ರಸ್ತ ರೈತರು ಜಮೀನಿನ ದಾಖಲೆ ಸರಿಪಡಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.
- Bhemesh Poojar
- Updated on: Jul 31, 2026
- 12:31 pm
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
raichur news: ಮಂತ್ರಾಲಯ ಶ್ರೀಮಠದಲ್ಲಿ ಹೆಚ್ಚುತ್ತಿರುವ ಭಕ್ತರ ಅನುಕೂಲಕ್ಕಾಗಿ 50 ಕೋಟಿ ರೂ. ಹೆಚ್ಎಎಲ್ ಸಿಎಸ್ಆರ್ ವೆಚ್ಚದಲ್ಲಿ ತುಂಗಭದ್ರಾ ನದಿ ಆಧಾರಿತ 'ಇಂಪೌಂಡಿಂಗ್ ರಿಸರ್ವೈಯರ್' ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ 30 ವರ್ಷಗಳ ಕುಡಿಯುವ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಸಿಗಲಿದೆ.
- Bhemesh Poojar
- Updated on: Jul 30, 2026
- 4:01 pm
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ರಾಯಚೂರು ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟು ಬೆಳೆಗಳು ಒಣಗಿ ಹೋಗಿವೆ. ಸಾಲಬಾಧೆಯಿಂದ ಜನರು ಲಿಂಗಸೂರು ಸೇರಿದಂತೆ ಹಲವೆಡೆಗಳಿಂದ ಗುಳೆ ಹೊರಟಿದ್ದಾರೆ. ಬರಪೀಡಿತ ಪ್ರದೇಶವೆಂದು ಘೋಷಿಸಿ ಸಾಲಮನ್ನಾ, ಪರಿಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ರೈತರು ಹಾಗೂ ಶಾಸಕ ಮಾನಪ್ಪ ವಜ್ಜಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
- Bhemesh Poojar
- Updated on: Jul 28, 2026
- 9:08 am
ನಾನು ಬಾರ್ ಮುಂದೆ ನಿಂತು ಕುಡಿದು ತೂರಾಡೋದನ್ನ ನೋಡಿದ್ದಿರಾ? ಕುಡುಕ ಎಂದ ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಕುಡುಕ ಎನ್ನುವ ರೀತಿ ಕೆಪಿಸಿಸಿ ಅಧಿಕೃತ ಖಾತೆಯಿಂದ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಸಿಟಿ ರವಿ ಅವರು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಟಿ ರವಿ, ಆ ಪಕ್ಷದ ಅಧಿಕೃತ ಸೋಶಿಯಲ್ ಮಿಡಿಯಾದಲ್ಲಿ ಕುಡುಕ ಅಂತ ಹಾಕ್ತಾರೆ ಅಂದ್ರೆ, ಆ ಪಕ್ಷ ಚರಂಡಿ ನೀರಿಗಿಂತ ಕಡೆಯಾಗಿದೆ ಅನ್ನೋದಕ್ಕೆ ಸಾಕ್ಷಿ ಎಂದು ಕಿಡಿಕಾರಿದರು.
- Bhemesh Poojar
- Updated on: Jul 27, 2026
- 4:28 pm
ಕೈಕೊಟ್ಟ ಮಳೆರಾಯ: ಬಿಸಿಲುನಾಡಿನಲ್ಲಿ ಕಣ್ಣೀರ ಕಥೆ ಹೇಳುತ್ತಿವೆ ಬೀಗ ಹಾಕಿದ ಮನೆಗಳು!
Raichur Drought Crisis: ರಾಯಚೂರು ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬೆಳೆ ಸಂಪೂರ್ಣ ನಾಶವಾಗಿದೆ. ಮಾಡಿದ ಸಾಲ ತೀರಿಸಲಾಗದೆ ಸಾವಿರಾರು ಕುಟುಂಬಗಳು ಊರು ತೊರೆದು ಬೆಂಗಳೂರು, ಹೈದರಾಬಾದ್ನಂತಹ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೂ ಹೊಡೆತ ಬಿದ್ದಿದೆ.
