ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.
ರಾಯಚೂರು: ತಂದೆ, ಮಗನ ಜೀವವನ್ನೇ ಬಲಿ ಪಡೆದ ಯಮ ಸ್ವರೂಪಿ ಲಾರಿ
ರಾಯಚೂರು ಹೊರವಲಯದ ಯರಮರಸ್ ಬೈಪಾಸ್ ಬಳಿ ನಡೆದ ಭೀಕರ ಲಾರಿ ಅಪಘಾತದಲ್ಲಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆ ಬದಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗ ಏಕಾಏಕಿ ಲಾರಿ ಹರಿದು ದುರಂತ ಸಂಭವಿಸಿದೆ. ರಾಯಚೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
- Bhemesh Poojar
- Updated on: Dec 1, 2025
- 3:53 pm
ಮಾಂಗಲ್ಯ ಧಾರಣೆಗೂ ಮುನ್ನ ವರನ ತಂದೆ ಸಾವು: ಮಗನ ಮದ್ವೆ ಕಣ್ತುಂಬಿಕೊಳ್ಳುವ ಮುನ್ನವೇ ದುರಂತ ಅಂತ್ಯ
ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎನ್ನುವ ಗಾದೆಯಂತೆ ವ್ಯಕ್ತಿಯೋರ್ವ, ಮಗನ ಮದುವೆಗಾಗಿ ಓಡಾಡಿ ಎಲ್ಲಾ ಸಿದ್ಧತೆ ಮಾಡಿದ್ದ. ಕಳೆದ ಹಲವು ದಿನಗಳಿಂದ ಲವಲವಿಕೆಯಿಂದಲೇ ಓಡಾಡಿಕೊಂಡಿಕೊಂಡು ಮಗನ ಮದ್ವೆಯ ಕಾರ್ಯಗಳನ್ನ ಮಾಡಿ ಮುಗಿಸಿದ್ದ. ಇನ್ನೇನು ಮಗ ವಧುವಿಗೆ ತಾಳಿ ಕಟ್ಟಬೇಕು ಎನ್ನುವಾಗಲೇ ತಂದೆ ದುರಂತ ಸಾವು ಕಂಡಿದ್ದಾನೆ. ಇದರಿಂದ ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
- Bhemesh Poojar
- Updated on: Nov 30, 2025
- 8:15 pm
ಭಿಕ್ಷುಕನ ಸೋಗಲ್ಲಿ ಮನೆಗಳ ರಾಬರಿ: ರಾಯಚೂರಲ್ಲಿ ಖಾಕಿ ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಕಳ್ಳ
ರಾಜ್ಯದ ಆರು ಠಾಣೆಗಳಿಗೆ ಬೇಕಾಗಿದ್ದ ಕುಖ್ಯಾತ ಮನೆಗಳ್ಳನನ್ನು ಬಲೆಗೆ ಬೀಳಿಸುವಲ್ಲಿ ರಾಯಚೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಬೈಲ್ ಬಳಸದೆ, ರೈಲಿನಲ್ಲಿ ಬಂದು ಭಿಕ್ಷುಕನಂತೆ ಓಡಾಡಿ ಲಾಕ್ ಮಾಡಿದ ಮನೆಗಳನ್ನು ಗುರುತಿಸಿ ಈತ ಕನ್ನ ಹಾಕುತ್ತಿದ್ದ. ಎಂತಹ ಭದ್ರತೆ ಇರುವ ಮನೆಯನ್ನೂ ದೋಚುವ ಚಾಕಚಕ್ಯತೆ ಹೊಂದಿದ್ದ ಈತ, ಕ್ಷಣಮಾತ್ರದಲ್ಲಿ ಮನೆಯೊಳಗೆ ನುಗ್ಗುತ್ತಿದ್ದ ಎನ್ನಲಾಗಿದೆ.
