ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.
ರಾಯಚೂರಲ್ಲಿ ಆರ್ಟಿಒ ಸಿಬ್ಬಂದಿ ಗೂಂಡಾಗಿರಿ: 500 ರೂ. ಲಂಚ ಪಡೆಯುತ್ತಿದ್ದ ವಿಡಿಯೋ ಮಾಡಿದ್ದಕ್ಕೆ ಚಾಲಕನಿಗೆ ಧರ್ಮದೇಟು
ರಾಯಚೂರು RTO ಸಿಬ್ಬಂದಿಯ ಲಂಚಾವತಾರ ಮತ್ತು ದಬ್ಬಾಳಿಕೆ ಮಿತಿಮೀರಿದೆ. ಸಿರವಾರ ಬಳಿ ಲಾರಿ ಚಾಲಕನಿಂದ ಲಂಚ ಪಡೆಯಲು ಯತ್ನಿಸಿ ಹಲ್ಲೆ ನಡೆಸಿದಲ್ಲದೆ, ಕೀ ಕಸಿದುಕೊಂಡಿದ್ದರಿಂದ ಹೆದ್ದಾರಿಯಲ್ಲಿ 3 ಗಂಟೆಗಳ ಕಾಲ ಭಾರಿ ಸಂಚಾರ ದಟ್ಟಣೆ ಉಂಟಾಯಿತು. ಈ ಘಟನೆ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದಂತಾಗಿದ್ದು, RTO ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ರಾಯಚೂರು ಜನತೆ ಆಗ್ರಹಿಸಿದ್ದಾರೆ.
- Bhemesh Poojar
- Updated on: Jun 10, 2026
- 9:49 pm
ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ, ಉರುಳು ಸೇವೆ
ರಾಯಚೂರು ಜಿಲ್ಲೆ ಸಿಂಧನೂರು ಕ್ಷೇತ್ರದ ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಇನ್ನು ಹಂಪನಗೌಡ ಬಾದರ್ಲಿಗೆ ಮತ್ರಿ ಸ್ಥಾನ ಕರುಣಿಸಲಿ ಎಂದು ಅವರ ಅಭಿಮಾನಿಗಳು, ಗಾಳಿ ದುರ್ಗಮ್ಮ ದೇವಸ್ಥಾನದವರೆಗೆ ಪಾದಯಾತ್ರೆ ನಡೆಸಿದ್ದು, ತಮ್ಮ ನಾಯಕನಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆ ಗಾಳಿ ದುರ್ಗಮ್ಮಗೆ 101 ತೆಂಗಿನಕಾಯಿ ಒಡೆದ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ. ಇನ್ನು ಈ ಬಗ್ಗೆ ನಮ್ಮ ರಾಯಚೂರು ಜಿಲ್ಲಾ ಪ್ರತಿನಿಧಿ ಭೀಮೇಶ್ ನೀಡಿರೋ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.
- Bhemesh Poojar
- Updated on: Jun 10, 2026
- 9:16 pm
ಪ್ರಿಯಾಂಕ ಖರ್ಗೆ ಅವರೇ ಇದು ಸರಿಯಲ್ಲ: ‘ನಾನು ಬಂದಿರೋದು ಮಂತ್ರಾಲಯಕ್ಕೆ, ನೀವ್ಯಾಕೆ ತಡೀತಿದ್ದೀರಿ?’: ಪುನೀತ್ ಕೆರೆಹಳ್ಳಿ ಗರಂ
ರಾಯಚೂರಿನ ಹಟ್ಟಿ ಪಟ್ಟಣದಲ್ಲಿ ನಡೆಯಲಿರುವ ಹಿಂದೂ ಮಹೋತ್ಸವ ಸಮಾರಂಭಕ್ಕೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಪ್ರವೇಶಿಸದಂತೆ ರಾಯಚೂರು ಜಿಲ್ಲಾ ಪೊಲೀಸರು ನಿರ್ಬಂಧ ಹೇರಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮಂತ್ರಾಲಯದಲ್ಲಿ ಅವರನ್ನು ತಡೆದು ನೋಟಿಸ್ ನೀಡಲಾಗಿದೆ. ರಾಯಚೂರು ಪೊಲೀಸರ ನಡೆಗೆ ಪುನೀತ್ ಕೆರೆಹಳ್ಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇದು ಹೈಡ್ರಾಮಾಗೆ ಕಾರಣವಾಗಿದೆ.