- Bhemesh Poojar
- Updated on: Jul 24, 2026
- 5:19 pm
ಸರ್ಕಾರಿ ಶಾಲಾ ಶಿಕ್ಷಕರಿಗೆ ತಟ್ಟಿದ ಮೊಟ್ಟೆ ದರ ಏರಿಕೆ ಬಿಸಿ: ಸರ್ಕಾರ ನೀಡುವ ಹಣ ಹೆಚ್ಚಳಕ್ಕೆ ಮನವಿ
ಕರ್ನಾಟಕದಲ್ಲಿ ಮೊಟ್ಟೆ ದರ ಏರಿಕೆಯಿಂದ ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆಗೆ ತೊಂದರೆಯಾಗಿದೆ. ಸರ್ಕಾರ ಮೊಟ್ಟೆಗೆ 6 ರೂ ನೀಡುತ್ತಿದೆ. ಆದರೆ ಮಾರುಕಟ್ಟೆಯಲ್ಲಿ 8 ರಿಂದ 10 ರೂ. ರಷ್ಟಿದೆ. ಇದರಿಂದ ಮುಖ್ಯ ಶಿಕ್ಷಕರು ಸ್ವಂತ ಹಣದಿಂದ ಮೊಟ್ಟೆ ನೀಡುವಂತಾಗಿದೆ. ಹೀಗಾಗಿ, ಶಿಕ್ಷಕರು ಮೊಟ್ಟೆ ದರ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
- Bhemesh Poojar
- Updated on: Jul 23, 2026
- 7:14 pm
Raichur News: ರಾಯಚೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ತತ್ತರಿಸಿದ ಜನತೆ; 3 ವರ್ಷದ ಬಾಲಕಿಗೆ ಗಂಭೀರ ಗಾಯ!
ರಾಯಚೂರು ಜಿಲ್ಲೆಯಲ್ಲಿ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ ಮುಂದುವರಿದಿದ್ದು, ಮಾನ್ವಿಯಲ್ಲಿ 3 ವರ್ಷದ ಬಾಲಕಿ ಇನಾಯಾ ಕಣ್ಣು ಮತ್ತು ಎದೆ ಭಾಗಕ್ಕೆ ನಾಯಿ ಕಚ್ಚಿ ಗಂಭೀರ ಗಾಯಗೊಳಿಸಿದೆ. ರಾಯಚೂರು ನಗರದಲ್ಲೂ ವ್ಯಕ್ತಿಯೊಬ್ಬರಿಗೆ ನಾಯಿ ಕಡಿದಿದ್ದು, ಗಾಯಾಳುಗಳು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Bhemesh Poojar
- Updated on: Jul 22, 2026
- 11:20 am
ರಾಯಚೂರು, ಚಿತ್ರದುರ್ಗದಲ್ಲಿ ಮತ್ತೆ ಬೀದಿನಾಯಿಗಳ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ, ನಾಲ್ವರು ಮಕ್ಕಳಿಗೆ ಗಾಯ
Raichur, Chitradurga News: ರಾಯಚೂರಿನಲ್ಲಿ ಒಂದೂವರೆ ವರ್ಷದ ಬಾಲಕಿ ಸಾವಿನ ಘಟನೆ ಮಾಸುವ ಮುನ್ನವೇ ಮತ್ತೊಂದು ಬೀದಿನಾಯಿ ದಾಳಿ ನಡೆದಿದೆ. 4 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದರೆ, ಚಿತ್ರದುರ್ಗದಲ್ಲಿ ಒಂದೇ ದಿನ ನಾಲ್ವರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಆತಂಕ ಹೆಚ್ಚಿಸಿದೆ.
- Bhemesh Poojar
- Updated on: Jul 21, 2026
- 8:59 am
ಮುರಿದುಬಿದ್ದ ಸ್ಟೀಲ್ ಬ್ರಿಡ್ಜ್ ಸೇತುವೆ ಸರಳು: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ರಾಯಚೂರು ತಾಲೂಕಿನ (Raichur) ಗಿಲ್ಲೆಸುಗೂರು ಬಳಿ ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮಾರ್ಗದಲ್ಲಿ ತುಂಗಭದ್ರಾ ನದಿಗೆ (Tungabhadra River) ಅಡ್ಡಲಾಗಿ ನಿರ್ಮಿಸಿದ ಉಕ್ಕಿನ ಸೇತುವೆಯ (Steel Bridge) ಸರಳುಗಳು ತುಂಡಾಗಿವೆ. ಇದರಿಂದ ರಾಯಚೂರು – ಮಂತ್ರಾಲಯ ಮಾರ್ಗದಲ್ಲಿ ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಅದೃಷ್ಟವಶಾತ್, ಅದೃಷ್ಟವಶಾತ್ ಈ ಅವಘಡದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಂಧ್ರಪ್ರದೇಶದ ಮಾದಾವರಂ ಪೊಲೀಸರ ಭೇಟಿ, ಪರಿಶೀಲನೆ ಮಾಡಿದರು.
- Bhemesh Poojar
- Updated on: Jul 20, 2026
- 2:54 pm