ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.
ಕೆಲಸ ಮಾಡುತ್ತಲೇ ಸಾವನ್ನಪ್ಪಿದ ಉದ್ಯೋಗ ಖಾತ್ರಿ ಕಾರ್ಮಿಕ: ರಾಯಚೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಬಯಲು ಮಾಡಿದ ಟಿವಿ9 ರಿಯಾಲಿಟಿ ಚೆಕ್!
ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ.
- Bhemesh Poojar
- Updated on: Apr 29, 2026
- 2:56 pm
ಉದ್ಯೋಗ ಖಾತ್ರಿ ಕೆಲಸದ ವೇಳೆ ದುರ್ಘಟನೆ: ಬೆಂಕಿಯಂಥ ಬಿಸಿಲಿಗೆ ಬಲಿಯಾದ್ನಾ ಕಾರ್ಮಿಕ?
ರಾಯಚೂರಿನಲ್ಲಿ ಉದ್ಯೋಗ ಖಾತ್ರಿ ಕಾರ್ಮಿಕರೊಬ್ಬರು ಸುಡು ಬಿಸಿಲಿನಲ್ಲಿ ಕೆಲಸ ಮಾಡುವಾಗ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇದು ಹೀಟ್ ಸ್ಟ್ರೋಕ್ನಿಂದ ಆಗಿರುವ ದುರಂತ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕೆಲಸದ ಸ್ಥಳದಲ್ಲಿ ನೀರಿನ ವ್ಯವಸ್ಥೆ, ನೆರಳು ಸೇರಿದಂತೆ ಕನಿಷ್ಠ ಮುಂಜಾಗ್ರತಾ ಕ್ರಮಗಳಿಲ್ಲದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಲಾಗಿದೆ.
- Bhemesh Poojar
- Updated on: Apr 28, 2026
- 7:50 pm
ಹೆರಿಗೆಗೂ ಮೊದಲೇ ಮೃತಪಟ್ಟ ಹಸುಗೂಸು: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಪುಟ್ಟ ಜೀವ?
ರಾಯಚೂರಿನ ಸಿಂಧನೂರು ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಆಸ್ಪತ್ರೆ ಆಡಳಿತ ಮಗುವಿನ ಸ್ಥಿತಿ ಗಂಭೀರವಾಗಿತ್ತು, ಶಕ್ತಿ ಮೀರಿ ಪ್ರಯತ್ನ ಮಾಡಿದರೂ ಜೀವ ಉಳಿಸಲು ಆಗಲಿಲ್ಲ ಎಂದು ಸ್ಪಷ್ಟನೆ ನೀಡಿದೆ. ಇಂತಹದೇ ಘಟನೆ ಹಾವೇರಿಯಲ್ಲೂ ವರದಿಯಾಗಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣಗಳ ತನಿಖೆಗೆ ಆಗ್ರಹಿಸಲಾಗಿದೆ.
- Bhemesh Poojar
- Updated on: Apr 28, 2026
- 3:57 pm
ಉದ್ಯೋಗ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ! ಮಹಿಳೆಯರನ್ನ ದಂಧೆಗೆ ಇಳಿಸ್ತಿದ್ದ ಕಿಂಗ್ ಪಿನ್ ಸೇರಿ 11 ಜನ ಅರೆಸ್ಟ್
ರಾಯಚೂರಿನ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಜಮೀನಿನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಉದ್ಯೋಗದ ನೆಪದಲ್ಲಿ ಮಹಿಳೆಯರನ್ನು ದಂಧೆಗೆ ತಳ್ಳುತ್ತಿದ್ದ ಕಿಂಗ್ಪಿನ್ ತಾಯಪ್ಪ ಸೇರಿ 11 ಮಂದಿಯನ್ನು ಬಂಧಿಸಿ, ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.
- Bhemesh Poojar
- Updated on: Apr 28, 2026
- 9:06 am
ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಸಿಕ್ತು ಗುಡ್ ನ್ಯೂಸ್!
ರಾಯಚೂರು ಜಿಲ್ಲೆಯ ರಾಜೇಶ್ ನಾಯಕ್ ಎಂಬ ಯುವಕನ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಪತ್ರ ಕಳುಹಿಸಿದ್ದಾರೆ. ಸಾಮಾನ್ಯ ಪ್ರಜೆಯ ಆಹ್ವಾನಕ್ಕೆ ಸ್ಪಂದಿಸಿದ ಪ್ರಧಾನಿಗಳ ನಡೆಗೆ ವಧೂವರರ ಕುಟುಂಬದವರು ಕೃತಜ್ಞತೆ ವ್ಯಕ್ತಪಡಿಸಿದ್ದು, ಜಿಲ್ಲೆಯಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನವಜೋಡಿಯ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.
