ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.
ನಾ ಡ್ರೈವರ, ನೀ ಲವ್ವರ ಅಂತಿದ್ದವನೀಗ ಒಂಟಿ ಜೀವಿ! ರಾಯಚೂರಿನಲ್ಲೊಂದು ವಿಭಿನ್ನ ಲವ್ ಸ್ಟೋರಿ
15 ದಿನಗಳ ಹಿಂದಷ್ಟೇ ಸಿಂಧನೂರಿನಲ್ಲಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಈಚನಾಳ ಗ್ರಾಮದ ಜೋಡಿಯೊಂದು ಇದೀಗ ದೂರವಾಗಿದ್ದಾರೆ. ಇದಕ್ಕೆ ಯುವತಿ ಕುಟುಂಬಸ್ಥರು ನೀಡಿದ ಅದೊಂದು ದೂರು ಕಾರಣವಾಗಿದೆ. ವಿಚಾರಣೆಗಾಗಿ ಕರೆದು ಯುವತಿಯನ್ನು ಪೋಷಕರೊಂದಿಗೆ ಕಳುಹಿಸಿದ ಆರೋಪ ಕೇಳಿಬಂದಿದೆ.
- Bhemesh Poojar
- Updated on: Apr 18, 2025
- 12:35 pm
ರಾಯಚೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಯಾದಗಿರಿಗೆ ತೆರಳುತ್ತಿದ್ದ ಗೂಡ್ಸ್ ಪಿಕಪ್ ವಾಹನ ಹಳ್ಳದ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವದುರ್ಗ ತಾಲೂಕಿನ ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Bhemesh Poojar
- Updated on: Apr 18, 2025
- 11:00 am
Video: ರಾಯಚೂರಿನ ಆರ್ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ಆರ್ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಆರ್ಟಿಪಿಎಸ್ ಘಟಕವು ರಾಯಚೂರಿನ ಶಕ್ತಿನಗರದಲ್ಲಿದೆ. ಈ ಘಟಕದ ಟಿಸಿ ಹಾಗೂ ಜನರೇಟರ್ ಸುಟ್ಟು ಭಸ್ಮವಾಗಿದೆ. 210 ಮೆಗಾ ವ್ಯಾಟ್ ಉತ್ಪಾದನೆ ಮಾಡುವ ನಾಲ್ಕನೇ ಘಟಕ ಇದಾಗಿದೆ. ತಾಂತ್ರಿಕ ದೋಷ ಹಿನ್ನೆಲೆ ಕಳೆದ 3 ತಿಂಗಳುಗಳಿಂದ ಘಟಕವನ್ನು ಮುಚ್ಚಲಾಗಿತ್ತು. ಏ.13ರ ತಡರಾತ್ರಿ ನಾಲ್ಕನೇ ಘಟಕದ ಬಾಯ್ಲರ್ ಟ್ಯೂಬ್ ಬದಲಿಸಿ, ರೀಸ್ಟಾರ್ಟ್ ಮಾಡುವ ವೇಳೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
- Bhemesh Poojar
- Updated on: Apr 15, 2025
- 11:02 am
ಒಬ್ಬರ ಮಾಂಗಲ್ಯ ಸರ ದಾರಿಹೋಕನಿಗೆ ಸಿಕ್ಕಾಗ… ಇದು ಒಂದು ಚಿನ್ನದ ಕಥೆ
ರಾಯಚೂರು ಜಿಲ್ಲೆಯಲ್ಲಿ ನಡೆದ ಸ್ವಾರಸ್ಯಕರ ಪ್ರಕರಣ ಇದಾಗಿದೆ. ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೃದ್ಧರೊಬ್ಬರ ಚೇಬಿನಿಂದ ಮಾಂಗಲ್ಯ ಸರಗಳು ಕಳೆದು ಹೋಗಿದ್ದವು. ದೂರು ಪಡೆದು, ಸಿಸಿಟಿವಿ ಆಧರಿಸಿ ತನಿಖೆಗಿಳಿದಿದ್ದ ಪೊಲೀಸರು ಚಿನ್ನದ ಮಾಂಗಲ್ಯ ಸರಗಳನ್ನು ತೆಗೆದುಕೊಂಡು ಹೋಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ ಮುಂದೇನಾಯ್ತು? ಇಲ್ಲಿದೆ ವಿವರ
- Bhemesh Poojar
- Updated on: Apr 9, 2025
- 11:13 pm
ಪ್ರೇಮ ವಿವಾಹಕ್ಕೆ ಐವರ ಕೊಲೆ ಕೇಸ್: ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ
ಪ್ರೇಮ ವಿವಾಹ ಸಂಬಂಧ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದ್ದ ಐವರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದ್ದು, ಇನ್ನುಳಿದ 9 ಆರೋಪಿಗಳಿಗೆ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಹುಡುಗಿ ಕಡೆಯವರು ಹುಡುಗನ ಮನೆಗೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಐವರನ್ನು ಕೊಂದಿದ್ದರು.
