AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮೇಶ್​​ ಪೂಜಾರ್

ಭೀಮೇಶ್​​ ಪೂಜಾರ್

ಜಿಲ್ಲಾ ವರದಿಗಾರ - TV9 Kannada

bheemesh.poojar@tv9.com

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ರಾಯಚೂರು: ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು

ರಾಯಚೂರು: ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು

ರಾಯಚೂರು ತಾಲ್ಲೂಕಿನ ವಿಜಯನಗರ ಕ್ಯಾಂಪ್‌ನಲ್ಲಿರುವ ಸರ್ಕಾರಿ ಶಾಲೆ ಶಿಥಿಲಾವಸ್ಥೆಗೆ ತಲುಪಿದೆ. 2002ರಲ್ಲಿ ನಿರ್ಮಾಣಗೊಂಡ ಕಟ್ಟಡದ ಮೇಲ್ಛಾವಣಿ ಕುಸಿಯುತ್ತಿದ್ದು, ಜೀವಭಯದಲ್ಲೇ ಮಕ್ಕಳು ಪಾಠ ಕಲಿಯುವಂತಾಗಿದೆ. ಮಳೆಗಾಲದಲ್ಲಿ ನೀರು ಸೋರುತ್ತಿರುವುದರಿಂದ ಶಿಕ್ಷಕರು ಮಕ್ಕಳನ್ನು ಮರದ ಕೆಳಗೆ ಕೂರಿಸಿ ಪಾಠ ಹೇಳುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಹೊಸ ಕಟ್ಟಡ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.

ಮಂತ್ರಾಲಯದಲ್ಲಿ ವರುಣನ ಅಬ್ಬರಕ್ಕೆ ಭಕ್ತರು ಕಂಗಾಲು: ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೂ ಪರದಾಟ

ಮಂತ್ರಾಲಯದಲ್ಲಿ ವರುಣನ ಅಬ್ಬರಕ್ಕೆ ಭಕ್ತರು ಕಂಗಾಲು: ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೂ ಪರದಾಟ

ಮಂತ್ರಾಲಯದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರಾಯರ ಮಠದ ಸುತ್ತಮುತ್ತ ನೀರು ತುಂಬಿಕೊಂಡಿದೆ. ಮಳೆನೀರಿನ ರಭಸಕ್ಕೆ ಭಕ್ತರು ಅಚ್ಚರಿಗೊಂಡರೂ, ಹರಿಯುವ ನೀರಿನಲ್ಲೇ ತೆರಳಿ ರಾಯರ ದರ್ಶನ ಪಡೆದಿದ್ದಾರೆ. ಭಕ್ತರ ಅನುಕೂಲಕ್ಕಾಗಿ ಶ್ರೀಮಠವು ಅಗತ್ಯ ಕ್ರಮಗಳನ್ನು ಕೈಗೊಂಡಿತ್ತಾದರೂ, ಸುರಿದ ಭಾರೀ ಮಳೆಯು ತಾತ್ಕಾಲಿಕ ಅಡಚಣೆ ಉಂಟುಮಾಡಿದೆ.

ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು, ಮನೆಗಳಿಗೆ ನುಗ್ಗಿದ ಚರಂಡಿ ನೀರು!

ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು, ಮನೆಗಳಿಗೆ ನುಗ್ಗಿದ ಚರಂಡಿ ನೀರು!

ಜಿಲ್ಲೆಯಾದ್ಯಂತ ಬೆಳ್ಳಂಬೆಳಿಗ್ಗೆ ಆರಂಭವಾದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಒಂದೇ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರು ತಾಲೂಕಿನ ಇಡಪನೂರಿನಲ್ಲಿ ಹಳ್ಳದ ನೀರು ಕಿರು ಸೇತುವೆ ಮೇಲೆ ಹರಿದಿದ್ದರಿಂದ ಮೀರಾಪುರ ಹಾಗೂ ಯರಗೇರಾ ಮಾರ್ಗದ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿನಿತ್ಯ ಭಕ್ತ ಸಾಗರ: ವಸತಿಗೂ ಪರದಾಟ

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿನಿತ್ಯ ಭಕ್ತ ಸಾಗರ: ವಸತಿಗೂ ಪರದಾಟ