- Bhemesh Poojar
- Updated on: Jun 9, 2026
- 9:11 pm
ಫೋನ್ ಪೇನಲ್ಲಿ ಹಣ ಪಡೆದು ಕ್ಯಾಶ್ ಕೊಡುವ ಮುನ್ನ ಎಚ್ಚರ! ನಿಮ್ಮ ಖಾತೆಯನ್ನೇ ಖಾಲಿ ಮಾಡ್ತಾರೆ ವಂಚಕರು
ರಾಯಚೂರು ಜಿಲ್ಲೆಯ ಅರಕೇರಾದಲ್ಲಿ ಕದ್ದ ಮೊಬೈಲ್ ಮೂಲಕ ಸಿಎಸ್ಸಿ ಕೇಂದ್ರಗಳಲ್ಲಿ 2.5 ಲಕ್ಷ ರೂ. ಫೋನ್ ಪೇ ಮಾಡಿಸಿಕೊಂಡು ನಗದು ಪಡೆದ ವಂಚನೆ ಬೆಳಕಿಗೆ ಬಂದಿದೆ. 'ಮೆಡಿಕಲ್ ಎಮರ್ಜನ್ಸಿ' ಎಂದು ಸುಳ್ಳು ಹೇಳಿದ ಕಳ್ಳರ ಮಾತು ನಂಬಿ ನಗದು ನೀಡಿದ ಮಲ್ಲಿಕಾರ್ಜುನ ಹಾಗೂ ಮಹಾಂತೇಶ್ ತಂಡದ ಬ್ಯಾಂಕ್ ಖಾತೆಗಳನ್ನು ಪೊಲೀಸರು ಫ್ರೀಜ್ ಮಾಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
- Bhemesh Poojar
- Updated on: Jun 9, 2026
- 8:56 am
ಬಡ ಮಕ್ಕಳ ಹೊಟ್ಟೆಮೇಲೆ ಹೊಡೆದ ವಾರ್ಡನ್; 3 ದಿನ ಅನ್ನ-ನೀರಿಲ್ಲದೆ ಪಕ್ಕದ ಹಾಸ್ಟೆಲ್ನಲ್ಲಿ ಕೈಚಾಚಿದ ವಿದ್ಯಾರ್ಥಿಗಳು!
ರಾಯಚೂರಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ಬಡ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಸಿವಿನ ನೋವು ತಾಳಲಾರದೆ ಪಕ್ಕದ ಹಾಸ್ಟೆಲ್ನಲ್ಲಿ ಅನ್ನ ಕೇಳಿ ಪಡೆದ ನೌಕರರು, ಕೊನೆಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬೇಜವಾಬ್ದಾರಿಯಿಂದ ವರ್ತಿಸಿದ ವಾರ್ಡನ್ ಮೆಹಬೂಬ್ನನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
- Bhemesh Poojar
- Updated on: Jun 6, 2026
- 10:37 am
ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ: ರಾಯಚೂರಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ!
KPS ಮ್ಯಾಗ್ನೆಟ್ ಶಾಲಾ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ರಾಯಚೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅರ್ಧಕ್ಕರ್ಧ ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವದ ನಡುವೆಯೂ ಶಾಲೆಗಳನ್ನು ಮುಚ್ಚುವ ಸರ್ಕಾರದ ನಡೆಯಿಂದ 100ಕ್ಕೂ ಹೆಚ್ಚು ಶಾಲೆಗಳು ಅಪಾಯದಲ್ಲಿವೆ. ಬಡ ವಿದ್ಯಾರ್ಥಿಗಳ ಭವಿಷ್ಯದ ಆತಂಕದಿಂದ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ, ಶಾಲೆ ಉಳಿಸಿ ಎಂದು ಆಗ್ರಹಿಸಿವೆ.
- Bhemesh Poojar
- Updated on: Jun 4, 2026
- 9:37 pm
‘ಅಂದೇ ಹೇಳಿದ್ವಿ ಡಿ. ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ’: ಪಂಚಮುಖಿ ಆಂಜನೇಯ ದೇವಸ್ಥಾನದ ಅರ್ಚಕರ ಸಂತಸ
ರಾಯಚೂರಿನ ಪ್ರಸಿದ್ಧ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಈ ಹಿಂದೆ ವಿಶೇಷ ಪೂಜೆ ಸಲ್ಲಿಸಿದ್ದ ನಾಲ್ವರು ನಾಯಕರು ಸಿಎಂ ಆಗಿದ್ದರು. ಇದೀಗ ಅಕ್ಟೋಬರ್ 2025 ರಲ್ಲಿ ಇಲ್ಲಿಗೆ ಭೇಟಿ ನೀಡಿ ಮಧು ಅಭಿಷೇಕ ಮಾಡಿಸಿದ್ದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ೫ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವ್ರು ಸಿಎಂ ಆಗೇ ಆಗ್ತಾರೆ ಎಂದು ಅಂದೇ ಭವಿಷ್ಯ ನುಡಿದಿದ್ದ ಅರ್ಚಕ ಶಾಮಾಚಾರ್ಯರು ಸಂತಸ ಹಂಚಿಕೊಂಡಿದ್ದಾರೆ.
- Bhemesh Poojar
- Updated on: Jun 2, 2026
- 11:08 am
ಮಂತ್ರಾಲಯದ ಬಳಿ ಘೋರ ದುರಂತ: ತುಂಗಭದ್ರಾ ನದಿಗೆ ಈಜಲು ಹೋದ ಐವರು ನೀರುಪಾಲು
ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಯಲ್ಲಿನ ಸತ್ಯನಾರಾಯಣ ಪೂಜೆಗೆಂದು ಬಂದಿದ್ದವರು, ಕಾರ್ಯಕ್ರಮದ ಬಳಿಕ ಈಜಲೆಂದು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ನದಿಯ ನೀರಿನ ಆ ತಿಳಿಯದೆ ಈಜಲು ಹೋಗಿ ಜಲಸಮಾಧಿಯಾಗಿದ್ದಾರೆ. ಅದೃಷ್ಟವಶಾತ್ ಓರ್ವ ಯುವತಿ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.
