AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮೇಶ್​​ ಪೂಜಾರ್

ಭೀಮೇಶ್​​ ಪೂಜಾರ್

ಜಿಲ್ಲಾ ವರದಿಗಾರ - TV9 Kannada

bheemesh.poojar@tv9.com

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಕೈಕೊಟ್ಟ ಮಳೆರಾಯ: ಬಿಸಿಲುನಾಡಿನಲ್ಲಿ ಕಣ್ಣೀರ ಕಥೆ ಹೇಳುತ್ತಿವೆ ಬೀಗ ಹಾಕಿದ ಮನೆಗಳು!

ಕೈಕೊಟ್ಟ ಮಳೆರಾಯ: ಬಿಸಿಲುನಾಡಿನಲ್ಲಿ ಕಣ್ಣೀರ ಕಥೆ ಹೇಳುತ್ತಿವೆ ಬೀಗ ಹಾಕಿದ ಮನೆಗಳು!

Raichur Drought Crisis: ರಾಯಚೂರು ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬೆಳೆ ಸಂಪೂರ್ಣ ನಾಶವಾಗಿದೆ. ಮಾಡಿದ ಸಾಲ ತೀರಿಸಲಾಗದೆ ಸಾವಿರಾರು ಕುಟುಂಬಗಳು ಊರು ತೊರೆದು ಬೆಂಗಳೂರು, ಹೈದರಾಬಾದ್‌ನಂತಹ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೂ ಹೊಡೆತ ಬಿದ್ದಿದೆ.

ಸರ್ಕಾರಿ ಶಾಲಾ ಶಿಕ್ಷಕರಿಗೆ ತಟ್ಟಿದ ಮೊಟ್ಟೆ ದರ ಏರಿಕೆ ಬಿಸಿ: ಸರ್ಕಾರ ನೀಡುವ ಹಣ ಹೆಚ್ಚಳಕ್ಕೆ ಮನವಿ

ಸರ್ಕಾರಿ ಶಾಲಾ ಶಿಕ್ಷಕರಿಗೆ ತಟ್ಟಿದ ಮೊಟ್ಟೆ ದರ ಏರಿಕೆ ಬಿಸಿ: ಸರ್ಕಾರ ನೀಡುವ ಹಣ ಹೆಚ್ಚಳಕ್ಕೆ ಮನವಿ

ಕರ್ನಾಟಕದಲ್ಲಿ ಮೊಟ್ಟೆ ದರ ಏರಿಕೆಯಿಂದ ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆಗೆ ತೊಂದರೆಯಾಗಿದೆ. ಸರ್ಕಾರ ಮೊಟ್ಟೆಗೆ 6 ರೂ ನೀಡುತ್ತಿದೆ. ಆದರೆ ಮಾರುಕಟ್ಟೆಯಲ್ಲಿ 8 ರಿಂದ 10 ರೂ. ರಷ್ಟಿದೆ. ಇದರಿಂದ ಮುಖ್ಯ ಶಿಕ್ಷಕರು ಸ್ವಂತ ಹಣದಿಂದ ಮೊಟ್ಟೆ ನೀಡುವಂತಾಗಿದೆ. ಹೀಗಾಗಿ, ಶಿಕ್ಷಕರು ಮೊಟ್ಟೆ ದರ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Raichur News: ರಾಯಚೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ತತ್ತರಿಸಿದ ಜನತೆ; 3 ವರ್ಷದ ಬಾಲಕಿಗೆ ಗಂಭೀರ ಗಾಯ!

Raichur News: ರಾಯಚೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ತತ್ತರಿಸಿದ ಜನತೆ; 3 ವರ್ಷದ ಬಾಲಕಿಗೆ ಗಂಭೀರ ಗಾಯ!