- Bhemesh Poojar
- Updated on: Apr 27, 2026
- 9:12 am
10 ವರ್ಷಗಳ ಪ್ರೀತಿ, ಹತ್ತಾರು ಬಾರಿ ದೈಹಿಕ ಸಂಬಂಧ: ಈಗ ಮದುವೆ ಮಾತು ಬಂದಾಗ ಯುವಕನಿಂದ ಕೊಲೆ ಬೆದರಿಕೆ
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಪ್ರೀತಿ ಹೆಸರಿನಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಯುವಕನೊಬ್ಬ 10 ವರ್ಷ ಪ್ರೀತಿಸಿ, ಮದುವೆ ಭರವಸೆ ನೀಡಿ ದೈಹಿಕ ಸಂಬಂಧ ಹೊಂದಿದ್ದ. ಇದೀಗ ಬೇರೊಬ್ಬರನ್ನು ಮದುವೆಯಾಗಲು ಸಿದ್ಧನಾಗಿದ್ದು, ಸಂತ್ರಸ್ತ ಯುವತಿ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರೀತಿ ದೋಖಾ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ.
- Bhemesh Poojar
- Updated on: Apr 26, 2026
- 2:45 pm
ಲಿಂಬೆಹಣ್ಣಿನ ಶರಬತ್ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ! ಶರಬತ್ ಸೇಂದಿ ನೋಡಿ ಪೊಲೀಸರೇ ಶಾಕ್
ರಾಯಚೂರಿನಲ್ಲಿ ಅಬಕಾರಿ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಅಕ್ರಮ ಸೇಂದಿ ದಂಧೆ ಮೇಲೆ ದಾಳಿ ನಡೆಸಿದ್ದಾರೆ. ನರಸಿಂಹಲು ಅಲಿಯಾಸ್ ಬ್ರೂಸ್ ಲೀ ಎಂಬಾತ ಪ್ರಮುಖ ಆರೋಪಿಯಾಗಿದ್ದು, ಆತನ ವಿರುದ್ಧ 40ಕ್ಕೂ ಹೆಚ್ಚು ಪ್ರಕರಣಗಳಿವೆ. ಸಿಎಚ್ ಪೌಡರ್ ಮತ್ತು ಅಲ್ಪಜೋಲಂ ಮಿಶ್ರಿತ ಸೇಂದಿ ಮಾರಾಟ ಮಾಡಲಾಗುತ್ತಿದ್ದು, ಸಾರ್ವಜನಿಕರ ಆರೋಗ್ಯಕ್ಕೆ ಅಪಾಯಕಾರಿ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
- Bhemesh Poojar
- Updated on: Apr 25, 2026
- 9:52 am
‘ನಿಮ್ಮ ಕಾಲುಗಳು ಎಷ್ಟು ಸುಂದರ‘: ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯೊಂದಿಗೆ ಆಸ್ಪತ್ರೆ ಸಿಬ್ಬಂದಿ ಅಸಭ್ಯ ವರ್ತನೆ
ರಾಯಚೂರಿನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಚಿಕಿತ್ಸೆಗೆ ದಾಖಲಾದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಸಂತ್ರಸ್ತೆ ಸಹೋದರಿ ಆತನಿಗೆ ಸಾರ್ವಜನಿಕವಾಗಿ ಥಳಿಸಿದ ವಿಡಿಯೋ ವೈರಲ್ ಆಗಿತ್ತು. ಇನ್ನು ಸಂತ್ರಸ್ತೆ ಸಾಮಾಜಿಕ ಜಾಲತಾಣದಲ್ಲಿ ಧೈರ್ಯವಾಗಿ ವಿಷಯ ಬಹಿರಂಗಪಡಿಸಿದ್ದು, ನೆಟ್ಟಿಗರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಆರೋಪಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
- Bhemesh Poojar
- Updated on: Apr 24, 2026
- 9:42 pm
ರಾಯಚೂರು: ಬಿಸಿಲ ಝಳಕ್ಕೆ ಪೊಲೀಸ್ ಶ್ವಾನಗಳು ಕಂಗಾಲು: ಏರ್ ಕೂಲರ್ ವ್ಯವಸ್ಥೆ ಮಾಡಿ ಮಕ್ಕಳಂತೆ ಆರೈಕೆ ಮಾಡ್ತಿರುವ ಸಿಬ್ಬಂದಿ
ರಾಯಚೂರಿನಲ್ಲಿ ಹೆಚ್ಚಿದ ತಾಪಮಾನದಿಂದ ಪೊಲೀಸ್ ಶ್ವಾನಗಳು ಬಳಲುತ್ತಿವೆ. ಅವುಗಳ ಆರೋಗ್ಯ ರಕ್ಷಣೆಗೆ ಜಿಲ್ಲಾ ಪೊಲೀಸ್ ಇಲಾಖೆ ಏರ್ ಕೂಲರ್, ಫ್ಯಾನ್ ವ್ಯವಸ್ಥೆ ಮಾಡಿದೆ. ಪ್ರತಿನಿತ್ಯ ಮೊಸರು, ಮಜ್ಜಿಗೆ, ಎಳನೀರು, ತಂಪಾದ ನೀರು ನೀಡಲಾಗುತ್ತಿದ್ದು, ಮಾಸಿಕ ಪಶುವೈದ್ಯಕೀಯ ತಪಾಸಣೆ ಹಾಗೂ ಲಸಿಕೆ ನೀಡಲಾಗುತ್ತಿದೆ. ಶ್ವಾನಗಳ ಆರೈಕೆಗೆ ಸಿಬ್ಬಂದಿ ವಿಶೇಷ ಕಾಳಜಿ ವಹಿಸಿದ್ದಾರೆ.