- Bhemesh Poojar
- Updated on: Apr 8, 2025
- 9:20 pm
ಕೋಟ್ಯಂತರ ರೂ. ದೋಚಿದ್ದವ ಸಿಕ್ಕಿಬಿದ್ದ: ಲಕ್ಕಿ ಭಾಸ್ಕರ್ ಆಗಲು ಹೋದ ಬ್ಯಾಂಕ್ ಮ್ಯಾನೇಜರ್ನ ಅನ್ ಲಕ್ಕಿ ಕಥೆ!
ಇತ್ತೀಚೆಗೆ ತೆಲುಗಿನ ‘ಲಕ್ಕಿ ಭಾಸ್ಕರ್’ ಸಿನಿಮಾ ತೆರೆಕಂಡು ಭರ್ಜರಿ ಯಶಸ್ವಿ ಕಂಡಿತ್ತು. ಆ ಚಿತ್ರದಲ್ಲಿ ನಟ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ನಲ್ಲೇ ಹಣವನ್ನು ಕದ್ದು ಬೇರೆಡೆ ಹೂಡಿಕೆ ಮಾಡುವ ಮೂಲಕ ಸಾಕಷ್ಟು ಹಣ ಸಂಪಾದನೆ ಮಾಡುತ್ತಾನೆ. ಅದರಂತೆ ರಾಯಚೂರಿನಲ್ಲೊಬ್ಬ ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ವಂಚನೆ ಮಾಡಿದ್ದವ ಸಿಕ್ಕಿಬಿದ್ದಿದ್ದಾನೆ. ಲಕ್ಕಿ ಭಾಸ್ಕರ್ ಆಗಲು ಹೋದ ಬ್ಯಾಂಕ್ ಮ್ಯಾನೇಜರ್ನ ಅನ್ ಲಕ್ಕಿ ಕಥೆ ಇಲ್ಲಿದೆ.
- Bhemesh Poojar
- Updated on: Apr 8, 2025
- 7:55 pm
ಪೊಲೀಸರು ಥಳಿಸಿದ್ದಕ್ಕೆ ವ್ಯಕ್ತಿ ಸಾವು ಕೇಸ್ಗೆ ಟ್ವಿಸ್ಟ್: ಸಿಸಿಟಿವಿ ದೃಶ್ಯ ವೈರಲ್, ರಾಜಕೀಯ ಕೈವಾಡ ಶಂಕೆ?
ರಾಯಚೂರಿನಲ್ಲಿ ಪೊಲೀಸ್ ದೌರ್ಜನ್ಯದಿಂದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಆರೋಪದಲ್ಲಿ ಸಿಐಡಿ ತನಿಖೆ ಆರಂಭವಾಗಿದೆ. ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಆದರೆ, ಸಿಸಿಟಿವಿ ದೃಶ್ಯಗಳು ಪ್ರಕರಣಕ್ಕೆ ತಿರುವು ನೀಡಿವೆ. ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪದ ಶಂಕೆ ವ್ಯಕ್ತವಾಗಿದೆ. ಸತ್ಯಾಸತ್ಯತೆ ಸಿಐಡಿ ತನಿಖೆ ನಂತರ ತಿಳಿದು ಬರಲಿದೆ.
- Bhemesh Poojar
- Updated on: Apr 6, 2025
- 4:56 pm
ಮಸ್ಕಿ ಕಾಂಗ್ರೆಸ್ ಶಾಸಕನ ಪುತ್ರ, ಸಹೋದರನಿಂದ ಮೊಲ ಬೇಟೆ, ಮೆರವಣಿಗೆ
ರಾಯಚೂರಿನ ಮಸ್ಕಿ ಕಾಂಗ್ರೆಸ್ ಶಾಸಕರ ಪುತ್ರ ಮತ್ತು ಸಹೋದರರು ಯುಗಾದಿ ಹಬ್ಬದ ಸಂದರ್ಭದಲ್ಲಿ ಮೊಲಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಿದ್ದಾರೆ. ವೈರಲ್ ಆಗಿರುವ ವಿಡಿಯೋದಿಂದಾಗಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯ ಆರೋಪ ಎದುರಿಸುತ್ತಿದ್ದಾರೆ. ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದ್ದು, ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ.