ರಾಯಚೂರು ಜಿಲ್ಲೆಯಲ್ಲಿ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ ಮುಂದುವರಿದಿದ್ದು, ಮಾನ್ವಿಯಲ್ಲಿ 3 ವರ್ಷದ ಬಾಲಕಿ ಇನಾಯಾ ಕಣ್ಣು ಮತ್ತು ಎದೆ ಭಾಗಕ್ಕೆ ನಾಯಿ ಕಚ್ಚಿ ಗಂಭೀರ ಗಾಯಗೊಳಿಸಿದೆ. ರಾಯಚೂರು ನಗರದಲ್ಲೂ ವ್ಯಕ್ತಿಯೊಬ್ಬರಿಗೆ ನಾಯಿ ಕಡಿದಿದ್ದು, ಗಾಯಾಳುಗಳು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರು, ಚಿತ್ರದುರ್ಗದಲ್ಲಿ ಮತ್ತೆ ಬೀದಿನಾಯಿಗಳ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ, ನಾಲ್ವರು ಮಕ್ಕಳಿಗೆ ಗಾಯ

ರಾಯಚೂರು, ಚಿತ್ರದುರ್ಗದಲ್ಲಿ ಮತ್ತೆ ಬೀದಿನಾಯಿಗಳ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ, ನಾಲ್ವರು ಮಕ್ಕಳಿಗೆ ಗಾಯ

Raichur, Chitradurga News: ರಾಯಚೂರಿನಲ್ಲಿ ಒಂದೂವರೆ ವರ್ಷದ ಬಾಲಕಿ ಸಾವಿನ ಘಟನೆ ಮಾಸುವ ಮುನ್ನವೇ ಮತ್ತೊಂದು ಬೀದಿನಾಯಿ ದಾಳಿ ನಡೆದಿದೆ. 4 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದರೆ, ಚಿತ್ರದುರ್ಗದಲ್ಲಿ ಒಂದೇ ದಿನ ನಾಲ್ವರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಆತಂಕ ಹೆಚ್ಚಿಸಿದೆ.

ಮುರಿದುಬಿದ್ದ ಸ್ಟೀಲ್ ಬ್ರಿಡ್ಜ್​​​​ ಸೇತುವೆ ಸರಳು: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌

ಮುರಿದುಬಿದ್ದ ಸ್ಟೀಲ್ ಬ್ರಿಡ್ಜ್​​​​ ಸೇತುವೆ ಸರಳು: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌

ರಾಯಚೂರು ತಾಲೂಕಿನ (Raichur) ಗಿಲ್ಲೆಸುಗೂರು ಬಳಿ ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮಾರ್ಗದಲ್ಲಿ ತುಂಗಭದ್ರಾ ನದಿಗೆ (Tungabhadra River) ಅಡ್ಡಲಾಗಿ ನಿರ್ಮಿಸಿದ ಉಕ್ಕಿನ ಸೇತುವೆಯ (Steel Bridge) ಸರಳುಗಳು ತುಂಡಾಗಿವೆ. ಇದರಿಂದ ರಾಯಚೂರು – ಮಂತ್ರಾಲಯ ಮಾರ್ಗದಲ್ಲಿ ಎರಡು ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಅದೃಷ್ಟವಶಾತ್, ಅದೃಷ್ಟವಶಾತ್ ಈ ಅವಘಡದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಂಧ್ರಪ್ರದೇಶದ ಮಾದಾವರಂ ಪೊಲೀಸರ ಭೇಟಿ, ಪರಿಶೀಲನೆ ಮಾಡಿದರು.

ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡ ವಿಧಿಸಿದ ಸಿಂಧನೂರು ನ್ಯಾಯಾಲಯ

ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡ ವಿಧಿಸಿದ ಸಿಂಧನೂರು ನ್ಯಾಯಾಲಯ

Raichur News: ಸಿಂಧನೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ನಕಲಿ ದಾಖಲೆಗಳ ಮೂಲಕ ಭಾರತದ ಪಾಸ್‌ಪೋರ್ಟ್ ಪಡೆದಿದ್ದ ಈತ ಇಮಿಗ್ರೇಷನ್ ವೇಳೆ ಸಿಕ್ಕಿಬಿದ್ದಿದ್ದ. ತಾನು ಭಾರತದ ಪ್ರಜೆ ಎಂದು ಸಾಬೀತು ಪಡಿಸಲು ಶೋರನಜೀತ್ ಚುನಾವಣಾ ಆಯೋಗದಿಂದ ಗುರುತಿನ ಚೀಟಿ, ಆಧಾರ್ ಕಾರ್ಡ, ಪಾನ್​​ ಕಾರ್ಡ್​​ ಜೊತೆಗೆ ಬ್ಯಾಂಕ್​​ ಆಫ್​​ ಬರೋಡದಲ್ಲಿ ಖಾತೆ ಹೊಂದಿದ್ದ ಎಂಬುದು ತನಿಖೆ ವೇಳೆ ಬಯಲಾಗಿತ್ತು.

ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್: ನಂಬರ್ ಪ್ಲೇಟ್, ಚೆಸ್ಸಿ ಅಳಿಸಿ ಮಾರಾಟ ದಂಧೆ

ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್: ನಂಬರ್ ಪ್ಲೇಟ್, ಚೆಸ್ಸಿ ಅಳಿಸಿ ಮಾರಾಟ ದಂಧೆ

ರಾಯಚೂರು ಪೊಲೀಸರು ಬೃಹತ್ ಬೈಕ್ ಕಳ್ಳತನ ಜಾಲವನ್ನು ಭೇದಿಸಿದ್ದಾರೆ. ಮಾಲ್‌ಗಳಿಂದ ಬೈಕ್ ಕದ್ದು, ಇಂಜಿನ್/ಚೆಸ್ಸಿ ನಂಬರ್‌ಗಳನ್ನು ಅಳಿಸಿ ಮಾರಾಟ ಮಾಡುತ್ತಿದ್ದ ಬೈಕ್ ಮೆಕ್ಯಾನಿಕ್ ಇಮ್ರಾನ್ ಹಾಗೂ ಆತನ ಸಹಚರ ಆಕಾಶ್‌ನನ್ನು ಬಂಧಿಸಲಾಗಿದೆ. ಒಂದು ದೂರಿನಿಂದ 18 ಬೈಕ್‌ಗಳನ್ನು ಪತ್ತೆ ಹಚ್ಚಿ, 17.3 ಲಕ್ಷ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳರು ಬೈಕ್‌ಗಳ ಗುರುತನ್ನು ಅಳಿಸಿ ಮಾರಾಟ ಮಾಡುತ್ತಿದ್ದರು. ಇದು ನಗರದ ಸುರಕ್ಷತೆಗೆ ಪ್ರಮುಖ ಯಶಸ್ಸು.

ಮಳೆಗಾಗಿ 50 ಕಿ.ಮೀ ಪಾದಯಾತ್ರೆ: ಕೃಷ್ಣ-ತುಂಗಭದ್ರಾ ನೀರಲ್ಲಿ ಜಲಾಭಿಷೇಕ, ಸಪ್ತ ಭಜನೆ

ಮಳೆಗಾಗಿ 50 ಕಿ.ಮೀ ಪಾದಯಾತ್ರೆ: ಕೃಷ್ಣ-ತುಂಗಭದ್ರಾ ನೀರಲ್ಲಿ ಜಲಾಭಿಷೇಕ, ಸಪ್ತ ಭಜನೆ

ರಾಯಚೂರಿನಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಬೆಳೆಗಳು ಒಣಗುತ್ತಿದ್ದು, ಮಳೆಗಾಗಿ ಗ್ರಾಮಸ್ಥರು ದೈವದ ಮೊರೆ ಹೋಗಿದ್ದಾರೆ. ಜಾಲಿಬೆಂಚಿ ಗ್ರಾಮದ ರೈತರು 50 ಕಿ.ಮೀ ದೂರದ ತುಂಗಭದ್ರಾ, ಕೃಷ್ಣಾ ನದಿಗಳಿಂದ ನೀರು ತಂದು ಜಲಾಭಿಷೇಕ ಮಾಡಿದ್ದಾರೆ. ಏಳು ದಿನಗಳ ಸಪ್ತ ಭಜನೆ, ವಿಶೇಷ ಪೂಜೆಗಳ ಮೂಲಕ ಉತ್ತಮ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ರಾಯಚೂರು PWD ಇಲಾಖೆಯಲ್ಲಿ ಭ್ರಷ್ಟಾಚಾರ: ಗುತ್ತಿಗೆ ಪಡೆಯಲು ನಕಲಿ ಪ್ರಮಾಣ ಪತ್ರ ನೀಡಿರುವುದು ಪತ್ತೆ

ರಾಯಚೂರು PWD ಇಲಾಖೆಯಲ್ಲಿ ಭ್ರಷ್ಟಾಚಾರ: ಗುತ್ತಿಗೆ ಪಡೆಯಲು ನಕಲಿ ಪ್ರಮಾಣ ಪತ್ರ ನೀಡಿರುವುದು ಪತ್ತೆ