- Bhemesh Poojar
- Updated on: May 31, 2026
- 10:27 am
ರಾಯಚೂರಿನಲ್ಲಿ ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ, ಡಿಸಿ ಪೂವಿತಾ ಖಡಕ್ ಸೂಚನೆ
ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಸಿಗದೆ ರೈತರು ಕ್ಯಾನ್ ಹಿಡಿದು ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಟಿವಿ9 ನಿರಂತರವಾಗಿ ಬಿತ್ತರಿಸಿದ ವರದಿಗೆ ಬಿಗ್ ಇಂಪ್ಯಾಕ್ಟ್ ಆಗಿದ್ದು, ಜಿಲ್ಲಾಡಳಿತ ತಕ್ಷಣವೇ ಅಲರ್ಟ್ ಆಗಿದೆ. ಜಿಲ್ಲಾಧಿಕಾರಿ ಪೂವಿತಾ.ಎಸ್ ಅವರು ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ, ರೈತರಿಗೆ ಸಮರ್ಪಕವಾಗಿ ಡೀಸೆಲ್ ಪೂರೈಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
- Bhemesh Poojar
- Updated on: May 29, 2026
- 1:25 pm
ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಮಂತ್ರಾಲಯ ಶ್ರೀಗಳು
ಮಂತ್ರಾಲಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಪರಿಸ್ಥಿತಿಯಲ್ಲಿ, ಸುಬುಧೇಂದ್ರ ತೀರ್ಥರು ತಡರಾತ್ರಿ ಭಕ್ತರ ನೆರವಿಗೆ ಧಾವಿಸಿ, ಕಲ್ಯಾಣ ಮಂಟಪ ಮತ್ತು ಅನ್ನಪೂರ್ಣೇಶ್ವರಿ ಭೋಜನಶಾಲೆಯಲ್ಲಿ ಅವರಿಗೆ ಸುರಕ್ಷಿತ ಆಶ್ರಯ ವ್ಯವಸ್ಥೆ ಕಲ್ಪಿಸಿದರು. ಭಕ್ತರನ್ನು ಸ್ವತಃ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಾರ್ಗದರ್ಶನ ನೀಡಿದರು.
- Bhemesh Poojar
- Updated on: May 24, 2026
- 10:25 pm
ಮಂತ್ರಾಲಯದಲ್ಲಿ ಭಾರಿ ಮಳೆಯಿಂದ ಭಕ್ತರಿಗೆ ತೊಂದರೆ: ಭೋಜನಶಾಲೆ, ಕಲ್ಯಾಣ ಮಂಟಪದಲ್ಲಿ ವಸತಿ ವ್ಯವಸ್ಥೆ
ಮಂತ್ರಾಲಯದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮಠದ ಪ್ರಾಂಗಣದಲ್ಲಿ ಮಲಗಿದ್ದ ಭಕ್ತರು ಪರದಾಡಿದ್ದಾರೆ. ಮಳೆ ಹೆಚ್ಚಾದ ಕಾರಣ ಶ್ರೀಗಳು ಭಕ್ತರ ಅನುಕೂಲಕ್ಕಾಗಿ ಅನ್ನಪೂರ್ಣೇಶ್ವರಿ ಭೋಜನಶಾಲೆ ಮತ್ತು ಕಲ್ಯಾಣ ಮಂಟಪಗಳಲ್ಲಿ ಮಲಗಲು ಸೂಕ್ತ ವ್ಯವಸ್ಥೆ ಕಲ್ಪಿಸಿದರು. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಭಕ್ತರಿಗೆ ಸೂಚನೆ ನೀಡಲಾಯಿತು.
- Bhemesh Poojar
- Updated on: May 24, 2026
- 9:59 am
ವಕ್ಫ್ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ವ್ಯಕ್ತಿಯ ಮೇಲೆ ಸಿನಿಮೀಯ ರೀತಿಯಲ್ಲಿ ದಾಳಿ!
ರಾಯಚೂರಿನಲ್ಲಿ ವಕ್ಫ್ ಬೋರ್ಡ್ ಅನುದಾನ ದುರ್ಬಳಕೆ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ ಸನಾವುಲ್ಲಾ ಮೇಲೆ ಸುಮಾರು 30 ಜನರ ಗುಂಪು ಚಾಕು, ಭರ್ಜಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ತಹಶಿಲ್ದಾರ್ ಕಚೇರಿ ಬಳಿ ನಡೆದ ಈ ಘಟನೆಯಲ್ಲಿ ಸನಾವುಲ್ಲಾ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಮುಖ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Bhemesh Poojar
- Updated on: May 21, 2026
- 8:29 am