- Bhemesh Poojar
- Updated on: Nov 21, 2025
- 7:48 pm
ದೇಶದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗೆ ಆಯ್ಕೆಯಾದ ರಾಯಚೂರಿನ ಕವಿತಾಳ ಠಾಣೆ
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ, ಕೇಂದ್ರ ಗೃಹ ಸಚಿವಾಲಯದ 2025ರ ಅತ್ಯುತ್ತಮ ಠಾಣೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕರ್ನಾಟಕದಿಂದ ಆಯ್ಕೆಯಾದ ಏಕೈಕ ಠಾಣೆ ಇದಾಗಿದ್ದು, ಹಲವು ಮಾನದಂಡಗಳ ಆಧಾರದ ಮೇಲೆ ಇದು ದೇಶದ ಟಾಪ್ ಮೂರು ಠಾಣೆಗಳಲ್ಲಿ ಒಂದಾಗಿದೆ. ಈ ಮೂರು ಠಾಣೆಗಳಿಗೆ ನವೆಂಬರ್ 28ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
- Bhemesh Poojar
- Updated on: Nov 17, 2025
- 12:59 pm
ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ವಂಚನೆ: ಹೆಚ್ಚು ಹಣದ ಆಸೆಗೆ ಇದ್ದ ದುಡ್ಡನ್ನೂ ಕಳೆದುಕೊಂಡ ವ್ಯಕ್ತಿ
ರಾಯಚೂರಿನ ವ್ಯಕ್ತಿಯೊಬ್ಬರು ಆನ್ಲೈನ್ ಟ್ರೇಡಿಂಗ್ ಮೂಲಕ ಹೆಚ್ಚು ಲಾಭದ ಆಸೆಗೆ 59 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಅಧಿಕ ಆದಾಯದ ಆಮಿಷವೊಡ್ಡಿ ಹಣ ಹೂಡಿಕೆ ಮಾಡಿಸಿದ್ದರು. ಮೋಸ ಹೋದ ಬಗ್ಗೆ ಅರಿವಾದಾಗ ಪೊಲೀಸರಿಗೆ ದೂರು ನೀಡಿದ್ದು, ಇಂತಹ ಆನ್ಲೈನ್ ವಂಚನೆಗಳಿಂದ ಎಚ್ಚರದಿಂದಿರುವಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
- Bhemesh Poojar
- Updated on: Nov 16, 2025
- 7:34 am
ಫೋನ್ ಪೇ ಮೂಲಕ ಪರಿಚಯವಾಗಿ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ
ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಪ್ರೀತಿ-ಪ್ರೇಮದ ಬಲೆಗೆ ಬಿದ್ದು ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ನಾಪತ್ತೆಯಾಗಿದ್ದ ಬಾಲಕಿಯ ಪತ್ತೆ ನಂತರ ಈ ಪ್ರಕರಣ ಬೆಳಕಿಗೆ ಬಂದಿದ್ದು, ಸಂತ್ರಸ್ತೆಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- Bhemesh Poojar
- Updated on: Nov 7, 2025
- 1:59 pm
ಕರ್ನೂಲ್ ಬಸ್ ದುರಂತದಲ್ಲಿ 20 ಜನರ ಸಜೀವದಹನ; ಬೈಕ್ನ ಕಿಡಿಯೇ ಬೆಂಕಿ ಅವಘಡಕ್ಕೆ ಕಾರಣ
Kurnool Bus Fire: ಇಂದು ಹೈದರಾಬಾದ್ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಟ್ರಾವೆಲ್ ಬಸ್ಗೆ ಬೆಂಕಿ ಹೊತ್ತಿಕೊಂಡಿತು. ಈ ಬಸ್ ಬೈಕ್ಗೆ ಡಿಕ್ಕಿ ಹೊಡೆದ ನಂತರ ಬಸ್ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಈ ಅಪಘಾತದಲ್ಲಿ 20 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಮಾಹಿತಿಯ ಮೇರೆಗೆ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. 46 ಪ್ರಯಾಣಿಕರಿದ್ದ ಬಸ್ನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ 12 ಪ್ರಯಾಣಿಕರು ತುರ್ತು ನಿರ್ಗಮನದ ಮೂಲಕ ಪಾರಾದರು. 20 ಪ್ರಯಾಣಿಕರು ಜೀವಂತವಾಗಿ ಸುಟ್ಟುಹೋಗಿದ್ದಾರೆ.
- Bhemesh Poojar
- Updated on: Oct 24, 2025
- 4:46 pm
ಟೆಂಪಲ್ ರನ್: ಡಿಕೆ ಶಿವಕುಮಾರ್ ಸಂಕಲ್ಪದ ರಹಸ್ಯ ಬಿಚ್ಚಿಟ್ಟ ಅರ್ಚಕರು, ಸಿಎಂ ಆಗೋದು ನಿಶ್ಚಿತ?
ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದು, ಪಂಚಮುಕಿ ಆಂಜನೇಯನ ಸನ್ನಿಧಿಯಲ್ಲೂ ಪೂಜೆ ಸಲ್ಲಿಸಿದರು. ಮುಂದಿನ ರಾಜ್ಯದ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಸಂಕಲ್ಪ ಮಾಡಿದರಾ ಅನ್ನೋ ಚರ್ಚೆಶುರುವಾಗಿದೆ. ಆದರೆ ಡಿಕೆ ಶಿವಕುಮಾರ್ ಮಾಡಿದ ಸಂಕಲ್ಪದ ರಹಸ್ಯವನ್ನು ಅರ್ಚಕರು ಬಿಚ್ಚಿಟ್ಟಿದ್ದಾರೆ.