- Bhemesh Poojar
- Updated on: Apr 24, 2026
- 2:07 pm
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ ಕೆಕೆಆರ್ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ
ರಾಯಚೂರು ಜಿಲ್ಲೆಯ ಸುಣಕಲ್ ಬಳಿ ನಾಲತವಾಡದಿಂದ ಲಿಂಗಸಗೂರಿಗೆ ಬರುತ್ತಿದ್ದ ಕೆಕೆಆರ್ಟಿಸಿ ಬಸ್ ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾಗಿದೆ. ಬಸ್ನಲ್ಲಿದ್ದ 40 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬದುಕುಳಿದಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಚಾಲಕನ ಚಾಣಾಕ್ಷತನಕ್ಕೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಸ್ ಪಲ್ಟಿಯಾದ ವಿಡಿಯೋ ಇಲ್ಲಿದೆ ನೋಡಿ.
- Bhemesh Poojar
- Updated on: Apr 23, 2026
- 10:34 am
ಹೀಟ್ ವೇವ್ಗೆ ತತ್ತರಿಸಿದ ರಾಯಚೂರು: ಹೈ ಅಲರ್ಟ್ ಘೋಷಣೆ, ರಿಮ್ಸ್ನಲ್ಲಿ ಹೈಟೆಕ್ ವಾರ್ಡ್ ಸಿದ್ಧ
ರಾಯಚೂರಿನಲ್ಲಿ ಹೆಚ್ಚಿದ ಬಿಸಿಗಾಳಿ ಮತ್ತು 42 ಡಿಗ್ರಿ ಸೆಲ್ಸಿಯಸ್ ತಾಪಮಾನ ಹಿನ್ನೆಲೆ ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಿದೆ. ಜಿಲ್ಲಾಡಳಿತವು ಹೈ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚಿಸಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಹೀಟ್ ಸ್ಟ್ರೋಕ್ಗಾಗಿ ವಿಶೇಷ ವಾರ್ಡ್ ತೆರೆಯಲಾಗಿದ್ದು, ಮಧ್ಯಾಹ್ನದ ವೇಳೆ ಹೊರಗೆ ಹೋಗದಂತೆ ಸಲಹೆ ನೀಡಲಾಗಿದೆ.
- Bhemesh Poojar
- Updated on: Apr 20, 2026
- 8:04 pm
ರಾಯಚೂರು: ಬಯಲಾಟದ ವೇಳೆ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳು ಸಾವು, ತಾಯಿ-ಮಗಳ ಕಾಲು ಕಟ್!
ರಾಯಚೂರು ಜಿಲ್ಲೆಯ ಬೈಲ್ ಮರ್ಚಡ್ ಗ್ರಾಮದಲ್ಲಿ ಬಯಲಾಟ ವೀಕ್ಷಿಸುತ್ತಿದ್ದವರ ಮೇಲೆ ಹಳೆಯ ಕಟ್ಟಡದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಹೃದಯವಿದ್ರಾವಕ ಘಟನೆ ನಡೆದಿದೆ. ವಿಶ್ವನಾಥ್ (8) ಹಾಗೂ ಸನ್ವಿತಾ (1.6) ಎಂಬ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ತಮ್ಮ ಕಾಲುಗಳನ್ನು ಕಳೆದುಕೊಂಡಿದ್ದಾರೆ. ಗಾಯಾಳುಗಳಿಗೆ ರಾಯಚೂರಿನ ಓಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- Bhemesh Poojar
- Updated on: Apr 18, 2026
- 2:46 pm