ಮಂತ್ರಾಲಯದಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ವಸತಿಗೃಹಗಳು ಪ್ರತಿನಿತ್ಯ ಭರ್ತಿಯಾಗುತ್ತಿವೆ. ಮಠದಿಂದ ಭಕ್ತರಿಗಾಗಿ ಕಲ್ಯಾಣ ಮಂಟಪಗಳಲ್ಲಿ ಮಾಡಿರುವ ವ್ಯವಸ್ಥೆಯೂ ಸಾಲದಂತಾಗಿದೆ ಹೀಗಾಗಿ ವಸತಿ ಸಿಗದೆ ವೃದ್ಧರು ಮಕ್ಕಳೆನ್ನದೆ ಭಕ್ತರು ಮಠದ ಪ್ರಾಂಗಣದಲ್ಲೇ ಮಲಗುತ್ತಿದ್ದರೆ, ಇತ್ತ ಖಾಸಗಿ ಲಾಡ್ಜ್‌ಗಳ ಮಾಲೀಕರು ಸುಲಿಗೆಗೆ ಇಳಿದಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ರಾಯಚೂರಲ್ಲಿ ಆರ್‌ಟಿಒ ಸಿಬ್ಬಂದಿ ಗೂಂಡಾಗಿರಿ: 500 ರೂ. ಲಂಚ ಪಡೆಯುತ್ತಿದ್ದ ವಿಡಿಯೋ ಮಾಡಿದ್ದಕ್ಕೆ ಚಾಲಕನಿಗೆ ಧರ್ಮದೇಟು

ರಾಯಚೂರಲ್ಲಿ ಆರ್‌ಟಿಒ ಸಿಬ್ಬಂದಿ ಗೂಂಡಾಗಿರಿ: 500 ರೂ. ಲಂಚ ಪಡೆಯುತ್ತಿದ್ದ ವಿಡಿಯೋ ಮಾಡಿದ್ದಕ್ಕೆ ಚಾಲಕನಿಗೆ ಧರ್ಮದೇಟು

ರಾಯಚೂರು RTO ಸಿಬ್ಬಂದಿಯ ಲಂಚಾವತಾರ ಮತ್ತು ದಬ್ಬಾಳಿಕೆ ಮಿತಿಮೀರಿದೆ. ಸಿರವಾರ ಬಳಿ ಲಾರಿ ಚಾಲಕನಿಂದ ಲಂಚ ಪಡೆಯಲು ಯತ್ನಿಸಿ ಹಲ್ಲೆ ನಡೆಸಿದಲ್ಲದೆ, ಕೀ ಕಸಿದುಕೊಂಡಿದ್ದರಿಂದ ಹೆದ್ದಾರಿಯಲ್ಲಿ 3 ಗಂಟೆಗಳ ಕಾಲ ಭಾರಿ ಸಂಚಾರ ದಟ್ಟಣೆ ಉಂಟಾಯಿತು. ಈ ಘಟನೆ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದಂತಾಗಿದ್ದು, RTO ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ರಾಯಚೂರು ಜನತೆ ಆಗ್ರಹಿಸಿದ್ದಾರೆ.

ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ, ಉರುಳು ಸೇವೆ

ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ, ಉರುಳು ಸೇವೆ

ರಾಯಚೂರು ಜಿಲ್ಲೆ ಸಿಂಧನೂರು ಕ್ಷೇತ್ರದ ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಇನ್ನು  ಹಂಪನಗೌಡ ಬಾದರ್ಲಿಗೆ ಮತ್ರಿ ಸ್ಥಾನ ಕರುಣಿಸಲಿ ಎಂದು ಅವರ ಅಭಿಮಾನಿಗಳು, ಗಾಳಿ ದುರ್ಗಮ್ಮ ದೇವಸ್ಥಾನದವರೆಗೆ ಪಾದಯಾತ್ರೆ ನಡೆಸಿದ್ದು, ತಮ್ಮ ನಾಯಕನಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆ ಗಾಳಿ ದುರ್ಗಮ್ಮಗೆ 101 ತೆಂಗಿನಕಾಯಿ ಒಡೆದ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ. ಇನ್ನು ಈ ಬಗ್ಗೆ ನಮ್ಮ ರಾಯಚೂರು ಜಿಲ್ಲಾ ಪ್ರತಿನಿಧಿ ಭೀಮೇಶ್ ನೀಡಿರೋ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.