- Bhemesh Poojar
- Updated on: Oct 24, 2025
- 4:19 pm
ಫೇಸ್ಬುಕ್ನಲ್ಲಿ ಜಾಹೀರಾತು ಬಂದಾಗ ಕ್ಲಿಕ್ ಮಾಡಿದವ್ರ ಕಥೆ ಬಿಚ್ಚಿಟ್ಟ SP
ಐದು ವರ್ಷದ ಹಿಂದಿನ ಅಂದರೆ 2020ರ ಪ್ರಕರಣವನ್ನು ರಾಯಚೂರು ಪೊಲೀಸರು ಭೇದಿಸಿದ್ದಾರೆ. ಕಳೆದ ಐದು ವರ್ಷಗಳ ಹಿಂದೆ ನಡೆದ ಸೈಬರ್ ವಂಚನೆ ಪ್ರಕರಣದಲ್ಲಿ, ಆರೋಪಿಯಿಂದ ವಶಪಡಿಸಿಕೊಂಡ ಸುಮಾರು 18.29 ಲಕ್ಷ ರೂಪಾಯಿಗಳನ್ನು ಮಂಗಳವಾರ ಸಂಜೆ 6 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ವಂಚನೆಗೊಳಗಾದವರಿಗೆ ಹಿಂದಿರುಗಿಸಲಾಯಿತು
- Bhemesh Poojar
- Updated on: Oct 21, 2025
- 8:56 pm
ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ
ಆರ್ಎಸ್ಎಸ್ ವಿರುದ್ಧ ಸಮರ ಸಾರಿರುವ ಸರ್ಕಾರ ಇದೀಗ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರ ಮೇಲೆ ಸಮರಕ್ಕೆ ಮುಂದಾಗಿದೆ. ಅದರಂತೆ ಶುಕ್ರವಾರ ರಾಯಚೂರು ಪಿಡಿಓ ಪ್ರವೀಣ್ ಕುಮಾರ್ರನ್ನು ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ. ಸದ್ಯ ಈ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯ ಇದನ್ನು ಕಾನೂನುಬಾಹಿರ ಎಂದು ಖಂಡಿಸಿದ್ದು, ಅಮಾನತನ್ನು ರದ್ದುಗೊಳಿಸಲು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದಾರೆ.
- Bhemesh Poojar
- Updated on: Oct 18, 2025
- 1:51 pm
RSS ಪಥಸಂಚಲನದಲ್ಲಿ ಭಾಗಿ: ರಾಯಚೂರಿನ ರೋಡಲಬಂಡಾ ಪಿಡಿಓ ಅಮಾನತು
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ, ಪಿಡಿಓ ಅಮಾನತುಗೊಳಿಸಿ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಆದೇಶಿಸಿದ್ದಾರೆ. ಸರ್ಕಾರಿ ನೌಕರನಾಗಿ ನಿಯಮಗಳನ್ನ ಉಲ್ಲಂಘಿಸಿದ ಹಿನ್ನಲೆ ಶಿಸ್ತು ಕ್ರಮ ಎಂದು ಆದೇಶದಲ್ಲಿ ತಿಳಿಸಲಾಗಿದೆ.
- Bhemesh Poojar
- Updated on: Oct 17, 2025
- 6:20 pm
ಹೊಸ ಪಕ್ಷ ಕಟ್ಟಲು ಮುಂದಾದ ಬಸನಗೌಡ ಪಾಟೀಲ್ ಯತ್ನಾಳ್ಗೆ ಶಿವಸೇನಾ ಶಿಂಧೆ ಬಣ ಗಾಳ
ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಶಿವಸೇನಾ ಶಿಂಧೆ ಬಣ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಆಹ್ವಾನ ನೀಡಿದೆ. ರಾಯಚೂರಿನಲ್ಲಿ ಮಾತನಾಡಿದ ಶಿವಸೇನಾ ಶಿಂಧೆ ಬಣದ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಯತ್ನಾಳ್ ಹಿಂದುತ್ವದ ಕಾರ್ಯಕ್ಕೆ ಬರುವುದಾದರೆ ಸ್ವಾಗತ. ಕರ್ನಾಟಕದಲ್ಲಿ ಹಿಂದುತ್ವದ ಸರ್ಕಾರ ತರುವುದು ಮತ್ತು ಕಾಂಗ್ರೆಸ್ ಸರ್ಕಾರ ಕೆಳಗಿಳಿಸುವುದು ನಮ್ಮ ಉದ್ದೇಶ ಎಂದರು.
- Bhemesh Poojar
- Updated on: Oct 14, 2025
- 10:33 am