ರಾಯಚೂರು ಪಿಡಬ್ಲೂಡಿ ಇಲಾಖೆಯಲ್ಲಿ 3.48 ಕೋಟಿ ರೂ. ಕಾಮಗಾರಿಗೆ ಸಂಬಂಧಿಸಿ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಗುತ್ತಿಗೆದಾರರು ನಕಲಿ ವರ್ಕ್ ಡನ್ ಪ್ರಮಾಣಪತ್ರ ಸಲ್ಲಿಸಿದ್ದು, ವಿಜಯಪುರ ರಾಷ್ಟ್ರೀಯ ಹೆದ್ದಾರಿ ವಿಭಾಗ ಮೊದಲು ದೃಢಪಡಿಸಿ, ನಂತರ ನಕಲಿ ಎಂದು ಉಲ್ಟಾ ಹೊಡೆದಿದೆ. ಪಿಡಬ್ಲೂಡಿ ಟೆಂಡರ್ ಸ್ಥಗಿತಗೊಳಿಸಿ ಗುತ್ತಿಗೆದಾರನನ್ನು ಬ್ಲಾಕ್‌ಲಿಸ್ಟ್​ಗೆ ಸೇರಿಸಲು ಮುಂದಾಗಿದೆ.

ಚಿಕಿತ್ಸೆ ಪಡೆದ್ರೂ ಮಕ್ಕಳಾಗಿಲ್ಲ: ರಾಯಚೂರು ಖಾಸಗಿ ಐವಿಎಫ್ ಮಾಫಿಯಾ ಬಯಲು

ಚಿಕಿತ್ಸೆ ಪಡೆದ್ರೂ ಮಕ್ಕಳಾಗಿಲ್ಲ: ರಾಯಚೂರು ಖಾಸಗಿ ಐವಿಎಫ್ ಮಾಫಿಯಾ ಬಯಲು

ರಾಯಚೂರಿನ ಖಾಸಗಿ ಐವಿಎಫ್ ಆಸ್ಪತ್ರೆ ವಿರುದ್ಧ ರೋಗಿಗಳು ವಂಚನೆ ಆರೋಪ ಮಾಡಿದ್ದಾರೆ. 100% ಯಶಸ್ಸಿನ ಭರವಸೆ ನೀಡಿ ಲಕ್ಷಾಂತರ ಹಣ ವಸೂಲಿ ಮಾಡಿದ್ದು, ಆದರೆ ಫಲಿತಾಂಶ ನೀಡಲಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ. ಆದರೆ ಆಸ್ಪತ್ರೆ ಮಾತ್ರ ಈ ಆರೋಪಗಳನ್ನು ತಳ್ಳಿಹಾಕಿದೆ. ಜಿಲ್ಲಾ ಆರೋಗ್ಯ ಅಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ರಾಯಚೂರು PWD ಇಲಾಖೆಯಲ್ಲಿ ಭ್ರಷ್ಟಾಚಾರ: ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ಕೋಟ್ಯಂತರ ರೂ ಲೂಟಿ

ರಾಯಚೂರು PWD ಇಲಾಖೆಯಲ್ಲಿ ಭ್ರಷ್ಟಾಚಾರ: ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ಕೋಟ್ಯಂತರ ರೂ ಲೂಟಿ

ರಾಯಚೂರಿನ ಲೋಕೋಪಯೋಗಿ ಇಲಾಖೆಯಲ್ಲಿ ಬೃಹತ್ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಮಸ್ಕಿ-ಲಿಂಗಸುಗೂರು ರಸ್ತೆ ಕಾಮಗಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ ಎತ್ತುವಳಿ ಮಾಡಲಾಗಿದೆ ಎನ್ನಲಾಗಿದೆ. ಅದರಲ್ಲೂ ಪಿಡಬ್ಲ್ಯುಡಿ ಇಇ ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ಲೂಟಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ರಾಯಚೂರು: ಏಕಾಏಕಿ ಕುಸಿದ ಕಟ್ಟಡ​​ದ ಗೋಡೆ; ನಾಲ್ವರ ಪೈಕಿ ಇಬ್ಬರು ಸಾವು

ರಾಯಚೂರು: ಏಕಾಏಕಿ ಕುಸಿದ ಕಟ್ಟಡ​​ದ ಗೋಡೆ; ನಾಲ್ವರ ಪೈಕಿ ಇಬ್ಬರು ಸಾವು

ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟಡ ಕುಸಿದು ಭಾರೀ ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ದೇವದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ನಡೆಸಿದ್ದಾರೆ.