ಪ್ರಿಯಾಂಕ ಖರ್ಗೆ ಅವರೇ ಇದು ಸರಿಯಲ್ಲ: ‘ನಾನು ಬಂದಿರೋದು ಮಂತ್ರಾಲಯಕ್ಕೆ, ನೀವ್ಯಾಕೆ ತಡೀತಿದ್ದೀರಿ?’: ಪುನೀತ್ ಕೆರೆಹಳ್ಳಿ ಗರಂ

ಪ್ರಿಯಾಂಕ ಖರ್ಗೆ ಅವರೇ ಇದು ಸರಿಯಲ್ಲ: ‘ನಾನು ಬಂದಿರೋದು ಮಂತ್ರಾಲಯಕ್ಕೆ, ನೀವ್ಯಾಕೆ ತಡೀತಿದ್ದೀರಿ?’: ಪುನೀತ್ ಕೆರೆಹಳ್ಳಿ ಗರಂ

ರಾಯಚೂರಿನ ಹಟ್ಟಿ ಪಟ್ಟಣದಲ್ಲಿ ನಡೆಯಲಿರುವ ಹಿಂದೂ ಮಹೋತ್ಸವ ಸಮಾರಂಭಕ್ಕೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಪ್ರವೇಶಿಸದಂತೆ ರಾಯಚೂರು ಜಿಲ್ಲಾ ಪೊಲೀಸರು ನಿರ್ಬಂಧ ಹೇರಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮಂತ್ರಾಲಯದಲ್ಲಿ ಅವರನ್ನು ತಡೆದು ನೋಟಿಸ್ ನೀಡಲಾಗಿದೆ. ರಾಯಚೂರು ಪೊಲೀಸರ ನಡೆಗೆ ಪುನೀತ್ ಕೆರೆಹಳ್ಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇದು ಹೈಡ್ರಾಮಾಗೆ ಕಾರಣವಾಗಿದೆ.

ಫೋನ್ ಪೇನಲ್ಲಿ ಹಣ ಪಡೆದು ಕ್ಯಾಶ್ ಕೊಡುವ ಮುನ್ನ ಎಚ್ಚರ! ನಿಮ್ಮ ಖಾತೆಯನ್ನೇ ಖಾಲಿ ಮಾಡ್ತಾರೆ ವಂಚಕರು

ಫೋನ್ ಪೇನಲ್ಲಿ ಹಣ ಪಡೆದು ಕ್ಯಾಶ್ ಕೊಡುವ ಮುನ್ನ ಎಚ್ಚರ! ನಿಮ್ಮ ಖಾತೆಯನ್ನೇ ಖಾಲಿ ಮಾಡ್ತಾರೆ ವಂಚಕರು

ರಾಯಚೂರು ಜಿಲ್ಲೆಯ ಅರಕೇರಾದಲ್ಲಿ ಕದ್ದ ಮೊಬೈಲ್ ಮೂಲಕ ಸಿಎಸ್‌ಸಿ ಕೇಂದ್ರಗಳಲ್ಲಿ 2.5 ಲಕ್ಷ ರೂ. ಫೋನ್ ಪೇ ಮಾಡಿಸಿಕೊಂಡು ನಗದು ಪಡೆದ ವಂಚನೆ ಬೆಳಕಿಗೆ ಬಂದಿದೆ. 'ಮೆಡಿಕಲ್ ಎಮರ್ಜನ್ಸಿ' ಎಂದು ಸುಳ್ಳು ಹೇಳಿದ ಕಳ್ಳರ ಮಾತು ನಂಬಿ ನಗದು ನೀಡಿದ ಮಲ್ಲಿಕಾರ್ಜುನ ಹಾಗೂ ಮಹಾಂತೇಶ್ ತಂಡದ ಬ್ಯಾಂಕ್ ಖಾತೆಗಳನ್ನು ಪೊಲೀಸರು ಫ್ರೀಜ್ ಮಾಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಬಡ ಮಕ್ಕಳ ಹೊಟ್ಟೆಮೇಲೆ ಹೊಡೆದ ವಾರ್ಡನ್; 3 ದಿನ ಅನ್ನ-ನೀರಿಲ್ಲದೆ ಪಕ್ಕದ ಹಾಸ್ಟೆಲ್‌ನಲ್ಲಿ ಕೈಚಾಚಿದ ವಿದ್ಯಾರ್ಥಿಗಳು!

ಬಡ ಮಕ್ಕಳ ಹೊಟ್ಟೆಮೇಲೆ ಹೊಡೆದ ವಾರ್ಡನ್; 3 ದಿನ ಅನ್ನ-ನೀರಿಲ್ಲದೆ ಪಕ್ಕದ ಹಾಸ್ಟೆಲ್‌ನಲ್ಲಿ ಕೈಚಾಚಿದ ವಿದ್ಯಾರ್ಥಿಗಳು!

ರಾಯಚೂರಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ಬಡ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಸಿವಿನ ನೋವು ತಾಳಲಾರದೆ ಪಕ್ಕದ ಹಾಸ್ಟೆಲ್‌ನಲ್ಲಿ ಅನ್ನ ಕೇಳಿ ಪಡೆದ ನೌಕರರು, ಕೊನೆಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬೇಜವಾಬ್ದಾರಿಯಿಂದ ವರ್ತಿಸಿದ ವಾರ್ಡನ್ ಮೆಹಬೂಬ್‌ನನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ: ರಾಯಚೂರಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ!

ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ: ರಾಯಚೂರಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ!

KPS ಮ್ಯಾಗ್ನೆಟ್ ಶಾಲಾ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ರಾಯಚೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅರ್ಧಕ್ಕರ್ಧ ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವದ ನಡುವೆಯೂ ಶಾಲೆಗಳನ್ನು ಮುಚ್ಚುವ ಸರ್ಕಾರದ ನಡೆಯಿಂದ 100ಕ್ಕೂ ಹೆಚ್ಚು ಶಾಲೆಗಳು ಅಪಾಯದಲ್ಲಿವೆ. ಬಡ ವಿದ್ಯಾರ್ಥಿಗಳ ಭವಿಷ್ಯದ ಆತಂಕದಿಂದ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ, ಶಾಲೆ ಉಳಿಸಿ ಎಂದು ಆಗ್ರಹಿಸಿವೆ.

‘ಅಂದೇ ಹೇಳಿದ್ವಿ ಡಿ. ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ’: ಪಂಚಮುಖಿ ಆಂಜನೇಯ ದೇವಸ್ಥಾನದ ಅರ್ಚಕರ ಸಂತಸ

‘ಅಂದೇ ಹೇಳಿದ್ವಿ ಡಿ. ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ’: ಪಂಚಮುಖಿ ಆಂಜನೇಯ ದೇವಸ್ಥಾನದ ಅರ್ಚಕರ ಸಂತಸ

ರಾಯಚೂರಿನ ಪ್ರಸಿದ್ಧ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಈ ಹಿಂದೆ ವಿಶೇಷ ಪೂಜೆ ಸಲ್ಲಿಸಿದ್ದ ನಾಲ್ವರು ನಾಯಕರು ಸಿಎಂ ಆಗಿದ್ದರು. ಇದೀಗ ಅಕ್ಟೋಬರ್ 2025 ರಲ್ಲಿ ಇಲ್ಲಿಗೆ ಭೇಟಿ ನೀಡಿ ಮಧು ಅಭಿಷೇಕ ಮಾಡಿಸಿದ್ದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ೫ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವ್ರು ಸಿಎಂ ಆಗೇ ಆಗ್ತಾರೆ ಎಂದು ಅಂದೇ ಭವಿಷ್ಯ ನುಡಿದಿದ್ದ ಅರ್ಚಕ ಶಾಮಾಚಾರ್ಯರು ಸಂತಸ ಹಂಚಿಕೊಂಡಿದ್ದಾರೆ.

ಮಂತ್ರಾಲಯದ ಬಳಿ ಘೋರ ದುರಂತ: ತುಂಗಭದ್ರಾ ನದಿಗೆ ಈಜಲು ಹೋದ ಐವರು ನೀರುಪಾಲು

ಮಂತ್ರಾಲಯದ ಬಳಿ ಘೋರ ದುರಂತ: ತುಂಗಭದ್ರಾ ನದಿಗೆ ಈಜಲು ಹೋದ ಐವರು ನೀರುಪಾಲು

ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಯಲ್ಲಿನ ಸತ್ಯನಾರಾಯಣ ಪೂಜೆಗೆಂದು ಬಂದಿದ್ದವರು, ಕಾರ್ಯಕ್ರಮದ ಬಳಿಕ ಈಜಲೆಂದು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ನದಿಯ ನೀರಿನ ಆ ತಿಳಿಯದೆ ಈಜಲು ಹೋಗಿ ಜಲಸಮಾಧಿಯಾಗಿದ್ದಾರೆ. ಅದೃಷ್ಟವಶಾತ್​​ ಓರ್ವ ಯುವತಿ ಪ್ರಾಣಾಪಾಯದಿಂದ ಬಚಾವ್​​ ಆಗಿದ್ದಾರೆ.

ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