- Bhemesh Poojar
- Updated on: Apr 1, 2025
- 7:42 pm
2ನೇ ಮದ್ವೆಯಾದ ಪತಿ: ಮೊದಲ ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಗಂಡ ರಾಕ್ಷಸ ಅವತಾರ
ಎಲ್ಲೆಡೆ ಯುಗಾದಿ ಹಬ್ಬ ಮನೆ ಮಾಡಿದ್ದು, ಜನರು ಮನೆಯಲ್ಲಿ ಸಿಹಿ ಮಾಡಿ ಹಬ್ಬವನ್ನು ಸಂಭ್ರಮಿಸುತ್ತಿದ್ದರೆ, ಮತ್ತೊಂದೆಡೆ ವ್ಯಕ್ತಿಯೋರ್ವ ನಟ್ಟ ನಡುರಸ್ತೆಯಲ್ಲೇ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ನಾದಿನಿ ಮೇಲೆ ಮಚ್ಚಿನಿಂದ ಮನ ಬಂದಂತೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಯಾವ ಮಟ್ಟಿಗೆ ಅಂದ್ರೆ ಕೈ ಬೆರಳುಗಳು ಕಟ್ ಆಗಿ ರಸ್ತೆಯಲ್ಲೇ ಬಿದ್ದಿವೆ. ಅಷ್ಟಕ್ಕೂ ಆ ನರಹಂತಕನ ಅಟ್ಟಹಾಸಕ್ಕೆ ಕಾರಣ ಏನು ಎನ್ನುವ ವಿವರ ಇಲ್ಲಿದೆ.
- Bhemesh Poojar
- Updated on: Mar 30, 2025
- 6:06 pm
ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ರಾಯಚೂರಿನ ಯುವತಿ
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಎಂಬ ಯುವತಿ, 133 ಅಕ್ಕಿ ಕಾಳುಗಳ ಮೇಲೆ ರಾಷ್ಟ್ರಗೀತೆಯನ್ನು ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದ್ದಾಳೆ. ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿದ್ದರು. ಈ ವೇಳೆ ಏನಾದರೂ ಸಾಧಿಸುವ ಛಲ ಹೊಂದಿದ್ದ ಯುವತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಿರ್ಮಿಸಿದ್ದಾರೆ.
- Bhemesh Poojar
- Updated on: Mar 28, 2025
- 8:03 am
ಪ್ರಾಣಿ ಪ್ರಿಯರೇ ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ಎಫ್ಪಿವಿ ವೈರಸ್
ಮಾರಣಾಂತಿಕ ಎಫ್ಪಿವಿ ವೈರಸ್ ರಾಯಚೂರಿನ ಬೆಕ್ಕುಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ನೂರಾರು ಬೆಕ್ಕುಗಳು ಈ ಸೋಂಕಿನಿಂದ ಸಾವನ್ನಪ್ಪಿವೆ. ಈ ವೈರಸ್ ಬಹಳ ವೇಗವಾಗಿ ಹರಡುತ್ತದೆ ಮತ್ತು ಅದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಬೆಕ್ಕುಗಳನ್ನು ಸಾಕುವವರು ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. ಎಫ್ಪಿವಿ ವೈರಸ್ ಕುರಿತ ಹೆಚ್ಚಿನ ವಿವರಗಳಿಗೆ ಮುಂದೆ ಓದಿ.
- Bhemesh Poojar
- Updated on: Mar 25, 2025
- 9:31 am
ನಿರ್ಗತಿಕರ ಆಶ್ರಮಕ್ಕೆ ಹೆಗಲಾದ ರಾಯಚೂರಿನ ಪೊಲೀಸ್ ಪಡೆ: ಫೋಟೋಸ್ ನೋಡಿ
ರಾಯಚೂರು ಜಿಲ್ಲೆಯ ಸಿಂಧನೂರಿನ ಕಾರುಣ್ಯ ವೃದ್ಧಾಶ್ರಮವು ಅನಾಥರು ಮತ್ತು ವಯಸ್ಸಾದವರಿಗೆ ಆಶ್ರಯ ನೀಡುತ್ತದೆ. ವಸತಿ ಸಮಸ್ಯೆಯನ್ನು ಪರಿಹರಿಸಲು ರಾಯಚೂರು ಪೊಲೀಸ್ ಇಲಾಖೆಯು ಹೊಸ ಕಟ್ಟಡವನ್ನು ನಿರ್ಮಿಸಿಕೊಟ್ಟಿದೆ. 20 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಪೊಲೀಸ್ ಸಿಬ್ಬಂದಿ ಈ ಕಾರ್ಯವನ್ನು ಮಾಡಿದ್ದು ಸಮಾಜಕ್ಕೆ ಒಳ್ಳೆಯ ಸಂದೇಶವಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Bhemesh Poojar
- Updated on: Mar 25, 2025
- 8:20 am